ಬಿಗ್ ಬಾಸ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ: ಗುರೂಜಿ ಮೇಲೆ ಕಿಚ್ಚ ಕೆಂಡಾಮಂಡಲ

Public TV
2 Min Read
aryavardhan

ಸಂಖ್ಯಾಶಾಸ್ತ್ರದ ಮೂಲಕ ಗುರುತಿಸಿಕೊಂಡಿದ್ದ ಆರ್ಯವರ್ಧನ್ ಗುರೂಜಿ(Aryavardhan Guruji) ಇದೀಗ ಟಿವಿ ಬಿಗ್ ಬಾಸ್‌ನಲ್ಲಿ(Bigg Boss) ಕಮಾಲ್ ಮಾಡುತ್ತಿದ್ದಾರೆ. ತಮ್ಮ ನೇರವಾದ ಮಾತಿನ ಮೂಲಕ ಮನೆಯವರ ಕೆಂಗಣ್ಣಿಗೆ ಗುರಿಯಾಗಿದ್ದು ಇದೆ. ಇದೀಗ ಮತ್ತೆ ದೊಡ್ಮನೆಯಲ್ಲಿ ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ. ಬಿಗ್ ಬಾಸ್ ಮೇಲೆ ಗುರೂಜಿ ಮ್ಯಾಚ್ ಫಿಕ್ಸಿಂಗ್ ಆರೋಪವನ್ನು ಮಾಡಿದ್ದಾರೆ. ಗುರೂಜಿ ಮಾತಿಗೆ ಕಿಚ್ಚ ಫುಲ್ ಗರಂ ಆಗಿದ್ದಾರೆ.

bigg boss

ದೊಡ್ಮನೆಯಲ್ಲಿ ಸದಾ ಒಂದಲ್ಲಾ ಒಂದು ಕಿರಿಕ್ ಮೂಲಕ ಸದ್ದು ಮಾಡುವ ಗುರೂಜಿ ಇದೀಗ ಕಿಚ್ಚನ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸೂಪರ್ ಸಂಡೇ ವಿತ್ ಸುದೀಪ ವೀಕೆಂಡ್ ಕಾರ್ಯಕ್ರಮದಲ್ಲಿ ಸುದೀಪ್ (Kiccha Sudeep) ಎಂದಿನಂತೆ ಸ್ಪರ್ಧಿಗಳ ಜೊತೆ ಮಾತನಾಡಿದ್ದಾರೆ. ಸ್ಪರ್ಧಿಗಳಿಗೆ ಪ್ರಶ್ನೆ ಕೇಳಿದ್ದಾರೆ. ಟಾಪ್ 2 ಯಾರು ಆಗ್ತಾರೆ ಎಂದು ಕೇಳಿದರು. ಸ್ಪರ್ಧಿಗಳು ಒಬ್ಬರ ಹೆಸರನ್ನು ಹೇಳುತ್ತಿದ್ದರು. ಗುರೂಜಿ, ಅನುಪಮಾ ಹೆಸರು ಹೇಳಿ ಬಿಗ್ ಬಾಸ್‌ಗೂ ಅನುಪಮಾ(Anupama Gowda) ಒಳಗಡೆ ಬರ್ಬೇಕು ಅಂತ ಆಸೆ ಇತ್ತು ಎಂದು ಹೇಳಿದರು. ಇದರಿಂದ ಕೆರಳಿದ ಸುದೀಪ್ ಹಾಗೆಲ್ಲ ಮಾತನಾಡಬೇಡಿ ಸರ್ ಎಂದು ಹೇಳಿದರು. ಬಂಗಾರದ ಟಾಸ್ಕ್‌ನಲ್ಲಿ ಎಷ್ಟು ಬಂಗಾರ ಇದೆ ಅಂತ ಗೊತ್ತಿದ್ದರೂ ಅನುಪಮಾನ ಒಳಗಡೆ ಕರೆಸುತ್ತಾರೆ ಅಂದರೆ ಏನು ಅರ್ಥ. ಮ್ಯಾಚ್ ಫಿಕ್ಸಿಂಗ್ ಆಗಿದೆ ಇಲ್ಲಿ ಎಂದು ಗಂಭೀರ ಆರೋಪ ಮಾಡಿದರು. ಸುದೀಪ್ ಸ್ಪರ್ಧಿಗಳಲ್ಲಿ ನಿಮಗೆ ಹಾಗೆ ಅನಿಸಿತಾ ಎಂದು ಕೇಳಿದರು. ಸ್ಪರ್ಧಿಗಳೆಲ್ಲಾ ಇಲ್ಲಾ ಎಂದರು.

