Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಿಲಯನ್ಸ್‌ ಫೌಂಡೇಶನ್‌ಗೆ ಬಿಗ್‌ ರಿಲೀಫ್‌ – ವನತಾರಾಗೆ ಸುಪ್ರೀಂನಿಂದ ಕ್ಲೀನ್‌ ಚಿಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ರಿಲಯನ್ಸ್‌ ಫೌಂಡೇಶನ್‌ಗೆ ಬಿಗ್‌ ರಿಲೀಫ್‌ – ವನತಾರಾಗೆ ಸುಪ್ರೀಂನಿಂದ ಕ್ಲೀನ್‌ ಚಿಟ್‌

Court

ರಿಲಯನ್ಸ್‌ ಫೌಂಡೇಶನ್‌ಗೆ ಬಿಗ್‌ ರಿಲೀಫ್‌ – ವನತಾರಾಗೆ ಸುಪ್ರೀಂನಿಂದ ಕ್ಲೀನ್‌ ಚಿಟ್‌

Public TV
Last updated: September 15, 2025 8:47 pm
Public TV
Share
2 Min Read
Vantara
SHARE

ನವದೆಹಲಿ: ರಿಲಯನ್ಸ್ ಫೌಂಡೇಶನ್ ನಡೆಸುತ್ತಿರುವ ಪ್ರಾಣಿಗಳ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರ ವನತಾರಾ (Vantara) ಮೇಲಿನ ಆರೋಪಗಳ ಬಗ್ಗೆ ಎಸ್‌ಐಟಿ (SIT) ಸಲ್ಲಿಸಿದ್ದ ವರದಿಯನ್ನು ಸುಪ್ರೀಂ ಕೋರ್ಟ್‌ (Supreme Court) ಅಂಗೀಕರಿಸಿ ಕ್ಲೀನ್‌ ಚಿಟ್‌ ನೀಡಿದೆ.

ವನತಾರಾದಲ್ಲಿ ಕಾಡು ಪ್ರಾಣಿಗಳ ಸ್ವಾಧೀನ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಆನೆಗಳು ಸೇರಿದಂತೆ ಪ್ರಾಣಿಗಳ ಸ್ವಾಧೀನ ಕಾನೂನು ಪ್ರಕ್ರಿಯೆಗಳ ಅನುಗುಣವಾಗಿಯೇ ನಡೆದಿದೆ ಎಂದು ಎಸ್‌ಐಟಿ ವರದಿ ಸಲ್ಲಿಸಿತ್ತು. ಈ ವರದಿಯನ್ನು ಸುಪ್ರೀಂ ಕೋರ್ಟ್‌ ಅಂಗೀಕರಿಸುವ ಮೂಲಕ ಪ್ರಾಣಿ ರಕ್ಷಣಾ ಮತ್ತು ಪುನರ್ವಸತಿ ಕೇಂದ್ರಕ್ಕೆ ಕ್ಲೀನ್ ಚಿಟ್ ನೀಡಿದೆ. ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿಯಿಂದ ಗುಜರಾತ್ ವಂತಾರದಲ್ಲಿ ವನ್ಯಜೀವಿ ಪುನವರ್ಸತಿ ಸಂರಕ್ಷಣಾ ಕೇಂದ್ರ ಉದ್ಘಾಟನೆ

vantara lion

ಆನೆಗಳನ್ನು ದೇವಾಲಯಗಳಿಗೆ ಹಿಂತಿರುಗಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಸಹ ನ್ಯಾಯಾಲಯವು ತಿರಸ್ಕರಿಸಿತು. ಎಸ್‌ಐಟಿಯ ವರದಿ ಅಂಗೀಕರಿಸಲ್ಪಟ್ಟಿರುವುದರಿಂದ, ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪೀಠ ಹೇಳಿದೆ.

