ಕೆಲ ವಾರಗಳ ಹಿಂದೆಯಷ್ಟೇ ತಾವು ಮೂರು ಸಿನಿಮಾಗಳನ್ನು ಒಪ್ಪಿಕೊಂಡಿರುವ ಕುರಿತು ಕಿಚ್ಚ ಸುದೀಪ್ (Sudeep) ಬಹಿರಂಗ ಪಡಿಸಿದ್ದರು. ಮೂರು ಸಿನಿಮಾಗಳಲ್ಲಿ ಮೊದಲು ಯಾವುದು ಶುರುವಾಗಲಿದೆ ಎನ್ನುವ ಕುತೂಹಲ ಎಲ್ಲರದ್ದಾಗಿತ್ತು. ಇದೀಗ ಮತ್ತೆ ಸುದೀಪ್ ಟ್ವೀಟ್ ಮಾಡಿದ್ದು ಮೇ 22ರಂದು ಮೊದಲ ಸಿನಿಮಾದ ಪ್ರೊಮೋ (Promo) ಶೂಟ್ ಹಾಗೂ ಜೂನ್ 1 ರಂದು ಆ ಸಿನಿಮಾವನ್ನು ಲಾಂಚ್ ಮಾಡುವುದಾಗಿ ಬರೆದುಕೊಂಡಿದ್ದಾರೆ.
ಮೂರರಲ್ಲಿ ಮೊದಲ ಶುರುವಾಗುವ ಸಿನಿಮಾ ಯಾವುದು ಎನ್ನುವ ಪ್ರಶ್ನೆ ಅವರ ಅಭಿಮಾನಿಗಳದ್ದು. ಪಬ್ಲಿಕ್ ಟಿವಿ ಡಿಜಿಟಲ್ ಗೆ ಸಿಕ್ಕಿರುವ ಮಾಹಿತಿ ಪ್ರಕಾರ ಮೊದಲು ಸಿನಿಮಾವಾಗಿ ‘ಬಿಲ್ಲ ರಂಗ ಬಾಷಾ’ (Billa Ranga Basha) ಮೂಡಿ ಬರಲಿದೆ. ಈ ಸಿನಿಮಾದ ಪ್ರೊಮೋ ಮೇ 22ರಿಂದ ಶುರುವಾಗಲಿದೆ. ಈ ಸಿನಿಮಾಗೆ ಅನೂಪ್ ಭಂಡಾರಿ ನಿರ್ದೇಶನ ಮಾಡಲಿದ್ದು, ವಿಕ್ರಾಂತ್ ರೋಣದ ನಂತರ ಈ ಜೋಡಿ ಮತ್ತೆ ಒಂದಾಗುತ್ತಿದೆ.
ನಂತರದ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ತಮಿಳು ನಿರ್ದೇಶಕ ಚರಣ್ (Charan) ಕನ್ನಡಕ್ಕೆ ಬರುತ್ತಿರುವುದಾಗಿ ಸುದ್ದಿ ಆಗಿದೆ. ವಿಕ್ರಾಂತ್ ರೋಣ ಚಿತ್ರದ ನಂತರ ಕಿಚ್ಚನಿಗಾಗಿ ಸಿನಿಮಾ ಮಾಡುತ್ತಿರುವುದಾಗಿ ಅನೂಪ್ ಭಂಡಾರಿ (Anoop Bhandari) ಈ ಹಿಂದೆಯೇ ಹೇಳಿಕೊಂಡಿದ್ದರು. ಅವರಿಗಾಗಿಯೇ ಕಥೆ ಬರೆಯುತ್ತಿರುವುದಾಗಿಯೂ ತಿಳಿಸಿದ್ದರು. ಅಲ್ಲದೇ, ನಂದಕಿಶೋರ್ (Nandakishore) ಕೂಡ ಕಿಚ್ಚನಿಗಾಗಿ ಸಿನಿಮಾವೊಂದನ್ನು ಮಾಡಲಿದ್ದಾರೆ. ಆ ಕಥೆಯೂ ಲಾಕ್ ಆಗಿದೆ. ಇದನ್ನೂ ಓದಿ:ನೆಗೆಟಿವ್ ರೋಲ್ ಮಾಡಿದ್ದಕ್ಕೆ ಮದುವೆ ಸಂಬಂಧ ಕ್ಯಾನ್ಸಲ್- ನಟಿ ಅನಿಕಾ ಸಿಂಧ್ಯ
ಚರಣ್ ತಮಿಳಿನಲ್ಲಿ ಹಿಟ್ ಚಿತ್ರಗಳನ್ನು ಕೊಟ್ಟವರು. ತಮ್ಮ ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿಯನ್ನೂ ಅವರು ಪಡೆದಿದ್ದಾರೆ. ಸುದೀಪ್ ಗಾಗಿ ಪ್ಯಾನ್ ಇಂಡಿಯಾ ಸಿನಿಮಾವನ್ನು ಅವರು ಮಾಡಲಿದ್ದಾರಂತೆ. ಅಧಿಕೃತವಾಗಿ ಈ ವಿಷಯವನ್ನು ಚರಣ್ ಆಗಲಿ ಅಥವಾ ಸುದೀಪ್ ಆಗಲಿ ಹೇಳದೇ ಇದ್ದರೂ ಗಾಂಧಿನಗರದಲ್ಲಂತೂ ಈ ಸುದ್ದಿ ಭರ್ಜರಿಯಾಗಿ ಸೇಲ್ ಆಗುತ್ತಿದೆ.
ಸದ್ಯ ಸುದೀಪ್ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಅವರು ಹೇಳಿದ ಅಭ್ಯರ್ಥಿಗಳ ಪರ ಅವರು ಪ್ರಚಾರ ಮಾಡಲಿದ್ದಾರೆ. ಶಿಗ್ಗಾಂವಿಯಿಂದ ಶುರುವಾದ ಪ್ರಚಾರ ರಾಜ್ಯಾದ್ಯಂತ ಮುಂದುವರೆದಿದೆ. ಚುನಾವಣೆ ನಂತರವೇ ಅವರು ತಮ್ಮ ಸಿನಿಮಾಗಳ ಕೆಲಸದಲ್ಲಿ ತೊಡಗಿಕೊಳ್ಳಲಿದ್ದಾರೆ.