ಇವಿಎಂ ಬದಲು ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆಗೆ ಆಗ್ರಹಿಸಿದ್ದ ಪ್ರತಿಪಕ್ಷಗಳಿಗೆ ಮುಖಭಂಗ

Public TV
1 Min Read
Supreme COurt

ನವದೆಹಲಿ: ಮುಂದಿನ ಲೋಕಸಭಾ ಚುನಾವಣೆಗೆ ಇವಿಎಂ ಬದಲು ಬ್ಯಾಲೆಟ್ ಬಾಕ್ಸ್ ಬಳಸಲು ಆದೇಶ ನೀಡಬೇಕೆಂದು ಸಲ್ಲಿಸಿದ್ದ ಸಾರ್ವಜನಿಕಾ ಹಿತಾಸಕ್ತಿ ಅರ್ಜಿ(ಪಿಐಎಲ್) ಅನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಟಿಎಂಸಿ ನಾಯಕಿ ಮಹಿಯಾ ಮೈತ್ರ ಅವರು ವಿಧಾನಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆಯನ್ನು ಬ್ಯಾಲೆಟ್ ಪೇಪರ್ ನಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಪಿಐಎಲ್ ಸಲ್ಲಿಸಿ ಮನವಿ ಮಾಡಿಕೊಂಡಿದ್ದರು.

evm 1 1

ಈ ಅರ್ಜಿಯ ವಿಚಾರಣೆ ವೇಳೆ, ಎಲ್ಲ ವ್ಯವಸ್ಥೆ ಮತ್ತು ಯಂತ್ರಗಳಲ್ಲಿ ಲೋಪ ದೋಷಗಳು ಇರುತ್ತದೆ. ಇವಿಎಂ ಅನ್ನು ಯಾರು ಬಳಸುತ್ತಾರೋ ಎನ್ನುವುದರ ಆಧಾರದ ಮೇಲೆ ಅದರ ಬಳಕೆ ಮತ್ತು ದುರ್ಬಳಕೆ ನಿರ್ಧರಿಸಬೇಕಾಗುತ್ತದೆ ಎಂದು ಮುಖ್ಯ ನ್ಯಾ. ರಂಜನ್ ಗಗೋಯಿ ನೇತೃತ್ವದ ಪೀಠ ಹೇಳಿತು.

ನೀವು ಇವಿಎಂ ಅನ್ನು ತಪ್ಪು ತಿಳಿದುಕೊಂಡಿದ್ದೀರಿ. ಈಗಿನ ವ್ಯವಸ್ಥೆ ಉತ್ತಮವಾಗಿದೆ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ಪೀಠ ವಜಾಗೊಳಿಸಿತು.

ಆಧಾರ್ ಬಳಸಿಕೊಂಡು ಭಾರತೀಯ ವಿಶಿಷ್ಟ ಗುರುತು ಚೀಟಿ ಪ್ರಾಧಿಕಾರ(ಯುಐಡಿಎಐ) ಜನರ ಮೇಲೆ ಬೇಹುಗಾರಿಕೆ ಮಾಡುತ್ತಿದೆ ಎಂದು ಅರ್ಜಿದಾರರು ಆರೋಪಿಸಿದ್ದರು. ಈ ಆರೋಪಕ್ಕೆ ಸಾಕ್ಷಿ ನೀಡುವಂತೆ ಅರ್ಜಿದಾರರಿಗೆ ಕೋರ್ಟ್ 2 ವಾರಗಳ ಸಮಯವಕಾಶ ನೀಡಿತು.

624592 election commission

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *