Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು ಹೋಟೆಲ್ ಬಳಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಉಗ್ರರಿಗೆ ಸಿಲಿಕಾನ್ ಸಿಟಿ ಸ್ಲೀಪರ್ ಸೇಲ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರು ಹೋಟೆಲ್ ಬಳಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಉಗ್ರರಿಗೆ ಸಿಲಿಕಾನ್ ಸಿಟಿ ಸ್ಲೀಪರ್ ಸೇಲ್?

Bengaluru City

ಬೆಂಗಳೂರು ಹೋಟೆಲ್ ಬಳಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಉಗ್ರರಿಗೆ ಸಿಲಿಕಾನ್ ಸಿಟಿ ಸ್ಲೀಪರ್ ಸೇಲ್?

Public TV
Last updated: July 25, 2022 2:36 pm
Public TV
Share
3 Min Read
terrorist
SHARE

– ಮೂರು ತಿಂಗಳ ಅಂತರದಲ್ಲಿ ಮೂವರು ಅರೆಸ್ಟ್
– ಹಲವು ಬಾರಿ ಹೋಟೆಲ್ ಬಳಿ ಓಡಾಡಿದ್ದ ಶಂಕಿತ ಉಗ್ರ

ಬೆಂಗಳೂರು: ನಗರದಲ್ಲಿ ಮತ್ತೊಬ್ಬ ಶಂಕಿತ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ. ಕೇವಲ ಮೂರು ತಿಂಗಳ ಅಂತರದಲ್ಲಿ ಮೂವರು ಉಗ್ರರನ್ನು ಸಿಲಿಕಾನ್ ಸಿಟಿಯಲ್ಲಿ ಬಂಧಿಸಿದ್ದು, ಉಗ್ರರಿಗೆ ಸಿಲಿಕಾನ್ ಸಿಟಿ ಸ್ಲೀಪರ್ ಸೇಲ್ ನೆಲೆಯಾಗುತ್ತಿದೆಯಾ ಎಂಬ ಪ್ರಶ್ನೆ ಕಾಡುತ್ತಿದೆ.

Contents
  • – ಮೂರು ತಿಂಗಳ ಅಂತರದಲ್ಲಿ ಮೂವರು ಅರೆಸ್ಟ್ – ಹಲವು ಬಾರಿ ಹೋಟೆಲ್ ಬಳಿ ಓಡಾಡಿದ್ದ ಶಂಕಿತ ಉಗ್ರ
  • Live Tv

ಅಸ್ಸಾಂ ಮೂಲದ ಲಷ್ಕರ್ ಶಂಕಿತ ಉಗ್ರ ಅಖ್ತರ್ ಹುಸೇನ್‍ನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈತ ತಿಲಕ್ ನಗರದ ಬಿಟಿಪಿ ಏರಿಯಾದ ಕಟ್ಟಡದ ಮೂರನೇ ಮಹಡಿ ಕೋಣೆಯಲ್ಲಿ ಕೆಲ ಯುವಕರೊಂದಿಗೆ ವಾಸ್ತವ್ಯ ಹೂಡಿದ್ದ. ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ.

terrorist 1

10ನೇ ತರಗತಿ ಓದಿದ್ದ ಹುಸೇನ್ ಸೋಷಿಯಲ್ ಮೀಡಿಯಾದಲ್ಲಿ ಪ್ರಚೋದನೆ ನೀಡುತ್ತಿದ್ದ. ಸೋಷಿಯಲ್ ಮೀಡಿಯಾ ಬಳಸಿಕೊಂಡು ಭಾರತದಲ್ಲಿ ಗಲಭೆ ಎಬ್ಬಿಸುವುದು, ಬೆಂಗಳೂರಿನಲ್ಲಿ ಶಾಂತಿ ಹದಗೆಡಿಸುವುದೇ ಇವನ ಕೆಲಸವಾಗಿತ್ತು. ಬೆಂಗಳೂರು ಮತ್ತು ಬೇರೆ ಬೇರೆ ಜಿಲ್ಲೆಯ ಮಾಹಿತಿಯನ್ನು ಬೇರೆ ಸಂಘಟನೆಯ ಜೊತೆ ಹಂಚಿಕೊಳ್ಳುತ್ತಿದ್ದ. ಅಷ್ಟೇ ಅಲ್ಲದೇ ಬೇರೆ ಸಂಘಟನೆಗಳ ಜೊತೆ ನಿರಂತರವಾಗಿ ಸಂಪರ್ಕ ಹೊಂದಿದ್ದ ವಿಚಾರ ಈಗ ಮೂಲಗಳಿಂದ ತಿಳಿದು ಬಂದಿದೆ.

ಹುಸೇನ್ ಕಳೆದ ಒಂದು ತಿಂಗಳ ಹಿಂದೆ ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದ ಉಗ್ರ ಫೈಜಲ್‍ನೊಂದಿಗೆ ನಂಟು ಹೊಂದಿದ್ದ. ಫೈಜಲ್ ಅಹಮದ್ ಮೋಸ್ಟ್ ವಾಟೆಂಡ್ ಟೆರರ್ ಆಗಿದ್ದ. ಬಾಂಗ್ಲಾದೇಶದ ಮೂಲದವನಾಗಿದ್ದ ಫೈಜಲ್‍ಗೆ ಲಷ್ಕರ್ ತೋಯ್ಬಾ ಸಂಘಟನೆ ಜೊತೆಗೆ ಸಂಪರ್ಕ ಇತ್ತು.

bengaluru 2 2

ಈ ಎಲ್ಲಾ ಮಾಹಿತಿಯ ಮೇರೆಗೆ 30ಕ್ಕೂ ಹೆಚ್ಚು ಸಿಸಿಬಿ ಪೊಲೀಸರು ಹುಸೇನ್‍ನಿದ್ದ ಮನೆ ಮೇಲೆ ದಾಳಿ ನಡೆಸಿದ್ದಾರೆ. ಘಟನೆ ಸಂಬಂಧಿಸಿ ರೂಂನಲ್ಲಿದ್ದ ನಾಲ್ವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಅಖ್ತರ್ ಹುಸೇನ್ ಜೊತೆ ಇನ್ನುಳಿದ ಮೂವರು ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ:  ರಾಜಕಾರಣದಲ್ಲಿ ಯಶಸ್ವಿಯಾಗಬೇಕಾದರೆ, ಕಬಡ್ಡಿನೂ ಗೊತ್ತಿರಬೇಕು, ಚದುರಂಗದಾಟನೂ ಗೊತ್ತಿರಬೇಕು: ಬಿ.ವೈ.ವಿಜಯೇಂದ್ರ

