Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅತ್ಯಾಚಾರ ಅಪರಾಧದ ವ್ಯಾಪ್ತಿಗೆ `ಶವ ಸಂಭೋಗ’ – ಕರ್ನಾಟಕ ಸರ್ಕಾರದ ಮನವಿ ತಿರಸ್ಕರಿಸಿದ ಸುಪ್ರೀಂ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಅತ್ಯಾಚಾರ ಅಪರಾಧದ ವ್ಯಾಪ್ತಿಗೆ `ಶವ ಸಂಭೋಗ’ – ಕರ್ನಾಟಕ ಸರ್ಕಾರದ ಮನವಿ ತಿರಸ್ಕರಿಸಿದ ಸುಪ್ರೀಂ

Public TV
Last updated: February 5, 2025 5:24 pm
Public TV
Share
3 Min Read
supreme Court 1
SHARE

ನವದೆಹಲಿ: ಐಪಿಸಿ ಸೆಕ್ಷನ್ 375ರ ಅಡಿಯಲ್ಲಿ ಶವ ಸಂಭೋಗ ಎಂಬುದು ಅತ್ಯಾಚಾರ ಅಪರಾಧವಾಗದು ಎಂದು ಕರ್ನಾಟಕ ಹೈಕೋರ್ಟ್
(High Court) 2023ರಲ್ಲಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ (Supreme Court)  ತಿರಸ್ಕರಿಸಿದೆ.

ನ್ಯಾ.ಸುಧಾಂಶು ಧುಲಿಯಾ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ಪೀಠವು, ಸಂಸತ್ತು ಈ ವಿಚಾರವಾಗಿ ಪರಿಶೀಲನೆ ನಡೆಸಬೇಕು. ಅಗತ್ಯವಿದ್ದರೆ ಕಾಯಿದೆಯಲ್ಲಿ ಬದಲಾವಣೆ ಮಾಡಬಹುದು. ಈ ಸಂಬಂಧ ಸರ್ಕಾರ ಸಂಸತ್ತಿಗೆ ಪತ್ರ ಬರೆಯಬಹುದು ಎಂದು ತಿಳಿಸಿದೆ.

ಪ್ರಕರಣದ ಆರೋಪಿ 21 ವರ್ಷದ ಮಹಿಳೆಯನ್ನು ಕೊಲೆ ಮಾಡಿ ನಂತರ ಮೃತದೇಹದೊಂದಿಗೆ ಸಂಭೋಗ ನಡೆಸಿದ್ದ. ವಿಚಾರಣಾ ನ್ಯಾಯಾಲಯ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಕೊಲೆ ಮತ್ತು ಐಪಿಸಿ ಸೆಕ್ಷನ್ 375ರ ಅಡಿಯಲ್ಲಿ ಅತ್ಯಾಚಾರ ಎರಡೂ ಕೃತ್ಯಗಳಿಗೆ ಶಿಕ್ಷೆ ವಿಧಿಸಿತ್ತು.ಇದನ್ನೂ ಓದಿ: ಶೀಲ ಶಂಕಿಸಿ ನಡುರಸ್ತೆಯಲ್ಲಿಯೇ 8 ಬಾರಿ ಚಾಕು – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

