Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಪ್ರಾಂಶುಪಾಲರ ಮೂರು ಷರತ್ತು ಒಪ್ಪಿ ಎಂಜಿನಿಯರಿಂಗ್ ಸೇರಿದ್ದ ಸುಧಾಮೂರ್ತಿ

Public TV
Last updated: November 27, 2019 8:12 pm
Public TV
Share
2 Min Read
sudhamurthy 2 e1664265121920
SHARE

ನವದೆಹಲಿ: ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಮನಬಿಚ್ಚಿ ಮಾತನಾಡಿದ್ದಾರೆ. ಇದರ ಪ್ರೋಮೋ ಇದೀಗ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸುಧಾಮೂರ್ತಿಯವರು ಭಾಗವಹಿಸಿರುವ ಕಾರ್ಯಕ್ರಮ ನವೆಂಬರ್ 29ರಂದು ರಾತ್ರಿ 9ಕ್ಕೆ ಪ್ರಸಾರವಾಗಲಿದೆ.

ಕಾರ್ಯಕ್ರಮದಲ್ಲಿ ಪ್ರಶ್ನೆಗಳಿಗೆ ಉತ್ತರಿಸುವುದರ ಜೊತೆಗೆ ಬಿಗ್ ಬಿ ಕೇಳುವ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೂ ಸುಧಾಮೂರ್ತಿಯವರು ಉತ್ತರಿಸಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ.

https://www.instagram.com/tv/B5ShWE0lsEE/?utm_source=ig_embed

ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ(ಈಗಿನ ಕೆಎಲ್‍ಇ) ಕಾಲೇಜಿನಲ್ಲಿ ಓದಿದ್ದಾರೆ.

ಚಿಕ್ಕವಯಸ್ಸಿನಲ್ಲೇ ಓದಿನಲ್ಲಿ ಮುಂದಿದ್ದ ನಾನು ಎಂಜಿನಿಯರಿಂಗ್ ಓದುವ ಬಯಕೆಯನ್ನು ಹೊಂದಿದ್ದೆ. 1968ರಲ್ಲಿ ಎಂಜಿನಿಯರಿಂಗ್ ಓದುವ ಹುಡುಗಿಯರೇ ಇರಲಿಲ್ಲ. ಹೀಗಾಗಿ ಎಂಜಿನಿಯರಿಂಗ್ ಓದಿದರೆ ಯಾವ ಹುಡುಗನೂ ಸಿಗುವುದಿಲ್ಲ ಎಂಬ ಭಯ ನಮ್ಮ ಮನೆಯವರಲ್ಲಿತ್ತು. ಆದರೆ ಹೇಗೋ ಮನೆಯವರ ಮನವೊಲಿಸಿ ಹುಬ್ಬಳ್ಳಿಯ ಬಿವಿಬಿ ಎಂಜಿನಿಯರಿಂಗ್ ಕಾಲೇಜಿಗೆ ಸೇರಿಕೊಂಡೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ.

sudhamurthy

ಆಗ ಕಾಲೇಜಿನಲ್ಲಿ 599 ಹುಡುಗರಿದ್ದರೆ, ನಾನೊಬ್ಬಳೇ ಹುಡುಗಿ. ಹೀಗಾಗಿ ಕಾಲೇಜು ಸೇರಿಕೊಳ್ಳುವಾಗ ಪ್ರಾಂಶುಪಾಲರು ನನಗೆ ಷರತ್ತು ವಿಧಿಸಿದ್ದರು. ಕಾಲೇಜಿಗೆ ಸೀರೆಯನ್ನು ಮಾತ್ರ ಧರಿಸಿಕೊಂಡು ಬರಬೇಕು. ಕಾಲೇಜು ಕ್ಯಾಂಟೀನಿಗೆ ಹೋಗುವ ಹಾಗಿಲ್ಲ ಹಾಗೂ ಹುಡುಗರೊಂದಿಗೆ ಯಾವುದೇ ಕಾರಣಕ್ಕೂ ಮಾತನಾಡುವಂತಿಲ್ಲ ಎಂಬ ಮೂರು ಷರತ್ತು ವಿಧಿಸಿದ್ದರು ಎಂದು ಹೇಳಿ ಷರತ್ತುಗಳ ಗುಟ್ಟನ್ನು ಸುಧಾಮೂರ್ತಿ ಬಿಚ್ಚಿಟ್ಟರು. ಇದನ್ನೂ ಓದಿ: ಸರಳವಾಗಿ ನಡೆಯಲಿದೆ ಇನ್ಫಿ ದಂಪತಿಯ ಮಗನ ವಿವಾಹ

