Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನನ್ನು ಬೆಂಬಲಿಸಿದವರನ್ನು ಟಾರ್ಗೆಟ್ ಮಾಡಿ ಕಿರುಕುಳ ನೀಡುತ್ತಿದ್ದಾರೆ: ಸುಮಲತಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನನ್ನನ್ನು ಬೆಂಬಲಿಸಿದವರನ್ನು ಟಾರ್ಗೆಟ್ ಮಾಡಿ ಕಿರುಕುಳ ನೀಡುತ್ತಿದ್ದಾರೆ: ಸುಮಲತಾ

Districts

ನನ್ನನ್ನು ಬೆಂಬಲಿಸಿದವರನ್ನು ಟಾರ್ಗೆಟ್ ಮಾಡಿ ಕಿರುಕುಳ ನೀಡುತ್ತಿದ್ದಾರೆ: ಸುಮಲತಾ

Public TV
Last updated: April 21, 2019 1:01 pm
Public TV
Share
3 Min Read
Sumalatha HDK
SHARE

– ಯಾರಿಗೆ ಬೆದರಿಕೆ ಹಾಕುತ್ತಿದ್ದಾರೆ ಗೊತ್ತಾಗಬೇಕು
– ಯಾರೂ ಬೆಟ್ಟಿಂಗ್ ಕಟ್ಟಬೇಡಿ
– ಮಂಡ್ಯನೇ ನನಗೆ ಸಿಂಗಾಪುರ್

ಮಂಡ್ಯ: ನನ್ನ ಬೆಂಬಲಕ್ಕೆ ನಿಂತವರನ್ನು ಟಾರ್ಗೆಟ್ ಮಾಡಿ ಕಿರುಕುಳ ನೀಡಲಾಗುತ್ತಿದೆ. ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಆಗ್ರಹಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚುನಾವಣೆ ಮುಗಿದಿದೆ. ಈಗ ನಮ್ಮ ಬೆಂಬಲಿಗರಿಗೆ ಕಿರುಕುಳ ನೀಡುತ್ತಿದ್ದಾರೆ. ಈ ಸಂಬಂಧ ಎಸ್‍ಪಿ (ಪೊಲೀಸ್ ಅಧೀಕ್ಷಕ) ಗಮನಕ್ಕೆ ತರುತ್ತೇನೆ. ನನ್ನ ಬೆಂಬಲಿಗರ ಪರವಾಗಿ ನಾನು ನಿಲ್ಲುತ್ತೇನೆ. ನನ್ನ ಪರವಾಗಿ ನಿಂತ ಚಿತ್ರನಟರು ಪ್ರಾಯಶ್ಚಿತ್ತ ಪಡಬೇಕಾಗುತ್ತದೆ ಎಂದು ಸಿಎಂ ಹೇಳಿದ್ದಾರೆ. ಇದರ ಅರ್ಥ ಏನು ಅಂತ ಗೊತ್ತಾಗಬೇಕು. ಯಾರಿಗೆ ಬೆದರಿಕೆ ಹಾಕುತ್ತಿದ್ದಾರೆ ಗೊತ್ತಾಗಬೇಕು ಎಂದು ಕಿಡಿಕಾರಿದರು.

