Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿ ಮೋದಿ ಪ್ರಯಾಣದ ಮಾಹಿತಿಯನ್ನು ಸಂರಕ್ಷಿಸಲು ಸುಪ್ರೀಂಕೋರ್ಟ್ ಸೂಚನೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಪ್ರಧಾನಿ ಮೋದಿ ಪ್ರಯಾಣದ ಮಾಹಿತಿಯನ್ನು ಸಂರಕ್ಷಿಸಲು ಸುಪ್ರೀಂಕೋರ್ಟ್ ಸೂಚನೆ

Public TV
Last updated: January 7, 2022 2:30 pm
Public TV
Share
4 Min Read
supreme court 12
SHARE

– ಪ್ರಧಾನಿ ಭದ್ರತೆ ರಾಷ್ಟ್ರೀಯ ಭದ್ರತೆಯ ವಿಚಾರ
– ಅಂತರಾಷ್ಟ್ರೀಯ ಮಟ್ಟದಲ್ಲಿ ಮುಜುಗರಕ್ಕೆ ಕಾರಣವಾದ ವಿಶೇಷ ಪ್ರಕರಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪಂಜಾಬ್ ಪ್ರಯಾಣ ಮಾಹಿತಿಯನ್ನು ಸಂರಕ್ಷಿಸಿಡುವಂತೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ರಿಜಿಸ್ಟರ್ ಜನರಲ್‍ಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಮೋದಿ ಪ್ರಯಾಣದ ವೇಳೆಯಲ್ಲಾದ ಭದ್ರತಾ ವೈಫಲ್ಯ ವಿಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಆಗ್ರಹಿಸಿ ಲಾಯರ್ಸ್ ವಾಯ್ಸ್ ಅಸೊಶಿಯೇಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ತ್ರಿ ಸದಸ್ಯ ಪೀಠ ಈ ಸೂಚನೆ ನೀಡಿದೆ.

Solicitor General Tushar Mehta says the incident has caused international embarrassment.

Senior advocate DS Patwalia, AG of Punjab tells Supreme Court that Punjab is taking the issue very seriously. A committee was constituted by State govt on the same day of the incident.

— ANI (@ANI) January 7, 2022

ಇಂದು ನಡೆದ ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಮಣಿಂದರ್ ಸಿಂಗ್, ಎಸ್‍ಪಿಜಿ ನಿಯಮಗಳ ಪ್ರಕಾರ ಪಿಎಂ ಭದ್ರತೆ ನಿರಾಕರಿಸುವಂತಿಲ್ಲ, ಪ್ರಧಾನಿ ಭದ್ರತೆ ಎನ್ನುವುದು ಕೇಂದ್ರ ಅಥವಾ ರಾಜ್ಯದ ವಿಚಾರವಲ್ಲ, ಇದು ರಾಷ್ಟ್ರೀಯ ಭದ್ರತೆಯ ವಿಚಾರ ಇದು ಸಂಸದೀಯ ವ್ಯಾಪ್ತಿಗೆ ಬರಲಿದೆ. ಪಿಎಂ ಕಾನ್ವೆ ನಡು ದಾರಿಯಲ್ಲಿ ನಿಂತಿದ್ದು ರಾಜ್ಯವೊಂದರ ಕಾನೂನು ಸುವ್ಯವಸ್ಥೆಯ ಸಮಸ್ಯೆಯಲ್ಲ, ಇದು ಬಹುದೊಡ್ಡ ಭದ್ರತಾ ವೈಫಲ್ಯವಾಗಿದೆ. ಈ ವೈಫಲ್ಯವನ್ನು ವೃತ್ತಿಪರವಾಗಿ ತನಿಖೆ ನಡೆಸಬೇಕಾಗಿದೆ. ಹೀಗಾಗಿ ರಾಜ್ಯ ಸರ್ಕಾರದಿಂದ ಈ ತನಿಖೆ ಸಾಧ್ಯವಿಲ್ಲ ಅಲ್ಲದೇ ಇದನ್ನು ತನಿಖೆ ನಡೆಸಲು ರಾಜ್ಯಕ್ಕೆ ಯಾವುದೇ ವಿಶೇಷ ಅಧಿಕಾರವಿಲ್ಲ ಎಂದರು. ಇದನ್ನೂ ಓದಿ: ಚರಣ್‍ಜಿತ್ ಸಿಂಗ್ ಚನ್ನಿ ದಲಿತ ಎಂಬ ಕಾರಣಕ್ಕೆ ಬಿಜೆಪಿ ಟಾರ್ಗೆಟ್ ಮಾಡ್ತಿದೆ: ಅಶೋಕ್ ಗೆಹ್ಲೋಟ್

