ಶಾಲಾ ಕೊಠಡಿಯಲ್ಲಿ ದಲಿತ ವಿದ್ಯಾರ್ಥಿ ನೇಣಿಗೆ ಶರಣು – ಇಬ್ಬರು ಶಿಕ್ಷಕರ ಅಮಾನತು

Public TV
1 Min Read
class room

ಜೈಪುರ: ರಾಜಸ್ಥಾನದ (Rajasthan) ಕೊಟ್‌ಪುಟ್ಲಿಯ ಸರ್ಕಾರಿ ಶಾಲೆಯಲ್ಲಿ 15 ವರ್ಷದ ದಲಿತ ವಿದ್ಯಾರ್ಥಿಯೊಬ್ಬ(Dalit Student) ಆತ್ಮಹತ್ಯೆಗೆ ಶರಣಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಿಕ್ಷಕರನ್ನು (Teachers) ಅಮಾನತುಗೊಳಿಸಲಾಗಿದೆ.

ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಶಾಲಾ ಹಾಸ್ಟೆಲ್‌ನಲ್ಲಿ ವಾಸವಿದ್ದು, ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿದ್ಯಾರ್ಥಿಗೆ ಶಿಕ್ಷಕರು ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಸ್ಥಳೀಯ ನಿವಾಸಿಗಳು ಠಾಣೆಗೆ ಮುತ್ತಿಗೆ ಹಾಕಿ ಶಾಲೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಇದನ್ನೂ ಓದಿ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 7 ಜನರ ದುರ್ಮರಣ

ಈ ಹಿನ್ನೆಲೆ ಪೊಲೀಸರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾಯ್ದೆಯಡಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಬ್ಬರು ಶಿಕ್ಷಕರು ತನಗೆ ಕಿರುಕುಳ ನೀಡುತ್ತಿರುವುದಾಗಿ ವಿದ್ಯಾರ್ಥಿ ತನ್ನ ತಂದೆಗೆ ತಿಳಿಸಿದ್ದು, ಎಫ್‌ಐಆರ್ ದಾಖಲಾಗಿದೆ. ಈ ಕುರಿತು ಪ್ರಾಂಶುಪಾಲರು ಮತ್ತು ಉಪ ಪ್ರಾಂಶುಪಾಲರು ಅವರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಆಟವಾಡುತ್ತಾ ಆಟಿಕೆಯ LED ಬಲ್ಬ್ ನುಂಗಿದ 9 ತಿಂಗಳ ಕಂದಮ್ಮ!

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡುವ ಭರವಸೆ ನೀಡಿದ ಬಳಿಕ ಕುಟುಂಬಸ್ಥರು ಹಾಗೂ ಸ್ಥಳೀಯರು ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. ಇದನ್ನೂ ಓದಿ: ಸೊಸೆಯನ್ನು ರಕ್ಷಿಸಲು ಪತಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದ ಪತ್ನಿ!

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article