Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Court

ಮೈಸೂರು ರಾಜಮನೆತನಕ್ಕೆ ಟಿಡಿಆರ್ ನೀಡಲು ಸುಪ್ರೀಂ ಆದೇಶ – ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರದಿಂದ ಅರ್ಜಿ

Public TV
Last updated: May 26, 2025 5:47 pm
Public TV
Share
2 Min Read
pramoda devi wadiyar
SHARE

ನವದೆಹಲಿ: ಬೆಂಗಳೂರು ಅರಮನೆ ಮೈದಾನದ (Palace Ground) 15 ಎಕ್ರೆ ಸ್ವಾಧೀನಕ್ಕೆ ಸಂಬಂಧಿಸಿದಂತೆ ಮೈಸೂರು ರಾಜಮನೆತನದ ಕಾನೂನುಬದ್ಧ ಉತ್ತರಾಧಿಕಾರಿಗಳಿಗೆ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕುಗಳ (TDR) ಪ್ರಮಾಣಪತ್ರಗಳನ್ನು ನೀಡುವಂತೆ ಸುಪ್ರೀಂ ಕೋರ್ಟ್ (Supreme Court) ನೀಡಿದ ಆದೇಶದ ವಿರುದ್ಧ ರಾಜ್ಯ ಸರ್ಕಾರ ಮರುಪರಿಶೀಲನಾ ಅರ್ಜಿ ಸಲ್ಲಿಸಿದೆ.

ಮರುಪರಿಶೀಲನಾ ಅರ್ಜಿ ವಿಚಾರಣೆ ನಡೆಸುವಂತೆ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠಕ್ಕೆ ಮನವಿ ಮಾಡಲಾಯಿತು. ಈ ವೇಳೆ ರಾಜ್ಯ ಸರ್ಕಾರದ ಪರವಾಗಿ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ಪ್ರಶ್ನಿಸಿದ ಪೀಠ, ಮತ್ತೊಂದು ಪೀಠವು ನೀಡಿದ ಆದೇಶವನ್ನು ನಾವು ಹೇಗೆ ಪರಿಶೀಲಿಸಬಹುದು ಎಂದು ಕೇಳಿದೆ. ಇದನ್ನೂ ಓದಿ: ಮಂಡ್ಯ | ಟ್ರಾಫಿಕ್‌ ಪೊಲೀಸರ ಯಡವಟ್ಟಿನಿಂದ ಪ್ರಾಣಬಿಟ್ಟ ಮಗು – ಮೂವರು ASI ಸಸ್ಪೆಂಡ್‌

ಇದಕ್ಕೆ ಉತ್ತರಿಸಿದ ಹಿರಿಯ ವಕೀಲ ಸಿಬಲ್, ಕರ್ನಾಟಕ ಪಟ್ಟಣ ಮತ್ತು ದೇಶ ಯೋಜನಾ ಕಾಯ್ದೆಗೆ 2004ರ ತಿದ್ದುಪಡಿಯ ಮೂಲಕ ಪರಿಚಯಿಸಲಾದ ಟಿಡಿಆರ್ ನಿಬಂಧನೆಯನ್ನು 1996ರಲ್ಲಿ ಬೆಂಗಳೂರು ಅರಮನೆ (ಸ್ವಾಧೀನ ಮತ್ತು ವರ್ಗಾವಣೆ) ಕಾಯ್ದೆಯಡಿ ಸ್ವಾಧೀನಪಡಿಸಿಕೊಂಡ ಭೂಮಿಗೆ ಪೂರ್ವಾನ್ವಯವಾಗಿ ಅನ್ವಯಿಸಲಾಗುವುದಿಲ್ಲ ಎಂದು ಹೇಳಿದರು.

ಟಿಡಿಆರ್ ನಿಬಂಧನೆ ಇರುವ ಮೊದಲೇ 15 ಎಕ್ರೆಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಮತ್ತು ಪರಿಹಾರವನ್ನು ಈಗಾಗಲೇ ಮೂಲ ಕಾಯ್ದೆಯಡಿಯಲ್ಲಿ ಇತ್ಯರ್ಥಪಡಿಸಲಾಗಿದೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ಮಹಾ ಮಳೆಗೆ ಮುಂಬೈ ಮೆಟ್ರೋ ಸ್ಟೇಷನ್ ಸಂಪೂರ್ಣ ಜಲಾವೃತ

ಈ ಸ್ವಾಧೀನವು 1996ರ ಕಾನೂನಿನ ಅಡಿಯಲ್ಲಿ ನಡೆದಿದ್ದು, 11 ಕೋಟಿ ರೂ.ಗಳ ಪರಿಹಾರವನ್ನು ನಿಗದಿಪಡಿಸಲಾಗಿದೆ. ಆ ಸಮಯದಲ್ಲಿ ಟಿಡಿಆರ್ ಪರಿಕಲ್ಪನೆ ಅಸ್ತಿತ್ವದಲ್ಲಿರಲಿಲ್ಲ. ಟಿಡಿಆರ್‌ಗೆ ಅವಕಾಶ ನೀಡುವ ಸೆಕ್ಷನ್ 14 ಬಿ ಅನ್ನು 2004ರಲ್ಲಿ ಮಾತ್ರ ಪರಿಚಯಿಸಲಾಯಿತು. ಭೂಮಾಲೀಕರು ಸ್ವಯಂಪ್ರೇರಣೆಯಿಂದ ತಮ್ಮ ಭೂಮಿಯನ್ನು ಬಿಟ್ಟುಕೊಡುವಲ್ಲಿ ಮಾತ್ರ ಅನ್ವಯಿಸುತ್ತದೆ. ರಾಜ್ಯವು ಅದನ್ನು ಕಡ್ಡಾಯವಾಗಿ ಸ್ವಾಧೀನಪಡಿಸಿಕೊಳ್ಳುವಲ್ಲಿ ಅಲ್ಲ ಎಂದು ಅವರು ಹೇಳಿದರು.

ಈ ವಿವಾದವು 1997ರ ಹಿಂದಿನದು. ರಾಜಮನೆತನವು 1996ರ ಕಾಯ್ದೆಯ ಸಿಂಧುತ್ವವನ್ನು ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸಿದಾಗ, ಅರ್ಜಿ ಇನ್ನೂ ಬಾಕಿ ಇದೆ ಎಂದ ಸಿಬಲ್, ನ್ಯಾಯಾಂಗ ನಿಂದನೆಯ ತೀರ್ಪಿನ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಸೆಕ್ಷನ್ 14 ಬಿ ಅಡಿಯಲ್ಲಿ ಅವರ ಕಾನೂನು ಆಕ್ಷೇಪಣೆಗಳನ್ನು ಪರಿಹರಿಸಲು ಪೀಠ ವಿಫಲವಾಗಿದೆ ಎಂದು ವಾದಿಸಿದರು. ಇದನ್ನೂ ಓದಿ: ಮುಂಬೈನಲ್ಲಿ 107 ವರ್ಷದ ದಾಖಲೆ ಮುರಿದ ಮಳೆ – 75 ವರ್ಷದಲ್ಲಿ ಮೊದಲ ಬಾರಿಗೆ ಅವಧಿ ಪೂರ್ವ ಮುಂಗಾರು

ಪ್ರಸ್ತುತ ಪೀಠವು ಸಮನ್ವಯ ಪೀಠವು ನೀಡಿದ ಆದೇಶದ ಮೇಲೆ ಮೇಲ್ಮನವಿ ಸಲ್ಲಿಸಬಹುದೇ ಎಂದು ಪ್ರಶ್ನಿಸಿತು. ರಾಜ್ಯ ಸರ್ಕಾರವು ಹಿಂದಿನ ಆದೇಶವನ್ನು ರದ್ದುಗೊಳಿಸಲು ಪ್ರಯತ್ನಿಸುತ್ತಿಲ್ಲ. ಆದರೆ ಅದನ್ನು ಖಚಿತಪಡಿಸಿಕೊಳ್ಳಲು ಮಾತ್ರ ಪ್ರಯತ್ನಿಸುತ್ತಿದೆ ಎಂದು ಸಿಬಲ್ ಸ್ಪಷ್ಟಪಡಿಸಿದರು. ಇದನ್ನೂ ಓದಿ: 6 ಗನ್‌ಮ್ಯಾನ್‌ಗಳೊಂದಿಗೆ ಪಾಕ್ ಬೀದಿಯಲ್ಲಿ ಜ್ಯೋತಿ ಸುತ್ತಾಟ- ಸ್ಫೋಟಕ ವಿಡಿಯೋ ಔಟ್

ಮೇ 22ರಂದು, ನ್ಯಾಯಮೂರ್ತಿಗಳಾದ ಎಂ.ಎಂ ಸುಂದರೇಶ್ ಮತ್ತು ಅರವಿಂದ್ ಕುಮಾರ್ ಅವರನ್ನೊಳಗೊಂಡ ಮತ್ತೊಂದು ಪೀಠವು ನ್ಯಾಯಾಂಗ ನಿಂದನೆ ವಿಚಾರಣೆಯಲ್ಲಿ ರಾಜಮನೆತನದ ಉತ್ತರಾಧಿಕಾರಿಗಳಿಗೆ 3,011 ಕೋಟಿ ರೂ. ಮೌಲ್ಯದ ಟಿಡಿಆರ್ ಪ್ರಮಾಣಪತ್ರಗಳನ್ನು ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

TAGGED:Karnataka govtPalace Land DisputePalace TDR ControversySupreme Courtಅರಮನೆ ಮೈದಾನ ವಿವಾದಟಿಡಿಆರ್‌ಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema Updates

pawan kalyan 2
ನಿಧಿ ಜೊತೆ ಪವನ್ ಕಲ್ಯಾಣ್ ಮಸ್ತ್ ಡ್ಯಾನ್ಸ್- ‘ಹರಿ ಹರ ವೀರ ಮಲ್ಲು’ ಚಿತ್ರದ ಸಾಂಗ್ ರಿಲೀಸ್
1 minute ago
TEJA SAJJA 1 1
ಸೂಪರ್ ಯೋಧನಾಗಿ ತೇಜ್ ಸಜ್ಜಾ ಎಂಟ್ರಿ- ಆ್ಯಕ್ಷನ್ ಪ್ಯಾಕ್ಡ್ ‘ಮಿರಾಯ್’‌ ಚಿತ್ರದ ಟೀಸರ್ ಔಟ್
14 minutes ago
urvashi rautela aishwarya rai
ಐಶ್ವರ್ಯಾ ರೈ ಜೊತೆ ಹೋಲಿಸಿ ಟ್ರೋಲ್- ನಾನು ಯಾರ ಕಾಪಿನೂ ಅಲ್ಲ ಎಂದ ಊರ್ವಶಿ ರೌಟೇಲಾ
2 hours ago
KamalHaasan
ತಮಿಳಿನಿಂದ ಕನ್ನಡ ಎಂದ ಕಮಲ್ ಹಾಸನ್‌ಗೆ ಸಂಕಷ್ಟ- ಕ್ಷಮೆಯಾಚಿಸುವಂತೆ ಆಗ್ರಹ
3 hours ago

You Might Also Like

Abdul Rahims funeral procession stones thrown at showroom bc road kaikamba
Dakshina Kannada

ರಹೀಂ ಶವ ಮೆರವಣಿಗೆ| ಶೋರೂಂ ಮೇಲೆ ಕಲ್ಲು – ಬಲವಂತವಾಗಿ ಬಂದ್‌ ಮಾಡಿಸಿದ ಕಿಡಿಗೇಡಿಗಳು

Public TV
By Public TV
28 minutes ago
H.Niranjani
Davanagere

ಲೋಕಸಭಾ ಚುನಾವಣೆ ವೇಳೆ ಹಣ ದುರ್ಬಳಕೆ – ಹರಿಹರ ನಗರಸಭೆ ವ್ಯವಸ್ಥಾಪಕಿ ಸಸ್ಪೆಂಡ್

Public TV
By Public TV
1 hour ago
Starlink
Latest

ಭಾರತಕ್ಕೆ ಬಂದೇ ಬಿಡ್ತು ಸ್ಟಾರ್‌ಲಿಂಕ್‌ – ಇದರ ಬೆಲೆ, ಇಂಟರ್ನೆಟ್‌ ಸ್ಪೀಡ್‌ ಎಷ್ಟು ಗೊತ್ತಾ?

Public TV
By Public TV
2 hours ago
KH Muniyappa
Bengaluru City

ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ ಕಾರ್ಯ ಪರಿಶೀಲಿಸಿದ ಕೆ.ಹೆಚ್.ಮುನಿಯಪ್ಪ

Public TV
By Public TV
2 hours ago
siddaramaiah 11
Districts

ಕರ್ನಾಟಕ ಮಳೆ | ಮೇ 30, 31 ರಂದು DC , CEO ಸಭೆ ಕರೆದ ಸಿಎಂ

Public TV
By Public TV
2 hours ago
BMTC AC Bus 1
Bengaluru City

BMTCಯಿಂದ `ದಿವ್ಯ ದರ್ಶನ’ ವೀಕೆಂಡ್ ಟೂರ್ ಪ್ಯಾಕೇಜ್ – 8 ಪ್ರಸಿದ್ಧ ದೇವಾಲಯಗಳ ದರ್ಶನಕ್ಕೆ ಅವಕಾಶ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?