ಸ್ಥಳೀಯರು ಮಾಹಿತಿ ನೀಡಿದ್ದು, ಕಳೆದ ಒಂದೂವರೆ ವರ್ಷಗಳಿಂದ ಹುಸೇನ್ ಇದೇ ರೂಮ್‍ನಲ್ಲಿ ಇದ್ದ. ಯಾವಾಗ ಬರ್ತಾರೆ, ಯಾವಾಗ ಹೋಗ್ತಾರೆ ಅಂತಾ ಗೊತ್ತಿರಲಿಲ್ಲ. ಐದಾರು ಜನ ರೂಮಿನಲ್ಲಿದ್ದರು. ರಾತ್ರಿ 8:30ಕ್ಕೆ ಪೊಲೀಸರು ಕರೆದುಕೊಂಡು ಹೋದರು. 6 ಗಂಟೆಗೆ ಬಂದು ಪೊಲೀಸರು ವಿಚಾರಣೆ ಮಾಡಿದರು. ಅವರೆಲ್ಲರೂ ಫುಡ್ ಡೆಲಿವರಿ ಬಾಯ್ ಆಗಿ ಮಾಡುತ್ತಿದ್ದರು. ನಮ್ಮ ಏರಿಯಾದಲ್ಲಿ ಯಾರಿಗೂ ಸಂಪರ್ಕದಲ್ಲಿ ಇರಲಿಲ್ಲ. ಪೊಲೀಸರು ಅರೆಸ್ಟ್ ಮಾಡಿದ ಮೇಲೆಯೇ ನಮಗೆ ಗೊತ್ತಾಗಿರೋದು ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಪ್ರಮುಖ ಹೋಟೆಲ್ ಬಳಿ ವಿಧ್ವಂಸಕ ಕೃತ್ಯಕ್ಕೆ ಶಂಕಿತ ಸಂಚು ರೂಪಿಸುತ್ತಿದ್ದ. ವಿಧಾನಸೌಧದ ಬಳಿ ಇರುವ ಅತಿ ಹೆಚ್ಚು ವಿಐಪಿಗಳ ಬಂದು ಹೋಗುವ ಹೋಟೆಲ್ ಟಾರ್ಗೆಟ್ ಮಾಡಿದ್ದ ಈತ ಹಲವು ಬಾರಿ ಆ ಹೋಟೆಲ್ ಬಳಿ ಬಂದು ಹೋಗಿದ್ದ. ಶಂಕಿತ ಉಗ್ರನ ಚಲನವಲನದ ಬಗ್ಗೆ ಸಿಸಿಟಿವಿ ಹಾಗೂ ಟೆಕ್ನಿಕಲ್ ಸಾಕ್ಷ್ಯವನ್ನು ಪೊಲೀಸರು ಈಗ ಸಂಗ್ರಹಿಸುತ್ತಿದ್ದಾರೆ. ಇದನ್ನೂ ಓದಿ: ಸಾಬ್ರು ವೋಟ್ ಹಾಕಿದ್ರೆ ಮಾತ್ರ ಅಧಿಕಾರ ಹೆದರಿಸೋ ಕಾಲ ಹೋಗಿ ಬಹಳ ದಿನವಾಗಿದೆ ಜಮೀರ್ ಭಾಯ್: ಸಿ.ಟಿ ರವಿ

ಪಬ್ಲಿಕ್ ಟಿವಿಯೊಂದಿಗೆ ಪೊಲೀಸ್ ಕಮೀಷನರ್ ಪ್ರತಾಪ್ ರೆಡ್ಡಿ ಮಾತನಾಡಿ, ಮೂಲಭೂತವಾದಿಯಾಗಿದ್ದ ಅಕ್ತರ್ ಹುಸೇನ್ ಉಗ್ರ ಸಂಘಟನೆಗಳಿಗೆ ಸೇರಬೇಕು. ಉಗ್ರ ಚಟುವಟಿಕೆಗಳಿಗೆ ಸಹಾಯ ಮಾಡಬೇಕು ಅನ್ನುವ ನಿಟ್ಟಿನಲ್ಲಿ ಆಸಕ್ತಿ ಹೊಂದಿದ್ದ. ಈ ಹಿನ್ನೆಲೆಯಲ್ಲಿ ಉಗ್ರರೊಂದಿಗೆ ಸಂಪರ್ಕ ಹೊಂದುವ ಬಗ್ಗೆ ಪ್ರಯತ್ನ ನಡೆಸಿದ್ದ.

ಅಲ್ ಖೈದಾ ಸಂಘಟನೆ ಜೊತೆ ನಿಕಟ ಸಂಪರ್ಕ ಹೊಂದಿದ್ದ ಈತ ಕೆಲವೇ ತಿಂಗಳಲ್ಲಿ ದೊಡ್ಡ ಪ್ಲ್ಯಾನ್ ಮಾಡಿದ್ದ. ಈ ಬಗ್ಗೆ ತೆಲಂಗಾಣ ಹಾಗೂ ಕೇಂದ್ರ ತನಿಖಾ ಸಂಸ್ಥೆಗಳಿಂದ ಮಾಹಿತಿ ನೀಡಿತ್ತು. ಈ ಬಗ್ಗೆ ಕೂಡಲೇ ಎಚ್ಚೆತ್ತ ಆಯುಕ್ತರು ಸಿಸಿಬಿಗೆ ಆಯುಕ್ತರಿಗೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಐಬಿ ಜೊತೆಯಲ್ಲಿ ಕಾರ್ಯಾಚರಣೆ ನಡೆಸಿ ಶಂಕಿತನನ್ನ ಬಂಧಿಸಲಾಗಿದೆ ಎಂದರು.

