Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಯೋಧ್ಯೆ ರಾಮನಿಗೆ ಸಿಗಲು ‘ಸ್ಕಂದ’ ಕಾರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಯೋಧ್ಯೆ ರಾಮನಿಗೆ ಸಿಗಲು ‘ಸ್ಕಂದ’ ಕಾರಣ

Latest

ಅಯೋಧ್ಯೆ ರಾಮನಿಗೆ ಸಿಗಲು ‘ಸ್ಕಂದ’ ಕಾರಣ

Public TV
Last updated: November 10, 2019 8:01 pm
Public TV
Share
3 Min Read
Ayodhya Rama Temple 8
SHARE

– ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದು ಎಲ್ಲಿ?
– ವಾಲ್ಮೀಕಿ ರಾಮಾಯಣದಲ್ಲಿ ಜಾಗದ ಬಗ್ಗೆ ಉಲ್ಲೇಖ ಇಲ್ಲ
– ಸ್ಕಂದ ಪುರಾಣದ ಶ್ಲೋಕಕ್ಕೂ ಸ್ಥಳಕ್ಕೆ ತಾಳೆ

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದಾನೆ ಎನ್ನುವುದು ಹಿಂದೂಗಳ ನಂಬಿಕೆ. ಆದರೆ ಅಯೋಧ್ಯೆಯಲ್ಲಿ ಹುಟ್ಟಿದ್ದು ಎಲ್ಲಿ ಎನ್ನುವ ಪ್ರಶ್ನೆಗೆ ಸುಪ್ರೀಂ ಕೋರ್ಟ್ ಸ್ಕಂದ ಪುರಾಣದಲ್ಲಿ ಉತ್ತರ ಕಂಡುಕೊಂಡಿದೆ.

ಹೌದು, 1045 ಪುಟಗಳ ಸುದೀರ್ಘ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಪುರಾತತ್ವ ಇಲಾಖೆಯ ಸಾಕ್ಷ್ಯಗಳು, ಬ್ರಿಟಿಷ್ ಮತ್ತು ಭಾರತ ಸರ್ಕಾರದ ಗೆಜೆಟ್‍ಗಳು, ವಿದೇಶಿ ವ್ಯಕ್ತಿಗಳು ಬರೆದ ಗ್ರಂಥಗಳು, ಮೌಖಿಕ ಹೇಳಿಕೆಯ ಜೊತೆಗೆ ಸ್ಕಂದ ಪುರಾಣವನ್ನು ಉಲ್ಲೇಖಿಸಿದೆ.

ayodhya skanda purana

40 ದಿನಗಳ ದೀರ್ಘ ವಿಚಾರಣೆಯ ಸಮಯದಲ್ಲಿ ರಾಮ ಅಯೋಧ್ಯೆಯಲ್ಲಿ ಹುಟ್ಟಿಲ್ಲ ಎಂದು ಸುನ್ನಿ ವಕ್ಫ್ ಬೋರ್ಡ್ ವಾದ ಮಂಡಿಸಿರಲಿಲ್ಲ. 2.77 ಎಕ್ರೆ ವಿವಾದಿತ ಜಾಗದಲ್ಲಿ ರಾಮ ಜನಿಸಿರಲಿಲ್ಲ. ಅಲ್ಲಿ ದೇವಾಲಯ ಕೆಡವಿ ಮಸೀದಿ ನಿರ್ಮಾಣಗೊಂಡಿಲ್ಲ ಎನ್ನುವುದಷ್ಟೇ ಅವರ ವಾದವಾಗಿತ್ತು. ಆದರೆ ರಾಮಲಲ್ಲಾ ಪರ ವಾದ ಮಂಡಿಸಿದ ವಕೀಲರು ವಿವಾದಿತ ಸ್ಥಳದಲ್ಲೇ ರಾಮ ಜನಿಸಿದ್ದ. ಹೀಗಾಗಿ ಈ ಜಾಗ ನಮಗೆ ನೀಡಬೇಕು ಎಂದು ವಾದಿಸಿದ್ದರು.  ಇದನ್ನೂ ಓದಿ: ಅಂದು ಹೇಳಿದಾಗ ಟೀಕೆ ಬಂದಿತ್ತು, ಇಂದು ನನ್ನ ಸಾಕ್ಷ್ಯ ಆಧಾರಿಸಿ ತೀರ್ಪು ಬಂದಿದೆ- ಕೆ.ಕೆ.ಮೊಹಮ್ಮದ್ ಸಂತಸ

ಪುರಾತತ್ವ ಇಲಾಖೆ ಹಿಂದೂ ದೇವಾಲಯ ಕೆಡವಿ ಮಸೀದಿ ನಿರ್ಮಾಣವಾಗಿದೆ. ಹಿಂದೂ ದೇವಾಲಯಗಳಲ್ಲಿ ಬಳಸುವ ಕಲ್ಲು, ಪ್ರಾಣಿಗಳು ಸಿಕ್ಕಿವೆ ಎಂದು ಆಧಾರ ನೀಡಿದರೂ ವಿವಾದಿತ ಜಾಗದಲ್ಲೇ ರಾಮ ಜನಿಸಿದ್ದಾನೆ ಎನ್ನುವುದಕ್ಕೆ ಆಧಾರ ಸಿಗದ ಕಾರಣ ಪ್ರಕರಣ ಜಟಿಲವಾಗಿತ್ತು. ಅಷ್ಟೇ ಅಲ್ಲದೇ ವಿವಾದಿತ ಸ್ಥಳದಲ್ಲಿ ರಾಮ ಜನಿಸಿಲ್ಲ ಎನ್ನುವುದು ಸುನ್ನಿ ವಕ್ಫ್ ಬೋರ್ಡ್ ವಾದವಾಗಿದ್ದರಿಂದ ಹಾಗಾದರೆ ರಾಮ ಜನಿಸಿದ್ದು ಎಲ್ಲಿ ಎನ್ನುವ ಕಠಿಣ ಪ್ರಶ್ನೆ ಎದ್ದಿತ್ತು.

Ayodhya Rama Temple 1

 

ಅಯೋಧ್ಯೆಯಲ್ಲಿ ರಾಮ ಜನಿಸಿಯೇ ಇಲ್ಲ ಎಂದು ವಾದಿಸಿದ್ದರೆ ಪ್ರಕರಣ ಬೇರೆ ರೀತಿಯ ತಿರುವು ಪಡೆದುಕೊಳ್ಳುತಿತ್ತು. ಆದರೆ ಇಲ್ಲಿ ವಿವಾದಿತ ಸ್ಥಳದಲ್ಲಿ ರಾಮ ಜನಿಸಿಲ್ಲ ಎನ್ನುವ ವಾದಕ್ಕೆ ಮಾತ್ರ ಆಕ್ಷೇಪ ಇದ್ದ ಕಾರಣ ರಾಮ ಅಯೋಧ್ಯೆಯಲ್ಲೇ ಜನಿಸಿದ್ದ ಎನ್ನುವ ಅಂಶ ದೃಢವಾಯಿತು.

ಈಗ ವಿವಾದಕ್ಕೆ ಕಾರಣವಾಗಿರುವ ಜಾಗದಲ್ಲೇ ರಾಮ ಹುಟ್ಟಿದ್ದಾನೆ ಎಂದು ತಿಳಿದುಕೊಳ್ಳುವುದು ಹೇಗೆ? ಈ ಎರಡನೇ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ನ್ಯಾಯಾಧೀಶರು ವಾಲ್ಮೀಕಿ ರಾಮಾಯಣ ಮತ್ತು ಸ್ಕಂದ ಪುರಾಣದ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ರಕ್ತದಲ್ಲಿ ಬರೆದು ಸುಪ್ರೀಂ ತೀರ್ಪು ಸ್ವಾಗತಿಸಿದ ಮುಸ್ಲಿಂ ವ್ಯಕ್ತಿ

