Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಷ್ಟ್ರ ವಿಭಜನೆಯ ಮಾತೇ ಅಪರಾಧ – ಸುರೇಶ್ ದೇಶದ ಕ್ಷಮೆ ಕೋರಲಿ ಸುನೀಲ್‍ಕುಮಾರ್

Public TV
Last updated: February 2, 2024 6:20 pm
Public TV
Share
3 Min Read
Sunil Kumar
SHARE

ಬೆಂಗಳೂರು: ದೇಶ ವಿಭಜನೆ ಹೇಳಿಕೆ ನೀಡಿದ ಸಂಸದ ಡಿ.ಕೆ ಸುರೇಶ್ (DK Suresh) ಅವರಿಗೆ ಬುದ್ಧಿವಾದ ಹೇಳುವ ಕೆಲಸ ಆಗಬೇಕು. ಹೊರತು ಅವರನ್ನು ಸಮರ್ಥಿಸುವುದಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸುನೀಲ್‍ಕುಮಾರ್ (V. Sunil Kumar) ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಒಬ್ಬ ಜನಪ್ರತಿನಿಧಿಯಾಗಿದ್ದರೂ ಅನುದಾನ ಕಡಿಮೆ ಆಗಿದೆ ಎಂದು ದೇಶ ವಿಭಜನೆಯ ಮಾತನಾಡಿದ್ದಾರೆ. ಅದನ್ನು ಸಮರ್ಥನೆ ಮಾಡಿಕೊಂಡದ್ದು ನಾಚಿಕೆಗೇಡಿನ ಸಂಗತಿ. ಸಮರ್ಪಕ ಮಾಹಿತಿ ಇಲ್ಲದೆ, ದಕ್ಷಿಣ ಭಾರತ ವಿಭಜನೆ ಆಗಬೇಕು ಅನ್ನೋ ಕಲ್ಪನೆಯೇ ಸರಿಯಲ್ಲ. ಇವರದು ಹತಾಶೆಯ ಹೇಳಿಕೆ. ಯಾವುದೇ ಕಾರಣಕ್ಕೂ ದೇಶ ವಿಭಜನೆ ಆಗಬಾರದು ಎಂದರಲ್ಲದೆ, ಇವರ ಹೇಳಿಕೆಗೆ ಜನಾಕ್ರೋಶ ಶುರುವಾಗಿದೆ. ಅದನ್ನು ಸಮರ್ಥನೆ ಮಾಡಿಕೊಳ್ಳಬಾರದು ಎಂದು ತಿಳಿಸಿದರು.

 

ಎರಡೂವರೆ ವರ್ಷಗಳಾದ ಬಳಿಕ ಸಿದ್ದರಾಮಯ್ಯ (Siddaramaiah) ಅವರು ಡಿಕೆಶಿಗೆ (DK Shivakumar) ಅಧಿಕಾರ ಬಿಟ್ಟುಕೊಡಲಿಲ್ಲ ಎಂದು ರಾಮನಗರವನ್ನೇ ಪ್ರತ್ಯೇಕ ರಾಜ್ಯ ಮಾಡ್ತೀರಾ ಎಂದು ಕೇಳಿದರಲ್ಲದೆ, ಹತಾಶೆಯ ಮನೋಭಾವದಿಂದ ಬೇಜವಾಬ್ದಾರಿ ಹೇಳಿಕೆ ಕೊಡಬಾರದು ಎಂದು ಹೇಳಿದರು.  ಇದನ್ನೂ ಓದಿ: ಪ್ರಧಾನಿ ಮೋದಿ ಮುಂದಿನ ಪೀಳಿಗೆ ಬಗ್ಗೆ ಆಲೋಚನೆ ಮಾಡ್ತಾರೆ.. ಅದಕ್ಕೆ ಉಚಿತ ಕೊಡುಗೆ ಕೊಟ್ಟಿಲ್ಲ: ವಿಜಯೇಂದ್ರ

ಭಾರತ್ ಜೋಡೋ (Bharat Jodo) ಯಾವ ಉದ್ದೇಶವೋ, ದೇಶ ಜೋಡಿಸುವ ಉದ್ದೇಶ ಒಳ್ಳೆಯದೇ. ಕಾಂಗ್ರೆಸ್ ಹೈಕಮಾಂಡ್ ನಾಯಕರು ಭಾರತ್ ಜೋಡೋ ಮಾಡುತ್ತಿದ್ದಾರೆ. ಇವರು ಭಾರತ ವಿಭಜನೆ ಮಾಡುವ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.