Live Tv
[brid partner=56869869 player=32851 video=960834 autoplay=true]

TAGGED:Assambengaluruterroristಅಸ್ಸಾಂಬೆಂಗಳೂರುಶಂಕಿತ ಉಗ್ರ
Share This Article
Facebook Whatsapp Whatsapp Telegram

Cinema news

Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories
Mohanlal CJ Roy 1
ಸಿಜೆ ರಾಯ್‌ ‘ಸ್ನೇಹಿತನಿಗೂ ಮಿಗಿಲು’ – ನಟ ಮೋಹನ್ ಲಾಲ್ ಭಾವನಾತ್ಮಕ ಪೋಸ್ಟ್‌
Bengaluru City Cinema Latest South cinema Top Stories
yash mother pushpa compound demolition 1
ನಟ ಯಶ್‌ ತಾಯಿ ಹಾಸನ ಸೈಟ್‌ ಜಟಾಪಟಿ – ಕಾಂಪೌಂಡ್‌ ಕೆಡವಿದ್ದ ಮಾಲೀಕನ ಜೊತೆ ವಾಗ್ವಾದ
Cinema Hassan Latest Main Post Sandalwood
Hanumanthu Lamani CY Roy
ಹಣ ನೀಡಿ ನನ್ನ ಬದುಕಿಗೆ ದಾರಿ ದೀಪವಾಗಿದ್ರಿ, ನಿಮ್ಮ ಋಣ ಮರೆಯೋಕಾಗಲ್ಲ – ಸಿಜೆ ರಾಯ್ ನೆನೆದು ಹನುಮಂತು ಭಾವುಕ
Bengaluru City Cinema Districts Karnataka Latest Sandalwood Top Stories

You Might Also Like

Amit Shah 2
Latest

ಮೊಮೊ ಫ್ಯಾಕ್ಟರಿಯಲ್ಲಿ ಯಾರ ಹಣ ಹೂಡಿಕೆಯಾಗಿದೆ? – ಬಂಗಾಳ ಸರ್ಕಾರದ ಭ್ರಷ್ಟಾಚಾರವೇ ದುರಂತಕ್ಕೆ ಕಾರಣ: ಶಾ ಕಿಡಿ

Public TV
By Public TV
13 minutes ago
jamkhandi judge visits government school in alabala village
Bagalkot

ಜಮಖಂಡಿ | ಚರಂಡಿ ನೀರಲ್ಲಿ ತಟ್ಟೆ ತೊಳೆದ ಮಕ್ಕಳ ವಿಡಿಯೋ ವೈರಲ್‌ – ಶಾಲೆಗೆ ಜಡ್ಜ್‌ ಭೇಟಿ

Public TV
By Public TV
23 minutes ago
CJ Roy Pradeep Eshwar
Districts

ಸಿಜೆ ರಾಯ್ ಅವರೇ ಗುಂಡು ಹೊಡೆದುಕೊಂಡ್ರಾ, ಬೇರೆ ಯಾರಾದ್ರೂ ಹೊಡೆದ್ರಾ? – ಪ್ರದೀಪ್ ಈಶ್ವರ್ ಅನುಮಾನ

Public TV
By Public TV
36 minutes ago
CJ Roy 6
Bengaluru City

ಉದ್ಯಮಿ ಸಿಜೆ ರಾಯ್ ಪ್ರಕರಣ ತನಿಖೆ ಚುರುಕು – ಕುಟುಂಬಸ್ಥರ ವಿಚಾರಣೆ, ಹೇಳಿಕೆ ದಾಖಲು

Public TV
By Public TV
54 minutes ago
fish
Latest

ಉಡುಪಿ| ಕತ್ತರಿಸಿ ಹದಗೈದ ಮೇಲೂ ಮೀನು ಜೀವಂತ

Public TV
By Public TV
55 minutes ago
kalaburagi murder
Crime

ಜಮೀನು ವಿಚಾರಕ್ಕೆ ದಾಯಾದಿಗಳ ಕಲಹ; ಚಾಕುವಿನಿಂದ ಇರಿದು ವ್ಯಕ್ತಿಯ ಹತ್ಯೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?