NARENDRA MODI CAR PUNJAB

ರಾಜ್ಯ ಸರ್ಕಾರ ಈಗಾಗಲೇ ಸಮಿತಿಯೊಂದನ್ನು ರಚಿಸಿದೆ. ಸರ್ಕಾರದಿಂದ ಸಮಿತಿಗೆ ನೇಮಕಗೊಂಡ ಸಮಿತಿಯ ಅಧ್ಯಕ್ಷರು ಈ ಹಿಂದೆ ಭಾರಿ ಸೇವಾ ಸಂಬಂಧಿತ ಹಗರಣದ ಭಾಗವಾಗಿದ್ದರು. ಈ ನ್ಯಾಯಾಧೀಶರ ನಡತೆಯ ಬಗ್ಗೆಯೂ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಿದ್ದರು. ಹೀಗಾಗಿ ಇವರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೇ ಈ ಸಮಿತಿಯ ತನಿಖೆ ಬದಲು ಪ್ರಕರಣವನ್ನು ಭಟಿಂಡಾ ಜಿಲ್ಲಾ ನ್ಯಾಯಾಧೀಶರು ಮತ್ತು ಎನ್‍ಐಎ ಅಧಿಕಾರಿಗಳು ಪರಿಶೀಲಿಸಬಹುದು ಮತ್ತು ಪ್ರಧಾನಿ ಪ್ರಯಾಣದ ಸಾಕ್ಷ್ಯಗಳನ್ನು ಎನ್‍ಐಎ ಸಂರಕ್ಷಿಸಿ ಇಡಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಮೋದಿ ಮೇಲೆ ಅಲ್ಲ ಇದು ಪ್ರತಿಯೊಬ್ಬ ಭಾರತೀಯನ ಮೇಲೆ ನಡೆದ ದಾಳಿ: ಕಂಗನಾ

The state is not exclusively empowered to probe (the breach of Prime Minister Narendra Modi’s security) and this is not a law & order issue. The chairman of the state-appointed Committee was a part of a huge service-related scam: Advocate Maninder Singh

— ANI (@ANI) January 7, 2022

ಮಣಿಂದರ್ ಸಿಂಗ್ ಬಳಿಕ ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಅಂತರಾಷ್ಟ್ರೀಯ ಮಟ್ಟದಲ್ಲಿ ಮುಜುಗರಕ್ಕೆ ಕಾರಣವಾದ ವಿಶೇಷ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿದಕ್ಕೆ ಸುಪ್ರೀಂಕೋರ್ಟ್ ಧನ್ಯವಾದ ಹೇಳಿದರು. ಪ್ರಧಾನ ಮಂತ್ರಿ ರಸ್ತೆ ಮಾರ್ಗವಾಗಿ ತೆರಳಲು ಸಂಬಂಧಿಸಿದ ರಾಜ್ಯದ ಡಿಜಿ ಅನುಮತಿ ನೀಡಬೇಕು. ಈ ಪ್ರಕರಣದಲ್ಲಿ ಡಿಜಿ ಅನುಮತಿ ನೀಡಿದ್ದಾರೆ, ಅನುಮತಿ ನೀಡದ ಬಳಿಕವಷ್ಟೆ ಪ್ರಧಾನಿ ರಸ್ತೆ ಮೂಲಕ ಹೊರಟಿದ್ದಾರೆ. ಇದನ್ನೂ ಓದಿ: ಪ್ರಧಾನಿಗೆ ಭದ್ರತಾ ವೈಫಲ್ಯ – ಸುಪ್ರೀಂ ಮೇಲ್ವಿಚಾರಣೆಯಲ್ಲಿ ತನಿಖೆಗೆ ಮನವಿ 

