13 ವರ್ಷಗಳ ನಂತರ ದೆಹಲಿಯಲ್ಲಿ ಸುದೀಪ್ : ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಭೇಟಿ ಮಾಡಿದ ಕಿಚ್ಚ

Public TV
1 Min Read
FotoJet 43

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಇದೇ ತಿಂಗಳು 28ರಂದು ವಿಶ್ವದಾದ್ಯಂತ ಸಾವಿರಾರು ಥಿಯೇಟರ್ ನಲ್ಲಿ ಬಿಡುಗಡೆ ಆಗಲಿದೆ. ಹಾಗಾಗಿ ದೇಶದ ನಾನಾ ಕಡೆ ಸುದೀಪ್ ಪ್ರಚಾರ ನಡೆಸಿದ್ದಾರೆ. ಮೊದಲ ಕಂತಿನಲ್ಲಿ ಮುಂಬೈ, ಚೆನ್ನೈ, ಹೈದರಾಬಾದ್, ಕೊಚ್ಚಿ ಸೇರಿದಂತೆ ಹಲವು ಕಡೆ ಪ್ರಚಾರದಲ್ಲಿ ತೊಡಗಿದ್ದ ಸುದೀಪ್, ನಿನ್ನೆಯಿಂದ ದೆಹಲಿಯಲ್ಲಿ ಪ್ರಚಾರ ಶುರು ಮಾಡಿದ್ದಾರೆ. 13 ವರ್ಷಗಳ ನಂತರ ಕಿಚ್ಚ ದೆಹಲಿಗೆ ಕಾಲಿಟ್ಟಿದ್ದಾರೆ.

Vikrantha ron 2

ಹದಿಮೂರು ವರ್ಷಗಳ ಹಿಂದೆ ತೆರೆಕಂಡ ತೆಲುಗಿನ ‘ಈಗ’ ಸಿನಿಮಾದ ಪ್ರಚಾರಕ್ಕಾಗಿ ದೆಹಲಿಗೆ ಭೇಟಿ ಕೊಟ್ಟಿದ್ದ ಸುದೀಪ್, ಇದೀಗ ವಿಕ್ರಾಂತ್ ರೋಣ ಸಿನಿಮಾದ ಪ್ರಚಾರಕ್ಕಾಗಿ ತೆರೆಳಿದ್ದಾರೆ. ಅಲ್ಲಿನ ಮಾಧ್ಯಮಗಳ ಜೊತೆ ವಿಕ್ರಾಂತ್ ರೋಣ ವಿಶೇಷತೆ ಕುರಿತು ಮಾತನಾಡಿದ್ದಾರೆ. ಈ ಮಧ್ಯೆ ಬಿಡುವು ಮಾಡಿಕೊಂಡು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಭೇಟಿ ಮಾಡಿದ್ದಾರೆ. ಸಿನಿಮಾ ವೀಕ್ಷಿಸುವಂತೆ ಆಹ್ವಾನ ನೀಡಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ : ‘ಮದುವೆನೂ ಇಲ್ಲ, ರಿಂಗೂ ಇಲ್ಲ’ ಲಲಿತ್ ಮೋದಿಗೆ ತಿವಿದ ಸುಶ್ಮಿತಾ ಸೇನ್

vikranth rona 1 6

ವಿಕ್ರಾಂತ್ ರೋಣ ಸಿನಿಮಾ 2 ಡಿ ಮತ್ತು 3ಡಿ ಯಲ್ಲಿ ಬಿಡುಗಡೆ ಆಗುತ್ತಿದ್ದು, ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ. ಹಿಂದಿ, ತೆಲುಗು, ತಮಿಳು, ಮಲಯಾಳಂ ಮತ್ತು ಇಂಗ್ಲಿಷ್ ನಲ್ಲೂ ಈ ಸಿನಿಮಾ ರಿಲೀಸ್ ಆಗುತ್ತಿದೆ. ಈಗಾಗಲೇ ರಿಲೀಸ್ ಆದ ಚಿತ್ರದ ಟೀಸರ್ ಮತ್ತು ಹಾಡುಗಳು ಹಿಟ್ ಆಗಿದ್ದು, ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚಿಸಿವೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *