ಸ್ವಾತಂತ್ರ್ಯ ಹೋರಾಟಗಾರ ಡಿ. ಮಾರಪ್ಪನವರಿಗೆ ಅಂತಿಮ ನಮನ ಸಲ್ಲಿಸಿದ ಸುಧಾಕರ್

Public TV
1 Min Read
sudhakar 7

ಚಿಕ್ಕಬಳ್ಳಾಪುರ: ಅನಾರೋಗ್ಯದಿಂದ ನಿಧನರಾದ ಸ್ವಾತಂತ್ರ್ಯ ಹೋರಾಟಗಾರರಾದ ಚಿಕ್ಕಬಳ್ಳಾಪುರ ಜಿಲ್ಲೆಯ ಕೊಳವನಹಳ್ಳಿ ಗ್ರಾಮದ ಡಿ. ಮಾರಪ್ಪನವರ ಅಂತಿಮ ದರ್ಶನವನ್ನು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್ ಪಡೆದಿದ್ದಾರೆ.

hbl sudhakar

ತಾಲೂಕಿನ ಕೊಳವನಹಳ್ಳಿ ಗ್ರಾಮದ ನಿವಾಸಕ್ಕೆ ಭೇಟಿ ನೀಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ ಡಿ.ಮಾರಪ್ಪನವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಸಾಹಿತಿಗಳು, ಶಿಕ್ಷಣ ಪ್ರೇಮಿಗಳು, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಟ ಮಾಡಿದಂತಹ ಧೀಮಂತ ವ್ಯಕ್ತಿಯ ಸಾವು ನಮಗೆಲ್ಲಾ ನೋವು ತಂದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಭಯ, ಆತಂಕವಿಲ್ಲದೇ ಶಾಲೆಗೆ ಬನ್ನಿ: ಉಮೇಶ್ ಕತ್ತಿ

marappa

ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಸಹಕಾರ ಕೊಟ್ಟಿದ್ದರು. ಅನೇಕ ಪುಸ್ತಕಗಳನ್ನು ಸಹ ರಚನೆ ಮಾಡಿದ್ದರು. ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದವರು. ಅವರನ್ನು ಕಳೆದುಕೊಂಡಿರುವುದು ಇಡೀ ಜಿಲ್ಲೆಯ ಜನತೆಗೆ ತುಂಬಲಾರದ ನಷ್ಟ ಅಂತ ಮಾರಪ್ಪನವರನ್ನು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ:ಶಾಲೆಗೆ ಆಗಮಿಸಿದ ಸಚಿವ ಸುಧಾಕರ್‌ಗೆ ರಾಖಿ ಕಟ್ಟಿದ ವಿದ್ಯಾರ್ಥಿನಿಯರು

Share This Article
Leave a Comment

Leave a Reply

Your email address will not be published. Required fields are marked *