Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಮುಂದಿನ ಲೋಕಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧವಾದ ಸುಮಲತಾ ಅಂಬರೀಶ್

Public TV
Last updated: May 23, 2023 1:12 pm
Public TV
Share
4 Min Read
MANDYA SUMALATHA INVITE 3
SHARE

ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯದ (Mandya) ಬಿಜೆಪಿ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರ ಮಾಡಿದ್ದ ನಟಿ, ಸಂಸದೆ ಸುಮಲತಾ ಅಂಬರೀಶ್ (Sumalata Ambarish), ಆ ಚುನಾವಣೆಯ ಫಲಿತಾಂಶವನ್ನು ತಮ್ಮದೇ ಆದ ರೀತಿಯಲ್ಲಿ ವಿಶ್ಲೇಷಣೆ ಮಾಡಿದ್ದಾರೆ. ಜೊತೆಗೆ ಮುಂದಿನ ಲೋಕಸಭಾ (Lok Sabha) ಚುನಾವಣೆಯಲ್ಲಿ ಮತ್ತೆ ಪುಟಿದೇಳುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ತಮ್ಮ ವಿರುದ್ಧ ಮಾತನಾಡುವವರಿಗೂ ಅವರು ಬಿಸಿ ಮುಟ್ಟಿಸಿದ್ದಾರೆ. ಸುಮಲತಾ ಅಂಬರೀಶ್ ತಮ್ಮ ಫೇಸ್ ಬುಕ್ ನಲ್ಲಿ ಬರೆದದ್ದು ಹೀಗಿದೆ..

Sumalatha Ambareesh

ತಮ್ಮೆಲ್ಲರಿಗೂ ಗೊತ್ತಿರುವಂತೆ ನಾನು 10 ಮಾರ್ಚ್ 2023 ರಂದು ಪತ್ರಿಕಾಗೋಷ್ಠಿ ಕರೆದು ಬಿಜೆಪಿಗೆ ನನ್ನ ಬೆಂಬಲವನ್ನು ಘೋಚಿಸಿದ್ದೆ. ಚುನಾವಣೆ (Elections) ದಿನಾಂಕ ಘೋಷಣೆಯಾದ ನಂತರ ಪಕ್ಷವು ಏಪ್ರಿಲ್ 18 ರಂದು ಅಭ್ಯರ್ಥಿಗಳನ್ನು ಘೋಷಣೆ ಮಾಡಿತು. ಪಕ್ಷವು ಘೋಷಣೆ ಮಾಡಿದ ನನ್ನ ಕ್ಷೇತ್ರದ ಎಲ್ಲ ಅಭ್ಯರ್ಥಿಗಳು ಫಸ್ಟ್ ಟೈಮ್ ಚುನಾವಣೆ ಎದುರಿಸಿದವರು. ಆದರೂ ಎದುರಾಳಿಗಳ ವಿರುದ್ಧ ಸಮರ್ಥವಾಗಿ ಹೋರಾಟ ಮಾಡಿದ್ದಾರೆ. ಅಲ್ಲದೇ ಪ್ರಚಾರಕ್ಕೆ ನಮಗಿದ್ದದ್ದು ಎರಡ್ಮೂರು ವಾರಗಳಷ್ಟೇ ಸಮಯ. ಆದರೂ ಹೊಸ ಪಡೆಯನ್ನು ಕಟ್ಟಿಕೊಂಡು ಹೋರಾಟ ಮಾಡಿದ್ದೇವೆ. ಪರಿಣಾಮ ಮೊದಲ ಬಾರಿಗೆ ಮಂಡ್ಯ, ಶ್ರೀರಂಗಪಟ್ಟಣ, ಮದ್ದೂರು ಮತ್ತು ಮಳವಳ್ಳಿಯಲ್ಲಿ ಬಿಜೆಪಿಗೆ ಮತಗಳ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಆದರೆ, ಮಂಡ್ಯದಲ್ಲಿ ಮಾತ್ರವಲ್ಲ ಕರ್ನಾಟಕದಲ್ಲೇ ಆಡಳಿತ ವಿರೋಧಿ ಅಲೆ ಮತ್ತು ಕಾಂಗ್ರೆಸ್ ಅಲೆ ಹೆಚ್ಚಾಗಿದ್ದರಿಂದ ನಿರೀಕ್ಷಿತ ಫಲಿತಾಂಶ ದೊರೆತಿಲ್ಲ. ಹಾಗಾಗಿ ಪಕ್ಷಕ್ಕೆ ಆಗಿರುವ ಸೋಲನ್ನು ಒಪ್ಪಿಕೊಂಡು, ಆತ್ಮಾವಲೋಕನದ ಜೊತೆಗೆ ಅಗತ್ಯ ಮಾರ್ಪಾಡುಗಳನ್ನು ಮಾಡಿಕೊಳ್ಳುತ್ತೇವೆ. ಇದನ್ನೂ ಓದಿ:‘ಯಶ್ 19’ ಸಿನಿಮಾದ ಫೋಟೋ ಲೀಕ್? ರಾಕಿ ಭಾಯ್ ನಯಾ ಲುಕ್

