ಚಿಕ್ಕಮಗಳೂರು: ಕಾಫಿ ಎಸ್ಟೇಟ್ನಲ್ಲಿ 13 ವರ್ಷದ ಬಾಲಕಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸದಲ್ಲಿ ನಡೆದಿದೆ.
ವನಜಾಕ್ಷಿ (13) ಮೃತಪಟ್ಟ ಬಾಲಕಿ. ಕಳಸ ಸಮೀಪದ ಅಲಂದೂರು ಎಸ್ಟೇಟ್ನಲ್ಲಿ ಕಾಫಿ ಗಿಡಗಳಿಗೆ ಔಷಧಿ ಸಿಂಪಡಿಸುವ ವೇಳೆ ಸಾವನ್ನಪ್ಪಲಾಗಿದೆ ಎಂದು ತಿಳಿದು ಬಂದಿದೆ. ಬಾಲಕಿ ವನಜಾಕ್ಷಿ ಚಿತ್ರದುರ್ಗ ಮೂಲದವಳಾಗಿದ್ದು, ಸ್ಥಳೀಯರ ಜೊತೆ ಕಾಫಿ ಎಸ್ಟೇಟ್ಗೆ ಕೆಲಸಕ್ಕೆ ಬಂದಿದ್ದಳು.
ಸ್ಥಳೀಯರು ಎಸ್ಟೇಟ್ ಮಾಲೀಕ ವೆಂಕಟೇಶ್ ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿದ್ದಾರೆ. ಬಾಲಕಿಯ ಪಾಲಕರು ಕಳಸ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಮುಂದಾಗಿದ್ದಾರೆ. ಬಾಲಕಿಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಬಾಲಕಿಯ ಶವವನ್ನು ಕಳಸ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.