Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: SC/ST ಬಡ್ತಿ ಮೀಸಲಾತಿ: ಮಾನದಂಡ ರೂಪಿಸಲು ಸುಪ್ರೀಂ ನಿರಾಕರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | SC/ST ಬಡ್ತಿ ಮೀಸಲಾತಿ: ಮಾನದಂಡ ರೂಪಿಸಲು ಸುಪ್ರೀಂ ನಿರಾಕರಣೆ

Latest

SC/ST ಬಡ್ತಿ ಮೀಸಲಾತಿ: ಮಾನದಂಡ ರೂಪಿಸಲು ಸುಪ್ರೀಂ ನಿರಾಕರಣೆ

Public TV
Last updated: January 28, 2022 1:15 pm
Public TV
Share
2 Min Read
supreme court 12
SHARE

ನವದೆಹಲಿ: ಸರ್ಕಾರಿ ಉದ್ಯೋಗಗಳಲ್ಲಿ ಬಡ್ತಿ ನೀಡುವಾಗ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ನೌಕರರಿಗೆ ಮೀಸಲಾತಿ ನಿರ್ಧರಿಸಲು ಯಾವುದೇ ಮಾನದಂಡವನ್ನು ರೂಪಿಸಲು ನ್ಯಾಯಾಲಯಕ್ಕೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿಗಳಾದ ಎಲ್‌.ನಾಗೇಶ್ವರರಾವ್‌, ಸಂಜೀವ್‌ ಖನ್ನಾ ಹಾಗೂ ಬಿ.ಆರ್‌.ಗವಾಯಿ ಅವರಿರುವ ನ್ಯಾಯಪೀಠವು ಎಸ್‌ಸಿ/ಎಸ್‌ಟಿ ಬಡ್ತಿ ಮೀಸಲಾತಿ ಕುರಿತು ಇಂದು ತೀರ್ಪು ಪ್ರಕಟಿಸಿತು. ಬಡ್ತಿಯಲ್ಲಿ ಮೀಸಲಾತಿ ಜಾರಿಗೊಳಿಸುವಾಗ ಎಸ್‌ಸಿ/ಎಸ್‌ಟಿ ಜನರ ಪ್ರಾತಿನಿಧ್ಯವನ್ನು ನಿರ್ಧರಿಸುವ ಕೇಂದ್ರ ಮತ್ತು ರಾಜ್ಯಗಳಿಂದ ಪ್ರಮಾಣೀಕರಿಸಬಹುದಾದ ದತ್ತಾಂಶವನ್ನು ಸಂಗ್ರಹಿಸುವ ಅಗತ್ಯವನ್ನು ತೆಗೆದುಹಾಕುವ ಕೇಂದ್ರದ ಮನವಿಯನ್ನು ಸುಪ್ರೀಂ ತಿರಸ್ಕರಿಸಿದೆ. ಇದನ್ನೂ ಓದಿ: ಸಮಾಜವಾದಿ ಪಕ್ಷದವರು ಜಿನ್ನಾನ ಆರಾಧಕರು: ಯೋಗಿ ಆದಿತ್ಯನಾಥ್‌ ಟೀಕೆ

parliament monsoon session 2020 1599402841

ಪ್ರಾತಿನಿಧ್ಯದ ಅಸಮರ್ಪಕತೆಯನ್ನು ನಿರ್ಧರಿಸಲು ನಾವು ಯಾವುದೇ ಅಳತೆಗೋಲನ್ನು ರೂಪಿಸಲು ಸಾಧ್ಯವಿಲ್ಲ. ಎಸ್‌ಸಿ/ಎಸ್‌ಟಿ ಪ್ರಾತಿನಿಧ್ಯಕ್ಕೆ ಸಂಬಂಧಿಸಿದಂತೆ ಪ್ರಮಾಣೀಕರಿಸಬಹುದಾದ ಡೇಟಾವನ್ನು ಸಂಗ್ರಹಿಸುವುದು ಸಂಬಂಧಪಟ್ಟ ರಾಜ್ಯಗಳ ಹೊಣೆಗಾರಿಕೆ. ಎಸ್‌ಸಿ/ಎಸ್‌ಟಿ ಪ್ರಾತಿನಿಧ್ಯದ ಅಸಮರ್ಪಕತೆಯನ್ನು ನಿರ್ಧರಿಸುವುದಕ್ಕಾಗಿ ಮಾನದಂಡ ನಿರ್ಣಯಿಸಲು ಆಯಾ ರಾಜ್ಯಗಳ ವಿವೇಚನೆಗೆ ಬಿಟ್ಟಿದ್ದೇವೆ ಎಂದು ನ್ಯಾಯಾಲಯ ತಿಳಿಸಿದೆ.

ಎಂ.ನಾಗರಾಜ್‌ ವರ್ಸಸ್‌ ಭಾರತ ಸರ್ಕಾರ ಪ್ರಕರಣಕ್ಕೆ ಸಂಬಂಧಿಸಿದ 2006ರ ತೀರ್ಪಿನ ಅನ್ವಯ ಎಸ್‌ಸಿ/ಎಸ್‌ಟಿ ಪ್ರಾತಿನಿಧ್ಯದ ಕುರಿತು ನಿರ್ಧರಣಾತ್ಮಕ ದತ್ತಾಂಶ ಸಂಗ್ರಹಿಸುವುದು ಸಂಬಂಧಪಟ್ಟ ರಾಜ್ಯ ಸರ್ಕಾರಗಳ ಹೊಣೆಗಾರಿಕೆ ಎಂದು ಪೀಠ ಒತ್ತಿ ಹೇಳಿದೆ.