Ayodhya Judge 1

ರಾಮಾಯಣದ ಮೂಲ ಕೃತಿಯಾದ ವಾಲ್ಮೀಕಿ ರಾಮಾಯಣದ 10ನೇ ಶ್ಲೋಕದಲ್ಲಿ ಕೌಸಲ್ಯೆಯು ಮಗನೊಬ್ಬನಿಗೆ ಜನ್ಮ ನೀಡಿದ್ದಳು. ರಾಮನ ಆಗಮನದಿಂದ ಅಯೋಧ್ಯೆ ಪಾವನಗೊಂಡಿತು. ಮುಂದೆ ಆತ ವಿಶ್ವಕ್ಕೆ ದೇವರಾದ ಎನ್ನುವ ಉಲ್ಲೇಖವಿದೆ. ರಾಮ ಅಯೋಧ್ಯೆಯಲ್ಲಿ ಜನಿಸಿದ್ದಾನೆ ಎನ್ನುವುದಕ್ಕೆ ಉಲ್ಲೇಖ ಇದ್ದರೂ ವಾಲ್ಮೀಖಿ ರಾಮಾಯಣದಲ್ಲಿ ವಿವಾದಿತ ಜಾಗದಲ್ಲೇ ರಾಮ ಜನಿಸಿದ್ದ ಎನ್ನುವುದಕ್ಕೆ ಯಾವುದೇ ದಾಖಲೆಗಳಿರಲಿಲ್ಲ. ಹೀಗಾಗಿ ನ್ಯಾಯಾಧೀಶರು ಸ್ಕಂದ ಪುರಾಣವನ್ನು ಅಧ್ಯಯನ ಮಾಡಿದ್ದಾರೆ.

ಸ್ಕಂದ ಪುರಾಣದಲ್ಲಿರುವ ವೈಷ್ಣವಕಾಂಡದಲ್ಲಿ ಅಯೋಧ್ಯಾ ಮಹಾತ್ಮ ಅಧ್ಯಾಯದಲ್ಲಿ ರಾಮನ ಜನ್ಮಸ್ಥಾನದ ಉಲ್ಲೇಖದ ಬಗ್ಗೆ ಶ್ಲೋಕವಿದೆ. ಈ ಶ್ಲೋಕದ ಪ್ರಕಾರ ಇಲ್ಲಿಂದ ಈಶಾನ್ಯ ದಿಕ್ಕಿನಲ್ಲಿರುವ ಜಾಗವೇ ರಾಮಜನ್ಮ ಸ್ಥಾನ. ಮೋಕ್ಷ ಸ್ಥಾನವಾಗಿರುವ ಈ ಸ್ಥಳವು ವಿಘ್ನೇಶ್ವರದ ಪೂರ್ವ ದಿಕ್ಕಿನಲ್ಲಿದ್ದು, ವಶಿಷ್ಠದ ಉತ್ತರ ದಿಕ್ಕಿನಲ್ಲಿದೆ ಲಾವ್ಮಾಸಾ ಆಶ್ರಮದ ಪಶ್ಚಿಮ ದಿಕ್ಕಿನಲ್ಲಿದೆ ಎಂದು ಹೇಳುತ್ತದೆ.

ayodhya skanda purana 2

 

ಈ ಶ್ಲೋಕದಲ್ಲಿ ತಿಳಿಸಿದ ಅಂಶ ರಾಮಲಲ್ಲಾ ಕಡೆಯವರ ವಾದಕ್ಕೂ ತಾಳೆಯಾಗುತ್ತದೆಯೇ ಎನ್ನುವುದನ್ನು ಕೋರ್ಟ್ ಅಧ್ಯಯನ ಮಾಡಿದೆ. ಈ ಶ್ಲೋಕದಲ್ಲಿರುವ ಸ್ಥಳಗಳು ವಿವಾದಿತ ಪ್ರದೇಶದಲ್ಲಿರುವ ಸ್ಥಳಗಳಿಗೂ ತಾಳೆಯಾಗುತ್ತಾ ಎನ್ನುವುದನ್ನು ಪರಿಶೀಲಿಸಿದಾಗ, ಶ್ಲೋಕದಲ್ಲಿ ಉಲ್ಲೇಖಿಸಿರುವ ದಿಕ್ಕಿನಲ್ಲಿಯೇ ರಾಮಮಂದಿರವಿದ್ದು ಈಗಲೂ ಈ ಸ್ಥಳಗಳು ಇವೆ. ನಾವು ಈ ಸ್ಥಳಕ್ಕೆ ಭೇಟಿ ನೀಡಿದ್ದೇವೆ ಎನ್ನುವುದನ್ನು ಹಲವು ವ್ಯಕ್ತಿಗಳು ಮೌಖಿಕ ಸಾಕ್ಷ್ಯ ನುಡಿದಿದ್ದಾರೆ ಎಂದು ಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.

