Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾವೇರಿಗಾಗಿ ಸಂಸತ್ತಲ್ಲಿ ಒಗ್ಗಟ್ಟು ಪ್ರದರ್ಶಿಸಿ- ರಾಜ್ಯದ ಸಂಸದರಲ್ಲಿ ಎಚ್‍ಡಿಕೆ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾವೇರಿಗಾಗಿ ಸಂಸತ್ತಲ್ಲಿ ಒಗ್ಗಟ್ಟು ಪ್ರದರ್ಶಿಸಿ- ರಾಜ್ಯದ ಸಂಸದರಲ್ಲಿ ಎಚ್‍ಡಿಕೆ ಮನವಿ

Bengaluru City

ಕಾವೇರಿಗಾಗಿ ಸಂಸತ್ತಲ್ಲಿ ಒಗ್ಗಟ್ಟು ಪ್ರದರ್ಶಿಸಿ- ರಾಜ್ಯದ ಸಂಸದರಲ್ಲಿ ಎಚ್‍ಡಿಕೆ ಮನವಿ

Public TV
Last updated: July 19, 2018 7:18 am
Public TV
Share
2 Min Read
HDK 3
SHARE

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಸಂಸತ್ತಲ್ಲಿ ಒಗ್ಗಟ್ಟಾಗಿ ಹೋರಾಡುವಂತೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ರಾಜ್ಯದ ಸಂಸದರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಬುಧವಾರ ರಾಜ್ಯದ ಸರ್ವಪಕ್ಷಗಳ ಸಂಸದರ ಸಭೆ ನಡೆದಿದ್ದು, ಈ ವೇಳೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸ್ಥಾಪನೆ ಬಗ್ಗೆ ಕೇಂದ್ರ ಸರ್ಕಾರದ ಹೊರಡಿಸಿರುವ ಅಧಿಸೂಚನೆ ಕುರಿತು ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ಕೋರಿ ನೋಟಿಸ್ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಅಲ್ಲದೇ ಪ್ರಾಧಿಕಾರ ರಚನೆಯಿಂದ ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗುವುದರಿಂದ ಅದನ್ನು ಪ್ರಶ್ನಿಸಿ ಸಂಸತ್ತು ಮತ್ತು ಸುಪ್ರೀಂಕೋರ್ಟ್‍ನಲ್ಲಿ ಹೋರಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ರಾಜ್ಯದ ಹಿತಾಸಕ್ತಿಗೆ ಎಲ್ಲರೂ ಒಗ್ಗಟಾಗಬೇಕೆಂದು ಸಭೆಯಲ್ಲಿ ಸಿಎಂ ಮನವಿ ಮಾಡಿದ್ರು. ಆದ್ರೆ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವೇ ಈ ಅಧಿಸೂಚನೆ ಹೊರಡಿಸಿರುವುದರಿಂದ ರಾಜ್ಯ ಬಿಜೆಪಿ ಸಂಸದರು ಕಾವೇರಿ ಅಧಿಸೂಚನೆ ವಿರೋಧಿಸಿ ಮಾತನಾಡುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಚರ್ಚೆಗೆ ಅವಕಾಶ ಕೋರಿ ನೋಟಿಸ್ ನೀಡಿದರೂ, ಸ್ಪೀಕರ್ ಸುಮಿತ್ರಾ ಮಹಾಜನ್ ಚರ್ಚೆಗೆ ಅನುಮತಿ ನೀಡುವುದು ಅನುಮಾನ ಎಂದು ಬಿಜೆಪಿ ಮೂಲಗಳು ಹೇಳುತ್ತಿವೆ.

vlcsnap 2018 07 19 07h09m22s66

ಸಭೆಯಲ್ಲಿ ಏನೆಲ್ಲಾ ಚರ್ಚೆಯಾಯ್ತು?:
ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಆದೇಶನ್ವಯ ರಚಿಸಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವನ್ನು ಸಂಸತ್ತಿನಲ್ಲಿ ವಿರೋಧಿಸುವುದು. ಕಾನೂನು ವ್ಯಾಪ್ತಿಯಲ್ಲಿ ಹೋರಾಟ ಮುಂದುವರಿಸುವುದು. ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರುವುದು. ಈ ಬಗ್ಗೆ ಚರ್ಚೆ ಮಾಡಲು ಮತ್ತೊಮ್ಮೆ ಹಿರಿಯ ಸಂಸದರ ಕರೆ ಕರೆಯುವುದು. ಕೇಂದ್ರ ಜಲಸಂಪನ್ಮೂಲ ಸಚಿವರ ಬಳಿ ರಾಜ್ಯ ಸಂಸದರ ನಿಯೋಗ ಕರೆದೊಯ್ದು ಸಂಸತ್‍ನಲ್ಲಿ ವಿಷಯ ಪ್ರಸ್ತಾಪಿಸಲು ಒತ್ತಡ ಹಾಕುವುದು. ಪ್ರಾಧಿಕಾರದಲ್ಲಾದ ಅನ್ಯಾಯದ ಬಗ್ಗೆ ಸಂಸದರಿಗೆ ರಾಜ್ಯ ಸರ್ಕಾರ ಟಿಪ್ಪಣಿ ನೀಡಲು ಸಲಹೆ ನೀಡಲಾಗಿದೆ. ಕಾವೇರಿ ಜೊತೆಗೆ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನ ಹಾಗೂ ನೆನೆಗುದಿಗೆ ಬಿದ್ದಿರುವ ಕೇಂದ್ರದ ಯೋಜನೆಗಳನ್ನು ಪುನರ್ ಪ್ರಾರಂಭಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ.

