Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 10 ವರ್ಷ ಸುಳ್ಳು ಜಾತಿಗಣತಿ ದತ್ತಾಂಶದ ಬಗ್ಗೆ ಹೇಳಿದ ಸಿಎಂ ರಾಜೀನಾಮೆ ಕೊಡಲಿ – ಸುನಿಲ್ ಕುಮಾರ್ ಒತ್ತಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 10 ವರ್ಷ ಸುಳ್ಳು ಜಾತಿಗಣತಿ ದತ್ತಾಂಶದ ಬಗ್ಗೆ ಹೇಳಿದ ಸಿಎಂ ರಾಜೀನಾಮೆ ಕೊಡಲಿ – ಸುನಿಲ್ ಕುಮಾರ್ ಒತ್ತಾಯ

Bengaluru City

10 ವರ್ಷ ಸುಳ್ಳು ಜಾತಿಗಣತಿ ದತ್ತಾಂಶದ ಬಗ್ಗೆ ಹೇಳಿದ ಸಿಎಂ ರಾಜೀನಾಮೆ ಕೊಡಲಿ – ಸುನಿಲ್ ಕುಮಾರ್ ಒತ್ತಾಯ

Public TV
Last updated: June 11, 2025 6:54 pm
Public TV
Share
3 Min Read
Sunil Kumar
SHARE

-165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ?

ಬೆಂಗಳೂರು: ಜಾತಿಗಣತಿ ವಿಷಯದಲ್ಲಿ 10 ವರ್ಷಗಳ ತಪ್ಪು ದತ್ತಾಂಶವನ್ನು ರಾಜ್ಯದ ಜನರಿಗೆ ಹೇಳಿಕೊಂಡು ಬಂದಿದ್ದಕ್ಕಾಗಿ ಸಿಎಂ (CM Siddaramaiah) ಕ್ಷಮೆ ಕೇಳಿ ರಾಜೀನಾಮೆ ಕೊಡಬೇಕು ಎಂದು ಶಾಸಕ ವಿ.ಸುನಿಲ್ ಕುಮಾರ್ (Sunil Kumar) ಅವರು ಆಗ್ರಹಿಸಿದ್ದಾರೆ.

ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಣಿ ವೈಫಲ್ಯ ಕಂಡವರು ನೀವು. 165 ಕೋಟಿ ರೂ. ದುರುಪಯೋಗವೂ ಆಗಿದೆ. ಮುಡಾ ಹಗರಣದ ವೈಫಲ್ಯ, ವಾಲ್ಮೀಕಿ ಹಗರಣ, ಕಾಲ್ತುಳಿತದ ಪ್ರಕರಣ, ಅಬಕಾರಿ ಹಗರಣ, ಈಗ ಈ ಜಾತಿಗಣತಿ. ಇವೆಲ್ಲವೂ ಸರಣಿ ವೈಫಲ್ಯಗಳು. ಆದ್ದರಿಂದ ತಕ್ಷಣ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.ಇದನ್ನೂ ಓದಿ:ಈಶ್ವರಪ್ಪಗೆ ಶಾಲು ಹೊದಿಸಿ ಸನ್ಮಾನಿಸಿದ ಬಿಎಸ್‍ವೈ – ಹೆಗಲ ಮೇಲೆ ಕೈ ಹಾಕಿ ಮಾತಾಡಿದ ಕುಚಿಕುಗಳು!

ಇದೀಗ ರಾಜ್ಯದ ಹಿಂದಿನ ಜಾತಿ ಸಮೀಕ್ಷೆಯನ್ನು ಕೈಬಿಟ್ಟಿದ್ದೇವೆ ಎನ್ನುತ್ತಿದ್ದಾರೆ. ಹಾಗಾದರೆ 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆಗಾರರು? ಹಿಂದಿನ ಸರ್ವೇಗೆ ಮಾಡಿದ ಖರ್ಚಿಗೆ ಯಾರನ್ನು ಹೊಣೆ ಮಾಡುತ್ತೀರಿ? ಹೊಸ ಸಮೀಕ್ಷೆಗೆ ತಗಲುವ ವೆಚ್ಚಕ್ಕೆ ಯಾರನ್ನು ಜವಾಬ್ದಾರರನ್ನಾಗಿ ಮಾಡುತ್ತೀರಿ? ರಾಜ್ಯದ ತೆರಿಗೆ ಹಣವನ್ನು ನಿಮಗೆ ಬೇಕಾದಂತೆ ನೀರಿನಲ್ಲಿ ಹೋಮ ಮಾಡಲು ತಯಾರಿ ಮಾಡಿಕೊಂಡಿದ್ದೀರಾ ಎಂದು ವಾಗ್ದಾಳಿ ನಡೆಸಿದ್ದಾರೆ.

ದತ್ತಾಂಶದ ಬಗ್ಗೆ ಹೈಕಮಾಂಡ್ ಅನುಮಾನ ವ್ಯಕ್ತಪಡಿಸಿದ್ದಾಗಿ ಹೇಳಿದ್ದಾರೆ. ದತ್ತಾಂಶವೇ ಸರಿ ಇಲ್ಲದೇ ಇರುವಾಗ ಅದನ್ನು ಆಧರಿಸಿ ಅವರು ಪ್ರವರ್ಗಗಳನ್ನು ಹೇಗೆ ನಿರ್ಮಾಣ ಮಾಡಿದ್ದಾರೆ? ಮೀಸಲಾತಿ ವರ್ಗೀಕರಣಕ್ಕೆ ಅದನ್ನು ಹೇಗೆ ಬಳಸಿದ್ದಾರೆ. ಒಂದು ಮನೆಯ ಪಂಚಾಂಗವೇ ಸರಿ ಇಲ್ಲದ ಮೇಲೆ ಮನೆ ಕಟ್ಟಲು ಹೇಗೆ ಸಾಧ್ಯ? ಇವುಗಳಿಗೆ ಮುಖ್ಯಮಂತ್ರಿಗಳೇ ಉತ್ತರಿಸಬೇಕಿದೆ. ಬಿಜೆಪಿ ನಾಯಕರು ಇದರ ಕುರಿತು ಪ್ರಶ್ನಿಸಿದಾಗ ಅತ್ಯಂತ ಉಡಾಫೆಯಿಂದ, ನಾನು ಜಾತಿಗಣತಿಗೆ ಬದ್ಧನಿದ್ದೇನೆ. ಅದನ್ನು ಮಾಡಿಯೇ ಮಾಡುತ್ತೇನೆ ಎಂದು ಪದೇಪದೇ ಹೇಳುತ್ತಿದ್ದರು. ಈಗ ಉಲ್ಟಾ ಹೊಡೆದಿದ್ದು ನೋಡಿದರೆ ಹಲವು ರೀತಿಯ ಅನುಮಾನಗಳು ವ್ಯಕ್ತವಾಗುತ್ತಿವೆ ಎಂದಿದ್ದಾರೆ.

ಹೊಸ ಸಮೀಕ್ಷೆಗೆ ಹಣ ಬಿಡುಗಡೆ ಮಾಡುವ ಮೊದಲು ಈ 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ ಎಂಬುದನ್ನು ಮೊದಲು ಹೇಳಿ. ತೆರಿಗೆ ಹಣವನ್ನು ವ್ಯರ್ಥ ಮಾಡಿದ್ದಕ್ಕೆ ಬಿಜೆಪಿಯಿಂದ ವಿರೋಧವಿದೆ. ಸಿದ್ದರಾಮಯ್ಯನವರಿಗೆ ಹಿಂದುಳಿದ ವರ್ಗಗಳ ಬಗ್ಗೆ ಜನಪರ ಕಾಳಜಿ ಇದ್ದಲ್ಲಿ, ತಾನು ಅಧಿಕಾರಕ್ಕೆ ಬಂದ ಸಂದರ್ಭದಲ್ಲೇ ಎಲ್ಲವನ್ನೂ ಮಾಡಬಹುದಿತ್ತು. ಆದರೆ 10 ವರ್ಷ ಇದನ್ನು ದೊಡ್ಡ ಪ್ರಮಾಣದಲ್ಲಿ ಎಳೆಯುತ್ತ ಬಂದರು. 2024ರಲ್ಲಿ ಜಯಪ್ರಕಾಶ್ ಹೆಗ್ಡೆ, ವರದಿ ನೀಡಿದ್ದನ್ನು 14 ತಿಂಗಳ ಬಳಿಕ ಸಂಪುಟ ಸಭೆಗೆ ತಂದರು. ನಿಮ್ಮ ಬದ್ಧತೆ ಅಲ್ಲೇ ಗೊತ್ತಾಗಿತ್ತು. ಪದೇಪದೇ ಜನರ ದಿಕ್ಕು ತಪ್ಪಿಸುವ ಕೆಲಸ ನಡೆದಿತ್ತು. 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಹಿಂದಿನ ಆಯೋಗದ ಅಧ್ಯಕ್ಷರು ಹೊಣೆಯೇ? ಆಯೋಗ ರಚಿಸಿದ ಮುಖ್ಯಮಂತ್ರಿಗಳು, ಸಚಿವ ಸಂಪುಟವನ್ನು ಜವಾಬ್ದಾರಿ ಎನ್ನುತ್ತೀರಾ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಟೀಕಿಸಿದ್ದಾರೆ.

