Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಸುದೀಪ್ ಖಾಸಗಿ ವಿಡಿಯೋ ಬೆದರಿಕೆ ಪತ್ರ : ಸಿಸಿಬಿ ಕಚೇರಿಯಲ್ಲಿ ಜಾಕ್ ಮಂಜು

Public TV
Last updated: April 8, 2023 11:34 am
Public TV
Share
3 Min Read
Sudeep with jack manju 1
SHARE

ಖಾಸಗಿ ವಿಡಿಯೋ (Private Video) ಬೆದರಿಕೆ ಪತ್ರಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಕಂ ಸುದೀಪ್  (Sudeep)  ಆಪ್ತ ಜಾಕ್ ಮಂಜು (Jack Manju) ಸಿಸಿಬಿ ಕಚೇರಿಗೆ ಭೇಟಿ ನೀಡಿದ್ದಾರೆ. ಸಿಸಿಬಿ (CCB) ಅಧಿಕಾರಿಗಳು ವಿವರಣೆಗೆ ಕರೆದ ಹಿನ್ನೆಲೆಯಲ್ಲಿ ಮಂಜು ಭೇಟಿ ನೀಡಿದ್ದು,  ಸುದೀಪ್ ಅವರಿಗೆ ಬಂದಿದ್ದ ಎರಡು ಪತ್ರಗಳು ಕುರಿತಾಗಿ ವಿವರಣೆ ಪಡೆದಿದ್ದಾರೆ. ಅಲ್ಲದೇ, ಕೆಲವರ ಬಗ್ಗೆ ಅನುಮಾನವನ್ನೂ ವ್ಯಕ್ತ ಪಡಿಸಿದ್ದಾರೆ ಎನ್ನಲಾಗುತ್ತಿದೆ. ಈವರೆಗೂ ಸುದೀಪ್ ಮೇಲೆ ನಡೆದ ಕುತಂತ್ರಗಳ ಬಗ್ಗೆಯೂ ಮಂಜು ಅಧಿಕಾರಿಗಳಿಗೆ ವಿವರಿಸಿದ್ದಾರೆ ಎನ್ನಲಾಗುತ್ತಿದೆ.

sudeep

ಬೆದರಿಕೆ ಪತ್ರದ ಪ್ರಕರಣದ ಹಿಂದೆ ಯಾರಿದ್ದಾರೆ ಎಂಬುದು ನನಗೆ ಗೊತ್ತಿದೆ ಎಂದು ಮೊನ್ನೆಯಷ್ಟೇ ಸುದೀಪ್‍ ಹೇಳಿದ್ದರು. ಸಿನಿಮಾ ರಂಗದವರೇ ಈ ಪ್ರಕರಣದಲ್ಲಿ ಭಾಗಿಯಾಗಿದ್ದು, ಕಾನೂನು ಮೂಲಕವೇ ಅವರಿಗೆ ಉತ್ತರ ಕೊಡುತ್ತೇನೆ ಎಂದೂ ಹೇಳಿಕೊಂಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಸುಳಿವು ಸಿಕ್ಕಿದೆ. ಸುದೀಪ್ ಮನೆಗೆ ಬಂದಿದ್ದ ಆ ಎರಡೂ ಬೆದರಿಕೆ ಪತ್ರಗಳು ದೊಮ್ಮಲೂರಿನಿಂದ ಪೋಸ್ಟ್ ಆಗಿವೆ ಎಂದು ಹೇಳಲಾಗುತ್ತಿದೆ. ಆ ಬೆದರಿಕೆ ಪತ್ರಗಳ ಸಂಬಂಧ ಸಿಸಿಬಿಯಿಂದ ತನಿಖೆ ಶುರುವಾಗಿದ್ದು, ಶಂಕೀತ ಜಾಡು ಹಿಡಿದು ಹೊರಟಿದ್ದಾರಂತೆ ಸಿಸಿಬಿ ಅಧಿಕಾರಿಗಳು.

