ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸದ್ಯ `ವಿಕ್ರಾಂತ್ ರೋಣ’ ಸಕ್ಸಸ್ ಖುಷಿಯಲ್ಲಿದ್ದಾರೆ. ಇನ್ನು ಇತ್ತೀಚೆಗಷ್ಟೇ ನೀಡಿದ ಸಂದರ್ಶನವೊಂದರಲ್ಲಿ ತಮ್ಮ ನಿರ್ದೇಶನದ ಬಗ್ಗೆ ಬ್ರೇಕಿಂಗ್ ಅಪ್ಡೇಟ್ವೊಂದನ್ನ ನೀಡಿದ್ದಾರೆ.
ಕಿಚ್ಚ ಸುದೀಪ್ ಚಿತ್ರರಂಗ ಕಂಡಿರುವ ಬಹುಮುಖ ಪ್ರತಿಭೆ, ನಟ, ಗಾಯಕ, ನಿರ್ದೇಶಕನಾಗಿ ಸಿನಿಮಾರಂಗದಲ್ಲಿ ತಮ್ಮನ್ನ ತಾವು ಗುರುತಿಸಿಕೊಂಡಿದ್ದಾರೆ.. ಇದೀಗ ಇತ್ತೀಚೆಗಷ್ಟೇ ನೀಡಿದ ಸಂದರ್ಶನದಲ್ಲಿ ಬ್ಯಾಡ್ ಬ್ಯಾಯ್ ಸಲ್ಮಾನ್ ಖಾನ್ಗೆ ನಿರ್ದೇಶನ ಮಾಡುವುದಾಗಿ ಹೇಳಿದ್ದಾರೆ. ಇದನ್ನೂ ಓದಿ:ತಮಿಳಿನ ನಟ ಜಿ.ಎಂ ಕುಮಾರ್ ಆಸ್ಪತ್ರೆಗೆ ದಾಖಲು
ಸಲ್ಲುಗಾಗಿಯೇ ಕಿಚ್ಚ ಭಿನ್ನ ಕಥೆ ಬರೆದಿದ್ದಾರೆ. ಮುಂದಿನ ದಿನಗಳಲ್ಲಿ ಸಲ್ಮಾನ್ ಖಾನ್ಗೆ ಕಥೆ ಹೇಳಿ, ಸಿನಿಮಾ ಮಾಡುವುದಾಗಿ ಕಿಚ್ಚ ಸುದೀಪ್ ಹೇಳಿಕೊಂಡಿದ್ದಾರೆ. ಈ ಮೂಲಕ ತಾವು ಮತ್ತೆ ನಿರ್ದೇಶನದ ಕ್ಯಾಪ್ ಧರಿಸುವ ಸೂಚನೆ ನೀಡಿದ್ದಾರೆ. ಇನ್ನು ವಿಕ್ರಾಂತ್ ರೋಣ ಚಿತ್ರದ ಹಿಂದಿ ವರ್ಷನ್ ಅನ್ನು ಸಲ್ಮಾನ್ ಖಾನ್ ಫಿಲ್ಮ್ಂ ಪ್ರೇಸೆಂಟ್ ಮಾಡಿದೆ. ಈ ಮೂಲಕ ಸುದೀಪ್ ಸಲ್ಮಾನ್ ಸಾಥ್ ನೀಡಿದ್ದಾರೆ.
ಸಲ್ಮಾನ್ ಖಾನ್ ಮತ್ತು ಸುದೀಪ್ ಈಗಾಗಲೇ ಒಟ್ಟಿಗೆ ನಟಿಸಿದ್ದಾರೆ. ತೆರೆಮರೆಯಲ್ಲಿ ಕೂಡ ಒಳ್ಳೆಯ ಬಾಂದವ್ಯವಿದೆ. ಈ ಸ್ನೇಹಕ್ಕೆ ಸಾಕ್ಷಿಯಾಗಿ ಕಿಚ್ಚನ ಸಿನಿಮಾಗೆ ಸಲ್ಲು ಸಾಥ್ ನೀಡಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಇವರಿಬ್ಬರ ಕಾಂಬಿನೇಷನ್ನಲ್ಲಿ ಸಿನಿಮಾ ನೋಡುವುದು ಪಕ್ಕಾ ಎನ್ನಲಾಗುತ್ತಿದೆ.