Sumalatha

ಮಾರ್ಚ್ 10 ರಂದು ನಾನು ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ‘ನಾನು ರಿಸ್ಕ್ ತಗೆದುಕೊಳ್ಳುತ್ತಿದ್ದೇನೆ. ಇದು ರಿಸ್ಕ್ ಎಂದು ನನಗೆ ಗೊತ್ತಿದೆ’ ಎಂದು ಮಾಧ್ಯಮಗಳ ಮುಂದೆಯೇ  ಅವತ್ತೆ ಸ್ಪಷ್ಟ ಪಡಿಸಿದ್ದೆ. ಪಕ್ಷದ ಸೋಲಿಗೆ ಇಷ್ಟೆಲ್ಲ ಕಾರಣಗಳು ಇದ್ದರೂ, ನೀವು ನಿಮ್ಮದೇ ಆದ ರೀತಿಯಲ್ಲಿ ಲೆಕ್ಕಾಚಾರ ಹಾಕುತ್ತೀದ್ದೀರಿ. ಸುಳ್ಳು ಸಂದೇಶಗಳನ್ನು ಹರಡುತ್ತಿದ್ದೀರಿ. ನೀವೇ ಸುದ್ದಿಯನ್ನು ಸೃಷ್ಟಿಸಿ ಜನರಿಗೆ ತಪ್ಪು ಮಾಹಿತಿಯನ್ನು ನೀಡುವುದು ಎಷ್ಟು ಸರಿ? ನಾನು ಒಂದು ವಿಷಯವನ್ನು ಸ್ಪಷ್ಟವಾಗಿ ಹೇಳಲು ಇಷ್ಟಪಡುತ್ತೇನೆ. ಮುಂದಿನ ಚುನಾವಣೆಯಲ್ಲಿ ನನ್ನ ಭವಿಷ್ಯ ಅಥವಾ 24X7 ರಾಜಕಾರಣದ ಲೆಕ್ಕಾಚಾರ ಹಾಕುತ್ತಾ ಕೂರುವವಳು ನಾನಲ್ಲ.  ನನ್ನ ಸ್ವಾರ್ಥದ ಬಗ್ಗೆ ಮಾತ್ರ ಯೋಚಿಸಿದ್ದರೆ ಬಹುಶಃ ನನ್ನ ನಿಲುವೇ ಬೇರೆಯದ್ದಾಗಿಯೇ ಇರುತ್ತಿತ್ತು. ಆ ರೀತಿ ಮಾಡುವುದಕ್ಕೆ ನಾನು ಇಷ್ಟ ಪಡುವುದಿಲ್ಲ.  ನನ್ನ ಆತ್ಮಸಾಕ್ಷಿ ಆಧಾರದ ಮೇಲೆ ನಾನು ನನ್ನ ನಿರ್ಧಾರಗಳನ್ನು ತಗೆದುಕೊಳ್ಳುತ್ತೇನೆ ಮತ್ತು ನನ್ನ ಕ್ಷೇತ್ರಕ್ಕೆ ಒಳ್ಳೆದಾಗುವಂತಹ ಯೋಚನೆಯನ್ನು ಮಾತ್ರ ಮಾಡುತ್ತೇನೆ. ನಾನು ಎಂದಿಗೂ ನನ್ನ ನಿರ್ಧಾರಕ್ಕೆ ಬದ್ಧಳಾಗಿರುತ್ತೇನೆ. ನಮ್ಮ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ಯಾವತ್ತಿಗೂ ನಂಬಿಕೆ ಇರಲಿದೆ ಎಂದು ಮತ್ತೆ ಪುನರುಚ್ಚಿಸುತ್ತೇನೆ.

