Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಎಸ್‌ವೈ ವಿರುದ್ಧದ ಭ್ರಷ್ಟಾಚಾರ ಪ್ರಕರಣ – ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಎಸ್‌ವೈ ವಿರುದ್ಧದ ಭ್ರಷ್ಟಾಚಾರ ಪ್ರಕರಣ – ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ

Bengaluru City

ಬಿಎಸ್‌ವೈ ವಿರುದ್ಧದ ಭ್ರಷ್ಟಾಚಾರ ಪ್ರಕರಣ – ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ

Public TV
Last updated: April 21, 2025 6:19 pm
Public TV
Share
2 Min Read
BS YEDIYURAPPA
SHARE

ನವದೆಹಲಿ: ಅಕ್ರಮ ಡಿನೋಟಿಫಿಕೇಷನ್ ಸೇರಿದಂತೆ ಭ್ರಷ್ಟಾಚಾರ ಪ್ರಕರಣಗಳಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (B.S.Yediyurappa) ವಿರುದ್ಧ ತನಿಖೆ ನಡೆಸಲು ಪೂರ್ವಾನುಮತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Supreme Court) ಮಹತ್ವದ ತೀರ್ಪು ನೀಡಿದೆ. ಸೆಕ್ಷನ್ 17Aಗೆ ಸಂಬಂಧಿಸಿದ ಸ್ಪಷ್ಟನೆಗಾಗಿ ವಿಸ್ತೃತ ಪೀಠಕ್ಕೆ ಪ್ರಕರಣವನ್ನು ವರ್ಗಾಯಿಸಿದೆ.

ನ್ಯಾ. ಜೆ.ಬಿ ಪಾರ್ದಿವಾಲಾ ನೇತೃತ್ವದ ದ್ವಿ ಸದಸ್ಯ ಪೀಠ ವಿಸ್ತೃತ ವಿಚಾರಣೆ ನಡೆಸಿತ್ತು. ಇಂದು ಈ ಬಗ್ಗೆ ತೀರ್ಪು ನೀಡಿದ ಪೀಠ, ಸುಪ್ರೀಂ ಕೋರ್ಟ್‌ನ ಇಬ್ಬರು ನ್ಯಾಯಾಧೀಶರ ಪೀಠವು ಹಿಂದೆ ಎರಡು ಪ್ರಕರಣಗಳಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿ ಸಾರ್ವಜನಿಕ ಸೇವಕರ ವಿರುದ್ಧ ವಿಚಾರಣೆ ಅಥವಾ ತನಿಖೆಯನ್ನು ಪ್ರಾರಂಭಿಸುವ ಮೊದಲು ಪೂರ್ವಾನುಮತಿ ಪಡೆಯುವ ವಿಷಯದ ಬಗ್ಗೆ ವಿಭಿನ್ನ ತೀರ್ಪು ನೀಡಿವೆ. ಈ ಹಂತದಲ್ಲಿ ಮತ್ತೊಂದು ತೀರ್ಪು ನೀಡುವುದು ಸೂಕ್ತವಲ್ಲ. ಹೀಗಾಗಿ, ಹೆಚ್ಚಿನ ವಿಚಾರಣೆಗಾಗಿ ನಾವು ವಿಸ್ತೃತ ಪೀಠಕ್ಕೆ ವರ್ಗಾಯಿಸುತ್ತಿದ್ದೇವೆ ಎಂದು ಹೇಳಿತು. ಇದನ್ನೂ ಓದಿ: ಈಗಾಗಲೇ ಕಾರ್ಯಾಂಗವನ್ನು ಅತಿಕ್ರಮಿಸಿರುವ ಆರೋಪ ನಮ್ಮ ಮೇಲಿದೆ: ಸುಪ್ರೀಂ ಕೋರ್ಟ್‌

