Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಪಿಲೇಶ್ವರ ಮಂದಿರ ಕೆಡವಿ ಏನು ಕಟ್ಟಿದ್ದಾರೆ ಎಂಬ ಬಗ್ಗೆಯೂ ಸರ್ವೇ ಆಗಲಿ: ಲತೀಫ್‍ಖಾನ್ ಹೊಸ ಬಾಂಬ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಕಪಿಲೇಶ್ವರ ಮಂದಿರ ಕೆಡವಿ ಏನು ಕಟ್ಟಿದ್ದಾರೆ ಎಂಬ ಬಗ್ಗೆಯೂ ಸರ್ವೇ ಆಗಲಿ: ಲತೀಫ್‍ಖಾನ್ ಹೊಸ ಬಾಂಬ್

Belgaum

ಕಪಿಲೇಶ್ವರ ಮಂದಿರ ಕೆಡವಿ ಏನು ಕಟ್ಟಿದ್ದಾರೆ ಎಂಬ ಬಗ್ಗೆಯೂ ಸರ್ವೇ ಆಗಲಿ: ಲತೀಫ್‍ಖಾನ್ ಹೊಸ ಬಾಂಬ್

Public TV
Last updated: May 31, 2022 10:08 am
Public TV
Share
3 Min Read
Lateef Khan
SHARE

ಬೆಳಗಾವಿ: ದಕ್ಷಿಣ ಕಾಶಿ ಎಂದು ನಮ್ಮ ಬೆಳಗಾವಿಯ ಕಪಿಲೇಶ್ವರ ಮಂದಿರಕ್ಕೆ ಪ್ರತೀತಿ ಇದೆ. ಅಷ್ಟು ದೊಡ್ಡ ದೇವಾಲಯ ಒಂದು ಸಣ್ಣ ದೇವಾಲಯವಾಗಿ ಉಳಿಯಲು ಕಾರಣವೇನು? ಆ ದೇವಸ್ಥಾನ ಕೆಡವಿ ಏನು ಕಟ್ಟಿದರು ಎಂದು ಎಂಐಎಂ ಪಕ್ಷದ ಮುಖಂಡ ಲತೀಫ್‍ಖಾನ್ ಪಠಾಣ ಹೊಸ ಬಾಂಬ್ ಸಿಡಿಸಿದರು.

ಮಾಧ್ಯಮಗಳ ಜೊತೆಗೆ ಮಾತನಾಡಿದ ಲತೀಫ್‍ಖಾನ್ ಪಠಾಣ ಅವರು, ಈಗಾಗಲೇ ಸಾಕಷ್ಟು ಬಾರಿ ನಾನು ಹೇಳಿದ್ದೇನೆ. 25-30 ವರ್ಷಕ್ಕಿಂತ ಮೊದಲು ಆರ್‌ಎಸ್‍ಎಸ್‍ನವರು ಇಡೀ ಭಾರತದಲ್ಲಿ ಈ ರೀತಿ ಸೂಕ್ಷ್ಮ ಪ್ರದೇಶಗಳ ಬಗ್ಗೆ ಬಹಳಷ್ಟು ಅಧ್ಯಯನ ಮಾಡಿದ್ದಾರೆ. ಯಾವ ಸಂದರ್ಭದಲ್ಲಿ ಯಾವ ವಿಷಯವನ್ನು ಮುನ್ನೆಲೆಗೆ ತರಬೇಕು. ಜನರ ದಾರಿ ತಪ್ಪಿಸಬೇಕು ಎಂಬುದು ಅವರ ಹಿಡನ್ ಅಜೆಂಡಾ ಆಗಿದೆ. ಆ ಪ್ರಕಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಸೆ.15ವರೆಗೆ ಪದ್ಮ ಪ್ರಶಸ್ತಿ ನಾಮನಿರ್ದೇಶನ ಮಾಡಿ 

rss

ಹಿರಿಯರು ಹೇಳಿದ್ದನ್ನು ಕೇಳಿದ್ದೇನೆ ಎಂದು ಅಭಯ್ ಪಾಟೀಲ್ ಹೇಳುತ್ತಾರೆ. ನಾನು ಕೂಡ ಹಿರಿಯರು ಹೇಳಿದಂತೆ ಹೇಳುತ್ತಿದ್ದೇನೆ. ದಕ್ಷಿಣ ಕಾಶಿ ಎಂದು ಕರೆಯುವ ಕಪಿಲೇಶ್ವರ ಮಂದಿರ ಎಂಬ ಮಾತಿದೆ. ಅಷ್ಟು ದೊಡ್ಡ ದೇವಾಲಯ ಒಂದು ಸಣ್ಣ ದೇವಾಲಯವಾಗಿ ಉಳಿಯಲು ಕಾರಣ ಏನು? ಆ ದೇವಸ್ಥಾನ ಕೆಡವಿ ಏನು ಕಟ್ಟಿದರು ಎಂದು ಪ್ರಶ್ನಿಸಿದರು.

1,300 ವರ್ಷಗಳ ಹಿಂದಿನ ಬೆಳಗಾವಿಯ ಕೋಟೆಯನ್ನು ಒಮ್ಮೆ ಸರ್ವೇ ಮಾಡಿಸಬೇಕು. ಯಾವ ಸಮುದಾಯದವರು ಅದನ್ನು ಕೆಡವಿದ್ದಾರೆ ಎನ್ನುವುದನ್ನು ಸರ್ವೇ ಮಾಡಬೇಕು. ದಕ್ಷಿಣ ಕಾಶಿ ಎಂದು ಕರೆಯುವ ಕಪಿಲೇಶ್ವರ ಮಂದಿರ ಕೆಡವಿ ಕೋಟೆ ಕೊಟ್ಟಿದ್ದಾರೆ. ಸಾಕಷ್ಟು ರಾಜ ಮನೆತನಗಳು ಈ ಭಾಗವನ್ನು ಆಳಿದ್ದಾರೆ. ಅದನ್ನು ಯಾರು ಕೆಡವಿದರು ಎಂಬುದು ತನಿಖೆ ಆಗಲಿ ಎಂದು ಆಗ್ರಹಿಸಿದರು.

Kapileshwar Temple Belgaum,Places To Visit In Kapileshwar Temple,Things To Do in Kapileshwar Temple

ಕೊರೊನಾ ಸಂದರ್ಭದಲ್ಲಿ ಔಷಧಿ, ಆಕ್ಸಿಜನ್ ಪೂರೈಕೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ದೇಶದಲ್ಲಿ ಸಾಕಷ್ಟು ನಿರುದ್ಯೋಗ ಸಮಸ್ಯೆಯಿದೆ. 2023-24 ಚುನಾವಣೆಯಲ್ಲಿ ಜನರಿಗೆ ಏನು ಹೇಳಬೇಕು ಎಂಬುದು ಬಗ್ಗೆ ಅವರಿಗೆ ತಿಳಿದಿಲ್ಲ. ಹೀಗಾಗಿ ಜಾತಿ ಗದ್ದಲ ಎಬ್ಬಿಸಿದ್ರೆ ನಾವು ಇದರಿಂದ ಉಳಿದುಕೊಳ್ಳಬಹುದು ಎಂದು ತಿಳಿದುಕೊಂಡಿದ್ದಾರೆ ಎಂದು ಕಿಡಿಕಾರಿದರು.

Kapileshwar Temple Belagavi 1

91ರ ಕಾನೂನು ಪ್ರಕಾರ ಹಳೆಯ ಆರಾಧನಾ ಕಟ್ಟಡಗಳು ಯಥಾಸ್ಥಿತಿಯಲ್ಲಿ ಇರಬೇಕು ಎಂಬ ಕಾನೂನು ಇದೆ. ಆದರೆ ಇದೆಲ್ಲ ಇದ್ದರೂ ಕೂಡ ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡುತ್ತಿದ್ದಾರೆ. ಸರ್ವೋಚ್ಛ ನ್ಯಾಯಾಲಯ ಯಾವ ರೀತಿ ನಿರ್ಣಯ ಕೊಡುತ್ತೋ ಅದಕ್ಕೆ ನಾವು ಬದ್ಧ. ಅದೇ ರೀತಿ ಅಯೋಧ್ಯೆ ತೀರ್ಪನ್ನು ಯಾವುದೇ ಗಲಭೆ ಇಲ್ಲದೇ ನಾವು ಒಪ್ಪಿಕೊಂಡಿದ್ದೇವೆ. ಇಷ್ಟಕ್ಕೆ ನಾವು ಸುಮ್ಮನಿದ್ದೇವೆ ಎಂದು ತಿಳಿದುಕೊಂಡು ಅದನ್ನೇ ಮುಂದುವರಿಸುತ್ತಿದ್ದಾರೆ ಎಂದು ಎಚ್ಚರಿಕೆ ಕೊಟ್ಟರು.

Kapileshwar Temple Belagavi

ಈ ದೇಶವನ್ನು ಹಿಂದೂ ರಾಷ್ಟ್ರ ಮಾಡುತ್ತೇವೆ ಎನ್ನುವುದು ಸಂವಿಧಾನ ವಿರೋಧವೇ?ಇದು ಕೊರೊನಾಗಿಂತ ದೊಡ್ಡ ಭಯಾನಕ ರೋಗವಾಗಿದೆ. ಕೊರೊನಾ ರೋಗಕ್ಕೆ ಜಗತ್ತಿನ ಎಲ್ಲ ವೈದ್ಯರು ಬೆನ್ನು ಹತ್ತಿ ಔಷಧಿ ಕಂಡುಹಿಡಿದರು. ಆದರೆ, ಈ ರೋಗಕ್ಕೆ ಔಷಧಿ ಕಂಡುಹಿಡಿಯುವವರು ಮಾನಸಿಕ ರೋಗಿಗಳಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

Kapileshwar Temple Belagavi 2

3 ಸಾವಿರ ವರ್ಷಗಳ ಹಿಂದೆ ನೋಡಿದ್ರೆ ಬೇರೆ-ಬೇರೆ ಧರ್ಮಗಳು, ಇನ್ನೊಂದು ಧರ್ಮಗಳ ಮೇಲೆ ದಾಳಿ ಮಾಡಿ ತಮ್ಮ ಧರ್ಮಗಳನ್ನು ಪ್ರಚಾರ ಮಾಡಿದ್ದಾರೆ. ಈಗ 700-800 ವರ್ಷಗಳ ಹಳೆಯ ವಿಚಾರಗಳನ್ನು ಎತ್ತಿಕೊಂಡು ಈಗಿನ ವಾತಾವರಣ ಹದಗೆಡಿಸುವ ಕೆಲಸ ಮಾಡಲಾಗುತ್ತಿದೆ. ಇದು ಯಾರಿಗೂ ಹಿತಕರ ಬೆಳವಣಿಗೆ ಅಲ್ಲ ಎಂದು ಎಚ್ಚರಿಸಿದರು. ಇದನ್ನೂ ಓದಿ: ಮೊದಲ ಪ್ರಯತ್ನದಲ್ಲಿ UPSC ಪರೀಕ್ಷೆಯಲ್ಲಿ ಉತ್ತೀರ್ಣ

ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳಿಗೆ ಬೆಳಗಾವಿ ಒಂದು ಕೇಂದ್ರ ಸ್ಥಳವಾಗಿದೆ. ಆದರೂ ಇಲ್ಲಿ ಯಾವ ವ್ಯಾಪಾರಿಗಳು ಇಲ್ಲಿ ಹೂಡಿಕೆ ಮಾಡಲು ಬರುತ್ತಿಲ್ಲ. ಇಂತಹ ವಿವಾದಗಳನ್ನು ಸೃಷ್ಟಿ ಮಾಡಿ ತಮ್ಮದೇಯಾದ ರಾಜಕೀಯ ಮಾಡುತ್ತಿದ್ದಾರೆ. ಇದು ರಾಜಕೀಯಕ್ಕೆ ಸಿಮೀತವಾಗಿದೆ. ಜನರ ಮನಸ್ಸಿನಲ್ಲಿ ಇದು ಯಾವುದೂ ಇಲ್ಲ. ಇದನ್ನು ಬಿಟ್ಟು 2023-24ರ ಚುನಾವಣೆ ಗೆಲ್ಲಲು ಇವರಿಗೆ ಸಾಧ್ಯವಿಲ್ಲ ಎಂದು ಆರೋಪಿಸಿದರು.

TAGGED:BelgaumKapileshwar TempleLateef Khanಕಪಿಲೇಶ್ವರ ಮಂದಿರಬೆಳಗಾವಿಲತೀಫ್‍ಖಾನ್
Share This Article
Facebook Whatsapp Whatsapp Telegram

Cinema news

45 movie ramesh reddy
ಪೈರಸಿ ವಿರುದ್ಧ ’45’ ಸಿನಿಮಾದ ನಿರ್ಮಾಪಕ ರಮೇಶ್ ರೆಡ್ಡಿ ಆಕ್ರೋಶ
Cinema Latest Sandalwood Top Stories
Rashmika Mandanna Christmas
ವಿದೇಶದಿಂದಲೇ ವಿಶ್ ಮಾಡಿದ ರಶ್! – ಫೋಟೋ ಕೃಪೆ ವಿಜಯ್?
Cinema Latest South cinema Top Stories
Surya Movie
`ಸೂರ್ಯ’ ಸಿನಿಮಾ ಟ್ರೈಲರ್ ರಿಲೀಸ್ : ಸಾಗರ್ ನಿರ್ದೇಶನದ ಸಿನಿಮಾ
Cinema Karnataka Latest Sandalwood Top Stories
Dhruva Sarja Prem KD Ravichandran
ಅಣ್ತಮ್ಮ ಜೋಡೆತ್ತು ಕಣೋ ಹಾಡಿನ ಜೊತೆ ಕೆಡಿ ಸಿನಿಮಾ ರಿಲೀಸ್ ಡೇಟ್ ಔಟ್‌
Cinema Latest Sandalwood Top Stories

You Might Also Like

Blackbuck
Chikkamagaluru

ಕೃಷ್ಣಮೃಗ ಬೇಟೆ ಪ್ರಕರಣ – 7 ದಿನದೊಳಗೆ ವರದಿ ಸಲ್ಲಿಸುವಂತೆ ಸಚಿವ ಖಂಡ್ರೆ ಸೂಚನೆ

Public TV
By Public TV
12 minutes ago
bengaluru park
Bengaluru City

ಹೊಸ ವರ್ಷ ಸಂಭ್ರಮಾಚರಣೆ ದಿನ ಬೆಂಗಳೂರಿನಲ್ಲಿ ಪಾರ್ಕ್‌ಗಳು ಬಂದ್‌

Public TV
By Public TV
35 minutes ago
Tipper collision Four people travelling on the same bike died on the spot Chikkaballpura
Chikkaballapur

ಒಂದೇ ಬೈಕಿನಲ್ಲಿದ್ದ ನಾಲ್ವರು ಬಲಿ – ರಾಜ್ಯ ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ

Public TV
By Public TV
42 minutes ago
Banakal PSI fined by Police Board for private car
Chikkamagaluru

ಖಾಸಗಿ ಕಾರಿಗೆ ಪೊಲೀಸ್ ಬೋರ್ಡ್ – ಪೊಲೀಸರಿಗೆ ದಂಡ ವಿಧಿಸಿದ ಬಣಕಲ್ ಪಿಎಸ್‌ಐ 

Public TV
By Public TV
52 minutes ago
Mandya Mining
Crime

ಮಂಡ್ಯ | ಗಣಿಗಾರಿಕೆ ಪ್ರಪಾತಕ್ಕೆ ಬಿದ್ದ ಟಿಪ್ಪರ್ – ಚಾಲಕ‌ ಸಾವು

Public TV
By Public TV
1 hour ago
PM Rashtriya Bal Puruskar Shravan Singh
Latest

ಆಪರೇಷನ್‌ ಸಿಂಧೂರ್ ಸಮಯದಲ್ಲಿ ಸೈನ್ಯಕ್ಕೆ ನೆರವು – 10ರ ಬಾಲಕ ಶ್ರವಣ್ ಸಿಂಗ್‌ಗೆ ಪಿಎಂ ರಾಷ್ಟ್ರೀಯ ಬಾಲ ಪುರಸ್ಕಾರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?