ಬೆಂಗಳೂರು: ನಗರದ ಹಲವೆಡೆ ಇಂದು ಸಾಧಾರಣ ಮಳೆಯಾಗಿದೆ.
ಶಿವಾಜಿನಗರ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಇಂದು ಮಧ್ಯಾಹ್ನದ ನಂತರ ಮಳೆಯಾಗಿದ್ದು ಬಿಸಿಲಿನಿಂದ ಬೇಸತ್ತಿದ್ದ ಬೆಂಗಳೂರು ಜನರನ್ನ ಕೂಲ್ ಮಾಡಿದೆ.
ಇನ್ನು ಐಪಿಎಲ್ ಪಂದ್ಯ ವೀಕ್ಷಣೆಗೆ ಬಂದ ಜನರು ಮಳೆಯಲ್ಲಿ ಸಿಲುಕಿದ್ರು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ರಾತ್ರಿ 8 ಗಂಟೆಗೆ ಪಂದ್ಯ ನಡೆಯಲಿದೆ. ಪಂದ್ಯ ವೀಕ್ಷಣೆಗೆ ಸ್ಟೇಡಿಯಂ ಬಳಿ ಕ್ರೀಡಾಭಿಮಾನಿಗಳು ದೌಡಾಯಿಸುತ್ತಿದ್ದಾರೆ.