Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನನ್ನು ಬೆಂಬಲಿಸಿದವರನ್ನು ಟಾರ್ಗೆಟ್ ಮಾಡಿ ಕಿರುಕುಳ ನೀಡುತ್ತಿದ್ದಾರೆ: ಸುಮಲತಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನನ್ನನ್ನು ಬೆಂಬಲಿಸಿದವರನ್ನು ಟಾರ್ಗೆಟ್ ಮಾಡಿ ಕಿರುಕುಳ ನೀಡುತ್ತಿದ್ದಾರೆ: ಸುಮಲತಾ

Districts

ನನ್ನನ್ನು ಬೆಂಬಲಿಸಿದವರನ್ನು ಟಾರ್ಗೆಟ್ ಮಾಡಿ ಕಿರುಕುಳ ನೀಡುತ್ತಿದ್ದಾರೆ: ಸುಮಲತಾ

Public TV
Last updated: April 21, 2019 1:01 pm
Public TV
Share
3 Min Read
Sumalatha HDK
SHARE

– ಯಾರಿಗೆ ಬೆದರಿಕೆ ಹಾಕುತ್ತಿದ್ದಾರೆ ಗೊತ್ತಾಗಬೇಕು
– ಯಾರೂ ಬೆಟ್ಟಿಂಗ್ ಕಟ್ಟಬೇಡಿ
– ಮಂಡ್ಯನೇ ನನಗೆ ಸಿಂಗಾಪುರ್

ಮಂಡ್ಯ: ನನ್ನ ಬೆಂಬಲಕ್ಕೆ ನಿಂತವರನ್ನು ಟಾರ್ಗೆಟ್ ಮಾಡಿ ಕಿರುಕುಳ ನೀಡಲಾಗುತ್ತಿದೆ. ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಆಗ್ರಹಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚುನಾವಣೆ ಮುಗಿದಿದೆ. ಈಗ ನಮ್ಮ ಬೆಂಬಲಿಗರಿಗೆ ಕಿರುಕುಳ ನೀಡುತ್ತಿದ್ದಾರೆ. ಈ ಸಂಬಂಧ ಎಸ್‍ಪಿ (ಪೊಲೀಸ್ ಅಧೀಕ್ಷಕ) ಗಮನಕ್ಕೆ ತರುತ್ತೇನೆ. ನನ್ನ ಬೆಂಬಲಿಗರ ಪರವಾಗಿ ನಾನು ನಿಲ್ಲುತ್ತೇನೆ. ನನ್ನ ಪರವಾಗಿ ನಿಂತ ಚಿತ್ರನಟರು ಪ್ರಾಯಶ್ಚಿತ್ತ ಪಡಬೇಕಾಗುತ್ತದೆ ಎಂದು ಸಿಎಂ ಹೇಳಿದ್ದಾರೆ. ಇದರ ಅರ್ಥ ಏನು ಅಂತ ಗೊತ್ತಾಗಬೇಕು. ಯಾರಿಗೆ ಬೆದರಿಕೆ ಹಾಕುತ್ತಿದ್ದಾರೆ ಗೊತ್ತಾಗಬೇಕು ಎಂದು ಕಿಡಿಕಾರಿದರು.

