ದಾವಣಗೆರೆ: ಮನೆಯಲ್ಲಿ ವಿವಾಹಿತ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ದಾವಣಗೆರೆಯ ಎಸ್.ಎಂ ಕೃಷ್ಣಾ ನಗರದಲ್ಲಿ ನಡೆದಿದೆ.
ಯಶೋಧ(30) ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸಾವನ್ನಪ್ಪಿದ ಮಹಿಳೆ. ಧನ್ಯಕುಮಾರ್ ಜೊತೆ 9 ವರ್ಷಗಳ ಹಿಂದೆ ಯಶೋಧ ವಿವಾಹವಾಗಿತ್ತು. ಮದುವೆಯಾದಾಗಿನಿಂದ ಪತಿ ಕಿರುಕುಳ ನೀಡುತ್ತಿದ್ದನು ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಅಕ್ಷಯ್ ಕುಮಾರ್ ಗೆ ಕೊರೋನಾ: ಕೇನ್ಸ್ ಚಿತ್ರೋತ್ಸವದಿಂದ ದೂರ
ತವರು ಮನೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಿಂದ ಯಶೋಧ ಭಾನುವಾರ ಗಂಡನ ಮನೆಗೆ ಬಂದಿದ್ದರು. ಇಂದು ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಗಂಡನೇ ಹೊಡೆದು ಸಾಯಿಸಿ ನೇಣು ಹಾಕಿದ್ದಾನೆ ಎಂದು ಮಹಿಳೆಯ ಮನೆಯವರು ಗಂಭೀರ ಆರೋಪ ಮಾಡುತ್ತಿದ್ದಾರೆ. ಸ್ಥಳಕ್ಕೆ ಗಾಂಧಿನಗರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ. ಇದನ್ನೂ ಓದಿ: ಬರಗೂರು ನನ್ನ ಜೊತೆ ಚರ್ಚೆಗೆ ಬರಲಿ – ರೋಹಿತ್ ಚಕ್ರತೀರ್ಥ ಓಪನ್ ಚಾಲೆಂಜ್