ಸುಮಲತಾ ಬೆಂಬಲಿಗನಿಂದ ಸರ್ಕಾರಿ ವಾಹನ ದುರ್ಬಳಕೆ!

Public TV
1 Min Read
SUMALATHA CAR

ಮಂಡ್ಯ: ಕ್ಷೇತ್ರದ ಸಂಸದೆಯಾಗಿ ಸುಮಲತಾ ಅಂಬರೀಶ್ ಅವರು ಗೆಲ್ಲುತ್ತಿದ್ದಂತೆ ಅವರ ಬೆಂಬಲಿಗರಿಂದ ಸರ್ಕಾರಿ ಸವಲತ್ತು ದುರ್ಬಳಕೆ ಮಾಡಿಕೊಳ್ಳುತ್ತಿರುವ ಆರೋಪ ಕೇಳಿ ಬಂದಿದೆ.

ಸುಮಲತಾ ಅವರಿಗೆ ನೀಡಲಾಗಿರುವ ಬೆಂಗಾವಲು ಪೊಲೀಸ್ ವಾಹನದಲ್ಲಿ ಅವರ ಬೆಂಬಲಿಗರಾದ ಬೇಲೂರು ಸೋಮಶೇಖರ್ ಸುತ್ತಾಟ ನಡೆಸುತ್ತಿದ್ದಾರೆ. ಪೊಲೀಸರ ವಾಹನದ ದುರುಪಯೋಗ ಆಗುತ್ತಿರುವ ಬಗ್ಗೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

MND SUMALATHA

ಇಂದು ಕ್ಷೇತ್ರದ ಕೀಲಾರ ಗ್ರಾಮಕ್ಕೆ ಆಗಮಿಸಿದ ಸಂಸದೆ ಸುಮಲತಾ ಅಂಬರೀಶ್ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಅಲ್ಲದೇ ಕೀಲಾರ ಗ್ರಾಮದಲ್ಲಿ ನಡೆಯುತ್ತಿರುವ ಸ್ವಚ್ಚಾ ಮೇವ ಜಯತೆ ಕಾರ್ಯಕ್ರಮದಲ್ಲಿ ಭಾಗಹಿಸಿದ್ದರು. ಸಂಸದರಾದ ನಂತರ ಮೊದಲ ಬಾರಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ನನ್ನನ್ನು ಈ ಚುನಾವಣೆಯಲ್ಲಿ ಗೆಲ್ಲಿಸಿ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದೀರಿ ಎಂದು ಧನ್ಯವಾದ ತಿಳಿಸಿದರು.

ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಯಾರ ಬಗ್ಗೆಯೂ ಟೀಕೆ ಮಾಡುವುದಿಲ್ಲ. ಬರ, ನೀರಿನ ಸಮಸ್ಯೆ ಹೆಚ್ಚಿದ್ದು, ರಾಜಕಾರಣ ಮಾಡೋ ಸಮಯ ಇದಲ್ಲ. ಟೀಕೆಗಳಿಗೆ ಉತ್ತರ ಕೊಡುತ್ತಾ ಸಮಯ ಹರಣ ಮಾಡಲ್ಲ ಎಂದರು.

Share This Article
Leave a Comment

Leave a Reply

Your email address will not be published. Required fields are marked *