vantara tiger

ಸುಪ್ರೀಂ ಕೋರ್ಟ್‌ ಆದೇಶದಂತೆ ಎಸ್‌ಐಟಿ ತನ್ನ ವರದಿಯನ್ನು ಸಲ್ಲಿಸಿದೆ. ಈ ವರದಿಯನ್ನು ನ್ಯಾಯಾಲಯ ಒಪ್ಪಿಕೊಂಡಿದೆ. ಅಲ್ಲದೇ ಶೀಘ್ರವಾಗಿ ತನಿಖಾ ವರದಿಯನ್ನು ಸಲ್ಲಿಸಿದ್ದಕ್ಕೆ ಎಸ್‌ಐಟಿಗೆ ಪೀಠ ಮೆಚ್ಚುಗೆ ವ್ಯಕ್ತಪಡಿಸಿದೆ. ಇದನ್ನೂ ಓದಿ: ವನ್‍ತಾರಾ ಪ್ರಾಣಿ ಸಂರಕ್ಷಣಾ ಕೇಂದ್ರದ ವಿರುದ್ಧ ಎಸ್‍ಐಟಿ ತನಿಖೆಗೆ ಸುಪ್ರೀಂ ಆದೇಶ

 

leopard elephant

ವನತಾರಾ ಪ್ರಾಣಿಗಳನ್ನು ತರಿಸುವಾಗ ವನ್ಯಜೀವಿ ಸಂರಕ್ಷಣಾ ಕಾಯ್ದೆ ಮತ್ತು ಇತರ ಸಂಬಂಧಿತ ಕಾನೂನುಗಳನ್ನು ಗಾಳಿಗೆ ತೂರಿದೆ ಎಂದು ವಕೀಲ ಸಿಆರ್ ಜಯಾ ಸುಕಿನ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಪಂಕಜ್ ಮಿಥಲ್ ಮತ್ತು ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ನೇತೃತ್ವದ ದ್ವಿಸದಸ್ಯ ಪೀಠ ಆ.25 ರಂದು ವಿಚಾರಣೆ ನಡೆಸಿತ್ತು. ಬಳಿಕ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ಚೆಲಮೇಶ್ವರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿತ್ತು. ಈ ತಂಡದಲ್ಲಿ ಉತ್ತರಾಖಂಡ ಮತ್ತು ತೆಲಂಗಾಣ ಹೈಕೋರ್ಟ್‌ ಮಾಜಿ ಮುಖ್ಯ ನ್ಯಾಯಾಧೀಶ ರಾಘವೇಂದ್ರ ಚೌಹಾಣ್, ಮುಂಬೈನ ಮಾಜಿ ಪೊಲೀಸ್ ಆಯುಕ್ತ ಹೇಮಂತ್ ನಾಗ್ರಾಲೆ ಹಾಗೂ ಭಾರತೀಯ ಕಂದಾಯ ಸೇವೆ (ಐಆರ್‌ಎಸ್) ಅಧಿಕಾರಿ ಅನಿಶ್ ಗುಪ್ತಾ ಇದ್ದರು. ತನಿಖಾ ವರದಿಯನ್ನು ಸೆ.12ರ ಒಳಗೆ ಸಲ್ಲಿಸುವಂತೆ ಸೂಚಿಸಿತ್ತು. ಎಸ್‍ಐಟಿ ರಚನೆಯನ್ನು ಸ್ವಾಗತಿಸಿದ್ದ ವನ್‍ತಾರಾ, ಸುಪ್ರೀಂ ಕೋರ್ಟ್ ಆದೇಶವನ್ನು ನಾವು ಅತ್ಯಂತ ಗೌರವದಿಂದ ಸ್ವೀಕರಿಸುತ್ತೇವೆ ಎಂದಿತ್ತು.

