Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಗದಿತ ದಿನ ಆರಂಭ ಅನುಮಾನ – ಈ ವರ್ಷ ಶಾಲಾ ಪಠ್ಯಗಳ ಕಡಿತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿಗದಿತ ದಿನ ಆರಂಭ ಅನುಮಾನ – ಈ ವರ್ಷ ಶಾಲಾ ಪಠ್ಯಗಳ ಕಡಿತ

Bengaluru City

ನಿಗದಿತ ದಿನ ಆರಂಭ ಅನುಮಾನ – ಈ ವರ್ಷ ಶಾಲಾ ಪಠ್ಯಗಳ ಕಡಿತ

Public TV
Last updated: May 7, 2020 5:49 pm
Public TV
Share
3 Min Read
SURESH KUMAR 7
SHARE

– ಹೆಚ್ಚುವರಿ ಪಠ್ಯ ಗುರುತಿಸಲು ಸೂಚನೆ
– ಹಿರಿಯ ಅಧಿಕಾರಿಗಳ ಜೊತೆ ಸುರೇಶ್ ಕುಮಾರ್ ಸಭೆ

ಬೆಂಗಳೂರು: ಕೋವಿಡ್ ನಿಂದಾಗಿ ನಿಗದಿತ ದಿನಾಂಕಕ್ಕೆ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಸಾಧ್ಯತೆಗಳು ಕಡಿಮೆ ಇದ್ದು, ಅದಕ್ಕೆ ಸರಿಹೊಂದುವಂತೆ ಶೈಕ್ಷಣಿಕ ವರ್ಷವನ್ನು ಸರಿದೂಗಿಸಬೇಕಾದ ಅಗತ್ಯವಿರುವುದರಿಂದ ಶಾಲಾ ಶೈಕ್ಷಣಿಕ ಪಠ್ಯವನ್ನು ಆ ಅವಧಿಗೆ ತಕ್ಕಂತೆ ರೂಪಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗುರುವಾರ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಚರ್ಚಿಸಿದ ಸಚಿವರು ಈ ಶೈಕ್ಷಣಿಕ ಸಾಲಿನ ಪ್ರಾರಂಭದ ಬಗ್ಗೆ ಈ ಹಂತದಲ್ಲಿ ನಿರ್ಣಯಿಸಲು ಸಾಧ್ಯವಾಗದ ಕಾರಣ 1ರಿಂದ 10ನೇ ತರಗತಿ ಹಾಗೂ ಪದವಿ ಪೂರ್ವ ಶಿಕ್ಷಣದ ಪಠ್ಯಕ್ರಮದಲ್ಲಿ ಹೆಚ್ಚುವರಿ ಎನ್ನುವ ಪಠ್ಯವನ್ನು ಗುರುತಿಸುವ ಪ್ರಯತ್ನಕ್ಕೆ ಕೂಡಲೇ ಚಾಲನೆ ನೀಡಬೇಕೆಂದರು.

Private School Students

ಶೈಕ್ಷಣಿಕ ವರ್ಷದಲ್ಲಿ ಕಳೆದುಕೊಳ್ಳುವ ಅವಧಿಯ ಆಧಾರದ ಮೇಲೆ ಮಕ್ಕಳ ಕಲಿಕೆಗೆ ಹೊರೆಯಾಗದ ರೀತಿಯಲ್ಲಿ ಅನವಶ್ಯಕ ಪುನರಾವರ್ತಿತವಾದ ಪಠ್ಯವನ್ನು ಕೈಬಿಡಬೇಕು. ಅತ್ಯಾವಶ್ಯಕವಾದ ಪಠ್ಯವನ್ನು ಉಳಿಸಿಕೊಳ್ಳಲು ಕ್ರಿಯಾ ಯೋಜನೆಯನ್ನು ಕೂಡಲೇ ಸಿದ್ಧಪಡಿಸಬೇಕು. ಕೊರೊನಾ ಹಿನ್ನೆಲೆಯಲ್ಲಿ ಶೈಕ್ಷಣಿಕ ವರ್ಷದಲ್ಲಿ ಕಡಿತವಾಗಬಹುದಾದ ಅವಧಿಯ ಆಧಾರದಲ್ಲಿ ಪ್ರತಿ ತರಗತಿ ಹಾಗೂ ಪ್ರತಿ ವಿಷಯಕ್ಕೆ ಸಂಬಂಧಿಸಿದಂತೆ 15 ದಿನಗಳ, 1 ತಿಂಗಳ, ಒಂದುವರೆ ತಿಂಗಳ, 2 ತಿಂಗಳ ಹಂತವಾರು ಹೆಚ್ಚುವರಿಯಾಗಬಹುದಾದ ಪಠ್ಯಗಳನ್ನುಗುರುತಿಸಿ ಅವುಗಳನ್ನು ಕೈಬಿಡುವ ಬಗ್ಗೆ ವಿಸ್ತ್ರತ ವರದಿ ತಯಾರಿಸಬೇಕೆಂದು ಸಚಿವರು ಸೂಚಿಸಿದರು.

ಕೋವಿಡ್ ಕುರಿತ ಪಠ್ಯಕ್ರಮ ಜಾರಿ: ಇದೇ ಶೈಕ್ಷಣಿಕ ಸಾಲಿನಿಂದ ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಸಾಮಾಜಿಕ ಹೊಂದಾಣಿಕೆಗಳ ಬಗ್ಗೆ ಪಠ್ಯವನ್ನು ಎಲ್ಲ ತರಗತಿಗಳಿಗೆ ಬೋಧಿಸುವಲ್ಲಿ ಕೂಡಲೇ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದ ಸಚಿವರು, ಕೋವಿಡ್-19 ಕುರಿತಂತೆ ಆಯಾ ವಯೋಮಾನದ ವಿದ್ಯಾರ್ಥಿಗಳಿಗೆ ಆಕರ್ಷಣೀಯವಾಗುವ ರೀತಿಯಲ್ಲಿ ಕಿರುಪಠ್ಯ ರಚನೆ ಮಾಡಿ ಶಾಲೆಗಳಿಗೆ ಪೂರೈಸುವುದರ ಜೊತೆಗೆ ಶಿಕ್ಷಕರ ತರಬೇತಿ ಪಠ್ಯಕ್ರಮದಲ್ಲಿಯೂ ಈ ಕುರಿತಾದ ಅಂಶಗಳನ್ನು ಅಳವಡಿಸಿಕೊಳ್ಳಬೇಕು ಎಂದರು. ಇದು ಪಠ್ಯಕ್ರಮದ ಒಂದು ಭಾಗವಾಗಿ ಕಡ್ಡಾಯವಾಗಿ ಕಲಿಯಬೇಕಾದ ವಿಷಯವಾಗಿರುವಂತೆ ಕಟ್ಟುನಿಟ್ಟಾಗಿ ಅನುಷ್ಠಾನವಾಗುವಂತೆ ನೋಡಿಕೊಳ್ಳಬೇಕು ಎಂದು ಸಹ ಅವರು ಸೂಚಿಸಿದರು.

school

ಯೂ-ಟ್ಯೂಬ್ ಚಾನೆಲ್ ಬೋಧನೆ: ಮಕ್ಕಳವಾಣಿ ಯೂ-ಟ್ಯೂಬ್ ಚಾನೆಲ್ ಇಡೀ ರಾಷ್ಟ್ರದ ಗಮನ ಸೆಳೆದಿದ್ದು, ಮಾಹಿತಿ ತಂತ್ರಜ್ಞಾನಾಧಾರಿತವಾದ ಬೋಧನೆಯನ್ನೂ ಸಹ ನಾವು ಪೂರಕ ಕಲಿಕೆಯಾಗಿ ಅಳವಡಿಸಿಕೊಳ್ಳಬೇಕಾದ ಅನಿವಾರ್ಯತೆ ಇರುವ ಹಿನ್ನೆಲೆಯಲ್ಲಿ 1ರಿಂದ 10ನೇ ತರಗತಿವರೆಗೆ ವಿಷಯವಾರು, ಅಧ್ಯಾಯವಾರು ಆಂಗ್ಲ ಮತ್ತು ಕನ್ನಡ ಮಾಧ್ಯಮಗಳ ಬೋಧನೆಯನ್ನು ಉತ್ತಮ ಶಿಕ್ಷಕರನ್ನು ಆಯ್ಕೆ ಮಾಡಿ ಚಿತ್ರೀಕರಿಸಿ ಯೂ-ಟ್ಯೂಬ್ ಚಾನೆಲ್ ನಲ್ಲಿ ಶಾಶ್ವತವಾಗಿ ಲಭ್ಯವಿರುವಂತೆ ಮಾಡಲು ಸುರೇಶ್ ಕುಮಾರ್ ಸೂಚನೆ ನೀಡಿದರು.

ಅಂತೆಯೇ ಸಾಮಾಜಿಕ ಅಂತರ ನಮ್ಮ ಬದುಕಿನ ಸಹಜ ರೀತಿಯಾಗುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿ ಅಂತರವನ್ನು ಕಾಯ್ದುಕೊಳ್ಳುವ ರೀತಿಯ ಕಲಿಕಾ ವಾತಾವರಣ ಕಲ್ಪಿಸುವ ಜವಾಬ್ದಾರಿ ಶಿಕ್ಷಣ ಇಲಾಖೆಯದ್ದಾಗಿದ್ದು, ಪರ್ಯಾಯ ಮಾರ್ಗಗಳ ಕುರಿತಂತೆ ಕೂಡಲೇ ಕ್ರಿಯಾ ಯೋಜನೆ ಸಿದ್ಧಪಡಿಸಲೂ ಸಹ ಸಚಿವರು ಸೂಚಸಿದರು.

train school 2

ಇಂತಹ ಸಂದರ್ಭದಲ್ಲಿ ಪೋಷಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಶಾಲೆಗಳ ಕಲಿಕಾ ವಾತಾವರಣದ ಕುರಿತಂತೆ ಭರವಸೆಯನ್ನು ಮೂಡಿಸುವುದು ಶಿಕ್ಷಣ ಇಲಾಖೆಯ ಪ್ರಥಮ ಆದ್ಯತೆಯಾಗಬೇಕಿದ್ದು, ಈ ಕುರಿತಂತೆ ಶಿಕ್ಷಕರಿಗೆ ತರಬೇತಿ ನೀಡಿಕೆ ಮತ್ತು ಸಂವೇದನೆಗೊಳಿಸುವ ಅಭಿಯಾನವನ್ನು ಕೈಗೆತ್ತಿಕೊಳ್ಳಬೇಕು. ಆರ್ ಟಿ ಇ ಅಡಿಯ ನಿರಂತರ ಕಲಿಕಾ ಮೌಲ್ಯಮಾಪನದ ಆಶಯವನ್ನು ಸಮಗ್ರವಾಗಿ ಅನುಷ್ಠಾನಗೊಳಿಸುವಲ್ಲಿ ಇಂದಿನ ಪರಿಸ್ಥಿತಿಯನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಅವರು ಹೇಳಿದರು.

ಕೋವಿಡ್ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳ ಕುರಿತಂತೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯ ಕ್ರಮಗಳ ಬಗ್ಗೆ ಅಧ್ಯಯನ ಮಾಡಿ ತಮಗೆ ವರದಿ ಸಲ್ಲಿಸಬೇಕೆಂದು ಸೂಚನೆ ನೀಡಿದ ಸಚಿವರು, ತಂತ್ರಜ್ಞಾನ ಬಳಕೆ ದೃಷ್ಟಿಯಿಂದ ಸರ್ಕಾರದ ಮಾಹಿತಿ ತಂತ್ರಜ್ಞಾನ ವೇದಿಕೆಗಳನ್ನು ಸೂಕ್ತರೀತಿಯಲ್ಲಿ ಬಳಸಿಕೊಂಡು ನೀತಿ ನಿರೂಪಣೆಗೆ ಕ್ರಮ ವಹಿಸಲು ಸೂಚನೆ ನೀಡಿದರು.

sslc exam 2

ಟಿಇಟಿ ಪರೀಕ್ಷಾ ದಿನಾಂಕ ನಿಗದಿಗೊಳಿಸಿ:
ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಣೆಯಾದ ಕೂಡಲೇ ಟಿಇಟಿ ಪರೀಕ್ಷಾ ದಿನಾಂಕವನ್ನು ಪ್ರಕಟಿಸಬೇಕೆಂದು ಸೂಚನೆ ನೀಡಿದ ಸಚಿವರು, ಮುಂದಿನ ದಿನಗಳಲ್ಲಿ ಈ ಪರೀಕ್ಷೆಯನ್ನು ಆನ್ ಲೈನ್ ಮೂಲಕ ನಿರ್ವಹಣೆ ಮಾಡುವಲ್ಲಿಪೂರ್ವ ಸಿದ್ಧತಾ ಕ್ರಮಗಳನ್ನು ಪ್ರಾರಂಭಿಸಲು ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ಕಳೆದ ವಿಧಾನಮಂಡಲದ ಅಧಿವೇಶನದಲ್ಲಿ ಅನುಮೋದನೆಗೊಂಡ ವರ್ಗಾವಣಾ ಕಾಯ್ದೆಯ ನಿಯಮಗಳನ್ನು ಶೀಘ್ರ ರೂಪಿಸಿ ವರ್ಗಾವಣಾ ವೇಳಾಪಟ್ಟಿ ಪ್ರಕಟಿಸಲು ನಿರ್ದೇಶನ ನೀಡಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಆರ್. ಉಮಾಶಂಕರ್, ಆಯುಕ್ತ ಡಾ. ಕೆ.ಜೆ. ಜಗದೀಶ್, ಎಸ್‍ಎಸ್ ಕೆ ಯೋಜನಾ ನಿರ್ದೇಶಕ ಡಾ. ಎಂ.ಟಿ. ರೇಜು, ಪಿಯು ಇಲಾಖೆ ನಿರ್ದೇಶಕಿ ಕನಗವಲ್ಲಿಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

TAGGED:bengaluruPublic TVschoolstudentssuresh kumarsyllabusಪಠ್ಯಕ್ರಮಪಬ್ಲಿಕ್ ಟಿವಿಬೆಂಗಳೂರುವಿದ್ಯಾರ್ಥಿಗಳುಶಾಲೆಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

krishna river 200361 960 720
Latest

ಕೃಷ್ಣಾ ನದಿಯಲ್ಲಿ ಕುರಿಗಾಹಿ ಮೇಲೆ ಮೊಸಳೆ ದಾಳಿ – ಬಲಗೈ ಕಟ್‌

Public TV
By Public TV
17 minutes ago
Vinay Kulkarni 1 1
Bengaluru City

ಸೆಲ್‌ ಒಳಗೆ ಹೋಗ್ತಿದ್ದಂತೆ ಕಣ್ಣೀರು – ಪರಪ್ಪನ ಅಗ್ರಹಾರ ಜೈಲಲ್ಲಿ ಇಡೀ ರಾತ್ರಿ ನಿದ್ದೆ ಮಾಡದ ಕುಲಕರ್ಣಿ

Public TV
By Public TV
46 minutes ago
pm modi mann ki baat
Latest

ಮಹಿಳೆಯರನ್ನು ಗೌರವಿಸುವುದು ದೇಶವನ್ನೇ ಗೌರವಿಸಿದಂತೆ: ಮಹಿಳಾ ಮೀಸಲಾತಿ ಕಾನೂನು ಶ್ಲಾಘಿಸಿದ ಮೋದಿ

Public TV
By Public TV
1 hour ago
DK Shivakumar
Bengaluru City

ಕುರ್ಚಿ ಆಸೆಗಾಗಿ ಡಿಕೆಶಿ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, ಸಂಚು ರೂಪಿಸಿ ಮುಗಿಸುತ್ತಿದ್ದಾರೆ: ಜೆಡಿಎಸ್ ಕಿಡಿ

Public TV
By Public TV
2 hours ago
Russian firms india
Latest

ರಷ್ಯಾ, ಇರಾನ್‌ ತೈಲ ಖರೀದಿಗೆ ಭಾರತಕ್ಕೆ ಅವಕಾಶ ನೀಡುವ ವಿನಾಯಿತಿಯಲ್ಲಿ ಬದಲಾವಣೆ ಮಾಡಲ್ಲ: ಅಮೆರಿಕ

Public TV
By Public TV
2 hours ago
Raichuru Accident 1
Districts

ಮಂತ್ರಾಲಯ ಬಳಿ ಭೀಕರ ಅಪಘಾತ – ಮೂರು ವರ್ಷದ ಮಗು ಸೇರಿ 8 ಜನ ದುರ್ಮರಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?