Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅರಣ್ಯ ಜಾಗವನ್ನೇ ಒತ್ತುವರಿ ಮಾಡಿದ್ರಾ ಬಿಜೆಪಿ ಶಾಸಕ? – ಪ್ರಕರಣದ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಅರಣ್ಯ ಜಾಗವನ್ನೇ ಒತ್ತುವರಿ ಮಾಡಿದ್ರಾ ಬಿಜೆಪಿ ಶಾಸಕ? – ಪ್ರಕರಣದ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್

Karnataka

ಅರಣ್ಯ ಜಾಗವನ್ನೇ ಒತ್ತುವರಿ ಮಾಡಿದ್ರಾ ಬಿಜೆಪಿ ಶಾಸಕ? – ಪ್ರಕರಣದ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್

Public TV
Last updated: January 10, 2023 8:11 pm
Public TV
Share
2 Min Read
Supreme Court 1
SHARE

ಮಡಿಕೇರಿ: ಬಹುತೇಕ ಅರಣ್ಯ ಪ್ರದೇಶದಿಂದಲೇ ಕೂಡಿರುವ ಕೊಡಗು (Kodagu) ಜಿಲೆಯಲ್ಲಿ ಸಾಕಷ್ಟು ಅರಣ್ಯ ಪ್ರದೇಶ ಒತ್ತುವರಿಯಾಗಿದೆ. ಆದರೆ ಆಳುವವರಿಂದಲೇ ಅರಣ್ಯ ಒತ್ತುವರಿಯಾಗಿದೆ ಎಂದು ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಹೀಗಾಗಿ ಪ್ರಕರಣ ಕುರಿತು ವರದಿ ನೀಡುವಂತೆ ಸುಪ್ರೀಂ ಕೋರ್ಟ್ (Supreme Court) ರಾಜ್ಯ ಸರ್ಕಾರಕ್ಕೆ (Karnataka Government) ನೋಟಿಸ್ ನೀಡಿದೆ.

ಕಾಶ್ಮೀರದಂತೆ ಕಾಣುವ ಕೊಡಗು ಜಿಲ್ಲೆ ಬಹುತೇಕ ಬೆಟ್ಟಗುಡ್ಡಗಳಿಂದಲೇ ಕೂಡಿರುವ ಪ್ರದೇಶ. ಆದರೆ ನೀವು ನೋಡುತ್ತಿರುವ ಈ ಪ್ರದೇಶ ಸದ್ಯಕ್ಕೆ ಊರಾಗಿದ್ದರೂ, ಇದು ಅರಣ್ಯ ಪ್ರದೇಶ ಎನ್ನಲಾಗುತ್ತಿದೆ. ಅದನ್ನು ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ (K.G.Bopaiah) ಸೇರಿದಂತೆ 200 ಕ್ಕೂ ಹೆಚ್ಚು ಜನರು ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿಕೊಂಡಿದ್ದಾರೆ ಎಂದು ಕಾವೇರಿ ಸೇನೆಯ ಮುಖಂಡ ರವಿ ಚಂಗಪ್ಪ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಇದನ್ನೂ ಓದಿ: Top Performing Airports 2022 – ವಿಶ್ವದಲ್ಲೇ ಬೆಂಗಳೂರು ನಂ.2

MDK BOPAIAH

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರಿದ್ದ ಪೀಠ, ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನೊಟೀಸ್ ನೀಡಿದೆ. ಮಡಿಕೇರಿ ತಾಲ್ಲೂಕಿನ ಕರ್ಣಂಗೇರಿ ಗ್ರಾಮದ ಸರ್ವೇ ನಂಬರ್ 289/7 ರಲ್ಲಿ ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಸೇರಿದಂತೆ 200 ಜನರು ಅಕ್ರಮವಾಗಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿಕೊಂಡಿದ್ದಾರೆ ಎಂದು ದೂರಲಾಗಿದೆ.