ಕಾವೇರಿ ನಿರ್ವಹಣಾ ಮಂಡಳಿ ವಿಚಾರದಿಂದ ರಾಜ್ಯಕ್ಕೆ ಕ್ಲಿಷ್ಠ ಪರಿಸ್ಥಿತಿ ಒದಗಿದೆ. ಈ ಬಗ್ಗೆ ಎಲ್ಲ ಸಂಸದರು ಪಕ್ಷಭೇಧ ಮರೆತು ಒಗ್ಗೂಡಬೇಕಾಗಿದೆ.

ರಾಜ್ಯದಲ್ಲಿ ಜನಪರ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯವಾದ ಆರ್ಥಿಕ ಸಂಪನ್ಮೂಲದ ಕ್ರೋಢೀಕರಣಕ್ಕಾಗಿ ರಾಜ್ಯದ ಪ್ರಸ್ತಾವನೆಗಳ ಶೀಘ್ರ ವಿಲೇವಾರಿಯ ಗುರುತರವಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. pic.twitter.com/jTFlTf2XFk

— CM of Karnataka (@CMofKarnataka) July 18, 2018

ಇಂದು ಕಾವೇರಿ ನಿಯಂತ್ರಣ ಸಮಿತಿಯ ಎರಡನೇ ಸಭೆ:
ಇಂದು ಕಾವೇರಿ ನೀರು ನಿಯಂತ್ರಣ ಸಮಿತಿಯ ಎರಡನೇ ಸಭೆ ನಡೆಯಲಿದೆ. ದೆಹಲಿಯಲ್ಲಿರುವ ಜಲ ಆಯೋಗದ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಸಮಿತಿ ಅಧ್ಯಕ್ಷ ನವೀನ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಮೊದಲ ಸಭೆಯಲ್ಲಿ ಪ್ರಾಧಿಕಾರ ಆದೇಶ ಪಾಲನೆ ಬಗ್ಗೆ ಚರ್ಚಿಸಿರುವ ಸಮಿತಿ, ಇಂದಿನ ಸಭೆಯಲ್ಲಿ ಕೇಂದ್ರ ಕಚೇರಿ ಸ್ಥಾಪನೆ ಕುರಿತು ಚರ್ಚೆ ಮಾಡಲಿದೆ. ನಿಯಂತ್ರಣ ಸಮಿತಿಯ ಕೇಂದ್ರ ಕಚೇರಿ ಬೆಂಗಳೂರಿಗೆ ವರ್ಗಾಯಿಸಬೇಕಾಗಿದ್ದು, ಪೀಠೋಪಕರಣ ಹಾಗೂ ಸಿಬ್ಬಂದಿ ನೇಮಕ ಹಾಗೂ ಇತರೆ ಕಾರ್ಯ ಚಟುವಟಿಕೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.

