Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಿಎಸ್‌ವೈ ವಿರುದ್ಧದ ಭ್ರಷ್ಟಾಚಾರ ಪ್ರಕರಣ – ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ

Public TV
Last updated: April 21, 2025 6:19 pm
Public TV
Share
2 Min Read
BS YEDIYURAPPA
SHARE

ನವದೆಹಲಿ: ಅಕ್ರಮ ಡಿನೋಟಿಫಿಕೇಷನ್ ಸೇರಿದಂತೆ ಭ್ರಷ್ಟಾಚಾರ ಪ್ರಕರಣಗಳಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (B.S.Yediyurappa) ವಿರುದ್ಧ ತನಿಖೆ ನಡೆಸಲು ಪೂರ್ವಾನುಮತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Supreme Court) ಮಹತ್ವದ ತೀರ್ಪು ನೀಡಿದೆ. ಸೆಕ್ಷನ್ 17Aಗೆ ಸಂಬಂಧಿಸಿದ ಸ್ಪಷ್ಟನೆಗಾಗಿ ವಿಸ್ತೃತ ಪೀಠಕ್ಕೆ ಪ್ರಕರಣವನ್ನು ವರ್ಗಾಯಿಸಿದೆ.

ನ್ಯಾ. ಜೆ.ಬಿ ಪಾರ್ದಿವಾಲಾ ನೇತೃತ್ವದ ದ್ವಿ ಸದಸ್ಯ ಪೀಠ ವಿಸ್ತೃತ ವಿಚಾರಣೆ ನಡೆಸಿತ್ತು. ಇಂದು ಈ ಬಗ್ಗೆ ತೀರ್ಪು ನೀಡಿದ ಪೀಠ, ಸುಪ್ರೀಂ ಕೋರ್ಟ್‌ನ ಇಬ್ಬರು ನ್ಯಾಯಾಧೀಶರ ಪೀಠವು ಹಿಂದೆ ಎರಡು ಪ್ರಕರಣಗಳಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿ ಸಾರ್ವಜನಿಕ ಸೇವಕರ ವಿರುದ್ಧ ವಿಚಾರಣೆ ಅಥವಾ ತನಿಖೆಯನ್ನು ಪ್ರಾರಂಭಿಸುವ ಮೊದಲು ಪೂರ್ವಾನುಮತಿ ಪಡೆಯುವ ವಿಷಯದ ಬಗ್ಗೆ ವಿಭಿನ್ನ ತೀರ್ಪು ನೀಡಿವೆ. ಈ ಹಂತದಲ್ಲಿ ಮತ್ತೊಂದು ತೀರ್ಪು ನೀಡುವುದು ಸೂಕ್ತವಲ್ಲ. ಹೀಗಾಗಿ, ಹೆಚ್ಚಿನ ವಿಚಾರಣೆಗಾಗಿ ನಾವು ವಿಸ್ತೃತ ಪೀಠಕ್ಕೆ ವರ್ಗಾಯಿಸುತ್ತಿದ್ದೇವೆ ಎಂದು ಹೇಳಿತು. ಇದನ್ನೂ ಓದಿ: ಈಗಾಗಲೇ ಕಾರ್ಯಾಂಗವನ್ನು ಅತಿಕ್ರಮಿಸಿರುವ ಆರೋಪ ನಮ್ಮ ಮೇಲಿದೆ: ಸುಪ್ರೀಂ ಕೋರ್ಟ್‌

supreme Court 1

ಭ್ರಷ್ಟಾಚಾರ ಪ್ರಕರಣದಲ್ಲಿ ಸಾರ್ವಜನಿಕ ಸೇವಕನ ವಿರುದ್ಧ ಕಾನೂನು ಕ್ರಮ ಜರುಗಿಸಲು ಪ್ರಾಥಮಿಕ ಪೂರ್ವಾನುಮೋದನೆಯ ಅನ್ವಯಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಪೊಲೀಸರು ಯಾವುದೇ ವಿಚಾರಣೆ ಅಥವಾ ತನಿಖೆಯನ್ನು ಪ್ರಾರಂಭಿಸಲು ಅನುಮೋದನೆ ನೀಡುವ ಮೊದಲು ಸೂಕ್ತ ಪ್ರಾಧಿಕಾರ ಅಥವಾ ಸರ್ಕಾರವು ಪರಿಶೀಲಿಸಬೇಕಾದ ಪಿಸಿ ಕಾಯ್ದೆಯ ಸೆಕ್ಷನ್ 17A ನಲ್ಲಿ ಪರಿಗಣಿಸಲಾದ ಸಂಬಂಧಿತ ಪರಿಗಣನೆಗಳು ಯಾವುವು ಎಂಬುದರ ಕುರಿತು ನಿರ್ಣಯಿಸಬೇಕಾದ ಪ್ರಶ್ನೆಗಳನ್ನು ನ್ಯಾಯಾಲಯ ಗಮನಿಸಿತ್ತು.

ಯಡಿಯೂರಪ್ಪ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ, ಡಿನೋಟಿಫಿಕೇಷನ್‌ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಅಪರಾಧ ನಡೆದ ಸಮಯದಲ್ಲಿ ಆರೋಪಿಯು ಸಾರ್ವಜನಿಕ ಸೇವಕನಾಗಿದ್ದರು ಎಂದು ಹೇಳಿದ್ದರು. 2018 ರಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಲ್ಲಿ ಪರಿಚಯಿಸಲಾದ ಸಾರ್ವಜನಿಕ ಸೇವಕರ ವಿರುದ್ಧ ವಿಚಾರಣೆಗೆ ಕಡ್ಡಾಯ ಪೂರ್ವಾನುಮತಿಗೆ ಸಂಬಂಧಿಸಿದ ಸೆಕ್ಷನ್ 17A ಯ ಅನ್ವಯದ ವಿಷಯವನ್ನು ಲೂಥ್ರಾ ಉಲ್ಲೇಖಿಸಿದರು. ಭಿನ್ನ ತೀರ್ಪುಗಳ ಬಗ್ಗೆಯೂ ಮಾಹಿತಿ ನೀಡಿದ್ದರು. ಇದನ್ನೂ ಓದಿ: ನಿಶಿಕಾಂತ್ ದುಬೆ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ನಮ್ಮ ಅನುಮೋದನೆ ಅಗತ್ಯವಿಲ್ಲ – ಸುಪ್ರೀಂ

BS Yediyurappa

ಪ್ರಕರಣದ ಹಿನ್ನಲೆ: ಬೆಂಗಳೂರಿನ ಉದ್ಯಮಿ ಎ.ಆಲಂ ಪಾಷಾ ಅವರು ಯಡಿಯೂರಪ್ಪ ವಿರುದ್ಧ ತಾವು ನೀಡಿರುವ ದೂರನ್ನು ಪುನಃಸ್ಥಾಪಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ 2021ರ ಜನವರಿ 5 ರಂದು ಮಾನ್ಯ ಮಾಡಿತ್ತು. ಇದನ್ನು ಪ್ರಶ್ನಿಸಿ ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದೀವಾಲಾ ಮತ್ತು ನ್ಯಾ. ಮನೋಜ್‌ ಮಿಶ್ರಾ ಅವರಿದ್ದ ನ್ಯಾಯಪೀಠ ಏಪ್ರಿಲ್‌ 4ರಂದು ವಿಚಾರಣೆ ಪೂರ್ಣಗೊಳಿಸಿತು.

ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ಮತ್ತು ‘ಕರ್ನಾಟಕ ಉದ್ಯೋಗ ಮಿತ್ರ’ ಸಂಸ್ಥೆಯ ಮಾಜಿ ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್ ಶಿವಸ್ವಾಮಿ ವಿರುದ್ಧ ಭ್ರಷ್ಟಾಚಾರ ಮತ್ತು ಕ್ರಿಮಿನಲ್‌ ಸಂಚು ಆರೋಪ ಮಾಡಿದ್ದರು. ದೇವನಹಳ್ಳಿಯಲ್ಲಿ 2011 ರಲ್ಲಿ 26 ಎಕರೆ ಡಿನೋಟಿಫಿಕೇಷನ್‌ ಮಾಡಿ ಅಕ್ರಮ ನಡೆಸಲಾಗಿದೆ ಎಂದು ಆರೋಪಿಸಿ ಆಲಂ ಪಾಷಾ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಯಡಿಯೂರಪ್ಪ ಹಾಗೂ ನಿರಾಣಿ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್‌ 2021ರ ಜನವರಿ 27ರಂದು ಆದೇಶ ನೀಡಿತ್ತು. ಇದನ್ನೂ ಓದಿ: ಪ.ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ದೂರುದಾರರು ಸಲ್ಲಿಸಿದ್ದ ಹಿಂದಿನ ದೂರನ್ನು ಪೂರ್ವಾನುಮತಿಯಿಲ್ಲದ ಕಾರಣಕ್ಕೆ ರದ್ದುಗೊಳಿಸಿದ್ದನ್ನು ಪ್ರಸ್ತಾಪಿಸಿದ ನ್ಯಾಯಪೀಠ, ಆರೋಪಿಯು ತನ್ನ ಸ್ಥಾನದಿಂದ ಕೆಳಗಿಳಿದ ನಂತರ ಹೊಸ ದೂರು ದಾಖಲಿಸುವುದಕ್ಕೆ ಅಡ್ಡಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು.

TAGGED:B. S.YediyurappacorruptionSupreme Courtಬಿ.ಎಸ್.ಯಡಿಯೂರಪ್ಪಭ್ರಷ್ಟಾಚಾರಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema Updates

namratha gowda
ರಾಜಕಾರಣಿಗಳ ಜೊತೆ ಡೇಟಿಂಗ್‌ಗೆ ಬಾ – ಟಾರ್ಚರ್ ಕೊಟ್ಟವನ ಚಳಿ ಬಿಡಿಸಿದ ನಮ್ರತಾ
8 hours ago
aamir khan
‘ಸಿತಾರೆ ಜಮೀನ್ ಪರ್’ ಬಾಯ್‌ಕಾಟ್‌ಗೆ ಆಗ್ರಹ- ಆಮೀರ್ ಖಾನ್ ವಿರುದ್ಧ ತಿರುಗಿಬಿದ್ದ ನೆಟ್ಟಿಗರು
8 hours ago
keerthy suresh 2
ಮದುವೆ ಬಳಿಕ 2ನೇ ಬಾಲಿವುಡ್ ಚಿತ್ರಕ್ಕೆ ಕೀರ್ತಿ ಸುರೇಶ್ ಗ್ರೀನ್ ಸಿಗ್ನಲ್
10 hours ago
ayush upendra
ಉಪೇಂದ್ರ ಪುತ್ರ ಚಿತ್ರರಂಗಕ್ಕೆ ಎಂಟ್ರಿ- ‘ಮೊದಲಾ ಸಲ’ ಖ್ಯಾತಿಯ ನಿರ್ದೇಶಕ ಆ್ಯಕ್ಷನ್ ಕಟ್
12 hours ago

You Might Also Like

Magaluru Suhas Shetty Case
Crime

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳು ಅರೆಸ್ಟ್

Public TV
By Public TV
1 hour ago
bharat electronics Akashteer
Latest

ಪಾಕ್‌ ಕ್ಷಿಪಣಿಯನ್ನು ಧ್ವಂಸಗೊಳಿಸಿದ್ದ AI ಆಧಾರಿತ ಆಕಾಶ್‌ತೀರ್

Public TV
By Public TV
1 hour ago
Davangere Accident
Crime

ಬೈಕ್‌ಗೆ ಡಿಕ್ಕಿ ಹೊಡೆದ ಕಾರು – ಇಬ್ಬರು ಯುವತಿಯರು ಸಾವು

Public TV
By Public TV
2 hours ago
ಚೀನಿ HQ-9 ವಾಯು ರಕ್ಷಣಾ ವ್ಯವಸ್ಥೆ
Latest

ಚೀನಿ ಏರ್‌ ಡಿಫೆನ್ಸ್‌ ಜಾಮ್‌ ಮಾಡಿ 23 ನಿಮಿಷದಲ್ಲಿ ಮುಗಿಯಿತು ಕಾರ್ಯಾಚರಣೆ – ಭಾರತದ ದಾಳಿಯ ರೋಚಕ ಕಥೆ ಓದಿ

Public TV
By Public TV
2 hours ago
Madikeri Death Sampath 1 1
Crime

Madikeri | ನಾಲ್ಕೈದು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Public TV
By Public TV
2 hours ago
harish injadi kukke subrahmanya temple
Dakshina Kannada

ನಾನು ರೌಡಿಶೀಟರ್ ಅಲ್ಲ, ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಯಾವುದೇ ಬಾಕಿ ಇರಿಸಿಕೊಂಡಿಲ್ಲ: ಹರೀಶ್ ಇಂಜಾಡಿ ಸ್ಪಷ್ಟನೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?