ಬೆಳಗಾವಿ: ಸುದೀಪ್ (Sudeep) ಕೇವಲ ಮೂರು ತಾಸಿನ ನಾಯಕ, ಆದ್ರೆ ನಿಜವಾಗಿ ನಿಮ್ಮ ಸೇವೆ ಮಾಡೋರು ನಾವು ಎಂದು ಕೆಪಿಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ (Satish Jarkiholi) ಹೇಳಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಹಿನ್ನೆಲೆಯಲ್ಲಿ ಕೊನೆಯದಿನದ ಪ್ರಚಾರ ನಡೆಸಿದ ಅವರು ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ, ಮೊದಲು ಸುದೀಪ್ ನೋಡಬೇಕಂದ್ರೆ ದುಡ್ಡುಕೊಟ್ಟು ಹೋಗಬೇಕಿತ್ತು. ಆದ್ರೆ ಇವತ್ತು ಅವರೇ ಜನರನ್ನ ನೋಡಲು ಬರುತ್ತಿದ್ದಾರೆ ಎಂದಿದ್ದಾರೆ.
ಸುದೀಪ್ ಕೇವಲ ಮೂರು ತಾಸಿನ ನಾಯಕ ಅಷ್ಟೇ. ಆದ್ರೆ ನಿಜವಾಗಿ ನಿಮ್ಮ ಸೇವೆ ಮಾಡುವವರು ನಾವು. ಯಾರೋ ನಟ ಬಂದ, ಕಣ್ಣೀರು ಹಾಕಿದ ಮಾತ್ರಕ್ಕೆ ಎಲ್ಲವೂ ಪರಿಹಾರವಾಗಲ್ಲ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನ ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ದೋಣಿ ದುರಂತ- ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಕೇರಳ ಸರ್ಕಾರ
ಕೊನೆಯ ದಿನ ಬಿಜೆಪಿ ಅಭ್ಯರ್ಥಿ ಅಭಯ್ ಪಾಟೀಲ 10 ಸಾವಿರಕ್ಕೂ ಹೆಚ್ಚು ಮಹಿಳೆಯರಿಂದ ರೋಡ್ ಶೋ ನಡೆಸಿದರು. ಇನ್ನೊಂದು ಕಡೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಭರ್ಜರಿ ಪ್ರಚಾರ ನಡೆಸಿದರು.