– ಪಹಲ್ಗಾಮ್ ದಾಳಿಯ ಶಂಕಿತ ಆದಿಲ್ ಹುಸೇನ್ ಮನೆ ಧ್ವಂಸ; ಕುಟುಂಬಸ್ಥರು ಕಣ್ಣೀರು
ಶ್ರೀನಗರ: ನಾವು ನೆಮ್ಮದಿಯಿಂದ ಬದುಕಬೇಕು.. ನೀನು ಬಂದು ಶರಣಾಗು ಎಂದು ಪುತ್ರ ಉಗ್ರನಿಗೆ ಆತನ ತಾಯಿ ಮನವಿ ಮಾಡಿಕೊಂಡಿದ್ದಾರೆ.
ಪಹಲ್ಗಾಮ್ ದಾಳಿ (Pahalgam Terror Attack) ಬೆನ್ನಲ್ಲೇ ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ. ಹಲವರು ಶಂಕಿತ ಉಗ್ರರನ್ನು ಬಂಧಿಸಿದ್ದು, ಭಯೋತ್ಪಾದಕರ ಮನೆಗಳನ್ನು ನೆಲಸಮ ಮಾಡಲಾಗುತ್ತಿದೆ. ಉಗ್ರ ಆದಿಲ್ ಹುಸೇನ್ ಥೋಕರ್ ಮನೆ ಕೂಡ ಧ್ವಂಸ ಮಾಡಲಾಗಿದೆ. ಇದನ್ನೂ ಓದಿ: ಉಗ್ರರ ದಾಳಿಯಲ್ಲಿ ಅನೇಕರ ಜೀವ ಉಳಿಸಿದ ನನ್ನ ಪತಿಗೆ ‘ಹುತಾತ್ಮ’ ಸ್ಥಾನಮಾನ ಕೊಡಿ: ಸಂತ್ರಸ್ತೆ ಒತ್ತಾಯ
ಭದ್ರತಾ ಪಡೆಗಳು ಸ್ಫೋಟಕ ಬಳಸಿ ಮನೆ ಧ್ವಂಸ ಮಾಡಿವೆ. ಹಿಂದೊಮ್ಮೆ ಉಗ್ರ ಆದಿಲ್ ಊಟ ಮಾಡಲು ಬಂದಿದ್ದ ಸ್ಥಳವನ್ನು ಆತ ತಾಯಿ ಶಹಜಾದಾ ಬಾನೊ, ಭದ್ರತಾ ಪಡೆ ಸಿಬ್ಬಂದಿಗೆ ತೋರಿಸಿದ್ದಾರೆ.
ಸೈನಿಕರು ಅನಂತನಾಗ್ ಜಿಲ್ಲೆಯಲ್ಲಿನ ಕುಟುಂಬದ ಮನೆಯನ್ನು ಧ್ವಂಸಗೊಳಿಸಿದ್ದಾರೆ. ಬಾನೊ ಅವರನ್ನು ಪಕ್ಕದ ಹಳ್ಳಿಯಲ್ಲಿರುವ ಸಂಬಂಧಿಕರ ಮನೆಗೆ ಶಿಫ್ಟ್ ಮಾಡಿದ್ದಾರೆ. ಒಂದು ಕಾಲದಲ್ಲಿ ಭರವಸೆಯ ವಿದ್ಯಾರ್ಥಿಯಾಗಿದ್ದ ಆದಿಲ್, ಮಂಗಳವಾರ ಪಹಲ್ಗಾಮ್ನಲ್ಲಿ ನಡೆದ ದಾಳಿಯ ಪ್ರಮುಖ ಶಂಕಿತರಲ್ಲಿ ಒಬ್ಬನಾಗಿದ್ದಾನೆ. 2018 ರಿಂದ ಅವನೊಂದಿಗೆ ಯಾವುದೇ ಸಂಪರ್ಕವಿಲ್ಲ ಎಂದು ಆತನ ಕುಟುಂಬ ಹೇಳಿಕೊಂಡಿದೆ. ಇದನ್ನೂ ಓದಿ: ಜಮ್ಮು ಕಾಶ್ಮೀರ | ಉಗ್ರರ ಗುಂಡೇಟಿಗೆ ಸಾಮಾಜಿಕ ಕಾರ್ಯಕರ್ತ ಬಲಿ
ನನ್ನ ಮಗ ಈ ಹತ್ಯೆಗಳಲ್ಲಿ ಭಾಗಿಯಾಗಿಲ್ಲ. ಒಂದು ವೇಳೆ ಭಾಗಿಯಾಗಿದ್ದರೆ, ಅವನಿಗೆ ಸೈನಿಕರು ತಕ್ಕ ಶಿಕ್ಷೆ ಕೊಡಲಿ ಎಂದು ಆದಿಲ್ನ ತಾಯಿ ಶಹಜಾದಾ ಬಾನೊ ಕಣ್ಣೀರಿಟ್ಟಿದ್ದಾರೆ. ಈ ವೇಳೆ ಪುತ್ರನಿಗೆ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ‘ನಾವು ನೆಮ್ಮದಿಯಿಂದ ಬದುಕಬೇಕು. ನೀನು ಬಂದು ಶರಣಾಗು’ ಎಂದು ಪುತ್ರನಿಗೆ ಕೇಳಿಕೊಂಡಿದ್ದಾರೆ.
ಆದಿಲ್ ತಂದೆ ವಲೀಮ್, ಸಹೋದರರಾದ ಜಹೀರ್ ಮತ್ತು ಅರ್ಶ್ಲಾಮ್ ಮತ್ತು ಸೋದರಸಂಬಂಧಿಗಳಾದ ಜುಲಂಕರ್ ಮತ್ತು ಸಜ್ಜದ್ ಎಲ್ಲರೂ ಬಂಧನದಲ್ಲಿದ್ದಾರೆ. ಅವರ ತಾಯಿಯನ್ನು ಒಂದು ದಿನದ ಮಟ್ಟಿಗೆ ವಶಕ್ಕೆ ಪಡೆಯಲಾಗಿತ್ತು. ಇದನ್ನೂ ಓದಿ: ಧರ್ಮ ಕೇಳಿ ಉಗ್ರರಿಂದ ದಾಳಿ – ಬೇಸತ್ತು ಇಸ್ಲಾಂ ತ್ಯಜಿಸಿದ ಶಿಕ್ಷಕ