CMK CM HDK

ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಯಾಕಪ್ಪ ಬೇಕಿತ್ತು ಅಂತ ಕೆಲವೊಮ್ಮೆ ಅನಿಸುತ್ತಿತ್ತು. ಆದರೆ ಜನರಿಗಾಗಿ ನನ್ನಲ್ಲಿ ನಾನೇ ಧೈರ್ಯ ತುಂಬಿಕೊಂಡು ಬಂದೆ. ಜಿಲ್ಲೆಯ ಜನರ ಜೊತೆ ಇರುವ ಸಲುವಾಗಿಯೇ ಚುನಾವಣೆಗೆ ಬಂದಿದ್ದೇನೆ. ನನಗೆ ರಾಜಕೀಯ ಬೇಕಿಲ್ಲ. ಆದರೆ ಜನರ ಜೊತೆ ಇರಲು ಒಳ್ಳೆ ಮಾರ್ಗ ಎಂದು ಅವರೇ ಸೂಚಿಸಿದರು. ಚುನಾವಣೆ ಬರುತ್ತದೆ ಹೋಗುತ್ತದೆ. ಅಂಬರೀಶ್ ಅವರ ಹೆಸರು ಬರೀ ಚುನಾವಣೆಗೆ ಸಂಬಂಧಿಸಿದ್ದಲ್ಲ. ನಾನು ಮಂಡ್ಯ ಜನರ ಜೊತೆ ಇರುತ್ತೇನೆ. ಮಂಡ್ಯವೇ ನನಗೆ ಸಿಂಗಾಪುರ್ ಎಂದು ಹೇಳಿದರು.

ಅಂಬರೀಶ್ ಅವರ ಪಾರ್ಥಿವ ಶರೀರ ಮಂಡ್ಯಕ್ಕೆ ತೆಗೆದುಕೊಂಡು ಹೋಗಬೇಕು ಅಂದು ಕೊಂಡಿದ್ದೇವು. ತೆಗೆದುಕೊಂಡು ಹೋಗುವುದು ಹೇಳೋಕಾಗಲ್ಲ. ಬಸ್ ವ್ಯವಸ್ಥೆ ಮಾಡುತ್ತೇವೆ ಅಂತ ಹೇಳಿದರು. ಆದರೆ ಅದರ ಈಗ ಬಗ್ಗೆ ಮಾತನಾಡಿದರು. ಯಾವುದು ಸುಳ್ಳು, ಸತ್ಯ ಜನರಿಗೆ ಗೊತ್ತಿದೆ. ಮೇ 29ರಂದು ಅಂಬರೀಶ್ ಜನ್ಮದಿನ. ಅದನ್ನು ಮಂಡ್ಯದಲ್ಲೇ ಮಾಡುತ್ತೇನೆ ಎಂದು ತಿಳಿಸಿದರು.

shivarame gowda

ಜಾತಿ ರಾಜಕಾರಣಕ್ಕೆ ನನ್ನ ವಿರೋಧವಿದೆ. ಗೌಡ್ತಿ ಅಲ್ಲ ಎಂಬುದನ್ನು ಒಪ್ಪಲ್ಲ, ಖಂಡಿಸುತ್ತೇನೆ. ಜನ ಅವರ ಮಾತನ್ನು ಒಪ್ಪಲ್ಲ ಎಂದು ಸಂಸದ ಶಿವರಾಮೇಗೌಡ ವಿರುದ್ಧ ಕಿಡಿಕಾರಿದರು.

ನಾನು 15 ವರ್ಷದವಳಿದ್ದಾಗ ಸಿನಿಮಾಗೆ ಬಂದೆ. ಕುಟುಂಬದ ಜವಾಬ್ದಾರಿ ಇತ್ತು. ನಂತರ ಪತ್ನಿಯಾಗಿ, ತಾಯಿಯಾಗಿ ಜವಾಬ್ದಾರಿ ನಿಭಾಯಿಸಿದೆ. ತಾಯಿಗಿಂತ ದೊಡ್ಡ ಜವಾಬ್ದಾರಿ ಯಾವುದೂ ಇಲ್ಲ. ಅವರು ಮತ್ತು ಮಗನನ್ನು ನೋಡಿಕೊಳ್ಳಬೇಕಿತ್ತು. ಯಾವಾಗ ಅಂಬರೀಷ್ ಇಲ್ಲ ಎಂದು ಮಂಡ್ಯ ಜನರು ಬಂದರೋ ಆಗ ಇಲ್ಲಿಗೆ ಬರಬೇಕಾಯಿತು ಎಂದು ತಿಳಿಸಿದರು.