sudeep 1 4

ಮೊದಲ ಪತ್ರ ಬಂದಾಗ ಸುದೀಪ್ ಅವರೇ ನಿರ್ಲಕ್ಷ್ಯ ವಹಿಸಿದ್ದರಂತೆ. ದುಷ್ಟರು ಬರೆದ ಮೊದಲನೇ ಪತ್ರಕ್ಕೆ ಯಾವಾಗ ಸುದೀಪ್ ರಿಯಾಕ್ಟ್ ಆಗ್ಲಿಲ್ವೋ, ಈತ ಏನೂ ಮಾಡಲ್ಲ ಎಂಬ ಭಂಡ ಧೈರ್ಯದಿಂದ ಮತ್ತೊಂದು ಪತ್ರ ಕಳಿಸಿದ್ದಾನಂತೆ ಆ ಭೂಪ. ಯಾವಾಗ ಎರಡನೇ ಪತ್ರ ಕೈ ಸೇರಿತೋ ಇದರ ಗಂಭೀರತೆಯನ್ನು ಅರಿತು ಕಾನೂನು ಪ್ರಕ್ರಿಯೆಯೇ ಸೂಕ್ತ ಎಂದು ತಮ್ಮ ಆಪ್ತ ಜಾಕ್ ಮಂಜು ಮೂಲಕ ದೂರು ನೀಡಿದ್ದರು ಸುದೀಪ್. ಸದ್ಯ ಈ ಪತ್ರದ ಸುತ್ತ ಪೊಲೀಸರು ತನಿಖೆಗಿಳಿದಿದ್ದಾರೆ. ಇದನ್ನೂ ಓದಿ: ‘ವಿಷ್ಣುಪ್ರಿಯಾ’ಗಾಗಿ ಕೇರಳದಿಂದ ಹಾರಿಬಂದ ಕಣ್ಸನ್ನೆ ಬೆಡಗಿ ಪ್ರಿಯಾ

sudeep 1 1

ಮಾರ್ಚ್ 10ನೇ ತಾರೀಕು ಸುದೀಪ್ ಮನೆಗೆ ಮೊದಲ ಪತ್ರ ತಲುಪಿದೆ. ಆ ಪತ್ರದ ಬಗ್ಗೆ ಅಷ್ಟಾಗಿ ಸುದೀಪ್ ತಲೆ ಕೆಡಿಸಿಕೊಂಡಿರಲಿಲ್ಲ‌. ಆದರೂ ಇಂಟರ್ ನಲ್ ಎನ್ಕೈರಿಯಂತೆ ಮಾಹಿತಿಯನ್ನು ಕಲೆ ಹಾಕುವುದಕ್ಕೆ ಯತ್ನಿಸಿದ್ದರಂತೆ. ಅದರ ಬೆನ್ನಲ್ಲೆ ಮತ್ತೊಂದು ಪತ್ರ ಬಂದಿದ್ದರಿಂದ ಸಹಜವಾಗಿಯೇ ಇದು ಗಂಭೀರ ಪ್ರಕರಣ ಅನಿಸಿ ದೂರು ನೀಡಲಾಗಿತ್ತು. ಇನ್ನು ಆ ಪತ್ರದ ಮೂಲ ಹುಡುಕುತ್ತಾ ಹೋದಾಗ ಸಿಕ್ಕಿದ್ದು ದೊಮ್ಮಲೂರು ಪೋಸ್ಟ್ ಬಾಕ್ಸ್.  ಸುದೀಪ್ ಮನೆಗೆ ಬಂದ  ಎರಡೂ ಪತ್ರಗಳು ದೊಮ್ಮಲೂರಿನಿಂದ ಬಂದಿದ್ದವು. ಹೀಗಾಗಿ ಆ ಪತ್ರವನ್ನು ಯಾರು ಪೋಸ್ಟ್ ಮಾಡಿದ್ದು ಎಂಬುದರ ಬಗ್ಗೆ ಅಲ್ಲಿನ ಸಿಸಿಟಿವಿ ಪರಿಶೀಲನೆಗೆ ಸಿಸಿಬಿ ಮುಂದಾಗಿದೆ.