ಮೊದಲೆರಡು ಷರತ್ತುಗಳು ನನಗೆ ಕಷ್ಟವೆನಿಸಲಿಲ್ಲ. ಆದರೆ ಮೂರನೇ ಷರತ್ತಿಗೆ ಸಂಬಂಧಿಸಿದಂತೆ ಮೊದಲ ವರ್ಷ ನಾನು ಹುಡುಗರನ್ನು ಮಾತನಾಡಿಸಲಿಲ್ಲ. ಆದರೆ ನಾನು ಓದಿನಲ್ಲಿ ಮುಂದಿರುವುದನ್ನು ಕಂಡು ಎರಡನೇ ವರ್ಷ ಅವರೇ ನನ್ನನ್ನು ಮಾತನಾಡಿಸಲು ಪ್ರಾರಂಭಿಸಿದರು ಎಂದು ಮೂರನೇ ಷರತ್ತಿನ ಕುರಿತು ವಿವರಿಸಿದರು. ಇದೇ ವೇಳೆ ಕಾಲೇಜಿನಲ್ಲಿ ಪಟ್ಟ ಕಷ್ಟವನ್ನು ಸಹ ಸುಧಾಮೂರ್ತಿಯವರು ನೆನೆದಿದ್ದು, ಕಾಲೇಜಿನಲ್ಲಿ ಸೂಕ್ತ ಶೌಚಾಲಯ ವ್ಯವಸ್ಥೆ ಇರಲಿಲ್ಲ. ಹೀಗಾಗಿ ಹೆಣ್ಣು ಮಕ್ಕಳ ಕಷ್ಟ ಅರಿತು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆಯಾದ ನಂತರ ಸುಮಾರು 16 ಸಾವಿರ ಶೌಚಾಲಯಗಳನ್ನು ಕಟ್ಟಿಸಿದ್ದೇವೆ ಎಂದು ಮಾಹಿತಿ ನೀಡಿದರು.

sudhamurthy 3

ಈ ಪ್ರೋಮೋದಲ್ಲಿ ಸುಧಾಮೂರ್ತಿಯವರು ಬಡವರಿಗೆ, ಹಳ್ಳಿಗಳಲ್ಲಿನ ಮಕ್ಕಳಿಗೆ, ನಿರ್ಗತಿಕರಿಗೆ ಮಾಡಿರುವ ಸಮಾಜಮುಖಿ ಕೆಲಸಗಳನ್ನು ಸಹ ತೋರಿಸಲಾಗಿದೆ. ಪ್ರೋಮೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದ್ದು, ವಿಡಿಯೋ ವೈರಲ್ ಆಗಿದೆ. ಹಲವರು ಸುಧಾಮೂರ್ತಿಯವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

TAGGED:Amitabh BachchanKBCPublic TVSudha Narayanamurthyಅಮಿತಾಬ್ ಬಚ್ಚನ್ಕೌನ್ ಬನೇಗಾ ಕರೋಡ್ ಪತಿಪಬ್ಲಿಕ್ ಟಿವಿಸುಧಾ ನಾರಾಯಣಮೂರ್ತಿ
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
2 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
3 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
6 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
16 hours ago

You Might Also Like

Temba Bavuma Aiden Markram
Cricket

ಚೋಕರ್ಸ್‌ ಪಟ್ಟ ಕಳಚಿ ಚಾಂಪಿಯನ್‌ ಆಗಲು ಆಫ್ರಿಕಾಗೆ ಬೇಕಿದೆ ಕೇವಲ 69 ರನ್‌!

Public TV
By Public TV
24 minutes ago
Vijayapura Rain
Districts

ವಿಜಯಪುರ | ಭಾರಿ ಮಳೆ – ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ ನೀರು

Public TV
By Public TV
26 minutes ago
ಸಾಂದರ್ಭಿಕ ಚಿತ್ರ
Belgaum

ಬೆಳಗಾವಿ | ಧಾರಾಕಾರ ಮಳೆಗೆ ಕೊಚ್ಚಿಹೋದ ಆಟೋ – ಚಾಲಕ ದುರ್ಮರಣ

Public TV
By Public TV
38 minutes ago
Leopard
Districts

ಗ್ರಾಮಸ್ಥರ ನಿದ್ದೆಗೆಡಿಸಿದ ಚಿರತೆ – ಡ್ರೋನ್ ಕ್ಯಾಮೆರಾದಲ್ಲಿ ಸೆರೆ

Public TV
By Public TV
47 minutes ago
Hardhik Vibhuthi 2
Latest

ವಿಮಾನ ದುರಂತ – ನಿಶ್ಚಿತಾರ್ಥ ಮುಗಿಸಿ ಹೊರಟ ಜೋಡಿಯ ದಾರುಣ ಅಂತ್ಯ

Public TV
By Public TV
1 hour ago
Basavasagar dam
Districts

ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?