2023ರ ಮೇಯಲ್ಲಿ ತೀರ್ಪು ನೀಡಿದ ಹೈಕೋರ್ಟ್ ಶವ ಸಂಭೋಗ ಐಪಿಸಿ ಸೆಕ್ಷನ್ 375ರ ಅಡಿಯಲ್ಲಿ ಅತ್ಯಾಚಾರ ಎನಿಸಿಕೊಳ್ಳುವುದಿಲ್ಲ. ಅಲ್ಲದೆ ಅದು ಐಪಿಸಿ ಸೆಕ್ಷನ್ 377ರ ಅಡಿಯಲ್ಲಿ ಅಸ್ವಾಭಾವಿಕ ಲೈಂಗಿಕ ಕೃತ್ಯದ ವ್ಯಾಪ್ತಿಗೂ ಬರುವುದಿಲ್ಲ ಎಂದಿತ್ತು. ಐಪಿಸಿ ಸೆಕ್ಷನ್ 375 ಮತ್ತು 377ನ್ನು ಎಚ್ಚರಿಕೆಯಿಂದ ಓದಿದಾಗ, ಮೃತ ದೇಹವನ್ನು ಮನುಷ್ಯ ಅಥವಾ ವ್ಯಕ್ತಿ ಎಂದು ಕರೆಯಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗುತ್ತದೆ. ಆದ್ದರಿಂz, 375 ಅಥವಾ 377ನೇ ಸೆಕ್ಷನ್‌ಗಳನ್ನು ಅನ್ವಯಿಸಲಾಗುವುದಿಲ್ಲ ಎಂದು ಹೈಕೋರ್ಟ್ ವಿವರಿಸಿತ್ತು.

ಆದರೆ ಶವ ಸಂಭೋಗವನ್ನು ಅಪರಾಧ ಎಂದು ಪರಿಗಣಿಸುವುದಕ್ಕಾಗಿ ಐಪಿಸಿಯಲ್ಲಿ ಬದಲಾವಣೆಗಳನ್ನು ಮಾಡಲು ಕೇಂದ್ರ ಸರ್ಕಾರಕ್ಕೆ ಇದು ಸಕಾಲ. ಇಂತಹ ಕೃತ್ಯವನ್ನು ಅಪರಾಧೀಕರಿಸಲು ಐಪಿಸಿಯ ಸೆಕ್ಷನ್ 377 ಅನ್ನು ತಿದ್ದುಪಡಿ ಮಾಡಬೇಕು ಅಥವಾ ಪ್ರತ್ಯೇಕ ಸೆಕ್ಷನ್ ಜಾರಿಗೆ ತರಬೇಕು ಎಂತಲೂ ನ್ಯಾಯಾಲಯ ಹೇಳಿತ್ತು.

ಕೊಲೆ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಗೆ ಶಿಕ್ಷೆ ವಿಧಿಸಿತ್ತಾದರೂ ಮಹಿಳೆಯ ಮೃತ ದೇಹದ ಮೇಲೆ ಅತ್ಯಾಚಾರ ನಡೆದಿದ್ದ ಕಾರಣಕ್ಕೆ ಐಪಿಸಿ ಸೆಕ್ಷನ್ 375ರ ಅಡಿಯಲ್ಲಿ ಆರೋಪಿಯನ್ನು ಖುಲಾಸೆಗೊಳಿಸಲಾಗಿತ್ತು. ತೀರ್ಪು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

karnataka High Court

ಸರ್ಕಾರದ ಪರವಾಗಿ ಹಾಜರಾದ ವಕೀಲ ಅಮನ್ ಪನ್ವರ್, ಮೃತ ವ್ಯಕ್ತಿ ಲೈಂಗಿಕ ಕ್ರಿಯೆಗಳಿಗೆ ಒಪ್ಪಿಗೆ ನೀಡುವುದು ಸಾಧ್ಯವಿಲ್ಲದ ಕಾರಣ, ಮೃತದೇಹದ ಮೇಲಿನ ಅತ್ಯಾಚಾರವನ್ನು ಸೆಕ್ಷನ್ ವ್ಯಾಪ್ತಿಗೆ ಒಳಪಡುವಂತೆ ಅದನ್ನು ವ್ಯಾಖ್ಯಾನಿಸಬೇಕು ಎಂದು ವಾದಿಸಿದರು.

