ಸ್ಯಾಂಡಲ್ವುಡ್ ನಟಿ ಕಮ್ ಸಂಸದೆ ಸುಮಲತಾ (Sumalatha) ಇದೀಗ ಟಿಕೆಟ್ ಘೋಷಣೆಗೂ ಮುನ್ನ ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಾದ ಪಡೆದಿದ್ದಾರೆ. ಲೋಕಸಭಾ ಚುನಾವಣೆ ಅಖಾಡ ಕಾವೇರುತ್ತಿದ್ದಂತೆ, ಸುಮಲತಾ ಅವರು ಮಂಡ್ಯ ಕ್ಷೇತ್ರದ ವಿವಿಧ ಕಾರ್ಯಕ್ರಮಗಳಿಗೆ ಭಾಗಿಯಾಗಿದ್ದಾರೆ. ಇದನ್ನೂ ಓದಿ:ಕರಿಮಣಿ ಮಾಲೀಕನನ್ನು ಪರಿಚಯಿಸಿದ ದೀಪಿಕಾ ದಾಸ್
ಈ ಹಿಂದೆ ಸುದ್ದಿಗೋಷ್ಠಿವೊಂದರಲ್ಲಿ ಶ್ರೀಗಳ ಆಶೀರ್ವಾದ ಪಡೆದು ಪ್ರಚಾರ ಆರಂಭಿಸುವುದಾಗಿ ಸುಮಲತಾ ಹೇಳಿದ್ದರು. ಅದರಂತೆ ಇದೀಗ ಮೊದಲಿಗೆ ಕಾಲಭೈರವೇಶ್ವರನಿಗೆ ಪೂಜೆ ಸಲ್ಲಿದ್ದಾರೆ. ಬಳಿಕ ಆದಿಚುಂಚನಗಿರಿಯ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿಯಾಗಿ ಸುಮಲತಾ ಆಶೀರ್ವಾದ ಪಡೆದು ಬಂದಿದ್ದಾರೆ.
- Advertisement 2
- Advertisement 3
ಲೋಕಸಭಾ ಚುನಾವಣೆಗೆ ಅಖಾಡ ಸಜ್ಜಾಗಿದೆ. ಮೈತ್ರಿ ಟಿಕೆಟ್ ಜಟಾಪಟಿ ನಡುವೆ ಸುಮಲತಾ ಮತ್ತಷ್ಟು ಆ್ಯಕ್ಟೀವ್ ಆಗಿದ್ದಾರೆ. ಈ ಮೂಲಕ ಜೆಡಿಎಸ್ ನಾಯಕರಿಗೆ ಠಕ್ಕರ್ ಕೊಡಲು ಸುಮಲತಾ ಮುಂದಾಗಿದ್ದಾರೆ. ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.