sudeep

ಈ ಹಿಂದೆ ಸುದೀಪ್ ಜೊತೆ ಇದ್ದ ಕಾರು ಚಾಲಕನ ಮೇಲೆ ಪೊಲೀಸರಿಗೆ ಬಲವಾದ ಶಂಕೆ ಇದೆ ಎಂದು ಹೇಳಲಾಗುತ್ತಿದೆ. ಈಗಾಗಲೆ ದೂರು ದಾಖಲಿಸಿ ತನಿಖೆ ನಡೆಸಿದ್ದ ಪುಟ್ಟೇನಹಳ್ಳಿ ಪೊಲೀಸರು ಸುದೀಪ್ ಮನೆಯಲ್ಲಿ ಸ್ಪಾಟ್ ಇನ್ವೆಷ್ಟಿಗೇಷನ್ ಕೂಡ ನಡೆಸಿದ್ದಾರೆ. ಕೆಲವೊಂದು ಸಾಂಧರ್ಭಿಕ ಸಾಕ್ಷಿಗಳ ಅನ್ವಯ ಈ ಹಿಂದೆ ಇದ್ದ ಸುದೀಪ್ ಮನೆಯ ಕಾರು ಚಾಲಕನ ಮೇಲೆ ಅನುಮಾನ ಬಂದಿದೆ ಎಂದು ಹೇಳಲಾಗುತ್ತಿದೆ. ಇವೆಲ್ಲ ವರದಿಯನ್ನು ಪುಟ್ಟೇನಹಳ್ಳಿ ಪೊಲೀಸರು ಸಿಸಿಬಿಗೆ ನೀಡಿದ್ದಾರೆ. ಇನ್ನು ಈ ಕಾರು ಚಾಲಕನನ್ನು ಬಳಸಿಕೊಂಡು ಚಿತ್ರ ರಂಗದ ಆ ವ್ಯಕ್ತಿ ಕೃತ್ಯವನ್ನು ಎಸಗಿದ್ದನಾ ಎಂಬ ಶಂಕೆ ವ್ಯಕ್ತವಾಗಿದೆ.  ಇದೊಂದು ಪ್ರೀ ಪ್ಲಾನ್ ಕೃತ್ಯ ಎಂಬುದಕ್ಕೆ ಸಿಸ್ಟಂ ಟೈಪಿಂಗ್ ಪತ್ರವೇ ಸಾಕ್ಷಿಯಾಗಿದೆ.  ಕೈ ಬರಹ ಪತ್ರವನ್ನು ಕಳಿಸಿದರೆ ಸಾಕ್ಷಿ ಸಿಗುತ್ತೆ ಎಂಬ ಕಾರಣಕ್ಕೆ ಟೈಪ್ ಮಾಡಿ ಆ ಪತ್ರವನ್ನು ಪೋಸ್ಟ್ ಮಾಡಲಾಗಿದೆ. ಪೊಲೀಸರು ದೂರು ಪಡೆದುಕೊಳ್ಳುವಾಗಲೇ ಇದೊಂದು ಕ್ರಿಮಿನಲ್ ಕಾನ್ಸ್ ಪೆರೆಸಿ ಎಂದು ತಿಳಿದು ಸೆಕ್ಷನ್ 120b ಒಳಸಂಚು ಅಡಿಯಲ್ಲಿ ಕೇಸು ದಾಖಲಿಸಿದ್ದರು. ಸದ್ಯ ಅವರ ಅನುಮಾನ ಕೂಡ ನಿಜವಾಗ್ತಿದೆ ಎಂಬುದಕ್ಕೆ ಸಿಸಿಬಿಗೆ ಸಿಕ್ಕ ಬೇಸಿಕ್ ಇನ್ಪಾರ್ಮೇಷನ್ ಗಳೆ ಸಾಕ್ಷಿಯಾಗಿವೆ.

SUDEEP 1 3

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯ ಸೈಬರ್ ವಿಂಗ್ ಕೂಡ ಕೆಲಸ ಮಾಡುತ್ತಿದ್ದು ಮುಂದಿನ ದಿನದಲ್ಲಿ ನಟ ಸುದೀಪ್ ಗೂ ನೊಟೀಸ್ ನೀಡಿ ಹೇಳಿಕೆಗಳನ್ನು ಪಡೆಯಲು ಸಿದ್ಧತೆಯನ್ನ ನಡೆಸುತ್ತಿದ್ದಾರೆ. ಸದ್ಯ ಆ ಕಾರು ಚಾಲಕ ಸಿಕ್ಕ ಬಳಿಕವಷ್ಟೆ ಅಸಲಿ ಸಂಗತಿ ಹೊರ ಬರಬೇಕಿದೆ.

