ಬೆಳ್ಳಂಬೆಳಗ್ಗೆ ಬಿಎಸ್‍ವೈ ನಿವಾಸಕ್ಕೆ ಸುಮಲತಾ ಅಂಬರೀಶ್ ಭೇಟಿ

Public TV
1 Min Read
BSY SUMALATHA copy

ಬೆಂಗಳೂರು: ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಅವರು ಇಂದು ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪರನ್ನು ಭೇಟಿ ಮಾಡಿದ್ದಾರೆ.

ತಮಗೆ ಬಿಜೆಪಿ ಬೆಂಬಲ ಘೋಷಿಸಿರುವ ಹಿನ್ನೆಲೆಯಲ್ಲಿ ಸುಮಲತಾ ಅವರು ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿಯ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ.

vlcsnap 2019 03 25 09h43m48s963

ಬಳಿಕ ಮಾಧ್ಯಮಗಳ ಬಳಿ ಮಾತನಾಡಿದ ಅವರು, ಬೆಂಬಲ ನೀಡಿರುವುದರಿಂದ ಕೃತಜ್ಞತೆ ಸಲ್ಲಿಸಲು ಬಂದಿದ್ದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕು ಅನ್ನೊದು ಕಾರ್ಯಕರ್ತರ ಒತ್ತಾಯವಾಗಿತ್ತು. ಬಿಜೆಪಿಗೆ ಚುನಾವಣೆಯ ನಂತರ ಬೆಂಬಲ ಕೊಡಬೇಕಾ ಬೇಡವಾ ಅನ್ನೋದು ಜನ ತಿರ್ಮಾನ ಮಾಡುತ್ತಾರೆ. ನಾವು ಅಂಬರೀಶ್ ಅವರ ಮೇಲಿನ ಅಭಿಮಾನದಿಂದ ಬೆಂಬಲ ಕೊಡುತ್ತಿದ್ದೇವೆ. ಹೀಗಾಗಿ ನಾವು ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸ್ಪರ್ಧೆ ಮಾಡಿಸುತ್ತಿಲ್ಲ ಎಂದು ಹೇಳಿದ್ದಾರೆ. ಯಾವುದೇ ನಿಬಂಧನೆಗಳು ಇಲ್ಲದೆ ನನಗೆ ಬಿಜೆಪಿ ಬೆಂಬಲ ನೀಡಿದೆ ಎಂದ್ರು.

vlcsnap 2019 03 25 09h42m25s564

ಚುನಾವಣೆಯ ಸಂದರ್ಭದಲ್ಲಿ ಈ ರೀತಿಯ ಮಾತುಗಳ ಅವಶ್ಯಕತೆ ಇರಲಿಲ್ಲ. ಅವರು ಏನು ಬೇಕಾದರೂ ಮಾತನಾಡಿಕೊಳ್ಳಲಿ. ನಾವು ಯಾವುದೇ ಪ್ರತಿಕ್ರಿಯೆ ಮಾಡುವುದು ಬೇಡ ಎಂದು ದರ್ಶನ್ ಕೂಡ ಹೇಳಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಅವರ ದರ್ಶನ್ ಹಾಗೂ ಯಶ್ ಕಳ್ಳೆತ್ತುಗಳು ಅನ್ನೊ ಹೇಳಿಕೆಗೆ ಸುಮಲತಾ ತಿರುಗೇಟು ನೀಡಿದ್ದಾರೆ.

ಸುಮಲತಾ ಅಂಬರೀಶ್ ಅವರು ಇಂದು ನಮ್ಮನ್ನು ಭೇಟಿ ಮಾಡಿದ್ದಾರೆ. ಈ ಹಿಂದೆಯೇ ನಾವು ಸುಮಲತಾ ಅವರಿಗೆ ಬೆಂಬಲ ಕೊಡುತ್ತೇವೆ ಎಂದು ತಿಳಿಸಿದ್ದೆವು. ಅದೇ ರೀತಿ ನಮ್ಮ ಕಾರ್ಯಕರ್ತರು, ಮುಖಂಡರಿಗೂ ಬೆಂಬಲ ನೀಡುವಂತೆ ಸೂಚನೆ ಕೊಟ್ಟಿದ್ದೇವೆ ಎಂದು ಇದೇ ವೇಳೆ ಯಡಿಯೂರಪ್ಪ ಕೂಡ ಪ್ರತಿಕ್ರಿಯಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *