ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ (Sushant Singh Rajput) ಅವರ ಸಾವು ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಅವರನ್ನು ಇಬ್ಬರು ವ್ಯಕ್ತಿಗಳು ಕೊಂದಿದ್ದಾರೆ ಎಂದು ಸುಶಾಂತ್ ಸಹೋದರಿ ಶ್ವೇತಾಸಿಂಗ್ (Shweta Singh Kirti) ಹೇಳಿದ್ದಾರೆ.
ಖಾಸಗಿ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಅಮೆರಿಕ ಮತ್ತು ಮುಂಬೈನ ಇಬ್ಬರು ಮನಶಾಸ್ತ್ರಜ್ಞರು ನನ್ನನ್ನು ಸಂಪರ್ಕಿಸಿ, ಸುಶಾಂತ್ ಅವರ ಸಾವಿನ ಹಿಂದೆ ಸಂಚು ಇದೆ ಎಂದು ಹೇಳಿದ್ದಾರೆ. ಅವನು ಆತ್ಮಹತ್ಯೆ ಮಾಡಿಕೊಂಡಿಲ್ಲ ಎನ್ನುವುದಕ್ಕೆ ಹಲವು ಸಾಕ್ಷ್ಯಗಳಿವೆ. ಅವನು ನೇಣು ಹಾಕಿಕೊಳ್ಳಲು ಫ್ಯಾನ್ ಮತ್ತು ಹಾಸಿಗೆಯ ಮಧ್ಯೆ ಅಷ್ಟು ಅಂತರವೇ ಇರಲಿಲ್ಲ. ಅಲ್ಲಿ ಸ್ಟೂಲ್ ಕೂಡ ಇರಲಿಲ್ಲ. ಹಾಗಾದರೆ ಆತ್ಮಹತ್ಯೆ ಮಾಡಿಕೊಳ್ಳಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.ಇದನ್ನೂ ಓದಿ: ಬಾಕ್ಸಾಫೀಸ್ನಲ್ಲಿ ಹ್ಯಾಟ್ರಿಕ್ ಶತಕ ಸಿಡಿಸಿದ ಡ್ಯೂಡ್ ಖ್ಯಾತಿಯ ಪ್ರದೀಪ್ ರಂಗನಾಥನ್
ಇನ್ನೂ ಸುಶಾಂತ್ ಕುತ್ತಿಗೆಯ ಮೇಲಿದ್ದ ಗುರುತುಗಳು ಬಟ್ಟೆಯಿಂದ ಮೂಡಿದಂತಿರಲಿಲ್ಲ, ಬದಲಾಗಿ ಸರಪಳಿಯಂತಿದ್ದವು. ಈ ಒಂದು ಸಾಕ್ಷಿಯಿಂದಲೇ ಅವನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುವುದನ್ನು ನಾನು ನಂಬಲಿಲ್ಲ. ನನ್ನನ್ನು ಸಂಪರ್ಕಿಸಿದ ಇಬ್ಬರು ಮನಶ್ಶಾಸ್ತ್ರಜ್ಞರು ಕೂಡ ಸುಶಾಂತ್ಗೆ ಪರಿಚಯವಿರಲಿಲ್ಲ. ಆದರೆ ಇಬ್ಬರೂ ಹೇಳಿದ್ದು ಒಂದೇ ಸುಶಾಂತ್ನ್ನು ಇಬ್ಬರು ವ್ಯಕ್ತಿಗಳು ಕೊಂದಿದ್ದಾರೆ ಎಂದು ತಿಳಿಸಿದ್ದಾರೆ.
ಸುಶಾಂತ್ ಅನ್ನು ಭಾವನಾತ್ಮಕವಾಗಿ ಮತ್ತು ಮಾನಸಿಕವಾಗಿ ಕುಗ್ಗಿಸಲು ಪ್ರಯತ್ನ ಮಾಡಲಾಗಿದೆ. ನನ್ನ ಸಹೋದರ ಎಲ್ಲ ವಿಷಯದಲ್ಲಿಯೂ ಮುಂದೆ ಇದ್ದ. ಬಾಲಿವುಡ್ನಲ್ಲಿಯೂ ವೇಗವಾಗಿ ಎತ್ತರಕ್ಕೆ ಬೆಳೆದ. ಅದನ್ನು ಎಲ್ಲರಿಗೂ ಸಹಿಸಲಾಗಲಿಲ್ಲ, ಹೀಗಾಗಿ ಇದೆಲ್ಲವನ್ನು ನಿಲ್ಲಿಸಲು ಯಾರೋ ಸಂಚು ರೂಪಿಸಿದ್ದರು ಎಂದಿದ್ದಾರೆ.
ಇತ್ತೀಚಿಗೆ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಕೇಸಲ್ಲಿ ಗೆಳತಿ-ನಟಿ ರಿಯಾ ಚಕ್ರವರ್ತಿಗೆ ಸಿಬಿಐ ಕ್ಲೀನ್ಚಿಟ್ ಕೊಟ್ಟಿತ್ತು. 6 ದಿನಗಳ ಮೊದಲೇ ರಿಯಾ ಅಪಾರ್ಟ್ಮೆಂಟ್ನಿಂದ ಹೊರಟಿದ್ದರು. ಹಣಕಾಸಿನ ಯಾವುದೇ ಅವ್ಯವಹಾರ ನಡೆದಿಲ್ಲ. ಆತ್ಮಹತ್ಯೆಗೆ ಪ್ರಚೋದಿಸುವಂತದ್ದು ಏನೂ ನಡೆದಿಲ್ಲ ಎಂದು ಸಿಬಿಐ ವರದಿಯಲ್ಲಿ ತಿಳಿಸಿತ್ತು.ಇದನ್ನೂ ಓದಿ: 70ರ ದಶಕಕ್ಕೆ ಮರಳಿದ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾ
 


 
		 
		 
		 
		 
		
 
		 
		 
		 
		