ಮತ್ತೊಂದು ಜಾತಿಗಣತಿ ಬೇಕೇ?
ಕೇಂದ್ರ ಸರ್ಕಾರವು ಜಾತಿಜನಗಣತಿ ಮಾಡುವುದಾಗಿ ಈಗಾಗಲೇ ಪ್ರಕಟಿಸಿದೆ. ಕೇಂದ್ರ ಒಂದೆಡೆ ಜಾತಿಗಣತಿ ಮಾಡುತ್ತಿರುವಾಗ ರಾಜ್ಯ ಸರ್ಕಾರವೂ ಮತ್ತೊಂದು ಜಾತಿಗಣತಿ ಮಾಡುವ ಅಗತ್ಯ ಇದೆಯೇ? ರಾಜ್ಯ ಸರ್ಕಾರ ಕೇಂದ್ರದ ಜಾತಿ ಜನಗಣತಿಗೆ ಸಹಕಾರ ಕೊಡಬೇಕು. ನಿಮ್ಮ ಅನುಕೂಲಕ್ಕೆ ತಕ್ಕಂತೆ ಒಬಿಸಿಯವರನ್ನು ಬಳಸುವುದು ಮತ್ತು ಜನರ ದಿಕ್ಕು ತಪ್ಪಿಸುವುದನ್ನು ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

90 ದಿನಗಳ ಗಡುವು ನೀಡಿದ್ದು ಮತ್ತೊಂದು ಸುಳ್ಳು:
ಜಾತಿಗಣತಿ ಮಾಡಲು 90 ದಿನಗಳ ಗಡುವು ನೀಡಿದ್ದು ಮತ್ತೊಂದು ಸುಳ್ಳು, ಎಸ್ಸಿ (ಪರಿಶಿಷ್ಟ ಜಾತಿ) ಒಳಮೀಸಲಾತಿಗೆ ಸಂಬAಧಿಸಿದAತೆ ಒಂದು ತಿಂಗಳಲ್ಲಿ ಸಮೀಕ್ಷೆ ಮಾಡುವುದಾಗಿ ಹೇಳಿದ್ದರು. ಆ ಸಮೀಕ್ಷೆಯನ್ನೇ 3 ಬಾರಿ ಮುಂದೂಡಿದ್ದೀರಿ. ಈಗ 7 ಕೋಟಿ ಜನರ ಸಮೀಕ್ಷೆಗೆ 3 ತಿಂಗಳ ಗಡುವು ನೀಡಿದ್ದು, ಯಾರನ್ನು ಯಾಮಾರಿಸಲು ಹೊರಟಿದ್ದೀರಿ ಇದು ಸಾಧ್ಯವೇ? ಅಧಿಕಾರ ಬಿಟ್ಟು ಕೊಡಲು ನೀವು 90 ದಿನಗಳ ಗಡುವು ಹಾಕಿದಂತಿದೆ ಎಂದು ನನಗೆ ಅನಿಸುತ್ತದೆ ಎಂದಿದ್ದಾರೆ.

