ಮಂಡ್ಯ: ಲೋಕಸಭಾ ಕ್ಷೇತ್ರ ಮಂಡ್ಯದಲ್ಲಿ ಹಣ ಹರಿದಾಡಲು ಬಿಡುತ್ತಿಲ್ಲ. ಆದ್ರೆ ಮೈಸೂರಿನಲ್ಲಿ ಹರಿದಾಡಿಸುತ್ತಿದ್ದಾರೆ ಎಂದು ಸಚಿವ ಸಿ.ಎಸ್. ಪುಟ್ಟರಾಜು ಅವರು ಸುಮಲತಾ ವಿರುದ್ಧ ಆರೋಪ ಮಾಡಿದ್ದು, ಈ ಕುರಿತು ಪಕ್ಷೇತರ ಅಭ್ಯರ್ಥಿ ಸಚಿವರಿಗೆ ಸವಾಲು ಹಾಕಿದ್ದಾರೆ.
ದೊಡ್ಡರಸಿನಕೆರೆಯಲ್ಲಿ ಪ್ರಚಾರದ ವೇಳೆ ಪ್ರತಿಕ್ರಿಯಿಸಿದ ಸುಮಲತಾ, ಪುಟ್ಟರಾಜು ಅವರಿಗೆ ಗೊತ್ತಿದ್ರೆ ಅವರು ಕೇಸ್ ಹಾಕಬಹುದು ಎಂದು ಸವಾಲೆಸೆದಿದ್ದಾರೆ. ಅಲ್ಲದೆ ಬೆಲೆ ಇರೋರ ಮಾತಿಗೆ ಮಾತ್ರ ನಾನು ಬೆಲೆ ಕೊಡೋದು. ಇಂಥವರ ಮಾತಿಗೆಲ್ಲ ನಾನು ತಲೆ ಕೆಡಿಸಿಕೊಳ್ಳಲ್ಲ ಎಂದು ಸುಮಲತಾ ತಿರುಗೇಟು ನೀಡಿದ್ದಾರೆ.
ಇದೇ ವೇಳೆ ಐಟಿಯವರು ದೂರವಾಣಿ ಕದ್ದಾಲಿಸಿ ಸುಮಲತಾಗೆ ನೀಡಿದ್ದಾರೆ ಅನ್ನೋ ಪುಟ್ಟರಾಜು ಹೇಳಿಕೆಗೆ ತಿರುಗೇಟು ಕೊಟ್ಟ ಸುಮಲತಾ, ಅವರಿಗೆ ಗಿಲ್ಟಿ ಕಾಡ್ತಿದೆ. ತಪ್ಪು ಮಾಡಿಲ್ಲ ಅಂದ್ರೆ ಅವರೇಕೆ ಭಯಪಡಬೇಕು. ಐಟಿಯವರಾದ್ರು ಮಾಡಿಕೊಳ್ಳಲಿ, ಸಿಬಿಐನವರಾದ್ರು ಮಾಡಿಕೊಳ್ಳಲಿ. ಇವರಲ್ಲಿ ಉಳುಕಿರೋದಕ್ಕೆ ತಾನೆ ಹೀಗೆಲ್ಲ ಮಾಡ್ತಿರೋದು ಎಂದು ಟಾಂಗ್ ಕೊಟ್ಟಿದ್ದಾರೆ.
ಆರೋಪವೇನು?:
ರಾತ್ರಿ ಮೈಸೂರಿನಲ್ಲಿ ತಂಗಿದ ಬಳಿಕ ಏನೇನು ಮಾಡ್ತಿದ್ದಾರೆ ಎಂಬ ಮಾಹಿತಿ ನಮ್ಮ ಬಳಿ ಇದೆ. ಕೆಲವೇ ದಿನಗಳಲ್ಲಿ ಮಾಹಿತಿ ಕೊಡ್ತೀವಿ ಎಂದು ಪುಟ್ಟರಾಜು ಸುಮಲತಾ ವಿರುದ್ಧ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಆರೋಪಿಸಿದ್ದರು.