ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಗೆ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಸ್ಪರ್ಧೆ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ಸುಮಲತಾ ಅವರು ಮಂಡ್ಯದಲ್ಲಿ ಮನೆ ಹುಡುಕುತ್ತಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಖಚಿತ ಎಂಬ ಮಾತು ಕೇಳಿ ಬರುತ್ತಿದೆ.
ಮಂಡ್ಯದಲ್ಲಿ ಸುಮಲತಾ ಅವರು ಕಾಂಗ್ರೆಸ್ ಅಥವಾ ಪಕ್ಷೇತರರಾಗಿ ಸುಮಲತ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಹೀಗಾಗಿ ಅವರು ಮಂಡ್ಯದಲ್ಲಿ ಮನೆ ಹುಡುಕುತ್ತಿದ್ದಾರೆ. ಸುಮಲತಾ ಅವರು ತಮ್ಮ ಆಪ್ತರಿಗೆ ಮಂಡ್ಯದಲ್ಲಿ ಮನೆ ನೋಡಲು ತಿಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮನೆ ನೋಡಲು ಹೇಳಿದ ಸುಮಲತಾ ಅವರಿಗೆ ಬಾಡಿಗೆ ಮನೆ ಬೇಡ ಸ್ವಂತ ಮನೆ ಕೊಂಡುಕೊಳ್ಳಿ ಎಂದು ಆಪ್ತರು ಸಲಹೆ ನೀಡಿದ್ದಾರೆ. ಬಾಡಿಗೆ ಮನೆ ಮಾಡಿದರೆ ಮಾಜಿ ಸಂಸದೆ ರಮ್ಯಾ ಅವರಂತೆ ನೀವು ಕೂಡ ಚುನಾವಣೆ ಮುಗಿದ ಮೇಲೆ ಹೊರಟು ಹೋಗುತ್ತೀರಿ ಅಂತ ಅಪಪ್ರಚಾರ ಮಾಡುತ್ತಾರೆ. ಹೀಗಾಗಿ ಸ್ವಂತಕ್ಕೆ ಮನೆ ತೆಗೆದುಕೊಳ್ಳಿ. ಚುನಾವಣೆ ಇರಲಿ ಬಿಡಲಿ ಮಂಡ್ಯದಲ್ಲಿ ಇದ್ದು ಜನರ ಕಷ್ಟಕ್ಕೆ ಸ್ಪಂದಿಸಲು ಸ್ವಂತ ಮನೆ ಮಾಡಿ ಎಂದು ಅಂಬರೀಶ್ ಅಭಿಮಾನಿಗಳು ಮತ್ತು ಬೆಂಬಲಿಗರು ಸುಮಲತಾ ಅವರಿಗೆ ಮನವಿ ಮಾಡಿದ್ದಾರೆ.
ಆಪ್ತರು, ಅಭಿಮಾನಿಗಳು ಮಾಡಿದ ಮನವಿಯಿಂದ ಸುಮಲತಾ ಅವರು ಸ್ವಂತಕ್ಕೆ ಕೊಂಡುಕೊಳ್ಳಲು ಮಂಡ್ಯದಲ್ಲಿ ಮನೆ ಹುಡುಕುತ್ತಿದ್ದಾರೆ. ಈಗಾಗಲೇ ಕಟ್ಟಿರುವ ಮನೆಯನ್ನೇ ಕೊಂಡುಕೊಳ್ಳಲು ಅಂತಹ ಮನೆ ಹುಡುಕಲು ಬೆಂಬಲಿಗರಿಗೆ ಸುಮಲತಾ ಅವರು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಹಿಂದೆ ಮಂಡ್ಯದಿಂದ ಸ್ಪರ್ಧೆ ಮಾಡುವಾಗ ಮಾಜಿ ಸಂಸದೆ ರಮ್ಯಾ ಅವರು ಕೂಡ ಬಾಡಿಗೆ ಮನೆ ಮಾಡಿಕೊಂಡು ಪ್ರಚಾರ ಮಾಡುತ್ತಿದ್ದರು. ಆದರೆ ಚುನವಾಣೆಯಲ್ಲಿ ಸೋತ ಬಳಿಕ ಮನೆ ಖಾಲಿ ಮಾಡಿಕೊಂಡು ಹೋಗಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv