ಬೀದರ್: ಪ್ರೇಮಿಗಳ ದಿನಕ್ಕೂ ಮುನ್ನವೇ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕಲಖೋರಾ ತಾಂಡದ ಬಳಿ ನಡೆದಿದೆ.
ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಓಕಳಿ ಗ್ರಾಮದ ನಿವಾಸಿ ರಮೇಶ ಭೀಮಶಾ ಬೇಡರ್(28) ಹಾಗೂ ಭೀಮಾಬಾಯಿ ಅಶೋಕ ರಾಠೋಡ(19) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಅಧಿಕಾರಕ್ಕೆ ಬಂದ್ರೆ ಟ್ರಿಪಲ್ ರೈಡಿಂಗ್ಗೆ ಅವಕಾಶ: SBSP ಭರವಸೆ
ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತಿದ್ದ ಇಬ್ಬರು ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಇಬ್ಬರ ಜಾತಿ ಬೇರೆ ಬೇರೆ ಆಗಿದ್ದರಿಂದ ವಿವಾಹಕ್ಕೆ ಕುಟುಂಬಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.
ಇದೇ ವಿಷಯಕ್ಕೆ ಕೆಲವು ದಿನಗಳ ಹಿಂದೆ ಎರಡೂ ಕುಟುಂಬದ ನಡುವೆ ಜಗಳ ನಡೆದಿತ್ತು. ನಂತರ ಪರಸ್ಪರ ರಾಜಿ ಸಂಧಾನದ ಮೂಲಕ ಗಲಾಟೆ ಬಗೆಹರಿಸಿ ಇಬ್ಬರೂ ದೂರ ಇರುವಂತೆ ಸೂಚಿಸಲಾಗಿತ್ತು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಖಾಸಗಿ ಸಂಸ್ಥೆಯಲ್ಲಿ ಭಾರೀ ಅಗ್ನಿ ಅವಘಡ
ಇದೀಗ ಜಾತಿ ವಿಚಾರ ಹಾಗೂ ಕುಟುಂಬಸ್ಥರ ವಿರೋಧಕ್ಕೆ ಪ್ರೇಮಿಗಳಿಬ್ಬರು ಬಲಿಯಾಗಿದ್ದಾರೆ.