bigg boss 5

ಗುರೂಜಿ ಮಾತಿನ ವರಸೆಗೆ ಕೆಂಡವಾದ ಸುದೀಪ್ (Kiccha Sudeep) ಮಾತಿನ ಮೇಲೆ ನಿಗಾ ಇರಲಿ ಎಂದು ಎಚ್ಚರಿಕೆ ನೀಡಿದರು. ಆದರೂ ಸಹ ಗುರೂಜಿ ಯೋಚನೆ ಮಾಡಿ ಹೇಳಬೇಕಲ್ಲ ಹಾಗಾಗಿ ಹೇಳುತ್ತಿದ್ದೀನಿ ಎಂದು ತನ್ನ ಮಾತನ್ನು ಸಮರ್ಥಿಸಿಕೊಂಡರು. ಮ್ಯಾಚ್ ಫಿಕ್ಸಿಂಗ್ ಅಂದರೆ ಏನು ಅಲ್ಲಿ ಕುಳಿತು ಆಡುತ್ತಿರುವವರೆಲ್ಲ ಏನು ಹಾಗಾದ್ರೆ, ಯಾರಿಗೂ ಯೋಗ್ಯತೆ ಇಲ್ವಾ, ಮೋಸ ಮಾಡಿ ಗೆಲ್ತಾ ಇದ್ದಾರಾ ಎಂದು ಸುದೀಪ್ ಖಡಕ್ ಆಗಿ, ಕೇಳಿದ್ದರು. ಸಹಜವಾಗಿ ನಾನು ಹೇಳಿದ್ದು ಎಂದು ಆರ್ಯವರ್ದನ್ ಮತ್ತೆ ಮಧ್ಯೆ ಮಾತಾಡಿದರು. ಇದನ್ನೂ ಓದಿ:`ಬಿಗ್ ಬಾಸ್’ ಖ್ಯಾತಿಯ ವೈಶಾಲಿ ಠಕ್ಕರ್ ಆತ್ಮಹತ್ಯೆ

BIGG BOSS ARYAVARDHAN GURUJI

ನಿಮ್ಮ ವ್ಯಕ್ತಿತ್ವದ ಮೇಲೆ ಮಾತನಾಡಿದರೆ ಇಷ್ಟು ಉದ್ದ ಮಾತನಾಡುತ್ತೀರಾ. ಈ ವೇದಿಕೆ ಮರ್ಯಾದೆ ತೆಗೆದರೆ ಸತ್ಯವಾಗಿ ಹೇಳ್ತೀನಿ, ನನಗೆ ನಿಮಗೆ ಇಲ್ಲೆ ಕೊನೆಯಾಗುತ್ತೆ ಎಂದು ಸುದೀಪ್ ಖಡಕ್ ವಾರ್ನಿಂಗ್ ನೀಡಿದ್ದಾರೆ. ನಿನ್ನೆಯ ಸಂಚಿಕೆಯಲ್ಲಿ ರೂಪೇಶ್‌, ಸಾನ್ಯಗೆ ಖಡಕ್‌ ಕ್ಲಾಸ್‌ ಸುದೀಪ್ ತೆಗೆದುಕೊಂಡಿದ್ದರು.‌ ಇದೀಗ ಗುರೂಜಿಗೆ ವಾರ್ನ್‌ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article