Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅತ್ಯಾಚಾರ ಅಪರಾಧದ ವ್ಯಾಪ್ತಿಗೆ `ಶವ ಸಂಭೋಗ’ – ಕರ್ನಾಟಕ ಸರ್ಕಾರದ ಮನವಿ ತಿರಸ್ಕರಿಸಿದ ಸುಪ್ರೀಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಅತ್ಯಾಚಾರ ಅಪರಾಧದ ವ್ಯಾಪ್ತಿಗೆ `ಶವ ಸಂಭೋಗ’ – ಕರ್ನಾಟಕ ಸರ್ಕಾರದ ಮನವಿ ತಿರಸ್ಕರಿಸಿದ ಸುಪ್ರೀಂ

Karnataka

ಅತ್ಯಾಚಾರ ಅಪರಾಧದ ವ್ಯಾಪ್ತಿಗೆ `ಶವ ಸಂಭೋಗ’ – ಕರ್ನಾಟಕ ಸರ್ಕಾರದ ಮನವಿ ತಿರಸ್ಕರಿಸಿದ ಸುಪ್ರೀಂ

Public TV
Last updated: February 5, 2025 5:24 pm
Public TV
Share
3 Min Read
supreme Court 1
SHARE

ನವದೆಹಲಿ: ಐಪಿಸಿ ಸೆಕ್ಷನ್ 375ರ ಅಡಿಯಲ್ಲಿ ಶವ ಸಂಭೋಗ ಎಂಬುದು ಅತ್ಯಾಚಾರ ಅಪರಾಧವಾಗದು ಎಂದು ಕರ್ನಾಟಕ ಹೈಕೋರ್ಟ್
(High Court) 2023ರಲ್ಲಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ (Supreme Court)  ತಿರಸ್ಕರಿಸಿದೆ.

ನ್ಯಾ.ಸುಧಾಂಶು ಧುಲಿಯಾ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ಪೀಠವು, ಸಂಸತ್ತು ಈ ವಿಚಾರವಾಗಿ ಪರಿಶೀಲನೆ ನಡೆಸಬೇಕು. ಅಗತ್ಯವಿದ್ದರೆ ಕಾಯಿದೆಯಲ್ಲಿ ಬದಲಾವಣೆ ಮಾಡಬಹುದು. ಈ ಸಂಬಂಧ ಸರ್ಕಾರ ಸಂಸತ್ತಿಗೆ ಪತ್ರ ಬರೆಯಬಹುದು ಎಂದು ತಿಳಿಸಿದೆ.

ಪ್ರಕರಣದ ಆರೋಪಿ 21 ವರ್ಷದ ಮಹಿಳೆಯನ್ನು ಕೊಲೆ ಮಾಡಿ ನಂತರ ಮೃತದೇಹದೊಂದಿಗೆ ಸಂಭೋಗ ನಡೆಸಿದ್ದ. ವಿಚಾರಣಾ ನ್ಯಾಯಾಲಯ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಕೊಲೆ ಮತ್ತು ಐಪಿಸಿ ಸೆಕ್ಷನ್ 375ರ ಅಡಿಯಲ್ಲಿ ಅತ್ಯಾಚಾರ ಎರಡೂ ಕೃತ್ಯಗಳಿಗೆ ಶಿಕ್ಷೆ ವಿಧಿಸಿತ್ತು.ಇದನ್ನೂ ಓದಿ: ಶೀಲ ಶಂಕಿಸಿ ನಡುರಸ್ತೆಯಲ್ಲಿಯೇ 8 ಬಾರಿ ಚಾಕು – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

2023ರ ಮೇಯಲ್ಲಿ ತೀರ್ಪು ನೀಡಿದ ಹೈಕೋರ್ಟ್ ಶವ ಸಂಭೋಗ ಐಪಿಸಿ ಸೆಕ್ಷನ್ 375ರ ಅಡಿಯಲ್ಲಿ ಅತ್ಯಾಚಾರ ಎನಿಸಿಕೊಳ್ಳುವುದಿಲ್ಲ. ಅಲ್ಲದೆ ಅದು ಐಪಿಸಿ ಸೆಕ್ಷನ್ 377ರ ಅಡಿಯಲ್ಲಿ ಅಸ್ವಾಭಾವಿಕ ಲೈಂಗಿಕ ಕೃತ್ಯದ ವ್ಯಾಪ್ತಿಗೂ ಬರುವುದಿಲ್ಲ ಎಂದಿತ್ತು. ಐಪಿಸಿ ಸೆಕ್ಷನ್ 375 ಮತ್ತು 377ನ್ನು ಎಚ್ಚರಿಕೆಯಿಂದ ಓದಿದಾಗ, ಮೃತ ದೇಹವನ್ನು ಮನುಷ್ಯ ಅಥವಾ ವ್ಯಕ್ತಿ ಎಂದು ಕರೆಯಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗುತ್ತದೆ. ಆದ್ದರಿಂz, 375 ಅಥವಾ 377ನೇ ಸೆಕ್ಷನ್‌ಗಳನ್ನು ಅನ್ವಯಿಸಲಾಗುವುದಿಲ್ಲ ಎಂದು ಹೈಕೋರ್ಟ್ ವಿವರಿಸಿತ್ತು.