ಈ ಸಂಬಂಧ 2018 ರಲ್ಲಿ ಕಾವೇರಿ ಸೇನೆಯ ರವಿಚಂಗಪ್ಪ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದ ವೇಳೆ ವಕೀಲರು ಸರಿಯಾಗಿ ಕೋರ್ಟಿಗೆ ಹಾಜರಾಗದ ಹಿನ್ನೆಲೆಯಲ್ಲಿ ಪ್ರಕರಣವನ್ನು ವಜಾ ಮಾಡಲಾಗಿತ್ತು. ಶಾಸಕ ಕೆ.ಜಿ. ಬೋಪಯ್ಯ ಅವರು 2009 ರಲ್ಲಿಯೇ ಮನೆ ನಿರ್ಮಿಸಿಕೊಂಡಿದ್ದಾರೆ. ಬಳಿಕ ರವಿಚಂಗಪ್ಪ 2018 ರಲ್ಲಿ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಾಹಿತಿ ಕೇಳಿದಾಗ, ಕಚೇರಿಯಿಂದ ತಾಂತ್ರಿಕ ಅಭಿಪ್ರಾಯ ನೀಡಿಲ್ಲ ಎಂದು ವರದಿ ನೀಡಿದೆ. ಇದೇ ವರ್ಷದಲ್ಲಿಯೇ ಮನೆ ನಿರ್ಮಿಸುವುದಕ್ಕೆ ಭೂಪರಿವರ್ತನೆಗೆ ಅವಕಾಶ ನೀಡಿರುವ ಬಗ್ಗೆ ನಗರಸಭೆಯಲ್ಲಿ ಮಾಹಿತಿ ಕೇಳಿದಾಗಲೂ ಯಾವುದೇ ಮಾಹಿತಿ ಇಲ್ಲ ಎಂದು ವರದಿ ನೀಡಿದೆ. ಆದರೂ ಕೆ.ಜಿ. ಬೋಪಯ್ಯ ಅವರು ಮನೆ ನಿರ್ಮಿಸಿರುವುದು ಅಕ್ರಮ ಎಂದು ರವಿಚಂಗಪ್ಪ ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಹೈಕಮಾಂಡ್ ಟಾರ್ಗೆಟ್ ಸಿದ್ದರಾಮಯ್ಯ – ಒಂದೇ ಏಟಿಗೆ ಎರಡು ಹಕ್ಕಿ ಹೊಡೆಯುವ ತಂತ್ರ?

ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಕೆ.ಜಿ. ಬೋಪಯ್ಯ, 1933 ರಲ್ಲಿಯೇ ಆ ಜಾಗ ಡೀನೋಟಿಫೈ ಆಗಿದ್ದು, ಅದಕ್ಕೆ ಕಂದಾಯ ಎಲ್ಲವನ್ನು ಕಟ್ಟಲಾಗಿದೆ. ವಿಠ್ಠಲ ಪೊನ್ನಪ್ಪ ಎಂಬವರಿಂದ ಜಾಗವನ್ನು ನಾನು ಖರೀದಿಸಿ ಇತ್ತೀಚೆಗೆ ಮನೆ ಕಟ್ಟಿಕೊಂಡಿದ್ದೇನೆ. ಆದರೆ ಚುನಾವಣೆ ಸಂದರ್ಭದಲ್ಲಿ ನನ್ನ ವರ್ಚಸ್ಸಿಗೆ ಧಕ್ಕೆ ತರುವುದಕ್ಕಾಗಿಯೇ ಹೀಗೆ ಪ್ರಕರಣ ದಾಖಲಿಸಲಾಗುತ್ತಿದೆ. 2018 ರಲ್ಲಿಯೂ ಇದೇ ರೀತಿ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ ಪ್ರಕರಣವನ್ನು ವಜಾಗೊಳಿಸಿತು. ಇದೀಗ ಮತ್ತೆ ಚುನಾವಣೆ ಹತ್ತಿರ ಬರುತ್ತಿರುವುದರಿಂದ ನನ್ನ ವಿರುದ್ಧ ಸುಪ್ರೀಂ ಕೋರ್ಟಿಗೆ ಹೋಗಿದ್ದಾರೆ. ಸುಳ್ಳು ಪ್ರಕರಣ ದಾಖಲಿಸುತ್ತಿರುವ ಇವರ ವಿರುದ್ಧ ನಾನು ಮಾನನಷ್ಟ ಕೇಸ್ ಹೂಡುತ್ತೇನೆ ಎಂದು ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:encroachmentForest landK G BopaiahmadikeriSupreme Courtಒತ್ತುವರಿಕೆ.ಜಿ ಬೋಪಯ್ಯಬಿಜೆಪಿಮಡಿಕೇರಿಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
1 hour ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
1 hour ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
2 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
2 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
2 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?