TAGGED:car driverccbjack manjuKicchaprivate videosudeepthreat letterಕಾರು ಡ್ರೈವರ್ಕಿಚ್ಚಖಾಸಗಿ ವಿಡಿಯೋಜಾಕ್ ಮಂಜುಬೆದರಿಕೆ ಪತ್ರಸಿಸಿಬಿಸುದೀಪ್
Share This Article
Facebook Whatsapp Whatsapp Telegram

Cinema Updates

kamal haasan thug life
‘ಥಗ್‌ ಲೈಫ್‌’ ಟೀಂ ಉದ್ಧಟತನ ಬಟಾಬಯಲು – ಕನ್ನಡ ಬಿಟ್ಟು 4 ಭಾಷೆಗಳಿಗೆ ಸಿನಿಮಾ ಡಬ್‌
16 minutes ago
Trisha
ಥಗ್‌ ಲೈಫ್ ಚಿತ್ರಕ್ಕೆ ʻಶುಗರ್‌ ಬೇಬಿʼ ಪಡೆದ ಸಂಭಾವನೆ ಎಷ್ಟು ಗೊತ್ತಾ?
1 hour ago
pawan kalyan sharmista panoli
ಪುಣೆ ಕಾನೂನು ವಿದ್ಯಾರ್ಥಿನಿ ಪರ ನಿಂತ ಪವನ್‌ ಕಲ್ಯಾಣ್‌ – ದೀದಿ ಹೇಳಿಕೆಗೆ ಖಂಡನೆ
5 hours ago
Mukhyamantri Chandru
ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು
6 hours ago

You Might Also Like

covid schools
Bengaluru City

ಜ್ವರ, ಕೆಮ್ಮು, ನೆಗಡಿ ಲಕ್ಷಣ ಇರೋ ಮಕ್ಕಳು ಶಾಲೆಗೆ ಹೋಗೋದು ಬೇಡ: ಶಾಲೆಗಳಿಗೆ ಸರ್ಕಾರ ಗೈಡ್‌ಲೈನ್ಸ್‌

Public TV
By Public TV
1 hour ago
Heavy Rain in Northeast states
Latest

ಕೇರಳದಿಂದ ಈಶಾನ್ಯ ರಾಜ್ಯಗಳವರೆಗೂ ನಿಲ್ಲದ ವರುಣನ ಅಬ್ಬರ – ಮಳೆಯಾರ್ಭಟಕ್ಕೆ 30ಕ್ಕೂ ಹೆಚ್ಚು ಬಲಿ

Public TV
By Public TV
2 hours ago
Dinesh Gundu Rao 2
Dakshina Kannada

ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಬೇಡ ಎಂದಿಲ್ಲ: ದಿನೇಶ್ ಗುಂಡೂರಾವ್

Public TV
By Public TV
2 hours ago
MI vs PBKS rain
Cricket

ಪಂಜಾಬ್‌ vs ಮುಂಬೈ ಕ್ವಾಲಿಫೈಯರ್ 2 ಪಂದ್ಯಕ್ಕೆ ಮಳೆ ಅಡ್ಡಿ – ಮ್ಯಾಚ್‌ ರದ್ದಾದ್ರೆ ಯಾರಿಗೆ ನಷ್ಟ?

Public TV
By Public TV
2 hours ago
V Somanna
Bidar

ಡಿಕೆಶಿ ಪಾದಕ್ಕೆ ಕೋಟಿ ನಮಸ್ಕಾರ ಮಾಡ್ತೀನಿ, ಹೇಮಾವತಿ ಕೈ ಬಿಡಿ: ವಿ.ಸೋಮಣ್ಣ

Public TV
By Public TV
2 hours ago
Ukrainian Drones Strike Airbase In Russia At Least 40 Aircraft Hit
Latest

ರಷ್ಯಾದ ವಾಯುನೆಲೆಗಳ ಮೇಲೆ ಉಕ್ರೇನ್‌ ಡ್ರೋನ್‌ ದಾಳಿ – 40 ವಿಮಾನಗಳು ಧ್ವಂಸ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?