ಮಾಜಿ ಸಚಿವ, ಕಾಂಗ್ರೆಸ್ ನಾಯಕ ಹಾಸನದ ಶಿವರಾಮ್ ಕಾಂಗ್ರೆಸ್ ನಾಯಕರು 50% ಕೇಳಿದ್ದಾರೆ ಅಂತ ಹೇಳಿಕೆ ನೀಡಿದ್ದಾರೆ. ಎಲ್ಲಾ ಇಲಾಖೆಗಳಲ್ಲಿ 50% ಆರೋಪ ಕೇಳಿಬಂದಿದೆ. ಬಿ.ಆರ್.ಪಾಟೀಲ್ ಅವರಿಂದ ಹಿಡಿದು, ಶಿವರಾಮ್‌ವರೆಗೂ ಅನೇಕರು ಆರೋಪ ಮಾಡಿದ್ದಾರೆ. ಈ ವಿಷಯವನ್ನು ಜಸ್ಟೀಸ್ ನಾಗಮೋಹನ್ ದಾಸ್ ಕಮಿಟಿಗೆ ತನಿಖೆಗೆ ಕೊಡಿ ಎಂದು ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು.

 

ಈ ಹಿಂದೆ ಬಿ.ಆರ್ ಪಾಟೀಲ್ ಆರೋಪವನ್ನು ಸಿಎಂ ತಳ್ಳಿಹಾಕಿದ್ದರು. ಯಾರ ಪಾತ್ರ ಇದೆ ಅಂತ ತನಿಖೆ ಮಾಡಲು ಆಗ್ರಹ ಮಾಡುತ್ತೇನೆ. ದಾಖಲೆ ಪಡೆದುಕೊಂಡು ತನಿಖೆ ಮಾಡಲಿ ಎಂದು ಒತ್ತಾಯಿಸಿದರು. ಬಿ ಶಿವರಾಮ್ ಅವರ ಒಬ್ಬರ ಹೇಳಿಕೆ ಅಲ್ಲ. ಅಬಕಾರಿ ಸಚಿವರ ಇಲಾಖೆಯ ತನಿಖೆ ಶುರುವಾಗಿದೆ. ಸಿದ್ದರಾಮಯ್ಯರ ಪುತ್ರ ವರ್ಗಾವಣೆ ಚರ್ಚೆಗೆ ಗ್ರಾಸವಾಗಿದೆ. ಗ್ಯಾರಂಟಿ ವೈಫಲ್ಯ ವಿಚಾರಗಳೂ ಮುನ್ನಲೆಗೆ ಬಂದಿದೆ ಎಂದು ತಿಳಿಸಿದರು.

ಗ್ಯಾರಂಟಿ ಅನುದಾನದಲ್ಲಿ ಭ್ರಷ್ಟಾಚಾರ ನಡೀತಿದೆ ಎಂದರಲ್ಲದೆ, ನಿಮ್ಮ ಮಾಜಿ ಸಚಿವರೇ ಕೊಟ್ಟಿರೋ ಹೇಳಿಕೆ ಇದು. ಇದಕ್ಕೆ ನಿಮ್ಮ ನಿಲುವೇನು? ತನಿಖೆಗೆ ಒಳಪಡಿಸ್ತೀರಾ? ಸ್ಪಷ್ಟನೆ ಕೊಡಿ ಎಂದು ಆಗ್ರಹಿಸಿದರು.

ವಿಜಯೇಂದ್ರರ ನೇತೃತ್ವದಲ್ಲಿ ನಡೆದ ಸಭೆ ವಿಚಾರ ಕುರಿತು ಪ್ರಶ್ನೆಗೆ, ಲೋಕಸಭಾ ಚುನಾವಣಾ ದೃಷ್ಟಿಯಿಂದ ಬೇರೆ ಬೇರೆ ಆಯಾಮಗಳಲ್ಲಿ ಇಂದು ಚರ್ಚೆ ಮಾಡಿದ್ದೇವೆ. ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆಯೂ ಚರ್ಚಿಸಿದ್ದೇವೆ. ಈಗಿರುವ ಅಭ್ಯರ್ಥಿಯನ್ನು ಮುಂದುವರಿಸಿಕೊಂಡು ಹೋಗುವ ಬಗ್ಗೆಯೂ ಚರ್ಚೆಯಾಗಿದೆ. ಹೆಚ್ಚುವರಿ ಮತಗಳ ಮೂಲಕ ಎರಡನೇ ಅಭ್ಯರ್ಥಿ ಆಯ್ಕೆ ಮಾಡಿದರೆ ಸಾಧಕ ಬಾಧಕ ಏನು ಎಂಬ ವಿಷಯದ ಕುರಿತೂ ಚರ್ಚೆ ಆಗಿದೆ. ಕೋರ್ ಕಮಿಟಿ ಸಭೆಯಲ್ಲಿ ಬರುವ ಅಭಿಪ್ರಾಯ ಆಧರಿಸಿ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ. ಎರಡನೇ ಅಭ್ಯರ್ಥಿ ಗೆಲ್ಲಲು ಕೊರತೆಯಾಗುವ ಮತಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆಯೇ ಮತ್ತು ತಟಸ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಾಧ್ಯವಾಗುವುದೇ ಎಂಬ ಬಗ್ಗೆಯೂ ಚರ್ಚೆಯಾಗಿದೆ ಎಂದು ತಿಳಿಸಿದರು.

 

TAGGED:bjpcongressDK Shivakumardk sureshSunil Kumarಕರ್ನಾಟಕಡಿಕೆ ಶಿವಕುಮಾರ್ಡಿಕೆ ಸುರೇಶ್ಭಾರತಸುನೀಲ್ ಕುಮಾರ್
Share This Article
Facebook Whatsapp Whatsapp Telegram

You Might Also Like

Shubhanshu Shukla ISS
Latest

ಅಂತರಿಕ್ಷದಲ್ಲಿ ಮೊಳಕೆಯೊಡೆದ ಮೆಂತ್ಯ, ಹೆಸರುಕಾಳು – ಭಾರತದ ಶುಭಾಂಶು ಶುಕ್ಲಾ ಪ್ರಯೋಗ ಸಕ್ಸಸ್

Public TV
By Public TV
6 minutes ago
Chhangur Baba
Latest

ಸೈಕಲ್‌ನಲ್ಲಿ ತಾಯತ ಮಾರುತ್ತಿದ್ದ ಧಾರ್ಮಿಕ ಮತಾಂತರ ಗ್ಯಾಂಗ್‌ನ ಜಮಾಲುದ್ದೀನ್‌ ಈಗ 106 ಕೋಟಿ ರೂ. ಒಡೆಯ

Public TV
By Public TV
20 minutes ago
Vijayapura Murder
Crime

ವಿಜಯಪುರ | ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Public TV
By Public TV
34 minutes ago
Rajasthan Jaguar Fighter Jet Crash
Latest

Rajasthan | ಐಎಎಫ್ ಜಾಗ್ವಾರ್ ಯುದ್ಧ ವಿಮಾನ ಪತನ – ಇಬ್ಬರು ಪೈಲೆಟ್ ದುರ್ಮರಣ

Public TV
By Public TV
56 minutes ago
vadodara bridge collapse
Latest

ಗುಜರಾತ್‌| ಸೇತುವೆ ಕುಸಿದು ನದಿಗೆ ಬಿದ್ದ ವಾಹನಗಳು – ಸಾವಿನ ಸಂಖ್ಯೆ 11ಕ್ಕೆ ಏರಿಕೆ

Public TV
By Public TV
1 hour ago
a.s.ponnanna madikeri bus
Kodagu

ಮಡಿಕೇರಿ-ನಾಪೋಕ್ಲು-ವಿರಾಜಪೇಟೆ ಮಾರ್ಗ ಬಸ್ ಸಂಚಾರಕ್ಕೆ ಪೊನ್ನಣ್ಣ ಚಾಲನೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?