 

leopard vantara

ಎಸ್‌ಐಟಿ ಅಧಿಕಾರಿಗಳು ಸುಪ್ರೀಂ ಆದೇಶದಂತೆ ವನತಾರ ಪ್ರಾಣಿಗಳ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರಕ್ಕೆ ತೆರಳಿ ತನಿಖೆ ನಡೆಸಿತ್ತು. ತನಿಖೆ ವೇಳೆ ವನ್ಯಜೀವಿ ತಜ್ಞರು ಹಾಗೂ ಪಶುವೈದ್ಯರ ಸಲಹೆ ಪಡೆದು ವರದಿ ಸಿದ್ಧಪಡಿಸಿತ್ತು.

ಗುಜರಾತ್‌ನ ಜಾಮ್‌ನಗರದಲ್ಲಿರುವ ರಿಲಯನ್ಸ್‌ನ ವನತಾರ 3500 ಎಕರೆಗಳಷ್ಟು ವಿಸ್ತಾರವಾಗಿರುವ ವನ್‌ತಾರಾ, ವಿಶ್ವದ ಅತಿದೊಡ್ಡ ಖಾಸಗಿ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರಗಳಲ್ಲಿ ಒಂದಾಗಿದೆ. ಇಲ್ಲಿ ರಕ್ಷಿಸಲ್ಪಟ್ಟ ಆನೆಗಳಿಗೆ ಆಶ್ರಯ, ಆಧುನಿಕ ಪಶುವೈದ್ಯಕೀಯ ಸೌಲಭ್ಯಗಳು ಇದೆ. ಇದನ್ನೂ ಓದಿ: ಪ್ರಾಣಿ ರಕ್ಷಣೆಯಲ್ಲಿನ ಉತ್ಕೃಷ್ಟ ಸೇವೆಗೆ ಅನಂತ್ ಅಂಬಾನಿಯ `ವಂತಾರ’ಗೆ ರಾಷ್ಟ್ರೀಯ ಪ್ರಾಣಿ ಮಿತ್ರ ಪ್ರಶಸ್ತಿ

TAGGED:sitSupreme CourtVantara
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

Kerala MLA Rahul Mamkootathil
Latest

ಮದುವೆ ಹೆಸರಲ್ಲಿ ರೇಪ್, ಗರ್ಭಪಾತಕ್ಕೆ ಒತ್ತಾಯ – ಕೇರಳದ ಕಾಂಗ್ರೆಸ್ ಉಚ್ಚಾಟಿತ ಶಾಸಕ ಅರೆಸ್ಟ್

Public TV
By Public TV
57 seconds ago
Hassan Son Kills Father
Crime

ಕೌಟುಂಬಿಕ ಕಲಹ – ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹತ್ಯೆಗೈದ ಪುತ್ರ

Public TV
By Public TV
53 minutes ago
Karwar
Crime

JDS ಮುಖಂಡೆ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ ಕೇಸ್‌ – ಆರೋಪಿ ಎಸ್ಕೇಪ್‌

Public TV
By Public TV
54 minutes ago
Saifullah Kasuri
Latest

ಭಾರತಕ್ಕೆ ನನ್ನನ್ನು ಕಂಡರೆ ಭಯ, ಪಾಕ್‌ ಸೇನೆಯಿಂದ ನನಗೆ ಆಹ್ವಾನ – ಪಹಲ್ಗಾಮ್ ಸಂಚುಕೋರನಿಂದ ಪುಂಗಿ

Public TV
By Public TV
1 hour ago
Priyank Kharge 2
Districts

JDS ಪಾರ್ಟಿಯನ್ನೇ ಮಾರಾಟಕ್ಕಿಟ್ಟಿದ್ದಾರೆ – ಪ್ರಿಯಾಂಕ್‌ ಖರ್ಗೆ ಲೇವಡಿ

Public TV
By Public TV
1 hour ago
gadag
Districts

ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ – ಗುಪ್ತ ʻನಿಧಿʼಯ ವಾರಸುದಾರರು ಯಾರು? ಪತ್ತೆ ಹಚ್ಚಿದವರಿಗೂ ಸಿಗಬೇಕಾ ಪಾಲು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?