ಬೆಂಬಲಿಸಿದ ಕರ್ನಾಟಕದ ಜನತೆಗೆ ಧನ್ಯವಾದ: ಸುಹಾಸ್

Public TV
2 Min Read
paralympics suhash yathiraj

ಟೋಕಿಯೋ: ಬೆಳ್ಳಿ ಗೆದ್ದಿದ್ದಕ್ಕೆ ಖುಷಿ ಆಗಿದೆ, ಚಿನ್ನದ ಪದಕ ಗೆಲ್ಲದ್ದಕ್ಕೆ ಬೇಸರವಿದೆ ಎಂದು ಪ್ಯಾರಾಲಿಂಪಿಕ್ಸ್ ನ ಬ್ಯಾಡ್ಮಿಂಟನ್‍ನಲ್ಲಿ ಬೆಳ್ಳಿ ಪದಕ ಬೆಳ್ಳಿ ಪದಕ ಗೆದ್ದಿರುವ ಸುಹಾಸ್ ಯತಿರಾಜ್ ಹೇಳಿದ್ದರೆ.

ಸುಹಾಸ್ ಅವರು ಈ ಕುರಿತು ಮಾತನಾಡಿದ್ದು, ಖುಷಿ ಮತ್ತು ದುಃಖ ಎರಡೂ ಆಗುತ್ತಿದೆ. ಬೆಳ್ಳಿ ಗೆದ್ದಿದ್ದಕ್ಕೆ ಖುಷಿ ಆಗಿದೆ. ಆದರೆ ಚಿನ್ನ ಗೆಲ್ಲದ್ದಕ್ಕೆ ಬೇಸರ ಆಗುತ್ತಿದೆ. ನನಗೆ ಬೆಂಬಲಿಸಿದ ಗುರು ಹಿರಿಯರಿಗೆ ಮತ್ತು ಕರ್ನಾಟಕದ ಜನತೆಗೆ ಧನ್ಯವಾದ ಸಲ್ಲಿಸ್ತೇನೆ ಎಂದು ಸುಹಾಸ್ ಹೇಳಿದ್ದಾರೆ.

ತಮ್ಮ ಪುತ್ರನ ಬೆಳ್ಳಿ ಸಾಧನೆ ಬಗ್ಗೆ ಸುಹಾಸ್ ಯತಿರಾಜ್ ಅವರ ತಾಯಿ ಜಯಶ್ರೀ, ಸುಹಾಸ್ ಪತ್ನಿ ರಿತು, ಸಹೋದರ ಶರತ್, ನಾದಿನಿ ಸಂಜನಾ ಅವರು ಪಬ್ಲಿಕ್ ಟಿವಿ ಜೊತೆಗೆ ಖುಷಿ ಹಂಚಿಕೊಂಡಿದ್ದಾರೆ. ಜಿಲ್ಲಾಧಿಕಾರಿಯಾಗಿದ್ದುಕೊಂಡೇ ಅವರು ಪ್ರತಿ ನಿತ್ಯ ಪ್ರ್ಯಾಕ್ಟಿಸ್ ಮಾಡುತ್ತಿದ್ದರು. ಸಂಜೆ ಅದಕ್ಕಾಗಿ ಸಮಯ ಮೀಸಲಿರಿಸುತ್ತಿದ್ದರು. ನಾನೂ ಸಹ ಚಿನ್ನದ ಪದಕಕ್ಕಾಗಿ ದೇವರಲ್ಲಿ ಪ್ರಾರ್ಥಿಸಿದ್ದೆ. ಆದರೆ ಬೆಳ್ಳಿ ಗೆದ್ದಿದ್ದಾರೆ ಖುಷಿ ಇದೆ ಎಂದು ಸುಹಾಸ್ ಪತ್ನಿ ರಿತು ತಿಳಿಸಿದ್ದಾರೆ. ಇದನ್ನೂ ಓದಿ: ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ವೀರ ಕನ್ನಡಿಗ ಸುಹಾಸ್ ಬೆಳ್ಳಿ ಸಾಧನೆ

ಸುಹಾಸ್ ಯತಿರಾಜ್ ಸಾಧನೆಗೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅಭಿನಂದನೆ ಸಲ್ಲಿಸಿದ್ದಾರೆ. ಸುಹಾಸ್ ಅವರ ಬೆಳ್ಳಿ ಬೇಟೆಯೊಂದಿಗೆ ಪ್ಯಾರಾ ಒಲಿಂಪಿಕ್ಸ್ ನಲ್ಲಿ ಭಾರತದ ಪದಕಗಳ ಸಂಖ್ಯೆ 19ಕ್ಕೆ ಏರಿದೆ. 5 ಚಿನ್ನ, 8 ಬೆಳ್ಳಿ, 6 ಕಂಚು ಪದಕಗಳನ್ನು ಭಾರತ ಗೆದ್ದಿದೆ.

ಬೆಳ್ಳಿ ಸಾಧನೆ:
ಟೋಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ವೀರ ಕನ್ನಡಿಗ ಬೆಳ್ಳಿ ಗೆದ್ದಿದ್ದಾರೆ. ಕರ್ನಾಟಕ ಮೂಲದ ಐಎಎಸ್ ಅಧಿಕಾರಿ ಸುಹಾಸ್ ಯತಿರಾಜ್ ಬ್ಯಾಡ್ಮಿಂಟನ್‍ನಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದು, ಈ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಬ್ಯಾಡ್ಮಿಂಟನ್ ಫೈನಲ್‍ನ Sಐ4 ವಿಭಾಗದಲ್ಲಿ ಫ್ರಾನ್ಸ್ ನ ಲುಕಾಸ್ ಮಜೂರ್ ಎದುರು 15-21, 21-17, 21-15 ಅಂತರದಲ್ಲಿ ಸೋಲು ಅನುಭವಿಸಿ ಬೆಳ್ಳಿ ಕೊರಳಿಗೇರಿಸಿಕೊಂಡಿದ್ದಾರೆ. ಇಂದು ಮುಂಜಾನೆ ಚಿನ್ನದ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಫ್ರಾನ್ಸ್ ನ ಲುಕಾಸ್ ಮಜೂರ್ ವಿರುದ್ಧ ಸೋತಿದ್ದಾರೆ.

ಶಿವಮೊಗ್ಗ ಮೂಲದ ಯತಿರಾಜ್ ಹಾಗೂ ಹಾಸನ ಮೂಲದ ಜಯಶ್ರೀ(34) ಅವರ ಪುತ್ರ ಸುಹಾಸ್ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಸದ್ಯ ಉತ್ತರ ಪ್ರದೇಶದ ನೋಯ್ಡಾದಲ್ಲಿ ಸುಹಾಸ್ ಜಿಲ್ಲಾಧಿಕಾರಿಯಾಗಿದ್ದಾರೆ. ಸುಹಾಸ್ ಅವರ ಪತ್ನಿ ರಿತು ಗಾಜಿಯಾಬಾದ್‍ನಲ್ಲಿ ಸಹಾಯಕ ವಿಭಾಗಾಧಿಕಾರಿ ಆಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *