ಆನೇಕಲ್: ಕಳೆದ ಆರು ತಿಂಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಮಹಿಳೆಯನ್ನು ಆಕೆಯ ಪತಿ ಹಾಗೂ ಅವನ ಮನೆಯವರು ಕೊಲೆ ಮಾಡಿದ್ದಾರೆ ಎಂದು ಮಹಿಳೆಯ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಮಹಿಳೆಯ ಶವ ಅನುಮಾನಸ್ಪದ ರೀತಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಆನೇಕಲ್ನಲ್ಲಿ ನಡೆದಿದೆ.
ಆನೇಕಲ್ ತಾಲೂಕಿನ ಜಗಣಿ ಸಮೀಪದ ರಾಜಾಪುರ ನಿವಾಸಿಯಾಗಿರುವ ಯಶವಂತ್ ಹಾಗೂ ಬೆಂಗಳೂರಿನ ಟೀಚರ್ಸ್ ಕಾಲೋನಿಯ ರಾಣಿ ಕಳೆದ ಆರು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಯಶವಂತ್ ಸರ್ಕಾರಿ ಕೆಲಸ ಮಾಡಿಕೊಂಡಿದ್ದ. ಯಶವಂತ್ಗೆ ಇದು ಎರಡನೇ ಮದುವೆಯಾಗಿದೆ.
ಮದುವೆಯಾದ ಬಳಿಕ ರಾಣಿಗೆ ಯಶವಂತ ಹಾಗೂ ಆತನ ಕುಟುಂಬಸ್ಥರು ಚಿತ್ರಹಿಂಸೆ ನೀಡುತ್ತಿದ್ದರು. ಯಶವಂತ ಕೂಡ ಅಂತರ್ಜಾತಿ ವಿವಾಹ ಆಗಿದ್ದರಿಂದ ಹಿಂಸೆ ನೀಡುತ್ತಿದ್ದ. ಆದರೆ ಇಂದು ರಾಣಿ, ರಾಜಪುರದ ತನ್ನ ಮನೆಯಲ್ಲಿ ಅನುಮಾನಸ್ಪದವಾಗಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಈ ಹಿನ್ನೆಲೆಯಲ್ಲಿ ಮನೆಯವರು ಕೊಲೆ ಮಾಡಿದ್ದಾರೆ ಶಂಕಿಸಲಾಗಿದೆ. ಇದನ್ನೂ ಓದಿ: ಮಣ್ಣಿಗೆ ಬಿದ್ದರೂ ಜೋಡಿಯ ಪ್ರಿ-ವೆಡ್ಡಿಂಗ್ ಫೋಟೋಶೂಟ್ ಮಾತ್ರ ಸೂಪರ್!
ಮನೆಯ ಮೇಲ್ ಮಹಡಿಯಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶವ ಇದ್ದರೂ ಸಹ ಪತಿ ಹಾಗೂ ಮನೆಯವರು ನೋಡಲು ಕೂಡ ಬಂದಿಲ್ಲ. ಅಂತರ್ಜಾತಿ ವಿವಾಹ ಆಗಿದ್ದರಿಂದ ಇವರೇ ಕೊಲೆ ಮಾಡಿದ್ದಾರೆ ಎಂದು ರಾಣಿಯ ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಮೀನುಗಾರರ 2 ಗುಂಪುಗಳ ನಡುವೆ ಕಿತ್ತಾಟ- 7 ಮಂದಿಗೆ ಗಾಯ
ಈ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಕುರಿತು ತನಿಖೆ ಕೈಗೊಂಡ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳಿಸಿಕೊಟ್ಟಿದ್ದಾರೆ. ವರದಿ ಬಂದ ನಂತರ ಮುಂದಿನ ತನಿಖೆಯನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.