Sumalatha Ambareesh 3

ನಿಮ್ಮ ಗ್ರಹಿಕೆಗಳನ್ನು ದಯವಿಟ್ಟು ಸರಿಪಡಿಸಿಕೊಳ್ಳಿ. ಇಲ್ಲಿ ಪ್ರಮುಖವಾಗಿ ಒಂದು ಅಂಶವನ್ನು ಮರೆಯಬಾರದು. ನನ್ನ ಸ್ವಾಭಿಮಾನಿ ಕ್ಷೇತ್ರದಲ್ಲಿ ನಾನು ಈವರೆಗೂ ಏಕಾಂಗಿಯಾಗಿ ಹೋರಾಟ ಮಾಡುತ್ತಿರುವುದು ಕ್ಷೇತ್ರದ ಭ್ರಷ್ಟ ಹಾಗೂ ದುರಹಂಕಾರಿ ವರ್ತನೆಯ ಶಾಸಕರು ವಿರುದ್ಧ. ನನ್ನ ಈ ಸತತ ಹೋರಾಟವನ್ನು ಗಮನಿಸಿರುವ ನನ್ನ ಸ್ವಾಭಿಮಾನಿ ಜನರು ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಆ ಪಾರ್ಟಿಯಲ್ಲಿ ಗೆದ್ದಿರುವುದು ಒಬ್ಬರೇ ಒಬ್ಬರು. ಅವರೂ ಹೊಸಬರು. ಹೌದು, ನನ್ನ ನ್ಯಾಯಯುತ ಹೋರಾಟದ ಲಾಭವನ್ನು ನನ್ನ ಜಿಲ್ಲೆಯ ಕಾಂಗ್ರೆಸ್ ಪಡೆದುಕೊಂಡಿದೆ. ಅದು ನನ್ನ ಸ್ವಾಭಿಮಾನಿ ಮಂಡ್ಯದ ಜನರೇ ನೀಡಿದ ಜನಾದೇಶವಾಗಿದ್ದರಿಂದ ಅದನ್ನು ಗೌರವಿಸುತ್ತೇನೆ. ರಾಜಕೀಯ, ರಾಜಕಾರಣ ಮತ್ತು ತಂತ್ರಗಳು ಒಂದು ನಿರ್ದಿಷ್ಟ ಮಟ್ಟಿಗೆ ಕೆಲಸ ಮಾಡುತ್ತೇವೆ ಎಂದು ನಾನು ದೃಢವಾಗಿ ನಂಬುತ್ತೇನೆ. ಆದರೆ, ಅಂತಿಮವಾಗಿ ಯಾವುದೇ ಪ್ರಜಾಪ್ರಭುತ್ವದಲ್ಲಿ ಸಾಮಾನ್ಯ ವ್ಯಕ್ತಿ ಗೆಲ್ಲಬೇಕು ವಿನಃ ಪಕ್ಷಗಳು ಅಥವಾ ನಾಯಕರಲ್ಲ.