ಸ್ಕಂದ ಪುರಾಣದ ಆಧಾರ ಮತ್ತು ಖಾಲಿ ಜಾಗದಲ್ಲಿ ಮಸೀದಿ ನಿರ್ಮಾಣವಾಗಿಲ್ಲ. ಹಿಂದೂ ದೇವಾಲಯವನ್ನು ಕೆಡವಿ ಮಸೀದಿ ನಿರ್ಮಾಣವಾಗಿದೆ ಎನ್ನುವ ಭಾರತೀಯ ಪುರಾತತ್ವ ಇಲಾಖೆ ಸಾಕ್ಷ್ಯಗಳನ್ನು ಗಂಭೀರ ಪರಿಗಣಿಸಿದ ಕೋರ್ಟ್ ಅಂತಿಮವಾಗಿ ವಿವಾದಿತ 2.77 ಎಕ್ರೆ ಜಾಗ ರಾಮಲಲ್ಲಾಗೆ ಸೇರಬೇಕೆಂದು ಷರಾ ಬರೆದು ವಿವಾದವಾಗಿದ್ದ ಪ್ರಕರಣಕ್ಕೆ ಪೂರ್ಣ ವಿ’ರಾಮ’ ಹಾಕಿದೆ.

TAGGED:Ayodhyakannada newsRama TempleSkanda PuranaSuprme Courtಅಯೋಧ್ಯೆಅಯೋಧ್ಯೆ ಪ್ರಕರಣಬಾಬ್ರಿ ಮಸೀದಿರಾಮ ಮಂದಿರರಾಮಲಲ್ಲಾಸ್ಕಂದ ಪುರಾಣಹಿಂದೂ ದೇವಾಲಯ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

zameer ahmed students
Bellary

ಸ್ವಂತ ಖರ್ಚಿನಲ್ಲಿ ಸರ್ಕಾರಿ ಶಾಲಾ ಮಕ್ಕಳನ್ನ ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಿದ ಸಚಿವ ಜಮೀರ್

Public TV
By Public TV
2 minutes ago
Hampi Utsava
Bellary

ಹಂಪಿ ಉತ್ಸವದಲ್ಲಿ ಫಲ, ಪುಷ್ಪ ಪ್ರದರ್ಶನ – ಹೂವಲ್ಲೇ ವಿಜಯನಗರ ಸಾಮ್ರಾಜ್ಯದ ಗತವೈಭವ ಸೃಷ್ಟಿ

Public TV
By Public TV
12 minutes ago
Hassan Lady Missing
Crime

ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ – ಚಿನ್ನಾಭರಣಕ್ಕಾಗಿ ಕೊಲೆ ಶಂಕೆ

Public TV
By Public TV
25 minutes ago
Anti India Terror Accused
Latest

ಭಾರತ ವಿರೋಧಿ ಭಯೋತ್ಪಾದನಾ ಆರೋಪಿಗಳಿಗೆ ಬಾಂಗ್ಲಾ ಚುನಾವಣೆಯಲ್ಲಿ ಗೆಲುವು

Public TV
By Public TV
32 minutes ago
Basanagouda Patil Yatnal
Bengaluru City

ಚುನಾವಣೆಯಲ್ಲಿ ಅಕ್ರಮ ಆರೋಪ – ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
39 minutes ago
Mumbai metro
Crime

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿತ – ಓರ್ವ ಸಾವು, ಮೂವರು ಗಂಭೀರ

Public TV
By Public TV
50 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?