ಆದರೆ ಶವ ಸಂಭೋಗವನ್ನು ಅಪರಾಧ ಎಂದು ಪರಿಗಣಿಸುವುದಕ್ಕಾಗಿ ಐಪಿಸಿಯಲ್ಲಿ ಬದಲಾವಣೆಗಳನ್ನು ಮಾಡಲು ಕೇಂದ್ರ ಸರ್ಕಾರಕ್ಕೆ ಇದು ಸಕಾಲ. ಇಂತಹ ಕೃತ್ಯವನ್ನು ಅಪರಾಧೀಕರಿಸಲು ಐಪಿಸಿಯ ಸೆಕ್ಷನ್ 377 ಅನ್ನು ತಿದ್ದುಪಡಿ ಮಾಡಬೇಕು ಅಥವಾ ಪ್ರತ್ಯೇಕ ಸೆಕ್ಷನ್ ಜಾರಿಗೆ ತರಬೇಕು ಎಂತಲೂ ನ್ಯಾಯಾಲಯ ಹೇಳಿತ್ತು.

ಕೊಲೆ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಗೆ ಶಿಕ್ಷೆ ವಿಧಿಸಿತ್ತಾದರೂ ಮಹಿಳೆಯ ಮೃತ ದೇಹದ ಮೇಲೆ ಅತ್ಯಾಚಾರ ನಡೆದಿದ್ದ ಕಾರಣಕ್ಕೆ ಐಪಿಸಿ ಸೆಕ್ಷನ್ 375ರ ಅಡಿಯಲ್ಲಿ ಆರೋಪಿಯನ್ನು ಖುಲಾಸೆಗೊಳಿಸಲಾಗಿತ್ತು. ತೀರ್ಪು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

karnataka High Court

ಸರ್ಕಾರದ ಪರವಾಗಿ ಹಾಜರಾದ ವಕೀಲ ಅಮನ್ ಪನ್ವರ್, ಮೃತ ವ್ಯಕ್ತಿ ಲೈಂಗಿಕ ಕ್ರಿಯೆಗಳಿಗೆ ಒಪ್ಪಿಗೆ ನೀಡುವುದು ಸಾಧ್ಯವಿಲ್ಲದ ಕಾರಣ, ಮೃತದೇಹದ ಮೇಲಿನ ಅತ್ಯಾಚಾರವನ್ನು ಸೆಕ್ಷನ್ ವ್ಯಾಪ್ತಿಗೆ ಒಳಪಡುವಂತೆ ಅದನ್ನು ವ್ಯಾಖ್ಯಾನಿಸಬೇಕು ಎಂದು ವಾದಿಸಿದರು.

ಸೆಕ್ಷನ್ 375(ಸಿ)ನಲ್ಲಿ ಬಳಸಲಾದ `ದೇಹ’ ಎಂಬ ಪದವನ್ನು `ಮೃತ ದೇಹ’ ಎಂತಲೂ ಪರಿಗಣಿಸಬೇಕು. ಸೆಕ್ಷನ್ 375 ರ ಏಳನೇ ವಿವರಣೆಯು ಮಹಿಳೆಯು ಒಪ್ಪಿಗೆಯನ್ನು ತಿಳಿಸಲು ಸಾಧ್ಯವಾಗದಿದ್ದಾಗಲೂ ಸಹ ಅದನ್ನು ಅತ್ಯಾಚಾರವೆಂದು ಪರಿಗಣಿಸಬೇಕು ಎನ್ನುತ್ತದೆ. ಈ ವಿವರಣೆಯನ್ನು ಆಧರಿಸಿಯಾದರೂ ಮೃತ ದೇಹದ ಮೇಲಿನ ಅತ್ಯಾಚಾರವನ್ನು ಅಪರಾಧದ ವ್ಯಾಪ್ತಿಗೆ ತರಬೇಕು. ನ್ಯಾಯಾಲಯ ಸೆಕ್ಷನ್ 375ನ್ನು ಹೆಚ್ಚು ಆಳವಾಗಿ ಪರಿಗಣಿಸದೆ ಮೃತ ದೇಹದ ಮೇಲಿನ ಅತ್ಯಾಚಾರವನ್ನೂ ಒಳಗೊಳ್ಳುವಂತೆ ಉದಾರವಾಗಿ ಅರ್ಥೈಸಬೇಕು ಎಂದು ಪನ್ವರ್ ಹೇಳಿದರು. ಮೃತ ದೇಹಗಳಿಗೂ ಘನತೆ ಮತ್ತು ನ್ಯಾಯಪರತೆ ಅನ್ವಯಿಸಬೇಕು ಎಂದು ಪಂಡಿತ್ ಪರಮಾನಂದ ಕಟಾರ ಮತ್ತು ಭಾರತ ಒಕ್ಕೂಟ ನಡುವಣ ಪ್ರಕರಣಕ್ಕೆ ಸಂಬಂಧಿಸಿದಂತೆ 1995ರಲ್ಲಿ ನೀಡಿದ್ದ ತೀರ್ಪನ್ನು ಅವಲಂಬಿಸಿ ಅವರು ವಾದ ಮಂಡಿಸಿದರು.