CMK CM HDK

ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಯಾಕಪ್ಪ ಬೇಕಿತ್ತು ಅಂತ ಕೆಲವೊಮ್ಮೆ ಅನಿಸುತ್ತಿತ್ತು. ಆದರೆ ಜನರಿಗಾಗಿ ನನ್ನಲ್ಲಿ ನಾನೇ ಧೈರ್ಯ ತುಂಬಿಕೊಂಡು ಬಂದೆ. ಜಿಲ್ಲೆಯ ಜನರ ಜೊತೆ ಇರುವ ಸಲುವಾಗಿಯೇ ಚುನಾವಣೆಗೆ ಬಂದಿದ್ದೇನೆ. ನನಗೆ ರಾಜಕೀಯ ಬೇಕಿಲ್ಲ. ಆದರೆ ಜನರ ಜೊತೆ ಇರಲು ಒಳ್ಳೆ ಮಾರ್ಗ ಎಂದು ಅವರೇ ಸೂಚಿಸಿದರು. ಚುನಾವಣೆ ಬರುತ್ತದೆ ಹೋಗುತ್ತದೆ. ಅಂಬರೀಶ್ ಅವರ ಹೆಸರು ಬರೀ ಚುನಾವಣೆಗೆ ಸಂಬಂಧಿಸಿದ್ದಲ್ಲ. ನಾನು ಮಂಡ್ಯ ಜನರ ಜೊತೆ ಇರುತ್ತೇನೆ. ಮಂಡ್ಯವೇ ನನಗೆ ಸಿಂಗಾಪುರ್ ಎಂದು ಹೇಳಿದರು.

ಅಂಬರೀಶ್ ಅವರ ಪಾರ್ಥಿವ ಶರೀರ ಮಂಡ್ಯಕ್ಕೆ ತೆಗೆದುಕೊಂಡು ಹೋಗಬೇಕು ಅಂದು ಕೊಂಡಿದ್ದೇವು. ತೆಗೆದುಕೊಂಡು ಹೋಗುವುದು ಹೇಳೋಕಾಗಲ್ಲ. ಬಸ್ ವ್ಯವಸ್ಥೆ ಮಾಡುತ್ತೇವೆ ಅಂತ ಹೇಳಿದರು. ಆದರೆ ಅದರ ಈಗ ಬಗ್ಗೆ ಮಾತನಾಡಿದರು. ಯಾವುದು ಸುಳ್ಳು, ಸತ್ಯ ಜನರಿಗೆ ಗೊತ್ತಿದೆ. ಮೇ 29ರಂದು ಅಂಬರೀಶ್ ಜನ್ಮದಿನ. ಅದನ್ನು ಮಂಡ್ಯದಲ್ಲೇ ಮಾಡುತ್ತೇನೆ ಎಂದು ತಿಳಿಸಿದರು.

shivarame gowda

ಜಾತಿ ರಾಜಕಾರಣಕ್ಕೆ ನನ್ನ ವಿರೋಧವಿದೆ. ಗೌಡ್ತಿ ಅಲ್ಲ ಎಂಬುದನ್ನು ಒಪ್ಪಲ್ಲ, ಖಂಡಿಸುತ್ತೇನೆ. ಜನ ಅವರ ಮಾತನ್ನು ಒಪ್ಪಲ್ಲ ಎಂದು ಸಂಸದ ಶಿವರಾಮೇಗೌಡ ವಿರುದ್ಧ ಕಿಡಿಕಾರಿದರು.

ನಾನು 15 ವರ್ಷದವಳಿದ್ದಾಗ ಸಿನಿಮಾಗೆ ಬಂದೆ. ಕುಟುಂಬದ ಜವಾಬ್ದಾರಿ ಇತ್ತು. ನಂತರ ಪತ್ನಿಯಾಗಿ, ತಾಯಿಯಾಗಿ ಜವಾಬ್ದಾರಿ ನಿಭಾಯಿಸಿದೆ. ತಾಯಿಗಿಂತ ದೊಡ್ಡ ಜವಾಬ್ದಾರಿ ಯಾವುದೂ ಇಲ್ಲ. ಅವರು ಮತ್ತು ಮಗನನ್ನು ನೋಡಿಕೊಳ್ಳಬೇಕಿತ್ತು. ಯಾವಾಗ ಅಂಬರೀಷ್ ಇಲ್ಲ ಎಂದು ಮಂಡ್ಯ ಜನರು ಬಂದರೋ ಆಗ ಇಲ್ಲಿಗೆ ಬರಬೇಕಾಯಿತು ಎಂದು ತಿಳಿಸಿದರು.