Sumalatha Ambareesh

ಕನಗನಮರಡಿ ಬಸ್ ದುರಂತದಲ್ಲಿ ಮಡಿದವರಿಗೆ ಕಿರು ಕಾಣಿಕೆ ನೀಡಿದ್ದೇವೆ. ಇದನ್ನು ಪ್ರಚಾರಕ್ಕೆ ಹೇಳಿಕೊಳ್ಳುವುದು ತಪ್ಪು. ಇದರಿಂದ ಜನರಿಗೆ ಏನು ಉಪಯೋಗ? ಹೀಗಾಗಿ ನಾನು ಇದರ ಬಗ್ಗೆ ಮಾತನಾಡಲಿಲ್ಲ. ಹಣದ ಹೊಳೆ ಹರಿಯುತ್ತಿದ್ದು ನಿಜ ಎನ್ನುವುದು ಗೊತ್ತಾಗಿತ್ತು. ದುಡ್ಡು ತೆಗೆದುಕೊಂಡು ವೋಟ್ ಹಾಕೋದು ಬೇಡ ಅಂತ ಜನರ ಬಳಿ ಕೇಳಿಕೊಂಡೆ ಎಂದರು.

ಯಾರ ಸ್ವಭಾವ ಏನು ಎನ್ನುವುದು ಜನರಿಗೆ ಗೊತ್ತಿದೆ. ಜಿಲ್ಲೆಯಲ್ಲಿ ಬೆಟ್ಟಿಂಗ್ ನಡೆಯುತ್ತಿದೆ ಎಂಬುದು ಕೇಳಿ ಬರುತ್ತಿದೆ. ಯಾರೂ ರಿಸ್ಕ್ ತೆಗೆದುಕೊಳ್ಳಬೇಡಿ. ಬೆಟ್ಟಿಂಗ್ ಒಳ್ಳೆಯ ವಿಷಯವಲ್ಲ. ಯಾರು ಗೆಲ್ಲುತ್ತಾರೆ, ಯಾರು ಸೋಲುತ್ತಾರೆ ಗೊತ್ತಿಲ್ಲ. ಬೆಟ್ಟಿಂಗ್ ಕಟ್ಟಬೇಡಿ ಎಂದು ಮನವಿ ಮಾಡಿಕೊಂಡರು.

MND 1

ಮಂಡ್ಯ ಜಿಲ್ಲೆಯ ಕ್ಷೇತ್ರದ್ಯಾಂತ ಬೆಂಬಲ ಹಾಗೂ ಜನರ ಪ್ರೀತಿ ಸಿಕ್ಕಿದೆ. ಹೀಗಾಗಿ ಎಲ್ಲರನ್ನೂ ಸ್ಮರಿಸುವುದು ಕರ್ತವ್ಯ. ಕಾಂಗ್ರೆಸ್ ಪಕ್ಷದವರು ಮೊದಲ ಹೆಜ್ಜೆ ಇಡಲು ಸ್ಫೂರ್ತಿ ನೀಡಿದ್ದಾರೆ. ಅವರಿಗೆ ವಂದನೆ. ರೈತ ಸಂಘ, ಬಿಜೆಪಿ ನನಗೆ ಶಕ್ತಿ ತುಂಬಿ ನನ್ನ ಹೋರಾಟವನ್ನು ಬಲಿಷ್ಠಗೊಳಿಸಿತು. ದಲಿತ ಸಂಘಟನೆ, ಕನ್ನಡಪರ ಹೋರಾಟಗಾರರು, ಮುಸ್ಲಿಂ ಸಮುದಾಯ ಎಲ್ಲರಿಗೂ ಕೃತಜ್ಞತೆಗಳು ಎಂದು ತಿಳಿಸಿದರು.