ಸೆಕ್ಷನ್ 375(ಸಿ)ನಲ್ಲಿ ಬಳಸಲಾದ `ದೇಹ’ ಎಂಬ ಪದವನ್ನು `ಮೃತ ದೇಹ’ ಎಂತಲೂ ಪರಿಗಣಿಸಬೇಕು. ಸೆಕ್ಷನ್ 375 ರ ಏಳನೇ ವಿವರಣೆಯು ಮಹಿಳೆಯು ಒಪ್ಪಿಗೆಯನ್ನು ತಿಳಿಸಲು ಸಾಧ್ಯವಾಗದಿದ್ದಾಗಲೂ ಸಹ ಅದನ್ನು ಅತ್ಯಾಚಾರವೆಂದು ಪರಿಗಣಿಸಬೇಕು ಎನ್ನುತ್ತದೆ. ಈ ವಿವರಣೆಯನ್ನು ಆಧರಿಸಿಯಾದರೂ ಮೃತ ದೇಹದ ಮೇಲಿನ ಅತ್ಯಾಚಾರವನ್ನು ಅಪರಾಧದ ವ್ಯಾಪ್ತಿಗೆ ತರಬೇಕು. ನ್ಯಾಯಾಲಯ ಸೆಕ್ಷನ್ 375ನ್ನು ಹೆಚ್ಚು ಆಳವಾಗಿ ಪರಿಗಣಿಸದೆ ಮೃತ ದೇಹದ ಮೇಲಿನ ಅತ್ಯಾಚಾರವನ್ನೂ ಒಳಗೊಳ್ಳುವಂತೆ ಉದಾರವಾಗಿ ಅರ್ಥೈಸಬೇಕು ಎಂದು ಪನ್ವರ್ ಹೇಳಿದರು. ಮೃತ ದೇಹಗಳಿಗೂ ಘನತೆ ಮತ್ತು ನ್ಯಾಯಪರತೆ ಅನ್ವಯಿಸಬೇಕು ಎಂದು ಪಂಡಿತ್ ಪರಮಾನಂದ ಕಟಾರ ಮತ್ತು ಭಾರತ ಒಕ್ಕೂಟ ನಡುವಣ ಪ್ರಕರಣಕ್ಕೆ ಸಂಬಂಧಿಸಿದಂತೆ 1995ರಲ್ಲಿ ನೀಡಿದ್ದ ತೀರ್ಪನ್ನು ಅವಲಂಬಿಸಿ ಅವರು ವಾದ ಮಂಡಿಸಿದರು.

ಶವ ಸಂಭೋಗವನ್ನು ಅತ್ಯಾಚಾರದ ವ್ಯಾಪ್ತಿಗೆ ತರುವುದಕ್ಕಾಗಿ ಪ್ರಭುತ್ವ ಮತ್ತು ಬ್ರೋಬೆಕ್ ನಡುವಣ ಪ್ರಕರಣದಲ್ಲಿ ಅಮೆರಿಕದ ಟೆನ್ನೆಸ್ಸೀ ಪ್ರಾಂತದ ಸುಪ್ರೀಂ ಕೋರ್ಟ್ ಸೇರಿದಂತೆ ಅಂತರರಾಷ್ಟ್ರೀಯ ನ್ಯಾಯಾಲಯಗಳು ದಂಡ ಸಂಹಿತೆಯ ಸೆಕ್ಷನ್‌ಗಳನ್ನು ವಿಸ್ತರಿಸಿವೆ ಎಂದು ಅವರು ಪ್ರಸ್ತಾಪಿಸಿದರು. ಆದರೂ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನ್ಯಾಯಾಲಯ ನಿರಾಕರಿಸಿತು.ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ತಾಳ್ಮೆ ಕಳೆದುಕೊಂಡಿದ್ದೇಕೆ..? – ಮಾಜಿ ಪ್ರಧಾನಿ ಚಂದ್ರಶೇಖರ್ ಪುತ್ರನಿಗೆ ಹೀಗೇಕೆ ಹೇಳಿದ್ರು?