ಶವ ಸಂಭೋಗವನ್ನು ಅತ್ಯಾಚಾರದ ವ್ಯಾಪ್ತಿಗೆ ತರುವುದಕ್ಕಾಗಿ ಪ್ರಭುತ್ವ ಮತ್ತು ಬ್ರೋಬೆಕ್ ನಡುವಣ ಪ್ರಕರಣದಲ್ಲಿ ಅಮೆರಿಕದ ಟೆನ್ನೆಸ್ಸೀ ಪ್ರಾಂತದ ಸುಪ್ರೀಂ ಕೋರ್ಟ್ ಸೇರಿದಂತೆ ಅಂತರರಾಷ್ಟ್ರೀಯ ನ್ಯಾಯಾಲಯಗಳು ದಂಡ ಸಂಹಿತೆಯ ಸೆಕ್ಷನ್‌ಗಳನ್ನು ವಿಸ್ತರಿಸಿವೆ ಎಂದು ಅವರು ಪ್ರಸ್ತಾಪಿಸಿದರು. ಆದರೂ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನ್ಯಾಯಾಲಯ ನಿರಾಕರಿಸಿತು.ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ತಾಳ್ಮೆ ಕಳೆದುಕೊಂಡಿದ್ದೇಕೆ..? – ಮಾಜಿ ಪ್ರಧಾನಿ ಚಂದ್ರಶೇಖರ್ ಪುತ್ರನಿಗೆ ಹೀಗೇಕೆ ಹೇಳಿದ್ರು?

TAGGED:high courtSupreme Courtಕರ್ನಾಟಕ ಸರ್ಕಾರನವದೆಹಲಿಸುಪ್ರೀಂ ಕೋರ್ಟ್ಹೈಕೋರ್ಟ್
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Siddaramaiah 1 3
Districts

ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ: ಸಿಎಂ

Public TV
By Public TV
9 minutes ago
Priyank Kharge 1
Bengaluru City

ತಾಂತ್ರಿಕ ತೊಡಕುಗಳ ನಿವಾರಣೆ ಮೂಲಕ ಇ-ಸ್ವತ್ತು ವಿತರಣೆಗೆ ವೇಗ: ಸಚಿವ ಪ್ರಿಯಾಂಕ್ ಖರ್ಗೆ

Public TV
By Public TV
15 minutes ago
Rajnath Singh
Latest

ಈ ಬಾರಿಯ ಈಶ ಮಹಾಶಿವರಾತ್ರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಖ್ಯ ಅತಿಥಿ

Public TV
By Public TV
1 hour ago
Chikkamagaluru Two Youths Drown In Bhadra River
Chikkamagaluru

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು

Public TV
By Public TV
1 hour ago
HAL Techie Murder
Bengaluru City

ಬೆಂಗಳೂರಲ್ಲಿ ಪುತ್ರನಿಂದ ತಂದೆ-ತಾಯಿ ಕೊಲೆ ಕೇಸ್;‌ ಕೊಂದ ಮಗನಿಂದಲೇ ಅಂತ್ಯಸಂಸ್ಕಾರಕ್ಕೆ ಕೋರ್ಟ್ ಅವಕಾಶ

Public TV
By Public TV
1 hour ago
Basanagouda Patil Yatnal
Bengaluru City

ಚುನಾವಣೆಯಲ್ಲಿ ಅಕ್ರಮ ಆರೋಪ – ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?