Sumalatha Ambareesh

ಕನಗನಮರಡಿ ಬಸ್ ದುರಂತದಲ್ಲಿ ಮಡಿದವರಿಗೆ ಕಿರು ಕಾಣಿಕೆ ನೀಡಿದ್ದೇವೆ. ಇದನ್ನು ಪ್ರಚಾರಕ್ಕೆ ಹೇಳಿಕೊಳ್ಳುವುದು ತಪ್ಪು. ಇದರಿಂದ ಜನರಿಗೆ ಏನು ಉಪಯೋಗ? ಹೀಗಾಗಿ ನಾನು ಇದರ ಬಗ್ಗೆ ಮಾತನಾಡಲಿಲ್ಲ. ಹಣದ ಹೊಳೆ ಹರಿಯುತ್ತಿದ್ದು ನಿಜ ಎನ್ನುವುದು ಗೊತ್ತಾಗಿತ್ತು. ದುಡ್ಡು ತೆಗೆದುಕೊಂಡು ವೋಟ್ ಹಾಕೋದು ಬೇಡ ಅಂತ ಜನರ ಬಳಿ ಕೇಳಿಕೊಂಡೆ ಎಂದರು.

ಯಾರ ಸ್ವಭಾವ ಏನು ಎನ್ನುವುದು ಜನರಿಗೆ ಗೊತ್ತಿದೆ. ಜಿಲ್ಲೆಯಲ್ಲಿ ಬೆಟ್ಟಿಂಗ್ ನಡೆಯುತ್ತಿದೆ ಎಂಬುದು ಕೇಳಿ ಬರುತ್ತಿದೆ. ಯಾರೂ ರಿಸ್ಕ್ ತೆಗೆದುಕೊಳ್ಳಬೇಡಿ. ಬೆಟ್ಟಿಂಗ್ ಒಳ್ಳೆಯ ವಿಷಯವಲ್ಲ. ಯಾರು ಗೆಲ್ಲುತ್ತಾರೆ, ಯಾರು ಸೋಲುತ್ತಾರೆ ಗೊತ್ತಿಲ್ಲ. ಬೆಟ್ಟಿಂಗ್ ಕಟ್ಟಬೇಡಿ ಎಂದು ಮನವಿ ಮಾಡಿಕೊಂಡರು.

MND 1

ಮಂಡ್ಯ ಜಿಲ್ಲೆಯ ಕ್ಷೇತ್ರದ್ಯಾಂತ ಬೆಂಬಲ ಹಾಗೂ ಜನರ ಪ್ರೀತಿ ಸಿಕ್ಕಿದೆ. ಹೀಗಾಗಿ ಎಲ್ಲರನ್ನೂ ಸ್ಮರಿಸುವುದು ಕರ್ತವ್ಯ. ಕಾಂಗ್ರೆಸ್ ಪಕ್ಷದವರು ಮೊದಲ ಹೆಜ್ಜೆ ಇಡಲು ಸ್ಫೂರ್ತಿ ನೀಡಿದ್ದಾರೆ. ಅವರಿಗೆ ವಂದನೆ. ರೈತ ಸಂಘ, ಬಿಜೆಪಿ ನನಗೆ ಶಕ್ತಿ ತುಂಬಿ ನನ್ನ ಹೋರಾಟವನ್ನು ಬಲಿಷ್ಠಗೊಳಿಸಿತು. ದಲಿತ ಸಂಘಟನೆ, ಕನ್ನಡಪರ ಹೋರಾಟಗಾರರು, ಮುಸ್ಲಿಂ ಸಮುದಾಯ ಎಲ್ಲರಿಗೂ ಕೃತಜ್ಞತೆಗಳು ಎಂದು ತಿಳಿಸಿದರು.