supreme Court 1

ಭ್ರಷ್ಟಾಚಾರ ಪ್ರಕರಣದಲ್ಲಿ ಸಾರ್ವಜನಿಕ ಸೇವಕನ ವಿರುದ್ಧ ಕಾನೂನು ಕ್ರಮ ಜರುಗಿಸಲು ಪ್ರಾಥಮಿಕ ಪೂರ್ವಾನುಮೋದನೆಯ ಅನ್ವಯಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಪೊಲೀಸರು ಯಾವುದೇ ವಿಚಾರಣೆ ಅಥವಾ ತನಿಖೆಯನ್ನು ಪ್ರಾರಂಭಿಸಲು ಅನುಮೋದನೆ ನೀಡುವ ಮೊದಲು ಸೂಕ್ತ ಪ್ರಾಧಿಕಾರ ಅಥವಾ ಸರ್ಕಾರವು ಪರಿಶೀಲಿಸಬೇಕಾದ ಪಿಸಿ ಕಾಯ್ದೆಯ ಸೆಕ್ಷನ್ 17A ನಲ್ಲಿ ಪರಿಗಣಿಸಲಾದ ಸಂಬಂಧಿತ ಪರಿಗಣನೆಗಳು ಯಾವುವು ಎಂಬುದರ ಕುರಿತು ನಿರ್ಣಯಿಸಬೇಕಾದ ಪ್ರಶ್ನೆಗಳನ್ನು ನ್ಯಾಯಾಲಯ ಗಮನಿಸಿತ್ತು.

ಯಡಿಯೂರಪ್ಪ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ, ಡಿನೋಟಿಫಿಕೇಷನ್‌ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಅಪರಾಧ ನಡೆದ ಸಮಯದಲ್ಲಿ ಆರೋಪಿಯು ಸಾರ್ವಜನಿಕ ಸೇವಕನಾಗಿದ್ದರು ಎಂದು ಹೇಳಿದ್ದರು. 2018 ರಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಲ್ಲಿ ಪರಿಚಯಿಸಲಾದ ಸಾರ್ವಜನಿಕ ಸೇವಕರ ವಿರುದ್ಧ ವಿಚಾರಣೆಗೆ ಕಡ್ಡಾಯ ಪೂರ್ವಾನುಮತಿಗೆ ಸಂಬಂಧಿಸಿದ ಸೆಕ್ಷನ್ 17A ಯ ಅನ್ವಯದ ವಿಷಯವನ್ನು ಲೂಥ್ರಾ ಉಲ್ಲೇಖಿಸಿದರು. ಭಿನ್ನ ತೀರ್ಪುಗಳ ಬಗ್ಗೆಯೂ ಮಾಹಿತಿ ನೀಡಿದ್ದರು. ಇದನ್ನೂ ಓದಿ: ನಿಶಿಕಾಂತ್ ದುಬೆ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ನಮ್ಮ ಅನುಮೋದನೆ ಅಗತ್ಯವಿಲ್ಲ – ಸುಪ್ರೀಂ

BS Yediyurappa

ಪ್ರಕರಣದ ಹಿನ್ನಲೆ: ಬೆಂಗಳೂರಿನ ಉದ್ಯಮಿ ಎ.ಆಲಂ ಪಾಷಾ ಅವರು ಯಡಿಯೂರಪ್ಪ ವಿರುದ್ಧ ತಾವು ನೀಡಿರುವ ದೂರನ್ನು ಪುನಃಸ್ಥಾಪಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ 2021ರ ಜನವರಿ 5 ರಂದು ಮಾನ್ಯ ಮಾಡಿತ್ತು. ಇದನ್ನು ಪ್ರಶ್ನಿಸಿ ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದೀವಾಲಾ ಮತ್ತು ನ್ಯಾ. ಮನೋಜ್‌ ಮಿಶ್ರಾ ಅವರಿದ್ದ ನ್ಯಾಯಪೀಠ ಏಪ್ರಿಲ್‌ 4ರಂದು ವಿಚಾರಣೆ ಪೂರ್ಣಗೊಳಿಸಿತು.

ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ಮತ್ತು ‘ಕರ್ನಾಟಕ ಉದ್ಯೋಗ ಮಿತ್ರ’ ಸಂಸ್ಥೆಯ ಮಾಜಿ ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್ ಶಿವಸ್ವಾಮಿ ವಿರುದ್ಧ ಭ್ರಷ್ಟಾಚಾರ ಮತ್ತು ಕ್ರಿಮಿನಲ್‌ ಸಂಚು ಆರೋಪ ಮಾಡಿದ್ದರು. ದೇವನಹಳ್ಳಿಯಲ್ಲಿ 2011 ರಲ್ಲಿ 26 ಎಕರೆ ಡಿನೋಟಿಫಿಕೇಷನ್‌ ಮಾಡಿ ಅಕ್ರಮ ನಡೆಸಲಾಗಿದೆ ಎಂದು ಆರೋಪಿಸಿ ಆಲಂ ಪಾಷಾ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಯಡಿಯೂರಪ್ಪ ಹಾಗೂ ನಿರಾಣಿ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್‌ 2021ರ ಜನವರಿ 27ರಂದು ಆದೇಶ ನೀಡಿತ್ತು. ಇದನ್ನೂ ಓದಿ: ಪ.ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ದೂರುದಾರರು ಸಲ್ಲಿಸಿದ್ದ ಹಿಂದಿನ ದೂರನ್ನು ಪೂರ್ವಾನುಮತಿಯಿಲ್ಲದ ಕಾರಣಕ್ಕೆ ರದ್ದುಗೊಳಿಸಿದ್ದನ್ನು ಪ್ರಸ್ತಾಪಿಸಿದ ನ್ಯಾಯಪೀಠ, ಆರೋಪಿಯು ತನ್ನ ಸ್ಥಾನದಿಂದ ಕೆಳಗಿಳಿದ ನಂತರ ಹೊಸ ದೂರು ದಾಖಲಿಸುವುದಕ್ಕೆ ಅಡ್ಡಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು.

