ಬೆಂಗಳೂರು: ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪದ ಸಿ.ಕೆ ಪಾಳ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆಯೊಬ್ಬರ ಶವ ಪತ್ತೆಯಾಗಿದೆ.
ಅಸ್ಸಾಂ ಮೂಲದ ಸೋನಾಥೋನ್(18) ಮೃತ ವಿವಾಹಿತೆ. ಈಕೆಗೆ ಕಳೆದ ತಿಂಗಳಷ್ಟೇ ಮದುವೆಯಾಗಿತ್ತು. ಇದೀಗ ಆಕೆಯ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
- Advertisement 2
ಮನೆಯ ಹೊರಗಡೆ ಕಬ್ಬಿಣದ ಮೆಟ್ಟಿಲುಗಳಿಗೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ರೀತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆಯಿಂದ ಮನನೊಂದು ಶನಿವಾರ ರಾತ್ರಿ ಎಲ್ಲರೂ ಮಲಗಿದ ನಂತರ ಮನೆಯಿಂದ ಹೊರಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
- Advertisement 3
ಆದ್ರೆ ಸೋನೋಥಾನ್ ಸಾವಿಗೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮುಂದುವರಿಸಿದ್ದಾರೆ.
- Advertisement 4
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv