ಬೆಂಗಳೂರು: ಕೇರಳದಲ್ಲಿ ಖ್ಯಾತ ಬಹುಭಾಷಾ ನಟಿಯ ಮೇಲಿನ ಕಾಮುಕರ ಕೃತ್ಯಕ್ಕೆ ಸಂಬಂಧಿಸಿದಂತೆ ಸುದೀಪ್ ಪ್ರತಿಕ್ರಿಯಿಸಿದ್ದಾರೆ.
ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ತಿಳಿದ ಪ್ರಕರಣ ನಿಜವೇ ಆಗಿದ್ದರೆ, ಆ ಕಾಮುಕನನ್ನು ಶೂಟ್ ಮಾಡಿ ಹತ್ಯೆ ಮಾಡಬೇಕೆಂದು ಹೇಳಿದ್ದಾರೆ.
ಮಹಿಳೆಯ ನೋವು ಏನು ಎನ್ನುವುದು ಆಕೆಗೆ ಮಾತ್ರ ತಿಳಿಯುತ್ತದೆ. ಈ ಕೃತ್ಯ ನಡೆಸಿದವರು ತಾಯಿಗೂ ಗೌರವ ನೀಡುವುದಿಲ್ಲ. ಮಹಿಳೆಯ ದೈಹಿಕ ದೌರ್ಬಲ್ಯವನ್ನು ದುರುಪಯೋಗ ಪಡಿಸಿಕೊಂಡ ಗಂಡಸನ್ನು ಶೂಟ್ ಮಾಡಬೇಕು ಎಂದು ಕಿಡಿಕಾರಿದ್ದಾರೆ.
ಶುಕ್ರವಾರ ರಾತ್ರಿ ಶೂಟಿಂಗ್ ಮಗಿಸಿ ಆಡಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ನಟಿಯ ಕಾರನ್ನು ಅಡ್ಡಗಟ್ಟಿದ ಗ್ಯಾಂಗ್ ಲೈಂಗಿಕ ದೌರ್ಜನ್ಯ ಎಸಗಿತ್ತು. ನಟಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಮತ್ತು ಮ್ಯಾಜಿಸ್ಟ್ರೇಟರ್ ಮುಂದೆ ನನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ನಟಿ ಮೇಲೆ ಅತ್ಯಾಚಾರ ಎಸಗಿದ್ದು ಸಾಬೀತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಕೇರಳದಲ್ಲಿ ಖ್ಯಾತ ಬಹುಭಾಷಾ ನಟಿ ಮೇಲೆ ಮಾಜಿ ಡ್ರೈವರ್ನಿಂದಲೇ ರೇಪ್