Sumalath Ambareesh

ಸದ್ಯ ನನ್ನ ಮುಂದೆ ಎರಡು ಗುರಿಗಳಿವೆ. ಮುಂದೆ ಮತ್ತೊಂದು ಮಹಾ ಚುನಾವಣೆಯಿದೆ. ನನ್ನ ಕ್ಷೇತ್ರದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಿ, ಚುನಾವಣೆಯಲ್ಲಿ ಗೆಲ್ಲಲು ಶ್ರಮಿಸುತ್ತೇವೆ. ಬಿಜೆಪಿ ಪಕ್ಷವು ಹಿಂದೆಂದಿಗಿಂತಲೂ ಬಲವಾಗಿ ಮತ್ತು ಅಚ್ಚರಿಯ ರೀತಿಯಲ್ಲಿ ಪುಟಿದೇಳಲಿದೆ ಮತ್ತು ವಿಜಯಶಾಲಿಯಾಗಿ ಹೊರಹೊಮ್ಮಲಿದೆ ಎನ್ನುವುದು ನನ್ನ ಅಚಲ ನಂಬಿಕೆಯಾಗಿದೆ. ಮತ್ತೊಂದು ಸಲ ಹೇಳುತ್ತೇನೆ, ನನ್ನ ನಿರ್ಧಾರ ಮತ್ತು ಪರಿಣಾಮಗಳ ಬಗ್ಗೆ ನನಗೆ ಸಂಪೂರ್ಣ ಅರಿವಿದೆ. ಹಾಗಾಗಿ ಈ ವಿಷಯದಲ್ಲಿ ನನಗೆ ವಿಷಾದವಿಲ್ಲ. ಕೆಟ್ಟ ಹಾಗೂ ನೆಗೆಟಿವ್ ಸುದ್ದಿ ಪ್ರಸಾರ ಮಾಡುವವರ ಜೊತೆಗೆ ಟ್ರೋಲ್ ಮಾಡುವವರು ದಯವಿಟ್ಟು ಆರೋಗ್ಯವಂಥ ಮನಸ್ಸು ಬೆಳೆಸಿಕೊಳ್ಳಿ. ವಿಶ್ರಾಂತಿ ತಗೆದುಕೊಂಡು ಆರೋಗ್ಯ ವೃದ್ಧಿಸಿಕೊಳ್ಳಿ. ನಿಮ್ಮ ಟ್ರೋಲ್ ಗಳು ನಿಮ್ಮ ವ್ಯಕ್ತಿತ್ವವನ್ನು ತೋರಿಸುತ್ತವೆಯೇ ಹೊರತು, ಅದರಿಂದ ನನ್ನ ಕೆಲಸಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ನಿಮ್ಮ ಅಗ್ಗದ ಮಾತುಗಳು, ನಿಂದನೆಯ ನುಡಿಗಳು, ನೀವು ಬಳಸುವ ಪದಗಳು ನಿಮ್ಮ ವ್ಯಕ್ತಿತ್ವವನ್ನು ತೋರಿಸುತ್ತಿವೆ. ದಯವಿಟ್ಟು ನಿಮ್ಮ ಈ ನಡವಳಿಕೆಯ ಮೂಲಕ ನಿಮ್ಮ ತಂದೆ ತಾಯಿಯನ್ನು ಅವಮಾನಿಸಬೇಡಿ. ಆರೋಗ್ಯವಂತ ಮತ್ತು ಸಕಾರಾತ್ಮಕ ಟೀಕೆ, ಟಿಪ್ಪಣಿ, ಚರ್ಚೆಗಳಿಗೆ ಯಾವತ್ತಿಗೂ ಈ ನೆಲದಲ್ಲಿ ಸ್ವಾಗತವಿದೆ. ನೀವು ಅಂದುಕೊಂಡಿರುವ ವಿಜಯವನ್ನು ಆನಂದಿಸಿ ಮತ್ತು ಆಚರಿಸಿ. ಮುಂದಿನ ಬಾರಿ ಪ್ರಬಲ ಹೋರಾಟಕ್ಕೆ ಸಿದ್ಧರಾಗಿರಿ.

ಜೈ ಹಿಂದ್, ಜೈ ಕರ್ನಾಟಕ, ಜೈ ಮಂಡ್ಯ

TAGGED:bjpelectionslok sabhamandyaSumalata Ambarishಚುನಾವಣೆಬಿಜೆಪಿಮಂಡ್ಯಲೋಕಸಭೆಸುಮಲತಾ ಅಂಬರೀಶ್
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
2 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
3 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
4 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
5 hours ago

You Might Also Like

Ahmedabad Air India Air Crash
Latest

ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ – 110 ಪ್ರಯಾಣಿಕರು ಸಾವು

Public TV
By Public TV
6 minutes ago
Air India Flight Crash
Latest

ವಿಮಾನ ಪತನ | ಪ್ರಯಾಣಿಕರ ಕುಟುಂಬಸ್ಥರಿಗೆ ಧೈರ್ಯ ತುಂಬಿದ ವಿಮಾನಯಾನ ಸಚಿವ

Public TV
By Public TV
7 minutes ago
train
Latest

ರೈಲ್ವೆ ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಆಧಾರ್‌ ಕಡ್ಡಾಯ – ಜುಲೈ 1ರಿಂದ ಹೊಸ ನಿಯಮ ಜಾರಿ

Public TV
By Public TV
26 minutes ago
Ahmedabad Plane Crash Capt Sumeet Sabharwal is a LTC with 8200 Hrs of experience
Latest

ಏರ್‌ ಇಂಡಿಯಾ ವಿಮಾನ ಪತನ – ಪೈಲಟ್‌ಗೆ ಇತ್ತು 8,200 ಗಂಟೆಗಳ ಹಾರಾಟದ ಅನುಭವ

Public TV
By Public TV
31 minutes ago
Ahmedabad Plane Crash Nikhil Kumaraswamy
Bengaluru City

ಅಹಮದಾಬಾದ್‌ನಲ್ಲಿ ವಿಮಾನ ದುರಂತ – ನಿಖಿಲ್ ಕುಮಾರಸ್ವಾಮಿ ಸಂತಾಪ

Public TV
By Public TV
32 minutes ago
Maharashtra Murder
Crime

ಮಹಾರಾಷ್ಟ್ರ| ಮದುವೆಯಾದ ಮೂರೇ ವಾರಕ್ಕೆ ಕೊಡಲಿಯಿಂದ ಪತಿಯ ಹತ್ಯೆಗ್ಯದ ಪತ್ನಿ!

Public TV
By Public TV
38 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?