ಬೆಂಗಳೂರು: ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ (UT Khadar) ಮಲೇಶಿಯಾ (Malaysia) ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡಿದ್ದಾರೆ.
ಕಾಮನ್ವೆಲ್ತ್ ಸಂಸದೀಯ ಸಂಘ, ವಿಧಾನ ಸಭೆಯ ಸಭಾಧ್ಯಕ್ಷರು ಹಾಗೂ ಕರ್ನಾಟಕ ಶಾಖೆಯ ಜಂಟಿ ಅಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಇಂದು ಜನಪ್ರತಿನಿಧಿಗಳ ಸಭೆಯ (ದಿವಾನ್ ರಖ್ಯತ್) ಸಭಾಧ್ಯಕ್ಷರು ಮತ್ತು ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್, ಮಲೇಶಿಯಾದ ಜಂಟಿ ಅಧ್ಯಕ್ಷರಾದ ಡಾ.ಜೋಹರಿ ಬಿನ್ ಅಬ್ದುಲ್ ಅವರನ್ನು ಕೌಲಾಲಾಂಪುರದಲ್ಲಿರುವ ಸಂಸತ್ ಭವನದಲ್ಲಿ ಭೇಟಿ ಮಾಡಿದರು.ಇದನ್ನೂ ಓದಿ: ಬೈಕ್ ಟ್ಯಾಕ್ಸಿಗೆ ಬ್ರೇಕ್ – ಒಂದೇ ದಿನದಲ್ಲಿ 103 ವಾಹನಗಳು ಸೀಜ್
ಈ ಸಂದರ್ಭದಲ್ಲಿ ಸಭಾಪತಿ ಯು.ಟಿ.ಖಾದರ್ ಅವರು ಸಂಸದೀಯ ವ್ಯವಹಾರಗಳು ಹಾಗೂ ಪ್ರಜಾಪ್ರಭುತ್ವ ತತ್ವಗಳ ಬಗ್ಗೆ ಪರಸ್ಪರ ವಿಚಾರ ವಿನಿಮಯ ಮಾಡಿದರು.
ಅಲ್ಲದೇ ಭವಿಷ್ಯದಲ್ಲಿ ಕರ್ನಾಟಕ ಹಾಗೂ ಮಲೇಶಿಯಾದ ರಾಜಕೀಯ, ಸಂಸದೀಯ ವ್ಯವಹಾರಗಳು ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಕಾಯ್ದುಕೊಳ್ಳುವ ಬಗ್ಗೆ ಸಹ ಚರ್ಚಿಸಿದರು. ಈ ಸಂದರ್ಭದಲ್ಲಿ ಸಂಬಂಧಪಟ್ಟ ಇತರೆ ಅಧಿಕಾರಿಗಳು ಹಾಜರಿದ್ದರು.ಇದನ್ನೂ ಓದಿ: ಇಡಿ ತನಿಖೆಗೆ ನನ್ನ ಸಹೋದರ ಡಿ.ಕೆ ಸುರೇಶ್ ಸಹಕಾರ ಕೊಡ್ತಾರೆ: ಡಿಕೆಶಿ