Share This Article
Facebook Whatsapp Whatsapp Telegram
Previous Article Mallikarjun Kharge 1 ಮಲ್ಲಿಕಾರ್ಜುನ ಖರ್ಗೆ ತಾಳ್ಮೆ ಕಳೆದುಕೊಂಡಿದ್ದೇಕೆ..? – ಮಾಜಿ ಪ್ರಧಾನಿ ಚಂದ್ರಶೇಖರ್ ಪುತ್ರನಿಗೆ ಹೀಗೇಕೆ ಹೇಳಿದ್ರು?
Next Article Yadagiri Accident ಬೈಕ್‌ಗೆ ಸರ್ಕಾರಿ ಬಸ್ ಡಿಕ್ಕಿ – 3 ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಾವು

Latest Cinema News

Kantara 2
ಕಾಂತಾರ ಚಾಪ್ಟರ್‌-1 ಟ್ರೈಲರ್‌ ಲಾಂಚ್‌ಗೆ ದಿನಾಂಕ, ಸಮಯ ಫಿಕ್ಸ್‌ – ಹೊಂಬಾಳೆ ಫಿಲ್ಮ್ಸ್ಅಧಿಕೃತ ಮಾಹಿತಿ
Bengaluru City Cinema Latest Sandalwood Top Stories
mohanlal 1
ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
Cinema Latest Top Stories
Vijay
ತಮಿಳುನಾಡು | ರಾಜೀವ್ ಗಾಂಧಿ ಹಂತಕನನ್ನ ಹಾಡಿ ಹೊಗಳಿದ ದಳಪತಿ ವಿಜಯ್
Cinema Latest Main Post National
Zubeen Garg 1
ಗಾಯಕ ಜುಬೀನ್ ಗಾರ್ಗ್ ಸಾವು | ಕಾರ್ಯಕ್ರಮ ಆಯೋಜಕರ ವಿರುದ್ಧ FIR – ತನಿಖೆಗೆ ಮುಂದಾದ ಅಸ್ಸಾಂ ಸರ್ಕಾರ
Cinema Latest National Top Stories
poonam pandey 1
ರಾಮಾಯಣ ಆಧರಿತ ʻರಾಮಲೀಲಾʼದಲ್ಲಿ ಮಂಡೋದರಿ ಪಾತ್ರಕ್ಕೆ ಪೂನಂ ಪಾಂಡೆ ಆಯ್ಕೆ
Bollywood Cinema Latest Top Stories

You Might Also Like

GST 1
Bengaluru City

GST Revision | ದೇಶದ ಜನತೆಗೆ ದಸರಾ ಗಿಫ್ಟ್‌ – ನಾವು ದಿನನಿತ್ಯ ಬಳಸುವ ಯಾವ ವಸ್ತುಗಳ ಬೆಲೆ ಎಷ್ಟು ಇಳಿಕೆ?

6 hours ago
DK Shivakumar 1
Bengaluru City

ಅನುದಾನ ಪಡೆದೂ ಬಿಜೆಪಿ ಶಾಸಕರು ಏಕೆ ರಸ್ತೆ ಗುಂಡಿ ಮುಚ್ಚಿಲ್ಲ: ಡಿಕೆಶಿ ಪ್ರಶ್ನೆ

7 hours ago
Badruddin K Mani
Districts

ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

7 hours ago
Siddaramaiah 12
Bengaluru City

ಅಕ್ಟೋಬರ್‌ ಒಳಗೆ ಗುಂಡಿ ಮುಚ್ಚದಿದ್ರೆ ಚೀಫ್‌ ಎಂಜಿನಿಯರ್‌ಗಳೇ ಸಸ್ಪೆಂಡ್‌: ಸಿದ್ದರಾಮಯ್ಯ ಖಡಕ್‌ ವಾರ್ನಿಂಗ್‌

7 hours ago
SSLC Exams
Bengaluru City

SSLC, ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

8 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?