ಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆ

Public TV
1 Min Read
chikkaballapura 5

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕ ಹೆಜ್ಜಾಜಿ ಗ್ರಾಮದ ಬಳಿ ನಡೆದಿದೆ.

chikkaballapura 1 2

ಶ್ಯಾಕುಲದೇವನಪುರದ ನಂದೀಶ್(18) ಮೃತ ಯುವಕ. ಅಂದಹಾಗೇ ಅಜ್ಜಿ ಮನೆಯಲ್ಲಿ ವಾಸವಿದ್ದ ಯುವಕ ನಂದೀಶ್ ಗ್ಯಾರೇಜ್ ಒಂದರಲ್ಲಿ ಕೆಲಸ ಮಾಡುತ್ತಿದ್ದನು. ಚಿಕ್ಕ ಹೆಜ್ಜಾಜಿ ಗ್ರಾಮದ ಬಳಿಯ ಏರಿಯದಲ್ಲಿ ಯುವಕನ ಬೈಕ್ ಪತ್ತೆಯಾಗಿದ್ದು, ಕೆರೆಯ ನೀರಿನಲ್ಲಿ ಅರ್ಧಂಬರ್ಧ ಮುಳುಗಿರುವ ರೀತಿಯಲ್ಲಿ ಯುವಕ ನಂದೀಶ್ ಶವ ಪತ್ತೆಯಾಗಿದೆ. ಇದನ್ನೂ ಓದಿ: ಇದು ಸ್ವತಂತ್ರ ಭಾರತ, ಇಲ್ಲಿ ಪಾಳೇಗಾರಿಕೆ ನಡೆಸಲು ಜಮೀರ್ ಸಾದಿಕ್ ಪ್ರೋತ್ಸಾಹ ಇದ್ಯಾ : ಜಮೀರ್ ವಿರುದ್ಧ ಬಿಜೆಪಿ ಟ್ವೀಟ್

ಬೆಳಗ್ಗೆ ದಾರಿಯಲ್ಲಿ ಹೋಗುವ ವಾಹನ ಸವಾರರು ಬೈಕನ್ನು ಕಂಡು ಕೆರೆ ಬಳಿ ನೋಡಿದಾಗ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ದೊಡ್ಡ ಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ಅರ್ಧಂಬರ್ಧ ನೀರಿನಲ್ಲಿ ಮುಳುಗಿರುವ ರೀತಿಯಲ್ಲಿ ಯುವಕ ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ಯುವಕನ ಸಂಬಂಧಿಕರು ಕೊಲೆ ಆರೋಪ ಮಾಡಿದ್ದಾರೆ. ಯಾರೋ ಕೊಲೆ ಮಾಡಿ ನಂದೀಶ್ ದೇಹವನ್ನ ಕೆರೆಯಲ್ಲಿ ಬಿಸಾಡಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಜಾನುವಾರು ಅಕ್ರಮ ಸಾಗಣೆ ಪ್ರಕರಣ – ಟಿಎಂಸಿ ಹಿರಿಯ ನಾಯಕನಿಗೆ ಸಿಬಿಐ ಸಮನ್ಸ್‌

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *