Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಷ್ಮಾಗೆ ಚಿಕಿತ್ಸೆ ಕೊಡಲು ವೈದ್ಯರು ತಯಾರಿರಲಿಲ್ಲ- ಸತ್ಯಾಂಶ ಬಿಚ್ಚಿಟ್ಟ ಪತಿ ಕೌಶಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸುಷ್ಮಾಗೆ ಚಿಕಿತ್ಸೆ ಕೊಡಲು ವೈದ್ಯರು ತಯಾರಿರಲಿಲ್ಲ- ಸತ್ಯಾಂಶ ಬಿಚ್ಚಿಟ್ಟ ಪತಿ ಕೌಶಲ್

Latest

ಸುಷ್ಮಾಗೆ ಚಿಕಿತ್ಸೆ ಕೊಡಲು ವೈದ್ಯರು ತಯಾರಿರಲಿಲ್ಲ- ಸತ್ಯಾಂಶ ಬಿಚ್ಚಿಟ್ಟ ಪತಿ ಕೌಶಲ್

Public TV
Last updated: November 5, 2019 5:35 pm
Public TV
Share
2 Min Read
sushma swaraj 1
SHARE

ನವದೆಹಲಿ: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಚಿಕಿತ್ಸೆ ಕೊಡಲು ಏಮ್ಸ್ ವೈದ್ಯರು ತಯಾರಿರಲಿಲ್ಲ. ಕೊನೆಗೆ ಒತ್ತಾಯದ ಮೇರೆಗೆ ಚಿಕಿತ್ಸೆ ಕೊಟ್ಟರು ಎಂದು ಸುಷ್ಮಾ ಅವರು ನಿಧನರಾಗುವ ಮುನ್ನ ಮಾಡಲಾಗಿದ್ದ ಶಸ್ತ್ರಚಿಕಿತ್ಸೆ ಬಗ್ಗೆ ಪತಿ ಸ್ವರಾಜ್ ಕೌಶಲ್ ಸತ್ಯಾಂಶ ಬಿಚ್ಚಿಟ್ಟಿದ್ದಾರೆ.

sushma swaraj e1572955341589

ಸುಷ್ಮಾ ಸ್ವರಾಜ್ ಅವರ ಪತಿ ಸ್ವರಾಜ್ ಕೌಶಲ್ ಅವರು ಸರಣಿ ಟ್ವೀಟ್ ಮಾಡಿ, ಪತ್ನಿಯ ಶಸ್ತ್ರಚಿಕಿತ್ಸೆ ಹಾಗೂ ಏಮ್ಸ್ ವೈದ್ಯರ ಬಗ್ಗೆ ತಿಳಿಸಿದ್ದಾರೆ. ಸುಷ್ಮಾ ನಿಧನ ಹೊಂದುವ ಮುನ್ನ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ವೇಳೆ ಏಮ್ಸ್ ವೈದ್ಯರು ಸುಷ್ಮಾಗೆ ಶಸ್ತ್ರಚಿಕಿತ್ಸೆ ಮಾಡಲು ತಯಾರಿರಲಿಲ್ಲ. ನೀವು ವಿದೇಶದಲ್ಲಿ ಕಿಡ್ನಿ ಕಸಿ ಮಾಡಿಸಿ ಎಂದು ಸಲಹೆ ನೀಡಿದ್ದರು. ಆದರೆ ಸುಷ್ಮಾ ಅದಕ್ಕೆ ಒಪ್ಪದೆ ಭಾರತದಲ್ಲೇ ನನಗೆ ಶಸ್ತ್ರಚಿಕಿತ್ಸೆ ನಡೆಯಬೇಕು ಎಂದು ಬಯಸಿದ್ದರು. ಜನರು ನಮ್ಮ ದೇಶದ ವೈದ್ಯರ ಮೇಲೆ ಬಹಳ ನಂಬಿಕೆ ಇಟ್ಟಿದ್ದಾರೆ. ಒಂದು ವೇಳೆ ನಾನು ನಮ್ಮ ವೈದ್ಯರನ್ನೇ ನಂಬದೆ ವಿದೇಶಕ್ಕೆ ಹೋಗಿ ಚಿಕಿತ್ಸೆ ಪಡೆದರೆ ಜನರ ನಂಬಿಕೆಗೆ ಧಕ್ಕೆ ಉಂಟಾಗುತ್ತೆ. ಹೀಗಾಗಿ ನಮ್ಮ ವೈದ್ಯರೇ ನನಗೆ ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ಹೇಳಿದ್ದರು ಅಂತ ಪತ್ನಿ ದೇಶದ ಮೇಲಿಟ್ಟಿರುವ ಪ್ರೀತಿಯನ್ನು ತಿಳಿಸಿದ್ದಾರೆ. ಇದನ್ನೂ ಓದಿ:  ಸುಷ್ಮಾ ಸ್ವರಾಜ್ ಪ್ರೇಮ್ ಕಹಾನಿ – ಸ್ನೇಹಿತರು ಸತಿ, ಪತಿಗಳಾದ ಕಥೆ ಓದಿ

https://twitter.com/governorswaraj/status/1191434693402644483

ಏಮ್ಸ್ ವೈದ್ಯರು ತಮಗೆ ಯಾವಾಗ ಶಸ್ತ್ರಚಿಕಿತ್ಸೆ ಮಾಡಬೇಕು ಎನ್ನುವುದನ್ನು ಸುಷ್ಮಾನೇ ನಿರ್ಧರಿಸಿದ್ದರು. ವಿದೇಶದಲ್ಲಿ ಚಿಕಿತ್ಸೆ ಪಡೆಯುವುದನ್ನು ನಿರಾಕರಿಸಿ, ಭಾರತದಲ್ಲೇ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ನೀವು ಕೇವಲ ಶಸ್ತ್ರಚಿಕಿತ್ಸೆಗೆ ಬೇಕಾಗುವ ಉಪಕರಣಗಳನ್ನು ಹಿಡಿದು ನಿಲ್ಲಿ, ಉಳಿದದ್ದೆಲ್ಲಾ ಆ ಕೃಷ್ಣ ನೋಡಿಕೊಳ್ಳುತ್ತಾನೆ ಎಂದು ಸುಷ್ಮಾ ಸ್ವರಾಜ್ ವೈದ್ಯರಿಗೆ ಧೈರ್ಯ ತುಂಬಿದ್ದರು ಅಂತ ಕೌಶಲ್ ಟ್ವೀಟ್‌ನಲ್ಲಿ ಬರೆದು ಪತ್ನಿ ಮಾತುಗಳನ್ನು ನೆನಪಿಸಿಕೊಂಡಿದ್ದಾರೆ.

https://twitter.com/governorswaraj/status/1191436597255966721

ಶಸ್ತ್ರಚಿಕಿತ್ಸೆ ನಡೆದ ಮರುದಿನವೇ ಸುಷ್ಮಾ ಕುರ್ಚಿಯಲ್ಲಿ ಕೂತು ಖುಷಿಯಿಂದ ಏಮ್ಸ್ ವೈದ್ಯರನ್ನು ಹೊಗಳಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಗೊಳಿಸುವಲ್ಲಿ ವೈದ್ಯರು ಪಟ್ಟ ಶ್ರಮವನ್ನು ಶ್ಲಾಘಿಸಿದರು. ಹಾಗೂ ಅಲ್ಲಿನ ಸಿಬ್ಬಂದಿ ವರ್ಗಕ್ಕೂ ಅಭಿನಂದನೆ ತಿಳಿಸಿದ್ದರು. ಏಮ್ಸ್ ವೈದ್ಯರು ಜಗತ್ತಿನ ಬೆಸ್ಟ್ ವೈದ್ಯರು ಎಂದು ಹೊಗಿಳಿದ್ದನ್ನು ನೆನೆದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

https://twitter.com/governorswaraj/status/1191450268027772929

ಹಾಗೆಯೇ ಸುಷ್ಮಾ ಸ್ವರಾಜ್ ಅನಾರೋಗ್ಯದಿಂದ ಬಳಲುತ್ತಿದ್ದಾಗ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಸಹಾಯ ಮರೆಯಲು ಸಾಧ್ಯವಿಲ್ಲ. ಸುಷ್ಮಾ ಅವರು ಧೈರ್ಯ ತುಂಬುತ್ತಿದ್ದ ರೀತಿ, ವೈದ್ಯರ ಜೊತೆ ನಿರಂತರ ಸಂಪರ್ಕದಲ್ಲಿದ್ದು ಸುಷ್ಮಾ ಅವರ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದ ಪರಿ ಹಾಗೂ ನಮಗೂ ಧೈರ್ಯ ಹೇಳಿದ್ದನ್ನು ನಾನು ಹಾಗೂ ಬನ್ಸುರಿ ಎಂದಿಗೂ ಮರೆಯಲ್ಲ. ಅವರಿಗೆ ನಾವು ಚಿರಋಣಿ ಎಂದು ಮೋದಿಗೆ ಧನ್ಯವಾದ ತಿಳಿಸಿದರು.

https://twitter.com/governorswaraj/status/1191563447516979200

ಆಗಸ್ಟ್ 6ರಂದು ಸುಷ್ಮಾ ಸ್ವರಾಜ್ ಅವರು ನಿಧರಾದರು. ಏಮ್ಸ್ ಆಸ್ಪತ್ರೆಯಲ್ಲಿಯೇ ತಮ್ಮ ಕೊನೆಯುಸಿರೆಳೆದಿದ್ದರು. ಸುಷ್ಮಾ ಅವರ ಅಗಲಿಕೆಯಿಂದ ದೇಶಕ್ಕೆ ಹಾಗೂ ಬಿಜೆಪಿ ಪಕ್ಷಕ್ಕೆ ಆಘಾತವಾಗಿತ್ತು. ವಿದೇಶಾಂಗ ಸಚಿವೆಯಾಗಿ ದೇಶಕ್ಕಾಗಿ ಅವರು ನೀಡಿರುವ ಕೊಡುಗೆ, ಸದಾ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿ ಜನರ ಸಮಸ್ಯೆಗೆ ಅವರು ಸ್ಪಂದಿಸುತ್ತಿದ್ದ ರೀತಿ ಇಂದಿಗೂ ಎಲ್ಲರ ಮನದಲ್ಲಿದೆ.

TAGGED:aiimsdoctorsPublic TVSushma swarajSwaraj kaushaltweetಏಮ್ಸ್ಟ್ವೀಟ್ಪಬ್ಲಿಕ್ ಟಿವಿವೈದ್ಯರುಸುಷ್ಮಾ ಸ್ವರಾಜ್ಸ್ವರಾಜ್ ಕೌಶಲ್
Share This Article
Facebook Whatsapp Whatsapp Telegram

Cinema news

Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood
rashmika vijay devarakonda geetha govindam
ರಶ್ಮಿಕಾ, ವಿಜಯ್‌ ಮದುವೆಗೆ ಬೆಂಗಳೂರಿನಿಂದ ಹೂ ಪೂರೈಕೆ
Bengaluru City Cinema Latest Main Post Sandalwood South cinema Top Stories

You Might Also Like

Zameer Ahmed
Davanagere

ಎಲ್ಲರೂ ರಾತ್ರಿ ಕನಸು ಕಂಡ್ರೆ ಕುಮಾರಸ್ವಾಮಿ ಹಗಲುಗನಸು ಕಾಣ್ತಾರೆ: ಹೆಚ್‌ಡಿಕೆಗೆ ಜಮೀರ್ ಟಾಂಗ್‌

Public TV
By Public TV
10 seconds ago
NAVAMI 1
Chikkamagaluru

ಚಿಕ್ಕಮಗಳೂರು | ಹಿಟ್ & ರನ್‍ಗೆ ಸಹಕಾರ ಸಂಘದ ಸಿಬ್ಬಂದಿ ಬಲಿ

Public TV
By Public TV
59 minutes ago
Shivalinge Gowda 1
Districts

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ? ನಾನಿದ್ದಿದ್ರೆ ಇನ್ನೊಂದು ಸೀಟ್ ಜಾಸ್ತಿ ಆಗೋದಷ್ಟೇ: ಶಿವಲಿಂಗೇಗೌಡ

Public TV
By Public TV
1 hour ago
ಹುಬ್ಬಳ್ಳಿ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ
Dharwad

ಪ್ರಹ್ಲಾದ್ ಜೋಶಿ ಕಾರ್ಯಾಲಯದಲ್ಲಿ ಸ್ವಚ್ಛ ವಾಹಿನಿ ಚಾಲಕಿ, ರಕ್ಷಣಾ ಸಿಬ್ಬಂದಿಯಿಂದ ಧ್ವಜಾರೋಹಣ

Public TV
By Public TV
1 hour ago
belagavi money robbery
Belgaum

ನಾಪತ್ತೆಯಾದ 400 ಕೋಟಿ ಹಣ ಗುಜರಾತಿನ ಪ್ರಭಾವಿ ರಾಜಕಾರಣಿಯದ್ದು?

Public TV
By Public TV
2 hours ago
Yatnal amit shah
Districts

ರಾಜ್ಯದಲ್ಲಿ SIR ಜಾರಿಗೊಳಿಸಿ, ಅಕ್ರಮ ಬಾಂಗ್ಲಾ ವಲಸಿಗರನ್ನು ಗಡೀಪಾರು ಮಾಡಿ – ಕೇಂದ್ರ ಗೃಹ ಸಚಿವರಿಗೆ ಯತ್ನಾಳ್ ಪತ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?