ನವದೆಹಲಿ: 3 ರಿಂದ 12 ನೇ ತರಗತಿಯ ಪಠ್ಯಕ್ರಮವನ್ನು (Textbook) ಅಂತಿಮಗೊಳಿಸಲು NCERT ರಚಿಸಿರುವ ಮಂಡಳಿಯಲ್ಲಿ ಲೇಖಕಿ ಹಾಗೂ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ (Sudha Murty), ಗಾಯಕ ಶಂಕರ್ ಮಹಾದೇವನ್, ಅರ್ಥಶಾಸ್ತ್ರಜ್ಞ ಮತ್ತು ಪ್ರಧಾನಮಂತ್ರಿಯ ಆರ್ಥಿಕ ಸಲಹಾ ಮಂಡಳಿಯ ಸದಸ್ಯ ಸಂಜೀವ್ ಸನ್ಯಾಲ್ ಸೇರಿದಂತೆ ಮುಂತಾದ 19 ಸದಸ್ಯರು ಇರಲಿದ್ದಾರೆ.
ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟಿನೊಂದಿಗೆ ರಾಷ್ಟ್ರೀಯ ಶಿಕ್ಷಣ ನೀತಿಯ 2020ರ ಪಠ್ಯಕ್ರಮವನ್ನು ಸೇರಿಸಲು ಸಮಿತಿ ಕಾರ್ಯ ನಿರ್ವಹಿಸಲಿದೆ. ಇದು ಕಸ್ತೂರಿರಂಗನ್ ನೇತೃತ್ವದ ಸ್ಟೀರಿಂಗ್ ಸಮಿತಿಯು ಅಭಿವೃದ್ಧಿಪಡಿಸಿದ ಶಾಲಾ ಶಿಕ್ಷಣದ ರೂಪುರೇಷೆಯ ಆಧಾರದಲ್ಲಿ ಕಾರ್ಯನಿರ್ವಹಿಸಲಿದೆ. ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ
- Advertisement
ಶಾಲಾ ಪಠ್ಯಕ್ರಮವನ್ನು ಅಭಿವೃದ್ಧಿಪಡಿಸಲು ಮಂಡಳಿಗೆ ಅಧಿಕಾರ ನೀಡಲಾಗುವುದು. ಅದಲ್ಲದೇ 3ನೇ ತರಗತಿಯಿಂದ 12 ನೇ ತರಗತಿಯವರೆಗೆ ಬೋಧನೆ ಮತ್ತು ಕಲಿಕೆಯ ಸಾಮಗ್ರಿಗಳನ್ನು ಅಭಿವೃದ್ಧಿಪಡಿಸುವುದು ಮಂಡಳಿಯ ಜವಾಬ್ದಾರಿ ಆಗಿರಲಿದೆ.
- Advertisement
ಈ ಸಮಿತಿಯಲ್ಲಿ ಪ್ರಿನ್ಸ್ಟನ್ ವಿಶ್ವವಿದ್ಯಾಲಯದ ಗಣಿತಶಾಸ್ತ್ರದ ಪ್ರಾಧ್ಯಾಪಕ ಮಂಜಲ್ ಭಗವ್ ಅವರು ಉಪಾಧ್ಯಕ್ಷರಾಗಿರಲಿದ್ದಾರೆ. ಇತರ ಸದಸ್ಯರಲ್ಲಿ ಗಣಿತಜ್ಞ ಸುಜಾತಾ ರಾಮ್ ದೊರೈ, ಬ್ಯಾಡ್ಮಿಂಟನ್ ಆಟಗಾರ ಯು.ವಿಮಲ್ ಕುಮಾರ್, ಪಾಲಿಸಿ ಅಧ್ಯಯನ ಕೇಂದ್ರದ ಎಂಡಿ ಶ್ರೀನಿವಾಸ್ ಮತ್ತು ಅಧ್ಯಕ್ಷರಾಗಿ ಭಾರತೀಯ ಭಾಷಾ ಸಮಿತಿಯ ಅಧ್ಯಕ್ಷ ಕೃಷ್ಣ ಶಾಸ್ತ್ರಿ ಕೂಡ ಇರಲಿದ್ದಾರೆ. ಇದನ್ನೂ ಓದಿ: Eiffel Tower: ಐಫೆಲ್ ಟವರ್ಗೆ ಬಾಂಬ್ ಬೆದರಿಕೆ
Web Stories