NARENDRA MODI SECURITY LAPS

ಪ್ರತಿಭಟನೆ ನಡೆಯುತ್ತಿದ್ದ ಪ್ರದೇಶದಲ್ಲಿ ಸ್ಥಳೀಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರತಿಭಟನಾಕಾರರ ಜೊತೆಗೆ ಚಹಾ ಹೀರುತ್ತಿದ್ದರು. ಭದ್ರತಾ ಸಮಸ್ಯೆ ಬಗ್ಗೆ ಪಿಎಂ ಸೆಕ್ಯುರಿಟಿ ಅಲರ್ಟ್ ವಾಹನಕ್ಕೆ ಕನಿಷ್ಠ ಮಾಹಿತಿಯನ್ನು ನೀಡಿಲ್ಲ. ಪಿಎಂ ಕಾನ್ವೆ ಪ್ಲೈವೋರ್ ಮೇಲಿದ್ದಾಗ ಪ್ರತಿಭಟನಾಕಾರರು ಹಿಂದೆ ದೊಡ್ಡ ಪ್ರಮಾಣದಲ್ಲಿ ಘೋಷಣೆ ಕೂಗುತ್ತಿದ್ದರು. ಪರಿಸ್ಥಿತಿ ಏನಾಗಬಹುದಿತ್ತು ಯೋಚಿಸಿ ಎಂದು ಆತಂಕ ವ್ಯಕ್ತಪಡಿಸಿದರು. ಇದಲ್ಲದೇ ಸಿಖ್ಸ್ ಫಾರ್ ಜಸ್ಟಿಸ್ ಸಂಘಟನೆಯ ಜನರು XYZ (ವಿವಾದಿತ ಪದಗಳನ್ನು ಬಳಸದೇ) ಕೆಲಸವನ್ನು ಮಾಡಲು ಕರೆ ನೀಡಿದ್ದರು. ಇದು ಗಡಿಯಾಚೆಗಿನ ಭಯೋತ್ಪಾದನೆಯ ಸಮಸ್ಯೆಯಾಗಿರಬಹುದು. ಆದ್ದರಿಂದ ಈ ಪ್ರಕರಣ ಜಿಲ್ಲಾ ನ್ಯಾಯಾಧೀಶರು ಮತ್ತು NIA ಅಧಿಕಾರಿಗಳ ಬಳಿ ಇರಲಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಮೋದಿ ಭದ್ರತಾ ಲೋಪಕ್ಕೆ ಪಂಜಾಬ್ ಪೊಲೀಸ್ ಇಲಾಖೆ ಕಾರಣ – ಕೇಂದ್ರ ಗೃಹ ಸಚಿವಾಲಯ

Senior advocate Maninder Singh says it is the duty of Centre & State/UT & other local authority to act in aid of director of any member of the SPG. Under the SPG Act, it is not issue of state subject or law & order.

— ANI (@ANI) January 7, 2022

ಬಳಿಕ ಪಂಜಾಬ್ ಸರ್ಕಾರದ ಪರ ವಾದ ಮಂಡಿಸಿದ ಅಡಿಷನಲ್ ಜನರಲ್, ಪಂಜಾಬ್ ಸರ್ಕಾರ ಈ ಪ್ರಕರಣವನ್ನು ಲಘುವಾಗಿ ಪರಿಗಣಿಸುತ್ತಿಲ್ಲ. ಜನವರಿ 5 ರಂದು ಘಟನೆ ಸಂಭವಿಸಿದಾಗ ಅದೇ ದಿನ ಸಮಿತಿಯನ್ನು ರಚಿಸಲಾಯಿತು. ನಿವೃತ್ತ ಹೈಕೋರ್ಟ್ ನ್ಯಾಯಾಧೀಶರನ್ನು ನೇಮಿಸಲಾಗಿದೆ, ನಿನ್ನೆ ಎಫ್‍ಐಆರ್ ಕೂಡ ದಾಖಲಿಸಿದ್ದೇವೆ. ಕೇಂದ್ರವು ಈ ವಿಷಯವನ್ನು ತನಿಖೆ ಮಾಡಲು ಸಮಿತಿಯನ್ನು ಸಹ ರಚಿಸಿದೆ. ಪ್ರಕರಣದ ತನಿಖೆಗೆ ಯಾವುದೇ ವ್ಯಕ್ತಿಯನ್ನು ನೇಮಿಸಬಹುದು ಒಂದು ವೇಳೆ ಲೋಪವಿದ್ದರೆ ತನಿಖೆಯ ಅಗತ್ಯವಿದೆ. ಮೋದಿ ನಮ್ಮ ಪ್ರಧಾನಿ ಎಂದು ಪಂಜಾಬ್ ಸಿಎಂ ಹೇಳಿದ್ದಾರೆ. ನಾವು ಪ್ರಕರಣವನ್ನು ರಾಜಕೀಯಗೊಳಿಸಿಲ್ಲ ಎಂದು ಸಮರ್ಥಿಸಿಕೊಂಡರು. ಇದನ್ನೂ ಓದಿ: ಭದ್ರತಾ ಲೋಪವಾಗಿಲ್ಲ, ಜನರಿಲ್ಲದೇ ಖಾಲಿ ಕುರ್ಚಿಗಳಿದ್ದ ಕಾರಣ ಪಿಎಂ ರ‍್ಯಾಲಿ ರದ್ದು: ಪಂಜಾಬ್‌ ಸಿಎಂ