TAGGED:B. S.YediyurappacorruptionSupreme Courtಬಿ.ಎಸ್.ಯಡಿಯೂರಪ್ಪಭ್ರಷ್ಟಾಚಾರಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

shiva rajkumar
ಫ್ಯಾನ್ಸ್ ವಾರ್ ಬಗ್ಗೆ ನಟ ಶಿವರಾಜ್‌ಕುಮಾರ್ ಖಡಕ್ ರಿಯಾಕ್ಷನ್
Cinema Latest Sandalwood Top Stories
Ravi Basrur
ಕಿಶೋರ್ ಮೇಗಳಮನೆ ನಿರ್ದೇಶನದ ಚಿತ್ರಕ್ಕೆ ಬಸ್ರೂರು ಸಂಗೀತ
Cinema Latest Sandalwood Top Stories
45 movie 3
`45′ ತ್ರಿಮೂರ್ತಿಗಳ ಸಂಗಮ.. ಕಣ್ತುಂಬಿಕೊಂಡ ಪ್ರೇಕ್ಷಕರ ಜೈಕಾರ..!
Cinema Latest Sandalwood Top Stories
Bigg Boss Kannada 12 Gilli Nata Parents
ಗಿಲ್ಲಿಗೆ ಕೋಲಲ್ಲಿ ಹಿಗ್ಗಾಮುಗ್ಗಾ ಬಾರಿಸಿದ ತಂದೆ
Latest Top Stories TV Shows

You Might Also Like

Tariq Rahman
Latest

ಹಿಂದೂ, ಮುಸ್ಲಿಂ, ಕ್ರೈಸ್ತರಿಗಾಗಿ ಬಾಂಗ್ಲಾದೇಶ ಜನತೆಗೆ ಏಕತೆಯಿಂದ ಇರೋಣ: ತಾರಿಕ್‌ ರೆಹಮಾನ್‌

Public TV
By Public TV
12 minutes ago
Hindu man Bangladesh
Latest

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಥಳಿಸಿ ಹತ್ಯೆ

Public TV
By Public TV
54 minutes ago
Bagalgunte Newly wed Suicide
Bengaluru City

Bagalgunte | ಮದುವೆಯಾಗಿ ಒಂದೇ ತಿಂಗಳಿಗೆ ನವವಿವಾಹಿತೆ ನೇಣಿಗೆ ಶರಣು

Public TV
By Public TV
1 hour ago
Basanagouda Patil Yatnal 1
Districts

ಕರ್ನಾಟಕದಲ್ಲೂ ಎಸ್‌ಐಆರ್ ಜಾರಿ ಆಗಬೇಕು – ಯತ್ನಾಳ್

Public TV
By Public TV
1 hour ago
Tiger 1
Districts

ಮೈಸೂರು | ಅನಾರೋಗ್ಯದಿಂದ ಬಳಲುತ್ತಿದ್ದ ಐದು ವರ್ಷದ ತಾಯಮ್ಮ ಹುಲಿ ಸಾವು

Public TV
By Public TV
2 hours ago
DK Shivakumar 9
Bengaluru City

ಕಾರ್ಯಕರ್ತನಾಗಿ ಕಸ ಗುಡಿಸಿ, ಅಧ್ಯಕ್ಷನಾಗಿ ಪಕ್ಷದ ಬಾವುಟ ಕಟ್ಟಿ, ಎಲ್ಲ ಕೆಲಸ ಮಾಡಿದ್ದೇನೆ: ಡಿಕೆಶಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?