ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ವಿಶ್ವದಾದ್ಯಂತ ಏಕಕಾಲದಲ್ಲಿ ಲಕ್ಷ ಕಂಠಗಳಲ್ಲಿ ಕನ್ನಡ ಗೀತ ಗಾಯನ ವಿಶೇಷ ಅಭಿಯಾನ ಹಮ್ಮಿಕೊಂಡ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲೂ ಗೀತಾ ಗಾಯನ ನಡೆಯಿತು.
ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವಕ್ಕೆ ಕ್ಷಣಗಣನೇ ಶುರುವಾಗಿದೆ. ಅದಕ್ಕೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ವಿಶೇಷವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಬೇಕು ಎಂಬ ಸದುದ್ದೇಶದಿಂದ ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಮಾತಾಡ್ ಮಾತಾಡ್ ಕನ್ನಡ, ಕನ್ನಡಕ್ಕಾಗಿ ನಾವು ಎಂಬ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯೋತ್ಸವ ಅಭಿಯಾನ ನಿಮಿತ್ತ ವಿಶ್ವದ್ಯಾಂತ ಏಕಕಾಲದಲ್ಲಿ ಕನ್ನಡ ಗೀತ ಗಾಯನ ನಡೆಸಲಾಯಿತು. ಇದನ್ನೂ ಓದಿ: ಜಮೀನು ವಿವಾದ ಎರಡು ಗ್ರಾಮಗಳ ನಡುವೆ ಮಾರಾಮಾರಿ
ಬೆಳಗಾವಿಯ ಸುವರ್ಣಸೌಧದ ಮುಂಭಾಗದ ಆರಂಭದಲ್ಲಿ ಕನ್ನಡ ಗೀತ ಗಾಯನಕ್ಕೆ ಸಂಸದೆ ಮಂಗಲ ಅಂಗಡಿ, ಜಿಲ್ಲಾಧಿಕಾರಿ ಮಹಾಂತೇಶ್ ಹಿರೇಮಠ, ಜಿ.ಪಂ.ಸಿಇಓ ದರ್ಶನ್ ಸೇರಿದಂತೆ ಹಲವು ಅಧಿಕಾರಿಗಳು ಹಳದಿ-ಕೆಂಪು ಬಣ್ಣದ ಬಲೂನ್ಗಳನ್ನು ಹಾರಿಸುವ ಮೂಲಕ ಚಾಲನೆ ನೀಡಿದರು.
ಇದೇ ವೇಳೆ ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ನಾನು ಕನ್ನಡದಲ್ಲೇ ಮಾತನಾಡುತ್ತೇನೆ. ಕನ್ನಡದಲ್ಲೇ ಬರೆಯುತ್ತೇನೆ. ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುತ್ತೇನೆ ಎಂಬ ಪಣ ತೊಡುತ್ತೇನೆ. ಕನ್ನಡ ನಾಡಿನಲ್ಲಿ ವಾಸವಾಗಿರುವ ಕನ್ನಡೇತರ ಬಂಧುಗಳಿಗೆ ಪ್ರೀತಿಯಿಂದ ಕನ್ನಡ ಕಲಿಸುತ್ತೇನೆ. ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಲು ಕಟಿಬದ್ಧನಾಗಿರುತ್ತೇನೆ ಎಂದು ಅಲ್ಲಿ ನೆರೆದಿದ್ದವರು ಸಂಕಲ್ಪ ಮಾಡಿದರು. ಇದನ್ನೂ ಓದಿ: ಸೌಂದರ್ಯ ಜಗದೀಶ್ ಕುಟುಂಬದಿಂದ ಹಲ್ಲೆ ಪ್ರಕರಣ – ಇಬ್ಬರ ಹೆಸರು ಕೈಬಿಡುವಂತೆ ದೂರುದಾರೆ ಮನವಿ