ನಟರಾದ ದರ್ಶನ್, ಯಶ್, ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್, ದೊಡ್ಡಣ್ಣ, ಅಂಬರೀಶ್, ಅಭಿಷೇಕ್ ಮತ್ತು ನನ್ನ ಅಭಿಮಾನಿಗಳಿಗೆ ವಂದನೆ. ಕೆಪಿಸಿಸಿ ಸದಸ್ಯ ಸಚ್ಚಿದಾನಂದ, ಪ್ರಸನ್ನ, ರಾಜೀವ್, ಅರವಿಂದ್ ಸೇರಿದಂತೆ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಗೊಂಡವರು, ಶೇ.80ರಷ್ಟು ಮತದಾನ ಮಾಡಿದವರಿಗೆ ವಂದನೆ. ಆದರೆ ಬೆಂಗಳೂರು ನಗರದಲ್ಲಿ ಎಲ್ಲ ಸೌಲಭ್ಯ ಇದ್ದರೂ ಮತದಾನ ಮಾಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

mnd sumalatha prachara 2 copy

ರಾಯಚೂರಿನ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ರಾಜ್ಯ ಸರ್ಕಾರವು ನ್ಯಾಯ ದೊರಕಿಸಿಕೊಡಬೇಕು. ಆದಷ್ಟು ಬೇಗ ನೊಂದ ಕುಟುಂಬಕ್ಕೆ ಸಾಂತ್ವನ ನೀಡಬೇಕು. ಮೃತ ವಿದ್ಯಾರ್ಥಿನಿಗೆ ಸಂತಾಪ ಸೂಚಿಸುತ್ತೇನೆ. ನ್ಯಾಯ ಮತ್ತು ಅನ್ಯಾಯದ ಹೋರಾಟವಿದು. ಮಾಧ್ಯಮಗಳು ಉತ್ತಮವಾದ ಕೆಲಸ ಮಾಡಿವೆ ಎಂದರು.

TAGGED:CM KumaraswamydarshanLok Sabha electionmandyaPublic TVSumalatha Ambareeshದರ್ಶನ್ಪಬ್ಲಿಕ್ ಟಿವಿಮಂಡ್ಯಲೋಕಸಭಾ ಚುನಾವಣೆಸಿಎಂ ಕುಮಾರಸ್ವಾಮಿಸುಮಲತಾ ಅಂಬರೀಶ್
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Pinarayi Vijayan
Latest

ಶಬರಿಮಲೆ ವಿಚಾರದಲ್ಲಿ ಪಿಣರಾಯಿ ಯೂಟರ್ನ್ – ಮಹಿಳೆಯರ ಪ್ರವೇಶ ಹಿಂದಿನ ನಿಲುವು ಬದಲಾಯಿಸಿದ ಸರ್ಕಾರ

Public TV
By Public TV
7 hours ago
Iran warned UAE residents
Latest

ಯುಎಇ ಬಂದರು ಪ್ರದೇಶಗಳಿಂದ ಹೊರಗೆ ಹೋಗಿ: ಜನರಿಗೆ ಇರಾನ್‌ ಎಚ್ಚರಿಕೆ

Public TV
By Public TV
7 hours ago
Crime 3
Latest

ಮಂಗ ಓಡಿಸಲು ಹೋದವನ ದುರಂತ ಅಂತ್ಯ – ಕೈಯಲ್ಲಿದ್ದ ಎರ್‌ಗನ್‌ನಿಂದ ಹಾರಿದ ಗುಂಡಿಗೆ ಯುವಕ ಬಲಿ

Public TV
By Public TV
7 hours ago
01 8
Big Bulletin

ಬಿಗ್‌ ಬುಲೆಟಿನ್‌ 14 March 2026 ಭಾಗ-1

Public TV
By Public TV
8 hours ago
02 8
Big Bulletin

ಬಿಗ್‌ ಬುಲೆಟಿನ್‌ 14 March 2026 ಭಾಗ-2

Public TV
By Public TV
8 hours ago
03 8
Big Bulletin

ಬಿಗ್‌ ಬುಲೆಟಿನ್‌ 14 March 2026 ಭಾಗ-3

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?