NARENDRA MODI CAR

ವಾದ ಮಂಡನೆಯ ಬಳಿಕ ತುಷಾರ್ ಮೆಹ್ತಾರನ್ನು ಪ್ರಶ್ನಿಸಿದ ಸಿಜೆಐ ಎನ್‍ವಿ ರಮಣ, ನೀವೂ ಸ್ವತಂತ್ರ ತನಿಖೆಯನ್ನು ಬಯಸುತ್ತಿದ್ದಿರಾ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ತುಷಾರ್ ಮೆಹ್ತಾ, ದಾಖಲೆಗಳ ಸಂಗ್ರಹದೊಂದಿಗೆ ನಾಳೆ ನಮ್ಮ ವೈಯಕ್ತಿಕ ಕನಿಮ್ಮ ಮುಂದೆ ಇಡಲಿದ್ದೇವೆ. ಅದನ್ನು ಪರಿಶೀಲಿಸಿ ತಿರ್ಮಾನ ತೆಗೆದುಕೊಳ್ಳಿ ಎಂದು ಎಂದರು. ಇದನ್ನೂ ಓದಿ: ಭಾರೀ ಭದ್ರತಾ ಲೋಪ – ಪಂಜಾಬ್ ಫ್ಲೈ ಓವರ್‌ನಲ್ಲಿ 20 ನಿಮಿಷ ಸಿಲುಕಿದ ಮೋದಿ

Supreme Court begins hearing of a plea seeking probe into PM Modi's security breach during his visit to Punjab pic.twitter.com/XeXyqcWuwo

— ANI (@ANI) January 7, 2022

ಬಳಿಕ ಮಧ್ಯಂತರ ಆದೇಶ ನೀಡಿದ ನ್ಯಾ.ಎನ್.ವಿ ರಮಣ, ದೇಶದ ಪ್ರಧಾನಿಯ ಭದ್ರತೆಗೆ ಸಂಬಂಧಿಸಿದ ಸಮಸ್ಯೆಯ ದೃಷ್ಟಿಯಿಂದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‍ನ ರಿಜಿಸ್ಟ್ರಾರ್ ಜನರಲ್ ಸಾಕ್ಷ್ಯಗಳನ್ನು (PM ಪ್ರಯಾಣ ದಾಖಲೆಗಳು) ಸುರಕ್ಷಿತವಾಗಿರಿಸಲು ಮತ್ತು ಸಂರಕ್ಷಿಸಲು ನಿರ್ದೇಶಿಸುವುದು ಸೂಕ್ತವೆಂದು ನಾವು ಭಾವಿಸುತ್ತೇವೆ. ತಕ್ಷಣವೇ ಪಂಜಾಬ್ ಪೊಲೀಸ್ ಅಧಿಕಾರಿಗಳು ಮತ್ತು ಎಸ್‍ಪಿಜಿ ಮತ್ತು ಇತರ ಕೇಂದ್ರ ಮತ್ತು ರಾಜ್ಯ ಏಜೆನ್ಸಿಗಳಿಗೆ ಸಹಕರಿಸಲು ಮತ್ತು ರಿಜಿಸ್ಟ್ರಾರ್ ಜನರಲ್‍ಗೆ ಅಗತ್ಯ ನೆರವು ನೀಡಲು ನಿರ್ದೇಶಿಸುತ್ತೇವೆ. ಎಲ್ಲಾ ದಾಖಲೆಗಳನ್ನು ಅವರ ಸುರಕ್ಷಿತ ಕಸ್ಟಡಿಯಲ್ಲಿ ಇರಿಸಿಕೊಳ್ಳಲು ನಾವು ರಿಜಿಸ್ಟ್ರಾರ್ ಜನರಲ್ ಅವರಿಗೆ ನಿರ್ದೇಶಿಸುತ್ತೇವೆ ಎಂದು ಮೌಕಿಕವಾಗಿ ಹೇಳಿದರು. ಅಲ್ಲದೇ ಸೋಮವಾರದವರೆಗೂ ಕೇಂದ್ರ ಮತ್ತು ರಾಜ್ಯದಿಂದ ರಚನೆಯಾದ ಸಮಿತಿಗಳು ತನಿಖೆ ನಡೆಸದಂತೆ ಸೂಚನೆ ನೀಡಿದರು. ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆಯಾಗಿದ್ದು ಸೋಮವಾರ ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ಸಮಿತಿ ರಚನೆ ಮಾಡುವ ಸಾಧ್ಯತೆಗಳಿದೆ.