ಎಸ್‌ಸಿ-ಎಸ್‌ಟಿ ಅಭ್ಯರ್ಥಿಗಳ ಬಡ್ತಿ ಮೀಸಲಾತಿ ಷರತ್ತುಗಳನ್ನು ದುರ್ಬಲಗೊಳಿಸಬೇಡಿ. ಮೀಸಲಾತಿ ನೀಡುವ ಮುನ್ನ ರಾಜ್ಯವು ಪರಿಮಾಣಾತ್ಮಕ ಡೇಟಾ ಸಂಗ್ರಹಿಸಬೇಕು. ಪ್ರಾತಿನಿಧ್ಯದ ಅಸಮರ್ಪಕತೆಯ ಮೌಲ್ಯಮಾಪನದ ಜೊತೆಗೆ ಪರಿಮಾಣಾತ್ಮಕ ದತ್ತಾಂಶ ಸಂಗ್ರಹವೂ ಅತ್ಯಗತ್ಯ. ಮೀಸಲಾತಿ ನೀಡುವ ಮುನ್ನ ಉನ್ನತ ಹುದ್ದೆಗಳ ಪ್ರಾತಿನಿಧ್ಯದ ಮಾಹಿತಿ ಸಂಗ್ರಹ ಅಗತ್ಯ. ಪ್ರಾತಿನಿಧ್ಯವನ್ನು ನಿಗದಿತ ಅವಧಿಯಲ್ಲಿ ಮೌಲ್ಯಮಾಪನ ಮಾಡಬೇಕು. ಅವಧಿ ಎಷ್ಟು ಎಂಬುದನ್ನು ಕೇಂದ್ರ ಸರ್ಕಾರವೇ ನಿರ್ಧರಿಸಬೇಕು ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ. ಇದನ್ನೂ ಓದಿ: ಅಮಾನತು ಆದೇಶ ರದ್ದು – ಮಹಾರಾಷ್ಟ್ರದ 12 ಬಿಜೆಪಿ ಶಾಸಕರಿಗೆ ಗೆಲುವು

reservation

ಬಡ್ತಿ ಮೀಸಲಾತಿ ಕುರಿತು ಹಳೆಯ ಪ್ರಕರಣ ಪರಿಶೀಲಿಸುವುದಿಲ್ಲ. ಬಡ್ತಿ ಮೀಸಲಾತಿ ಜಾರಿ ಬಗ್ಗೆ ರಾಜ್ಯಗಳು ನಿರ್ಧರಿಸಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿತ್ತು.

2021ರ ಅಕ್ಟೋಬರ್ 26ರಂದು ಕಾಯ್ದಿರಿಸಿದ್ದ ತೀರ್ಪು ಇಂದು ಪ್ರಕಟವಾಗಿದೆ. ಗ್ರೂಪ್‌ ʻಎʼ ನಂತಹ ಉನ್ನತ ಹುದ್ದೆಗೇರುವುದು ಎಸ್‌ಸಿ ಹಾಗೂ ಎಸ್‌ಟಿ ನೌಕರರಿಗೆ ಬಹಳ ಕಷ್ಟ. ಇಂತಹ ಉನ್ನತ ಹುದ್ದೆಗಳಿಗೆ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ನೌಕರರನ್ನು ಭರ್ತಿ ಮಾಡುವುದಕ್ಕೆ ಅನುಕೂಲ ಕಲ್ಪಿಸುವಂತಹ ವಾಸ್ತವದಿಂದ ಕೂಡಿದ ಆಧಾರವನ್ನು ಸುಪ್ರೀಂ ಕೋರ್ಟ್‌ ಒದಗಿಸಬೇಕು ಎಂದು ಅಕ್ಟೋಬರ್‌ ವಿಚಾರಣೆ ವೇಳೆ ಅಟಾರ್ನಿ ಜನರಲ್‌ ಕೆ.ಕೆ.ವೇಣುಗೋಪಾಲ್‌ ಅವರು ನ್ಯಾಯಪೀಠಕ್ಕೆ ಮನವಿ ಮಾಡಿದ್ದರು. ಇದನ್ನೂ ಓದಿ: ಸ್ಟೂಡೆಂಟ್ ಪೊಲೀಸ್ ಕೆಡೆಟ್‌ನಲ್ಲಿ ಹಿಜಬ್‌ ಧರಿಸಲು ಅವಕಾಶವಿಲ್ಲ: ಕೇರಳ ಸರ್ಕಾರ

TAGGED:quota in promotionsSC STSupreme Courtunion governmentಎಸ್ಸಿ-ಎಸ್ಟಿಕೇಂದ್ರ ಸರ್ಕಾರಬಡ್ತಿ ಮೀಸಲಾತಿಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories

You Might Also Like

Hezbollah new chief Sheikh Naim Qassem
Latest

ಇಸ್ರೇಲ್ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಮಟಾಶ್

Public TV
By Public TV
34 minutes ago
pm modi
Latest

ಬಂಗಾಳದ ಜನತೆಗೆ ಪ್ರಧಾನಿ ಮೋದಿ 6 ಗ್ಯಾರಂಟಿ ಘೋಷಣೆ

Public TV
By Public TV
1 hour ago
David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
1 hour ago
R.Ashwin David Miller
Cricket

ನಿಮ್ಮ ನಿರ್ಧಾರ ತಂಡದ ಆತ್ಮವಿಶ್ವಾಸ ಕುಗ್ಗಿಸಿದೆ: ಮಿಲ್ಲರ್‌ ವಿರುದ್ಧ ಆರ್‌.ಅಶ್ವಿನ್‌ ಬೇಸರ

Public TV
By Public TV
2 hours ago
mentally ill woman spends 10 days with husbands decomposing body in chikkamagaluru
Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
By Public TV
2 hours ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?