50 ಲಕ್ಷ ದೇಣಿಗೆ ನೀಡಿದ ಸುತ್ತೂರು ಮಠ

Public TV
1 Min Read
sutturu mutt

– ಜ್ಯೂಬಿಲಿಯೆಂಟ್ ಕಾರ್ಖಾನೆಗೆ ಸೋಮಣ್ಣ ಭೇಟಿ

ಮೈಸೂರು: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೋರಿರುವ ಆರ್ಥಿಕ ನೆರವಿಗೆ ಮೈಸೂರಿನ ಶ್ರೀ ಸುತ್ತೂರು ಮಠ ಸ್ಪಂದಿಸಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿದೆ.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಇವತ್ತು ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದರು. ಈ ವೇಳೆ ಜೆಎಸ್‍ಎಸ್ ಮಹಾವಿದ್ಯಾಪೀಠ ಹಾಗೂ ಸಂಸ್ಥೆಯ ನೌಕರರಿಂದ 50 ಲಕ್ಷ ರೂ.ಗಳ ದೇಣಿಗೆಯನ್ನು ಶ್ರೀ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿಗಳು ಸಚಿವರಿಗೆ ನೀಡಿದರು. ಸಂಸದರಾದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಜೆ.ಎಸ್.ಎಸ್. ವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ. ಬೆಟಸೂರಮಠ, ಕಾರ್ಯದರ್ಶಿ ಎಸ್.ಶಿವಕುಮಾರಸ್ವಾಮಿ ಉಪಸ್ಥಿತರಿದ್ದರು.

ಮೈಸೂರು ಭಾಗದಲ್ಲಿ ಕೊರೊನಾ ಭೀತಿ ಹೆಚ್ಚಾಗಲು ಕಾರಣವಾಗಿರುವ ನಂಜನಗೂಡಿನ ಜ್ಯೂಬಿಲಿಯೆಂಟ್ ಕಾರ್ಖಾನೆಗೆ ಸಚಿವ ವಿ. ಸೋಮಣ್ಣ ಇಂದು ಭೇಟಿ ನೀಡಿ ಪರಿಶೀಲಿಸಿದರು. ಕಾರ್ಖಾನೆ ಲಾಕ್‍ಡೌನ್ ಆಗಿರುವುದನ್ನು ಸಚಿವರು ವೀಕ್ಷಿಸಿದರು.

ಕಾರ್ಖಾನೆಯಲ್ಲಿ 15 ಜನ ಸೆಕ್ಯೂರಿಟಿ ಗಾರ್ಡ್ ಗಳು ಮಾತ್ರ ಇದ್ದು, ಅವರನ್ನು ಇಲ್ಲೇ ಕ್ವಾರಂಟೈನ್ ಮಾಡಲಾಗಿದೆ. ಅವರಿಗೆ ಬೇಕಾದ ಊಟ ಹಾಗೂ ಅಗತ್ಯ ವಸ್ತುಗಳನ್ನು ಒದಗಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧೀಕ್ಷಕರು ಸಚಿವರಿಗೆ ಮಾಹಿತಿ ನೀಡಿದರು.

 

Share This Article
Leave a Comment

Leave a Reply

Your email address will not be published. Required fields are marked *