ಹೈಕಮಾಂಡ್ ಕಾಲ್ತುಳಿತಕ್ಕೆ ಸಿಲುಕಿದ ಮುಖ್ಯಮಂತ್ರಿ:
ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ 11 ಜನರು ಕಾಲ್ತುಳಿತಕ್ಕೆ ಒಳಗಾಗಿ ಸಾವನ್ನಪ್ಪಿದ್ದರು. ಈ ವಿಷಯದಲ್ಲಿ ದಿನಕ್ಕೊಂದು ಸುಳ್ಳು ಹೇಳುತ್ತ, ಇದೀಗ ಜಾತಿಗಣತಿ ವಿಚಾರದಲ್ಲಿ ಹೈಕಮಾಂಡ್ ಕಾಲ್ತುಳಿತಕ್ಕೆ ಸಿದ್ದರಾಮಯ್ಯನವರು ಒಳಗಾಗಿದ್ದಾರೆ. ಕಳೆದ 10 ವರ್ಷಗಳಿಂದ ತಾವೇ ಮಾಡಿದ ಕಾಂತರಾಜು ಆಯೋಗದ ವರದಿ, ತಮಗೆ ಅಪಾಯ ತಂದಿದೆ ಎಂದು ಅನಿಸಿದಾಗಲೆಲ್ಲ ಜಾತಿಗಣತಿ, ಜಾತಿಗಣತಿ ಎಂದು ನೂರು ಬಾರಿ ಕರ್ನಾಟಕದ ಜನರಿಗೆ ಹೇಳುತ್ತಿದ್ದರು. ಇವತ್ತು ದತ್ತಾಂಶದಲ್ಲಿ ವ್ಯತ್ಯಾಸವಾಗಿದೆ ಎಂದು ಹೈಕಮಾಂಡ್ ಹೇಳಿದ ತಕ್ಷಣ ಈ ವರದಿಯನ್ನು ಕಸದ ಬುಟ್ಟಿಗೆ ಹಾಕುವ ಪ್ರಯತ್ನವನ್ನು ಮುಖ್ಯಮಂತ್ರಿಗಳು ಮಾಡಿರುವುದು ಕರ್ನಾಟಕದ ಜನತೆಗೆ ಮಾಡಿದ ದ್ರೋಹ ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: ಇಡಿ ತನಿಖೆಯಿಂದ ವಾಲ್ಮೀಕಿ ನಿಗಮ ಹಗರಣದ ಹಿಂದಿನ ಮಹಾನಾಯಕರ ಮುಖವಾಡ ಕಳಚಲಿದೆ: ಶ್ರೀರಾಮುಲು

TAGGED:Caste Censuscm siddaramaiahcongressSunil Kumarಜಾತಿಗಣತಿಬೆಂಗಳೂರುಸುನಿಲ್ ಕುಮಾರ್
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

chitradurga accident
Chitradurga

ಚಿತ್ರದುರ್ಗ| ಕಾರು-ಕ್ಯಾಂಟರ್ ಲಾರಿ ಮುಖಾಮುಖಿ ಡಿಕ್ಕಿ; ನಾಲ್ವರು ದುರ್ಮರಣ

Public TV
By Public TV
4 hours ago
Harmanpreet Kaur Nat Sciver Brunt
Cricket

ಬ್ರಂಟ್‌-ಹರ್ಮನ್‌ಪ್ರೀತ್‌ ಸ್ಫೋಟಕ ಫಿಫ್ಟಿ ಆಟ; ಡೆಲ್ಲಿ ವಿರುದ್ಧ ಮುಂಬೈಗೆ 50 ರನ್‌ಗಳ ಭರ್ಜರಿ ಜಯ

Public TV
By Public TV
4 hours ago
Karwar Suicide
Crime

ಪ್ರೀತಿ ಹೆಸರಲ್ಲಿ JDS ಮುಖಂಡೆ ಪುತ್ರನಿಂದ ಕಿರುಕುಳ – ಯುವತಿ ಆತ್ಮಹತ್ಯೆ

Public TV
By Public TV
4 hours ago
Mississippi shooting
Latest

ಅಮೆರಿಕದ ಮಿಸಿಸಿಪ್ಪಿಯಲ್ಲಿ ಸರಣಿ ಗುಂಡಿನ ದಾಳಿಗೆ 6 ಮಂದಿ ಬಲಿ

Public TV
By Public TV
5 hours ago
BENGALURU WEATHER
Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದಲ್ಲಿ ಮುಂದಿನ 24 ಗಂಟೆ ಶೀತಗಾಳಿ ಎಚ್ಚರಿಕೆ

Public TV
By Public TV
6 hours ago
gadag Lakkundi
Districts

ಐತಿಹಾಸಿಕ ಲಕ್ಕುಂಡಿಯಲ್ಲಿ ಅಂದಾಜು 1 ಕೆ.ಜಿ ಚಿನ್ನಾಭರಣಗಳ ನಿಧಿ ಪತ್ತೆ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?