Share This Article
Facebook Whatsapp Whatsapp Telegram
Previous Article ondon man uses billboard ವಧು ಬೇಕಾಗಿದ್ದಾಳೆ- ರಸ್ತೆ ಬದಿ ಜಾಹೀರಾತು ಹಾಕಿದ ವರ
Next Article Renukacharya ಅಧಿಕಾರದಲ್ಲಿದ್ದಾಗ ನಿಮ್ಮ ಗಂಡಸ್ತನ ಎಲ್ಲಿ ಹೋಗಿತ್ತು: ರೇಣುಕಾಚಾರ್ಯ

Latest Cinema News

disha patani
ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಎನ್‌ಕೌಂಟರ್‌ನಲ್ಲಿ ಹತ್ಯೆ
Bollywood Cinema Crime Latest Main Post National
Vedika
ಬಿಕಿನಿಯಲ್ಲಿ ಶಿವಲಿಂಗ ನಟಿ ಚಿಲ್‌ – ಪಡ್ಡೆ ಹೈಕ್ಳ ಮೈಬಿಸಿ ಹೆಚ್ಚಿಸಿದ ವೇದಿಕಾ
Cinema Latest Sandalwood Top Stories
Vishnuvardhan 4
ವಿಷ್ಣುವರ್ಧನ್ ಅಭಿಮಾನಿಗಳಿಗೆ ಗೆಲುವು – ಸಮಾಧಿ ಸಮೀಪ ಬರ್ತ್‌ಡೇಗೆ ಸಿಕ್ತು ಅನುಮತಿ
Cinema Latest Sandalwood Top Stories
Darshan
ನಟ ದರ್ಶನ್‌ಗೆ ಹಾಸಿಗೆ, ದಿಂಬು – ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
Cinema Districts Latest Sandalwood Top Stories
Kothalavadi
ʻಕೊತ್ತಲವಾಡಿʼ ಕಿರಿಕ್‌ – ಸಹನಟಿ ಸ್ವರ್ಣ ವಿರುದ್ಧ ದೂರು ದಾಖಲು
Cinema Latest Sandalwood Top Stories

You Might Also Like

Brain eating amoeba 2
Latest

ಮೆದುಳು ತಿನ್ನುವ `ಅಮೀಬಾ’ಕ್ಕೆ ಕೇರಳದಲ್ಲಿ 19 ಬಲಿ – ಮನುಷ್ಯರಿಗೆ ಇದು ಹೇಗೆ ಹರಡುತ್ತೆ?

21 minutes ago
Asiacup 2025 Pakistan
Cricket

ಎಲ್ಲಾ ಬೇಡಿಕೆಗಳು ವಿಫಲ – ಇದ್ದ ಅಲ್ಪಸ್ವಲ್ಪ ಮಾನವನ್ನೂ ಕಳೆದುಕೊಂಡ ಪಾಕ್, ಹೈಡ್ರಾಮಾ ನಂತ್ರ ಪಂದ್ಯ ಶುರು

27 minutes ago
Dharmasthala Banglegudde SIT
Dakshina Kannada

ಧರ್ಮಸ್ಥಳದಲ್ಲಿ ಮತ್ತೆ ಅಸ್ಥಿಪಂಜರ ಸದ್ದು – ಬಂಗ್ಲೆಗುಡ್ಡದಲ್ಲಿ 5 ತಲೆಬುರುಡೆ, 113 ಮೂಳೆಗಳು ಪತ್ತೆ

1 hour ago
EVM
Latest

ಫಸ್ಟ್‌ ಟೈಂ EVM ನಲ್ಲಿ ಇನ್ಮುಂದೆ ಅಭ್ಯರ್ಥಿಗಳ ಕಲರ್ ಫೋಟೋ – ಬಿಹಾರ ವಿಧಾನಸಭಾ ಚುನಾವಣೆಯಿಂದಲೇ ಆರಂಭ

2 hours ago
Mahesh Shetty Thimarody
Dakshina Kannada

ತಿಮರೋಡಿ ವಿರುದ್ಧ ಎಸ್‌ಐಟಿಯಿಂದ ಆರ್ಮ್ಸ್ ಆಕ್ಟ್ ಅಡಿ ಕೇಸ್‌ ದಾಖಲು

3 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?