ನಟರಾದ ದರ್ಶನ್, ಯಶ್, ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್, ದೊಡ್ಡಣ್ಣ, ಅಂಬರೀಶ್, ಅಭಿಷೇಕ್ ಮತ್ತು ನನ್ನ ಅಭಿಮಾನಿಗಳಿಗೆ ವಂದನೆ. ಕೆಪಿಸಿಸಿ ಸದಸ್ಯ ಸಚ್ಚಿದಾನಂದ, ಪ್ರಸನ್ನ, ರಾಜೀವ್, ಅರವಿಂದ್ ಸೇರಿದಂತೆ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಗೊಂಡವರು, ಶೇ.80ರಷ್ಟು ಮತದಾನ ಮಾಡಿದವರಿಗೆ ವಂದನೆ. ಆದರೆ ಬೆಂಗಳೂರು ನಗರದಲ್ಲಿ ಎಲ್ಲ ಸೌಲಭ್ಯ ಇದ್ದರೂ ಮತದಾನ ಮಾಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

mnd sumalatha prachara 2 copy

ರಾಯಚೂರಿನ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ರಾಜ್ಯ ಸರ್ಕಾರವು ನ್ಯಾಯ ದೊರಕಿಸಿಕೊಡಬೇಕು. ಆದಷ್ಟು ಬೇಗ ನೊಂದ ಕುಟುಂಬಕ್ಕೆ ಸಾಂತ್ವನ ನೀಡಬೇಕು. ಮೃತ ವಿದ್ಯಾರ್ಥಿನಿಗೆ ಸಂತಾಪ ಸೂಚಿಸುತ್ತೇನೆ. ನ್ಯಾಯ ಮತ್ತು ಅನ್ಯಾಯದ ಹೋರಾಟವಿದು. ಮಾಧ್ಯಮಗಳು ಉತ್ತಮವಾದ ಕೆಲಸ ಮಾಡಿವೆ ಎಂದರು.

TAGGED:CM KumaraswamydarshanLok Sabha electionmandyaPublic TVSumalatha Ambareeshದರ್ಶನ್ಪಬ್ಲಿಕ್ ಟಿವಿಮಂಡ್ಯಲೋಕಸಭಾ ಚುನಾವಣೆಸಿಎಂ ಕುಮಾರಸ್ವಾಮಿಸುಮಲತಾ ಅಂಬರೀಶ್
Share This Article
Facebook Whatsapp Whatsapp Telegram

Cinema news

rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema

You Might Also Like

01 10
Big Bulletin

ಬಿಗ್‌ ಬುಲೆಟಿನ್‌ 16 February 2026 ಭಾಗ-1

Public TV
By Public TV
3 minutes ago
02 11
Big Bulletin

ಬಿಗ್‌ ಬುಲೆಟಿನ್‌ 16 February 2026 ಭಾಗ-2

Public TV
By Public TV
4 minutes ago
03 9
Big Bulletin

ಬಿಗ್‌ ಬುಲೆಟಿನ್‌ 16 February 2026 ಭಾಗ-3

Public TV
By Public TV
5 minutes ago
Red Chilli
Districts

ಕ್ವಿಂಟಾಲ್ ಬ್ಯಾಡಗಿ ಮೆಣಸಿನಕಾಯಿಗೆ 89 ಸಾವಿರ – ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದಾಖಲೆಯ ದರಕ್ಕೆ ಮಾರಾಟ

Public TV
By Public TV
13 minutes ago
Prime Minister Modi inaugurates India AI Impact Expo 2026 at Bharat Mandapam
Latest

AI Impact Summit 2026 – ಜಾಗತಿಕ ಶೃಂಗಕ್ಕೆ ಮೋದಿ ಚಾಲನೆ

Public TV
By Public TV
24 minutes ago
Bidar ai camera
Bidar

ಆಟೋದಲ್ಲಿ ಮಹಿಳೆ ಕಳೆದುಕೊಂಡಿದ್ದ 29 ಸಾವಿರ ಪತ್ತೆಹಚ್ಚಿದ AI ಕ್ಯಾಮೆರಾ

Public TV
By Public TV
38 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?