vlcsnap 2018 07 19 07h08m41s174

ಸುಪ್ರೀಂನಲ್ಲಿಂದು ಕೇರಳ ಪುನರ್ ಪರಿಶೀಲನಾ ಅರ್ಜಿ ವಿಚಾರಣೆ:
ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಕೇರಳ ಸಲ್ಲಿಸಿದ ಪುನರ್ ಪರಿಶೀಲನಾ ಅರ್ಜಿ ಇಂದು ವಿಚಾರಣೆಗೆ ಬರಲಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆಗೆ ಬರಲಿದೆ. ಕಾವೇರಿ ನೀರಿನಲ್ಲಿ ಹಂಚಿಕೆಯಾಗಿರುವ 30 ಟಿಎಂಸಿ ನೀರಿನ ಪ್ರಮಾಣವನ್ನು ಹೆಚ್ಚಿಸಬೇಕು ಹಾಗೂ ಹಂಚಿಕೆಯಾಗಿರುವ ತನ್ನ ಪಾಲಿನ ನೀರಿನ ಬಳಕೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡುವಂತೆ ಪುನರ್ ಪರಿಶೀಲನಾ ಅರ್ಜಿಯಲ್ಲಿ ಕೇರಳ ಉಲ್ಲೇಖಿಸಿದೆ. 30 ಟಿಎಂಸಿ ನೀರನ್ನ ಕುಡಿಯಲು ಹಾಗೂ ನೀರಾವರಿ ಯೋಜನೆಗಳಿಗೆ ಬಿಟ್ಟು ಬೇರೆ ಬೇರೆ ಯೋಜನೆಗಳಿಗೆ ಬಳಸುವಂತಿಲ್ಲ. ಹಾಗೂ ಅದರ ನೈಸರ್ಗಿಕ ಹರಿವುವನ್ನು ಬದಲಾಯಿಸುವಂತಿಲ್ಲ ಅಂತಾ ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಕಾವೇರಿ ಪ್ರಾಧಿಕಾರಕ್ಕೆ ಎಲ್ಲ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ನೀಡಿರುವುದರಿಂದ ಕೇರಳ ಸಲ್ಲಿಸಿರುವ ಅರ್ಜಿ ವಜಾ ಆಗುವ ಸಾಧ್ಯತೆಯೂ ಇದೆ.

vlcsnap 2018 07 19 07h09m01s120

TAGGED:bengalurucauveryhd kumaraswamymeetingparliamentPublic TVಕಾವೇರಿಪಬ್ಲಿಕ್ ಟಿವಿಬೆಂಗಳೂರುಸಭೆಸಂಸತ್
Share This Article
Facebook Whatsapp Whatsapp Telegram

Cinema news

AR Rahman
8 ವರ್ಷಗಳಿಂದ ಬಾಲಿವುಡ್‌ನಲ್ಲಿ ಅವಕಾಶ ಸಿಕ್ಕಿಲ್ಲ, ಇದಕ್ಕೆ ಕೋಮುವಾದಿ ಮನಸ್ಥಿತಿ ಕಾರಣವಿರಬಹುದು: ಎ.ಆರ್ ರೆಹಮಾನ್
Bollywood Cinema Latest Main Post National
Khushi Mukherjee 2
ʻನನಗೆ ಸೂರ್ಯಕುಮಾರ್‌ ತುಂಬಾ ಮೆಸೇಜ್ ಕಳಿಸ್ತಿದ್ದʼ ಎಂದಿದ್ದ ನಟಿ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ!
Bollywood Cinema Cricket Latest Sports Top Stories
suresh gopi udupi sri krishna matha
ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ, ಕೇಂದ್ರ ಸಚಿವ ಸುರೇಶ್‌ ಗೋಪಿ ಭೇಟಿ
Cinema Latest South cinema Top Stories Udupi
Shivarajkumar
100% ಗಿಲ್ಲಿನೇ ಬಿಗ್‌ ಬಾಸ್‌ ಗೆಲ್ಲೋದು – ಟೇಬಲ್‌ ಕುಟ್ಟಿ ಹೇಳಿದ ಶಿವಣ್ಣ
Cinema Latest Main Post Sandalwood

You Might Also Like

RCB 4
Cricket

ಶ್ರೇಯಾಂಕ ಪುಟ್ಟಿಯ ಸ್ಪಿನ್‌ ಮ್ಯಾಜಿಕ್‌ಗೆ ಗುಜರಾತ್‌ ಪಲ್ಟಿ – ಆರ್‌ಸಿಬಿಗೆ ಹ್ಯಾಟ್ರಿಕ್‌ ಜಯ

Public TV
By Public TV
2 hours ago
Bhimanna Khandre 2
Bidar

ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ

Public TV
By Public TV
2 hours ago
Laal Bagh Flower Show
Bengaluru City

ಲಾಲ್‌ಬಾಗ್ ಪ್ಲವರ್ ಶೋಗೆ ಭರ್ಜರಿ ರೆಸ್ಪಾನ್ಸ್ – ಎರಡೇ ದಿನದಲ್ಲಿ 28.3 ಲಕ್ಷ ರೂ. ಆದಾಯ

Public TV
By Public TV
3 hours ago
01 15
Big Bulletin

ಬಿಗ್‌ ಬುಲೆಟಿನ್‌ 16 January 2026 ಭಾಗ-1

Public TV
By Public TV
3 hours ago
02 15
Big Bulletin

ಬಿಗ್‌ ಬುಲೆಟಿನ್‌ 16 January 2026 ಭಾಗ-2

Public TV
By Public TV
3 hours ago
033
Big Bulletin

ಬಿಗ್‌ ಬುಲೆಟಿನ್‌ 16 January 2026 ಭಾಗ-3

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?